Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಮಡಿಕೇರಿ : ಬಿಜೆಪಿ ರಾಷ್ಟ್ರೀಯ ಚಿಂತನೆಯಡಿ ಚುನಾವಣೆಯನ್ನು ಎದುರಿಸಲಿದೆ : ಕೆ.ಎಸ್.ಈಶ್ವರಪ್ಪ
ಇತ್ತೀಚಿನ ಸುದ್ದಿಗಳು

ಮಡಿಕೇರಿ : ಬಿಜೆಪಿ ರಾಷ್ಟ್ರೀಯ ಚಿಂತನೆಯಡಿ ಚುನಾವಣೆಯನ್ನು ಎದುರಿಸಲಿದೆ : ಕೆ.ಎಸ್.ಈಶ್ವರಪ್ಪ

March 11, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮಾ.11 : ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಅಭಿವೃದ್ಧಿ ಪರ ಚಿಂತನೆ, ಕಾರ್ಯಕರ್ತರ ಸಂಘಟನಾ ಶಕ್ತಿ, ಭಾರತೀಯ ಸಂಸ್ಕೃತಿಯ ಸಂರಕ್ಷಣೆ ಮತ್ತು ರಾಷ್ಟ್ರೀಯ ಚಿಂತನೆಗಳು, ಈ ನಾಲ್ಕು ಪ್ರಮುಖ ಅಂಶಗಳನ್ನು ಮುಂದಿಟ್ಟುಕೊoಡು ಬಿಜೆಪಿ ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಎದುರಿಸಲಿದೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ನಗರದ ಕ್ರಿಸ್ಟಲ್ ಹಾಲ್ ಸಭಾಂಗಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ 150 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ಸಾಧನೆಗಳನ್ನು ಮುಂದಿಟ್ಟು ಮತಯಾಚಿಸುವುದಾಗಿ ಹೇಳಿದರು.
ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ, ಈಗಿನ ಬಸವರಾಜ ಬೊಮ್ಮಾಯಿ ಅವರ ಅವಧಿಯಲ್ಲಿ ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ಅಭ್ಯುದಯಕ್ಕೆ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಟಾನಗೊಳಿಸಲಾಗಿದೆ. ಸದಾನಂದ ಗೌಡರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಹಿಂದುಳಿದ ವರ್ಗಗಳ ಶಾಲೆ, ವಸತಿ ನಿಲಯಗಳಿಗಾಗಿಯೇ ರೂ.108 ಕೋಟಿ ಅನುದಾನವನ್ನು ಒದಗಿಸಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು, ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ರೂ.117 ಕೋಟಿ ನೆರವು ನೀಡಿದ್ದಾರೆ. ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ 27 ಮಂದಿ ಹಿಂದುಳಿದ ವರ್ಗಕ್ಕೆ ಸೇರಿದವರಿಗೆ ಮತ್ತು 10 ಮಂದಿ ದಲಿತರಿಗೆ ಸಚಿವ ಸ್ಥಾನವನ್ನು ಒದಗಿಸಲಾಗಿದೆ. ಸ್ವಾತಂತ್ರ್ಯಾ ನಂತರದ ಅವಧಿಯಲ್ಲಿ ಇಷ್ಟು ಸಂಖ್ಯೆಯಲ್ಲಿ ಹಿಂದುಳಿದ ಸಮೂಹಕ್ಕೆ ಅವಕಾಶವನ್ನು ಎಂದಿಗೂ ನೀಡಿದ ನಿದರ್ಶನವಿಲ್ಲವೆಂದು ಅಭಿಪ್ರಾಯಪಟ್ಟರು.
ಬಿಜೆಪಿಯನ್ನು ನಿರಂತರವಾಗಿ ಟೀಕಿಸುತ್ತಾ ಬರುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಯೋಗ್ಯ ಕ್ಷೇತ್ರವೇ ಇಲ್ಲ. ಚುನಾವಣಾ ಹಂತದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರವರ ಜಾತಿ ಸಮೂಹದಿಂದ ಮುಖ್ಯಮಂತ್ರಿಯ ಬೇಡಿಕೆಯನ್ನು ಮುಂದಿರಿಸಿಕೊಂಡು ಬರುತ್ತಿದ್ದಾರೆ. ಬಿಜೆಪಿಯನ್ನು ಪುರೋಹಿತ ಶಾಹಿ, ಮನುವಾದಿ ಎಂದು ದೂರುವ ಇವರುಗಳೇ ಜಾತಿವಾದಿಗಳೆಂದು ಟೀಕಿಸಿದರು.
ಬಿಜೆಪಿಯ ಗೋ ಸಂರಕ್ಷಣೆ, ಮತಾಂತರ ನಿಷೇಧಗಳ ವಿರುದ್ಧ ಮಾತನಾಡುವ ಕಾಂಗ್ರೆಸ್ ಮುಖಂಡರು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ, ಮತಾಂತರ ಪರವಾಗಿ, ಗೋ ಹತ್ಯೆಯ ಪರವಾಗಿ ನಾವಿದ್ದೇವೆಂದು ತೋರಿಸಲಿ ಎಂದು ಸವಾಲೊಡ್ಡಿದರು.
ಸಿದ್ದರಾಮಯ್ಯ ಅವರದ್ದು ಬಿಜೆಪಿ ವಿರುದ್ಧದ ಟೀಕೆಗಳು ‘ನಾಟಕೀಯ ಬುಡುಬುಡಿಕೆ’ ಯಾಗಿದೆ. ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಪರವಾಗಿ ಕಾಂಗ್ರೆಸ್ ಇರುವುದಾಗಿ ಹೇಳುವ ಅವರು, ಮುಖ್ಯಮಂತ್ರಿಯಾಗಿದ್ದ ಹಿಂದುಳಿದ ವರ್ಗದಿಂದ ಬಂದ ತನಗೆ ಮುಖ್ಯಮಂತ್ರಿ ಸ್ಥಾನ ದೊರಕಿದೆಯೆಂದು ಹೇಳಿಕೊಂಡರೆ ಹೊರತು ಆ ಸಮೂಹಕ್ಕೆ ಏನನ್ನೂ ಮಾಡಿಲ್ಲ ಎಂದು ಆರೋಪಿಸಿದ ಈಶ್ವರಪ್ಪ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಿಂದುಳಿದ, ದಲಿತ ಸೇರಿದಂತೆ ಎಲ್ಲಾ ಸಮೂಹದ ಹಿತ ಕಾಯುವ ಕೆಲಸ ನಡೆದಿದೆಯೆಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಮಾತನಾಡಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಅಧಿಕಾರ ದೊರೆತಾಗ ಅದನ್ನು ಹೇಗೆ ಸದ್ವಿನಿಯೋಗ ಪಡಿಸಬೇಕೆನ್ನುವುದನ್ನು ಕಳೆದ 8 ವರ್ಷಗಳ ಅವಧಿಯಲ್ಲಿ ತೋರಿಸಿಕೊಟ್ಟಿದ್ದಾರೆ. ಚುನಾವಣೆ ಎನ್ನುವುದು ಕೇವಲ ಆಶ್ವಾಸನೆ, ಭರವಸೆಗಳ ಮೇಲೆ ನಡೆಯಕೂಡದೆನ್ನುವುದು ಪಕ್ಷದ ನಿಲುವಾಗಿದೆ. ಅಭಿವೃದ್ಧಿಯನ್ನು ಪರಿಗಣಿಸಿ ಜನತೆ ಮತದಾನ ಮಾಡಿದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅರ್ಥ ಬರುತ್ತದೆಂದು ಹೇಳಿದರು.
ನಾಲ್ಕು ರಥಯಾತ್ರೆಗಳ ಮೂಲಕ ರಾಜ್ಯದ 224 ಕ್ಷೇತ್ರಗಳ ಜನತೆಯನ್ನು ಬಿಜೆಪಿ ಸಂಪರ್ಕಿಸುತ್ತಿದೆ. ಈ ಸಂದರ್ಭ ದೊರಕುತ್ತಿರುವ ಜನಬೆಂಬಲ ಅಭೂತಪೂರ್ವ, ಚುನಾವಣೆಯಲ್ಲಿ ಬಿಜೆಪಿಯನ್ನು ಜನತೆ ಆಶೀರ್ವದಿಸುವ ಪೂರ್ಣ ವಿಶ್ವಾಸವಿದೆಯೆಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ಎಂಎಲ್‌ಸಿ ಸುಜಾ ಕುಶಾಲಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ, ವಿರಾಜಪೇಟೆ ಕ್ಷೇತ್ರದ ಉಸ್ತುವಾರಿ ಪ್ರತಾಪ ಸಿಂಹ ನಾಯಕ್, ಕರಾವಳಿ ಪ್ರಾಧಿಕಾರದ ಅಧ್ಯಕ್ಷರಾದ ತಿಮ್ಮಯ್ಯ ಶೆಟ್ಟರು, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಾಜಿ ಎಂಎಲ್‌ಸಿ ಎಸ್.ಜಿ.ಮೇದಪ್ಪ, ಮಡಿಕೇರಿ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ರಾಜ್ಯ ಸಂಚಾಲಕ ಉದಯ ಕುಮಾರ್ ಶೆಟ್ಟರು, ಪಕ್ಷದ ಪ್ರಮುಖರಾದ ರಾಜೇಂದ್ರ‍್ರ, ಮಹೇಶ್ ಜೈನಿ ಮೊದಲಾದವರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Articleಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ನಿಧನಕ್ಕೆ ಕೊಡಗು ಕಾಂಗ್ರೆಸ್ ಸಂತಾಪ
Next Article ಬಿಜೆಪಿ ಸರ್ಕಾರದಿಂದ ದಶಪಥ ರಸ್ತೆಯಾಗಿದೆ

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.