Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
  • *ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*
  • *ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 
  • *ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಅಖಿಲ ಭಾರತ ಸಮ್ಮೇಳನ : ಕೊಡಗಿನ ಸಮಸ್ಯೆಗಳ ಪ್ರಸ್ತಾಪ
ಇತ್ತೀಚಿನ ಸುದ್ದಿಗಳು

ಅಖಿಲ ಭಾರತ ಸಮ್ಮೇಳನ : ಕೊಡಗಿನ ಸಮಸ್ಯೆಗಳ ಪ್ರಸ್ತಾಪ

January 9, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.9 : ಕಾರ್ಮಿಕರು ಹಾಗೂ ಕೃಷಿಕರ ಮೂಲಭೂತ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಜ.18 ರಿಂದ 22ರವರೆಗೆ 17ನೇ ಸಿಐಟಿಯು ಅಖಿಲ ಭಾರತ ಸಮ್ಮೇಳನ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಸಿಐಟಿಯು ಸಮ್ಮೇಳನದ ಸ್ವಾಗತ ಸಮಿತಿಯ ಜಿಲ್ಲಾ ಕಾರ್ಯಾಧ್ಯಕ್ಷ ಪಿ.ಆರ್.ಭರತ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಪತ್ತನ್ನು ಸೃಷ್ಟಿಸುವ ಶ್ರಮಿಕ ವರ್ಗವೇ ಸಂಕಷ್ಟಕ್ಕೆ ಸಿಲುಕಿದ್ದು, ಪರಿಹಾರದ ಹಕ್ಕನ್ನು ಚಲಾಯಿಸಬೇಕಾಗಿದೆ ಎಂದರು.

ಅರಮನೆ ಮೈದಾನದಲ್ಲಿ ನಡೆಯುವ ಅಖಿಲ ಭಾರತ ಸಮ್ಮೇಳನದಲ್ಲಿ ದೇಶದ 30 ರಾಜ್ಯಗಳ 2 ಸಾವಿರಕ್ಕೂ ಹೆಚ್ಚಿನ ಪ್ರತಿನಿಧಿಗಳು ಸೇರಿದಂತೆ 40 ವಿವಿಧ ರಾಷ್ಟ್ರಗಳ ಪ್ರತಿನಿಧಿಗಳು ಪಾಲ್ಗೊಳ್ಳುವ ಮೂಲಕ, ಕಾರ್ಮಿಕ ವರ್ಗದ ಮೂಲಭೂತ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಆಳುವ ಪ್ರಭುತ್ವದ ವಿರುದ್ಧದ ಹೋರಾಟಗಳನ್ನು ನಿರ್ಣಯಿಸಲಿರುವುದಾಗಿ ತಿಳಿಸಿದರು.

::: ಕೊಡಗಿನ ಸಮಸ್ಯೆಗಳ ಪ್ರಸ್ತಾಪ :::
ಕೊಡಗು ಜಿಲ್ಲೆಯ ಮುಖ್ಯ ಬೆಳೆಯಾದ ಕಾಫಿ ಮತ್ತು ಕರಿಮೆಣಸು ಕೃಷಿ ಫಸಲಿಗೆ ಸೂಕ್ತ ಧಾರಣೆ ಇಲ್ಲದೆ ಬೆಳೆಗಾರ ಸಂಕಷ್ಟಕ್ಕೆ ಸಿಲುಕಿದ್ದಾನೆ. ಇದರಿಂದ ಜಿಲ್ಲೆಯ ತೋಟಗಳಲ್ಲಿ ಬದುಕು ಕಟ್ಟಿಕೊಂಡಿರುವ ಕಾರ್ಮಿಕ ಸಮೂಹವು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಇದರೊಂದಿಗೆ ಕಾಡು ಪ್ರಾಣಿಗಳ ಹಾವಳಿ ಜಿಲ್ಲೆಯ ಬೆಳೆಗಾರರ, ಕಾರ್ಮಿಕರ ಬದುಕನ್ನು ಹೈರಾಣಾಗಿಸಿದೆ. ಈ ವಿಚಾರಗಳು ಸಮ್ಮೇಳನದಲ್ಲಿ ಪ್ರಸ್ತಾಪಿಸಲ್ಪಡಲಿದೆಯೆಂದು ಹೇಳಿದರು.
ಹತ್ತು ಹಲ ಸಮಸ್ಯೆಗಳ ನಡುವೆ ಸಿಲುಕಿರುವ ಕೊಡಗು ಜಿಲ್ಲೆ ಕಸ್ತೂರಿ ರಂಗನ್ ವರದಿಯ ಅನುಷ್ಟಾನದ ಆತಂಕದ ಸುಳಿಯಲ್ಲಿದೆ. ಈ ಗುರುತರ ವಿಚಾರ ಸಮ್ಮೇಳನದಲ್ಲಿ ಚರ್ಚೆಗೆ ಒಳಪಡಲಿದೆಯೆಂದು ಪಿ.ಆರ್. ಭರತ್ ಸ್ಪಷ್ಟಪಡಿಸಿದರು.

::: ಶ್ರೀಮಂತ, ಬಡ ಭಾರತ :::
ಭಾರತ ಸ್ವಾತಂತ್ರ್ಯಾನಂತರ 75 ವರ್ಷಗಳನ್ನು ಪೂರೈಸಿರುವ ಬೆನ್ನಲ್ಲೆ, ಇಡೀ ದೇಶ ಆಡಳಿತಾರೂಢರ ಧೋರಣೆಗಳಿಂದ ಬಡವರ ಮತ್ತು ಶ್ರೀಮಂತರ ಭಾರತವಾಗಿ ಪರಿವರ್ತನೆಯಾಗಿದೆಯೆಂದು ಆತಂಕ ವ್ಯಕಪಡಿಸಿದ ಭರತ್, 1991 ರಲ್ಲಿ ಜಾರಿಗೆ ಬಂದ ಉದಾರೀಕರಣ, ಜಾಗತೀಕರಣಗಳು ಕಳೆದ ಆರೇಳು ವರ್ಷದ ಆಡಳಿತದ ಅವಧಿಯಲ್ಲಿ ಇಮ್ಮಡಿ ವೇಗವನ್ನು ಪಡೆದುಕೊಂಡಿದೆ. ಇದರಿಂದ ದೇಶದ ಸಂಪತ್ತು ಪ್ರಸ್ತುತ ಕೇವಲ ಕೆಲವೇ ಕೆಲವು ಕುಟುಂಬಗಳ ಬಳಿ ಕೇಂದ್ರೀಕೃತವಾಗಿರುವ ಅಪಾಯ ನಮ್ಮೆದುರಿಗಿದೆ. ಸಂಪತ್ತು ಸೃಷ್ಟಿಸುವ ಕಾರ್ಮಿಕ ಸಮೂಹ ಒಪ್ಪೊತ್ತಿನ ಕೂಳಿಗೆ ಹೋರಾಟವನ್ನು ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆಯೆಂದು ಕಳವಳ ವ್ಯಕ್ತಪಡಿಸಿದರು.

ಆಹಾರವನ್ನು ಉತ್ಪಾದಿಸುವ ರೈತಾಪಿ ವರ್ಗ, ತಾನು ಉತ್ಪಾದಿಸುವ ಬೆಳೆಗೆ ಯೋಗ್ಯ ಬೆಲೆಯನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಕಾಳಸಂತೆಯ ವ್ಯವಹಾರಗಳು ಹೆಚ್ಚುತ್ತಿದ್ದು, ಆಹಾರ ಪದಾರ್ಥಗಳ ಬೆಲೆಯನ್ನು ಇವು ನಿರ್ಧರಿಸುವ ಪರಿಸ್ಥಿತಿ ನಿರ್ಮಾಣವಾಗಿದೆಯೆಂದು ಹೇಳಿದರು.

ಭಾರತ ಅತೀ ಹೆಚ್ಚು ಯುವ ಸಮೂಹವನ್ನು ಹೊಂದಿರುವ ದೇಶವೆನ್ನುವ ಹೆಮ್ಮೆ ಒಂದೆಡೆಯಾದರೆ, ಅದೇ ಮತ್ತೊಂದೆಡೆ ವಿದ್ಯಾವಂತ ಯುವ ಸಮೂಹ ಯೋಗ್ಯ ಕೆಲಸವಿಲ್ಲದೆ ಸಮಾಜ ಘಾತುಕ ಶಕ್ತಿಗಳಾಗಿ ಪರಿವರ್ತನೆಯಾಗುತ್ತಿರುವ ಅಪಾಯವು ನಮ್ಮ ಮುಂದಿದೆ. ವರ್ಷಕ್ಕೆ ಕೋಟಿ ಉದ್ಯೋಗ ಸೃಷ್ಟಿಸುವ ಹೇಳಿಕೆ ನೀಡಿದ ಮಂದಿಯಿಂದ 1 ಲಕ್ಷ ಉದ್ಯೋಗ ಸೃಷ್ಟಿಯು ಸಾಧ್ಯವಾಗುತ್ತಿಲ್ಲವೆಂದು ತೀಕ್ಷ್ಣವಾಗಿ ನುಡಿದು, ರಾಷ್ಟ್ರದ ಅಭಿವೃದ್ಧಿಯ ‘ಬೊಗಳೆ’ಗಳ ನಡುವೆ ಹಸಿವಿನ ಭಾರತ ನಿರ್ಮಾಣವಾಗುತ್ತಿರುವ ಅಪಾಯವಿದೆ. ಇಂತಹ ಮೂಲಭೂತ ಪ್ರಶ್ನೆಗಳೊಂದಿಗೆ ನಡೆಯುವ ಸಮ್ಮೇಳನದಲ್ಲಿ, ದುಡಿಯುವ ವರ್ಗಕ್ಕೆ ನ್ಯಾಯ ಒದಗಿಸುವ ಐಕ್ಯತೆಯ ಹೋರಾಟವನ್ನು ಕಂಡುಕೊಳ್ಳುವ ಪ್ರಯತ್ನ ನಡೆಯಲಿದೆ ಎಂದು ಭರತ್ ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಮ್ಮೇಳನದ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಎ.ಸಿ.ಸಾಬು, ಖಜಾಂಚಿ ಎನ್.ಡಿ.ಕುಟ್ಟಪ್ಪ ಹಾಗೂ ಉಪ ಕಾರ್ಯದರ್ಶಿ ರಾಚಪ್ಪಾಜಿ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Articleಕೊಡಗು ಜಿಲ್ಲಾ ಬಂಟರ ಸಂಘದಲ್ಲಿ ಗೊಂದಲ
Next Article ಕೃಷಿಯೇತರ ಉದ್ದೇಶಗಳಿಗೆ ಭೂಪರಿವರ್ತನೆ ಮಾಡದಂತೆ ಕರ್ನಲ್ ಸಿ.ಪಿ.ಮುತ್ತಣ್ಣ ಆಗ್ರಹ

Recommended: Website design development company services in Mangalore Forex Trading Teacher in India

Related Posts

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

ಕುಶಾಲನಗರ, NEWS DESK ಫೆ.12:ಸ್ವಚ್ಛ ಕೊಡಗು ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿಯೊಂದಿಗೆ ಆದ್ಯ ಕರ್ತವ್ಯವಾಗಿದೆ ಎಂದು ಮಡಿಕೇರಿ ಕ್ಷೇತ್ರ ವಿಧಾನಸಭಾ ಶಾಸಕರಾದ…

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026

*ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 

February 12, 2026

*ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*

February 12, 2026

*ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.