Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ವಿರಾಜಪೇಟೆಯಲ್ಲಿ ಕಾಲ್ಚೆಂಡು ಪಂದ್ಯಾವಳಿ : ಸ್ನೇಹಿತರ ಬಳಗಕ್ಕೆ ಚಾಂಪಿಯನ್ ಪಟ್ಟ
ಇತ್ತೀಚಿನ ಸುದ್ದಿಗಳು

ವಿರಾಜಪೇಟೆಯಲ್ಲಿ ಕಾಲ್ಚೆಂಡು ಪಂದ್ಯಾವಳಿ : ಸ್ನೇಹಿತರ ಬಳಗಕ್ಕೆ ಚಾಂಪಿಯನ್ ಪಟ್ಟ

January 2, 20233 Mins Read
Share
Facebook Twitter LinkedIn Pinterest WhatsApp Email

ವಿರಾಜಪೇಟೆ ಜ.2 : ಆಕ್ಸ್‌ಫರ್ಡ್ ಎಫ್.ಸಿ. ವಿರಾಜಪೇಟೆ ಕೊಡಗು ವತಿಯಿಂದ ನಗರದ ಸಂತ ಅನ್ನಮ್ಮ ಕಾಲೇಜು ಮೈದಾನದಲ್ಲಿ ನಾಲ್ಕು ದಿನಗಳ ಕಾಲ ನಡೆದ 3ವರ್ಷದ ಅಖಿಲ ಭಾರತ ಪುರುಷರ ಮುಕ್ತ ನೈನ್ಸ್ (09) ರಾಷ್ಟ್ರ ಮಟ್ಟದ ಕಾಲ್ಚೆಂಡು ಪಂದ್ಯಾವಳಿ ನಡೆಯಿತು.

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ಕಾಲ್ಚೆಂಡು ಒದೆಯುವ ಮೂಲಕ ಫೈನಲ್ ಪಂದ್ಯಾವಳಿಗೆ ಚಾಲನೆ ನೀಡಿ, ಶುಭಹಾರೈಸಿದರು.

ಭಾರತೀಯ ಸೇನೆಯ ಸೇನಾಧಿಕಾರಿ ಜೆ.ಸಿ.ಓ ಎಂ.ಎಲ್.ಲೋಹಿತ್ ಮಾತನಾಡಿ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕ ಸದೃಢತೆಯನ್ನು ಕಾಣಬಹುದು. ಕ್ರೀಡೆಯಲ್ಲಿ ಸಾಧನೆ ಮಾಡಿದ ಯುವ ತರುಣರಿಗೆ ಸೇನೆಯಲ್ಲಿ ವಿಫಲ ಅವಕಾಶಗಳಿವೆ, ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಶಾರೀರಿಕ ವ್ಯಾಯಾಮ ಮತ್ತು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೃಡಕಾಯ ದೇಹ ಸಿರಿಯನ್ನು ಗಳಿಸಬಹುದಾಗಿದೆ. ಆರೋಗ್ಯವು ಉತ್ತಮವಾಗಿರುತ್ತದೆ ಎಂದು ಹೇಳಿದರು.

ವಿರಾಜಪೇಟೆ ಆಕ್ಸ್‍ಫರ್ಡ್ ಎಫ್.ಸಿ.ಅಧ್ಯಕ್ಷ ರೆನ್ಸಾನ್ ಚಾಕೋ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರಿನ ಇಗಲ್ಸ್ ಸ್ವೀಚ್‍ಗೆರ್ಸ್‍ನ ಪ್ರಧಾನ ನಿರ್ದೇಶಕರಾದ ಮಧು ನಾಣಯ್ಯ, ಕೊಡಗು ಜಿಲ್ಲಾ ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ, ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಪಟ್ರಪಂಡ ರಘು ನಾಣಯ್ಯ, ಕೆ.ಡಿ.ಎಫ್.ಎ ಅಧ್ಯಕ್ಷ ಜಗದೀಶ್, ಕಾರ್ಯದರ್ಶಿಗಳಾದ ಈಶ್ವರ್, ಅಂತರ್ ರಾಷ್ಟ್ರೀಯ ರಗ್ಬಿ ಪಟು ಮಾದಂಡ ತಿಮ್ಮಯ್ಯ, ಹಿಂದೂ ಮಲಯಾಳಿ ಅಸೋಸಿಯೇಷನ್ ಅಧ್ಯಕ್ಷ ವಿನೂಪ್ ಕುಮಾರ್ ಎ., ಪುರಸಭೆಯ ಸದಸ್ಯರಾದ ಅಗಸ್ಟೀನ್ ಬೆನ್ನಿ, ಜೂನಾ ಸುನೀತಾ, ಡಿ.ಪಿ.ರಾಜೇಶ್ ಪದ್ಮನಾಭ, ಯೂನಿಯನ್ ಬ್ಯಾಂಕ್ ವಿರಾಜಪೇಟೆ ಶಾಖೆಯ ಹಿರಿಯ ವ್ಯವಸ್ಥಾಪಕ ಜಿಜೋ ಪಿ.ಜೆ. ಮತ್ತು ಶ್ರೀ ನಂದಿ ಜ್ಯುಲ್ಲರಿ ಮಾಲೀಕ ಅನಿಲ್ ಚೌದರಿ ಹಾಜರಿದ್ದರು.

ಕಾರ್ಯಕ್ರಮದಲ್ಲಿ ಪ್ರಧಾನಿಗಳ ತಾಯಿ, ಪೀಲೆ ಸೇರಿದಂತೆ ಮೃತಪಟ್ಟ ಕ್ರೀಡಾ ಕಲಿಗಳಿಗೆ ಮೌನಾಚರಣೆಯ ಮೂಲಕ ಸಂತಾಪ ಸೂಚಿಸಲಾಯಿತು.

ಕ್ರೀಡಾ ವರದಿ: ಪಂದ್ಯಾವಳಿಯಲ್ಲಿ ಒಟ್ಟು 20 ತಂಡಗಳು ಭಾಗವಹಿದ್ದವು, ಬೆಂಗಳೂರು, ಮಂಗಳೂರು, ಮೈಸೂರು ಸೇರಿದಂತೆ ಕೇರಳ ರಾಜ್ಯದ ವೈನಾಡ್ ಮತ್ತು ಮಲಪುರಂ, ತಮಿಳುನಾಡಿನ ಚೆನೈ ತಂಡಗಳು ಪಂದ್ಯಾಟದಲ್ಲಿ ಭಾಗಿಗಳಾದವು. ದೇಶೀಯ, ವಿಭಾಗಿಯ ಮಟ್ಟದಲ್ಲಿ ಮತ್ತು ದೇಶದ ತಂಡವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳು ಭಾಗಿಗಳಾಗಿರುವುದು ವಿಶೇಷವಾಗಿತ್ತು.
ಮಹಿಳಾ ಪುಟ್ಬಾಲ್ ಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇದೆ ಪ್ರಥಮ ಬಾರಿಗೆ ಮಹಿಳಾ ಫುಟ್ಬಾಲ್ ಪ್ರದರ್ಶನ ಪಂದ್ಯಾವಳಿ ನಡೆಯಿತು.
ಪಂದ್ಯಾವಳಿಯಲ್ಲಿ ಆಕ್ಸ್‍ಫರ್ಡ್ ಎಫ್.ಸಿ. ವಿರಾಜಪೇಟೆ ಮತ್ತು ವೈಷ್ಣವಿ ಎಫ್.ಸಿ. ಮರಗೋಡು ತಂಡಗಳ ನಡುವೆ ನಡೆದ ಪಂದ್ಯಾವಳಿಯಲ್ಲಿ ಆಕ್ಸ್‍ಫರ್ಡ್ ಎಫ್.ಸಿ. ವಿರಾಜಪೇಟೆ ತಂಡವು 1-0 ಗೋಲುಗಳಿಂದ ವಿಜೇತವಾಯಿತು.
ಪುರುಷರ ವಿಭಾಗದಲ್ಲಿ ಪ್ರಥಮ ಸೆಮಿಫೈನಲ್ ಪಂದ್ಯಾವಳಿಯು ಸರ್ಕಾರಿ ಪದವಿ ಪೂರ್ವ ಕಾಲೇಜು ವಿರಾಜಪೇಟೆ ತಂಡ ಮತ್ತು ಸ್ನೇಹಿತರ ಬಳಗ ಎಫ್.ಸಿ ವಿರಾಜಪೇಟೆ ತಂಡಗಳ ಮದ್ಯೆ ನಡೆದು ಸ್ನೇಹಿತರ ಬಳಗ ತಂಡವು 3-0 ಗೋಲುಗಳಿಂದ ಫೈನಲ್ ಪ್ರವೇಶ ಪಡೆಯಿತು. ದ್ವೀತಿಯ ಸೆಮಿಫೈನಲ್ ಪಂದ್ಯದಲ್ಲಿ ಪ್ರಗತಿ ಎಫ್.ಸಿ ವಿರಾಜಪೇಟೆ ಮತ್ತು ವಿಜಯನಗರ ಎಫ್.ಸಿ. ಮೈಸೂರು ತಂಡಗಳ ನಡುವೆ ನಡೆದು 1-0 ಗೋಲುಗಳಿಂದ ಮೈಸೂರು ತಂಡವನ್ನು ಮಣಿಸಿ ಫೈನಲ್‍ಗೆ ಆರ್ಹತೆ ಪಡೆಯಿತು.

ಪ್ರಗತಿ ಎಫ್.ಸಿ ವಿರಾಜಪೇಟೆ ಮತ್ತು ಸ್ನೇಹಿತರ ಬಳಗ ಎಫ್.ಸಿ ನಡುವೆ ನಡೆದ ಫೈನಲ್ ಪಂದ್ಯಾವಳಿಯು ರೋಚಕತೆಯಿಂದ ಕೂಡಿದ್ದು, ಪ್ರಥಮಾರ್ಧದವರೆಗೆ ಯಾವುದೇ ಗೋಲುಗಳಿಸಲು ಉಬಯ ತಂಡಗಳು ವಿಫಲವಾಯಿತು. ದ್ವಿತೀಯಾರ್ಧದಲ್ಲಿ ಬಲಿಷ್ಟವಾದ ಪ್ರಗತಿ ಎಫ್.ಸಿ ತಂಡ, ಸ್ನೇಹಿತರ ಬಳಗ ಉದನ್ಮೂಕ ಮುನ್ನಡೆ ಆಟಗಾರ ಪ್ರಥಮ ಗೋಲುಗಳಿಸಲು ಶಕ್ತರಾದರು. ಕೆಲವು ನಿಮಿಷಗಳ ನಂತರ ಮತ್ತೊಂದು ಗೋಲು ದಾಖಲಾಯಿತು. ಪ್ರಗತಿ ಎಫ್.ಸಿ ತಂಡವನ್ನು 2-0 ಗೋಲುಗಳಿಂದ ಮಣಿಸಿದ ಸ್ನೇಹಿತರ ಬಳಗ ತಂಡವು ಅಖಿಲ ಭಾರತ ಕಾಲ್ಚೆಂಡು ಪಂದ್ಯಾವಳಿಯ ಚಾಂಪಿಯನ್ ಪಟ್ಟ ಅಲಂಕರಿಸಿತು.

ವಿಜೇತ ತಂಡಕ್ಕೆ 1 ಲಕ್ಷ ನಗದು ಮತ್ತು ಆಕರ್ಷಕ ಟ್ರೋಫಿ, ಪರಾಜಿತ ತಂಡಕ್ಕೆ 75 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ ನೀಡಿ ಗೌರವಿಸಲಾಯಿತು.
ಪಂದ್ಯಾವಳಿಯ ಅತ್ಯುತ್ತಮ ತಂಡ ವಿಜಯನಗರ ಮೈಸೂರು, ಉತ್ತಮ ಆಟಗಾರ, ಉತ್ತಮ ಮುನ್ನಡೆ ಆಟಗಾರ, ಉತ್ತಮ ಗೋಲು, ಭರವಸೆಯ ಆಟಗಾರ, ಅತ್ಯಧಿಕ ಗೋಲು, ಉತ್ತಮ ಮಹಿಳಾ ಆಟಗಾರ್ಥಿ ಪ್ರಶಸ್ತಿ, ಪಂದ್ಯ ಪುರುಶೋತ್ತಮ ವ್ಯಯುಕ್ತಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕರ್ನಾಟಕ ರಾಜ್ಯ ಫುಟ್ಬಾಲ್ ಸಂಸ್ಥೆಯ ತೀರ್ಪುಗಾರರಾದ ದರ್ಶನ್, ಧೀರಜ್, ಸಂತೋಷ್ ಮತ್ತು ಇಮ್ರಾನ್ ಖಾನ್ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು.

ಆಕ್ಸ್‍ಫರ್ಡ್ ಎಫ್.ಸಿ. ವಿರಾಜಪೇಟೆ ಕೊಡಗು ಸಂಸ್ಥೆಯ ಸರ್ವ ಸದಸ್ಯರು ಸೇರಿದಂತೆ ವಿವಿಧ ತಂಡಗಳ ಆಟಗಾರರು, ಮಾಲೀಕರು, ನಗರ ಮತ್ತು ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದರು.

ವರದಿ : ಕಿಶೋರ್ ಕುಮಾರ್ ಶೆಟ್ಟಿ 

Share. Facebook Twitter Pinterest LinkedIn Tumblr Email WhatsApp
Previous Articleಜ.3 ಮತ್ತು 4 ರಂದು ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ
Next Article ವೈಷ್ಣವಿ ಫುಟ್ಬಾಲ್ ಕ್ಲಬ್ ಕಾರ್ಯಕರ್ತರಿಂದ ಮರಗೋಡುವಿನಲ್ಲಿ ಸ್ವಚ್ಛತಾ ಶ್ರಮದಾನ

Related Posts

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.