Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಿತಿ ಮೀರಿದ ವನ್ಯಜೀವಿ ದಾಳಿ : ಐದು ಜಿಲ್ಲೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ : ಬಿಜೆಪಿ ನಿರ್ಧಾರ*
  • *ಶರಣ ಸಾಹಿತ್ಯ ಸಮ್ಮೇಳನ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ*
  • *ಕೊಡಗು ಜಿಲ್ಲೆಯ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಿಆರ್‌ಎಫ್ ಅಡಿಯಲ್ಲಿ ರೂ.22 ಕೋಟಿ ಮಂಜೂರು : ಸಂಸದ  ಯದುವೀರ್ ಒಡೆಯರ್*
  • *ಜೂ.14ಕ್ಕೆ ಮರಾಠ-ಮರಾಟಿ ಸಮಾಜದ ವಾರ್ಷಿಕ ಮಹಾಸಭೆ*
  • *ಮಡಿಕೇರಿಯಲ್ಲಿ ಫಿಟ್ ಇಂಡಿಯಾ ಆಂದೋಲನಕ್ಕೆ ಚಾಲನೆ*
  • *ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕ-ಶಿಕ್ಷಕರ ಸಭೆ*
  • *ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ : ಪ್ರಕೃತಿ, ವನ್ಯಜೀವಿಗಳ ಮೇಲೆ ಕಾಳಜಿ ಅಗತ್ಯ : ಸಂಸದ ಯದುವೀರ್ ಒಡೆಯರ್*
  • *ಬಿಜೆಪಿ ಪಕ್ಷದ ವಿರಾಜಪೇಟೆ ಮಂಡಲ ಕಚೇರಿಯನ್ನು ಉದ್ಘಾಟಿಸಿದ ಸಂಸದ ಯದುವೀರ್ ಒಡೆಯರ್*
  • *ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ ಆಚರಣೆ : ಮಾದಕ ವ್ಯಸನದಿಂದ ದೂರವಿರಲು ಎನ್.ಜೆ.ಲತಾ ಕರೆ*
  • *ಸೋಮವಾರಪೇಟೆ : ಕಾರ್ಯಕರ್ತರ ಸಮಸ್ಯೆ ಆಲಿಸಿದ ಶಾಸಕ ಡಾ.ಮಂತರ್ ಗೌಡ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಶಾಸಕರ ಮಧ್ಯಪ್ರವೇಶಕ್ಕೆ ಜಿ. ಪಂ ಮಾಜಿ ಸದಸ್ಯ ಬಿ.ಎನ್. ಪ್ರತ್ಯು ಆಗ್ರಹ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಶಾಸಕರ ಮಧ್ಯಪ್ರವೇಶಕ್ಕೆ ಜಿ. ಪಂ ಮಾಜಿ ಸದಸ್ಯ ಬಿ.ಎನ್. ಪ್ರತ್ಯು ಆಗ್ರಹ

ಜನವರಿ 4, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಜ.4 :  ರಾಜ್ಯ ಸರಕಾರ ಇದೀಗ ಜಾರಿಗೆ ತಂದಿರುವ ಜಿ.ಪಂ. ಕ್ಷೇತ್ರಗಳ ಪುನರ್ ವಿಂಗಡನೆಯಿಂದ ಕೊಡಗು ಜಿಲ್ಲೆಗೆ ಅನ್ಯಾಯವಾಗಿದೆ. ಇದರಿಂದ ಜಿಲ್ಲೆಯ ಅಭಿವೃದ್ಧಿ ಗಣನೀಯ ಪ್ರಮಾಣದಲ್ಲಿ ಕುಂಠಿತವಾಗಲಿದೆ. ಆದ್ದರಿಂದ ಆಡಳಿತರೂಢ ಪಕ್ಷದ ಜಿಲ್ಲೆಯ ಶಾಸಕರು ಕೂಡಲೇ ಮಧ್ಯ ಪ್ರವೇಶಿಸಿ ಸರಕಾರಕ್ಕೆ ನೈಜತೆಯನ್ನು ಮನವರಿಕೆ ಮಾಡಿಕೊಡಬೇಕು. ಅದರ ಮೂಲಕ ಇದನ್ನು ಜಾರಿಗೊಳಿಸುವ ಸಂದರ್ಭದಲ್ಲಿ ವಿಶೇಷ ಪ್ರಕರಣದಡಿ ವಿನಾಯಿತಿ ಪಡೆಯಬೇಕು ಎಂದು ಕೊಡಗು ಜಿ.ಪಂ. ಮಾಜಿ ಸದಸ್ಯರೂ ಆಗಿರುವ ಕೊಡಗು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಬಿ. ಎನ್. ಪ್ರತ್ಯು ಆಗ್ರಹಿಸಿದ್ದಾರೆ.

ಈ ಕುರಿತು  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರ ಹೊರಡಿಸಿರುವ ಕೊಡಗು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡಣೆ ಪಟ್ಟಿಯಲ್ಲಿ ಈ ಹಿಂದೆ ಇದ್ದ ಒಟ್ಟು 29 ಜಿ.ಪಂ ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳು ಕಡಿಮೆಯಾಗಿದೆ. ಇದರಿಂದ ಜಿಲ್ಲೆಯ ಜಿ.ಪಂ ಕ್ಷೇತ್ರ 25ಕ್ಕೆ ಕುಸಿದಿದೆ. ಜಿಲ್ಲೆಯ ಅಭಿವೃದ್ಧಿ ವಿಷಯದಲ್ಲಿ ಇದೊಂದು ಬಹುದೊಡ್ಡ ದುರಂತವಾಗಲಿದೆ. ಕೊಡಗಿಗೆ ನಿರಂತರವಾಗಿ ಆಗುತ್ತಿರುವ ಅನ್ಯಾಯಗಳ ಪೈಕಿ ಇದೂ ಒಂದು ಅನ್ಯಾಯವಾಗಿದೆ ಎಂದು ಖಾರವಾಗಿ ಪ್ರತಿಕ್ರಿಸಿದರಲ್ಲದೆ, ಈ ಕುರಿತು ಆಡಳಿತರೂಢ ಬಿಜೆಪಿ ಪಕ್ಷ ತನ್ನ ಸ್ಪಷ್ಟ ನಿಲುವನ್ನು ಕೊಡಗಿನ ಜನತೆಗೆ ತಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕಳೆದ ಕೆಲವು ವರ್ಷಗಳ ಹಿಂದೆ ನಡೆದ ವಿಧಾನಸಭಾ ಕ್ಷೇತ್ರಗಳ ಪುನರ್ ವಿಂಗಡಣೆಯಲ್ಲೂ ಕೊಡಗು ಜಿಲ್ಲೆಗೆ ಅನ್ಯಾಯವಾಗಿತ್ತು. ಇದರಿಂದಾಗಿ 3 ವಿಧಾನಸಭಾ ಕ್ಷೇತ್ರವಿದ್ದ ಕೊಡಗಿನಲ್ಲಿ 2 ಕ್ಷೇತ್ರವಾಯಿತು. ಈ ಸಂದರ್ಭದಲ್ಲಿಯೂ ಕೊಡಗಿನಿಂದ ವ್ಯಾಪಕ ಪ್ರತಿರೋಧ ವ್ಯಕ್ತಗೊಳ್ಳಲಿಲ್ಲ. ಅಂದು ವಿಶೇಷ ಪ್ರಕರಣದಡಿ ವಿನಾಯಿತಿ ಪಡೆಯುವ ಯಾವ ಪ್ರಯತ್ನವೂ ನಡೆಯಲಿಲ್ಲ. ವಿಧಾನಸಭಾ ಕ್ಷೇತ್ರವೊಂದು ಕಡಿಮೆಯಾಗಿದ್ದು, ಕೊಡಗಿನ ಅಭಿವೃದ್ಧಿಗೆ ಬಹುದೊಡ್ಡ ಹಿನ್ನಡೆಯಾಯಿತು ಎಂದು ವಿವರಿಸಿದ ಬಿ.ಎನ್. ಪ್ರತ್ಯು , ಜನಪ್ರತಿನಿಧಿಗಳ ಇಚ್ಛಾಶಕ್ತಿ, ಮತ್ತು ಅಧಿಕಾರಿಗಳ ನಿರ್ಲಕ್ಷದಿಂದ ಕೊಡಗು ಅಭಿವೃದ್ಧಿಯಲ್ಲಿ ಹಿಂದುಳಿಯುವಂತಾಯಿತು. ಇನ್ನಾದರೂ ಈ ಕುರಿತು ಎಚ್ಚೆತ್ತುಕೊಳ್ಳದಿದ್ದರೆ ಕೊಡಗಿನ ಭವಿಷ್ಯಕ್ಕೆ ಮಾರಕವಾಗಲಿದೆ ಎಂದು ಎಚ್ಚರಿಸಿದರು.

ಜಿ.ಪಂ.ಯಲ್ಲಿ ಸರ್ಕಾರದ ವಿವಿಧ ಯೋಜನೆಯ ಅನುದಾನವನ್ನು ಕ್ಷೇತ್ರವಾರು ಹಂಚಿಕೆ ಮಾಡಲಾಗುತ್ತದೆ. ಕ್ಷೇತ್ರ ಕಡಿಮೆಯಾದಷ್ಟು ಅನುದಾನವು ಕಡಿಮೆಯಾಗಲಿದೆ. ಇದು ಕ್ಷೇತ್ರಗಳ ಅಭಿವೃದ್ಧಿ ಮೇಲೆ ಭಾರಿ ಪರಿಣಾಮ ಬೀರಲಿದೆ. ಆದ್ದರಿಂದ ಈ ಕುರಿತು ಕೊಡಗಿನಿಂದ ಮತ್ತಷ್ಟು ಗಟ್ಟಿ ಧ್ವನಿಗಳು ಮೊಳಗಬೇಕಿದೆ ಎಂದು ಅಭಿಪ್ರಾಯಪಟ್ಟ ಬಿ.ಎನ್. ಪ್ರತ್ಯು , ಜಿ.ಪಂ.ಗೆ ಸರಕಾರದ ಒಟ್ಟು 29 ಇಲಾಖೆಗಳು ಒಳಪಡುತ್ತಿದ್ದು, ಈ ಪೈಕಿ ಬಹುತೇಕ ಇಲಾಖೆಗಳ ಅನುದಾನ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಹೀಗಾದರೆ ಜಿ.ಪಂ. ಸದಸ್ಯರಿಗೆ ಯಾವುದೇ ಕೆಲಸವಿರುವುದಿಲ್ಲ. ಭವಿಷ್ಯದಲ್ಲಿ ನಾಮಕಾವಸ್ಥೆಗೆ ಮಾತ್ರ ಜಿ.ಪಂ. ಇರುತ್ತದೆ ಎಂದು  ಹೇಳಿದರು.

ಜಿ.ಪಂ. ಅನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಶೇ. 70 ರಷ್ಟಿರುವ ಜಿ.ಪಂ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆಯಾಗುತ್ತಿಲ್ಲ. ಸರಕಾರದ ವಿವಿಧ ಹಣಕಾಸು ಯೋಜನೆಗಳು ರದ್ದುಗೊಂಡಿದೆ. ಜಿ.ಪಂ ಕ್ಷೇತ್ರಗಳಲ್ಲಿರುವ ಶಾಲೆಗಳ ಅಭಿವೃದ್ಧಿಗೆ ಅನುದಾನ ಲಭ್ಯವಿಲ್ಲ. ಹಲವು ಸಮಯಗಳಿಂದ ಕುಡಿಯುವ ನೀರಿಗಾಗಿ ತೆರೆದ ಬಾವಿಗಳ ನಿರ್ಮಾಣ ಆಗುತ್ತಿಲ್ಲ. ಬೇಸಿಗೆಯಲ್ಲಿ ಕುಡಿಯುವ ನೀರಿನ ತೆರೆದ ಬಾವಿಗಳು ಬತ್ತಿಹೋದರೆ ಅದಕ್ಕೆ ಬುಷ್ ಇಳಿಸಲು ಅನುದಾನ ದೊರೆಯುತ್ತಿಲ್ಲ. ಪರಿಶಿಷ್ಟ ಜಾತಿ ಮತ್ತು ಪಂಗಡದ ಬಡಜನರ ಮನೆ ರಿಪೇರಿಗೆ ಅನುದಾನವನ್ನು ಸ್ಥಗಿತಗೊಳಿಸಲಾಗಿದೆ. ಕಳೆದ ಕೆಲವು ವರ್ಷಗಳಿಂದ ವಸತಿ ಯೋಜನೆಗಳೇ ಜಾರಿಯಾಗುತ್ತಿಲ್ಲ. ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆಯಿಂದ ಯಾವುದೇ ವಿಶೇಷ ಅನುದಾನ ದೊರೆಯುತ್ತಿಲ್ಲ. ಬಯಲು ರಂಗ ಮಂದಿರಗಳ ನಿರ್ಮಾಣವು ದೂರದ ಮಾತಾಗಿದೆ. ಇದರ ಜೊತೆಗೆ ಇದೀಗ ಕ್ಷೇತ್ರ ಕಡಿಮೆಯಾಗಿರುವುದು ಕಾವೇರಿ ತವರಿನ ಜಿಲ್ಲೆಗೆ ಬಿದ್ದ ದೊಡ್ಡ ಹೊಡೆತವಾಗಿದೆ ಎಂದು ಪ್ರತ್ಯು ವಿವರಿಸಿದರು.

ಕೊಡಗಿನ ಜಿ.ಪಂ ಕ್ಷೇತ್ರ ವಿಂಗಡನೆಯನ್ನು ಪುನರ್ ಪರಿಶೀಲಿಸಬೇಕು. ಕೊಡಗು ಜಿಲ್ಲೆಯನ್ನು ಗುಡ್ಡಗಾಡು ಪ್ರದೇಶವೆಂದು ಎಂದು ವಿಶೇಷ ಪ್ರಕರಣದಲ್ಲಿ ಪರಿಗಣಿಸಬೇಕು. ಹಿಮಾಚಲ ಪ್ರದೇಶ ಹಾಗೂ ಈಶಾನ್ಯ ರಾಜ್ಯಗಳಿಗೆ ನೀಡಿದಂತೆ ಕೊಡಗು ಜಿಲ್ಲೆಗೂ ವಿನಾಯಿತಿ ನೀಡಬೇಕು. ಈ ಹಿಂದೆ ಇದ್ದ 29 ಕ್ಷೇತ್ರಕ್ಕಿಂತ ಹೆಚ್ಚುವರಿ ಜಿ.ಪಂ ಕ್ಷೇತ್ರಗಳನ್ನು ಕೊಡಗು ಜಿಲ್ಲೆಗೆ ನೀಡಬೇಕು ಎಂದು ಆಗ್ರಹಿಸಿರುವ ಬಿ.ಎನ್. ಪ್ರತ್ಯು, ಕೊಡಗಿನ ಶಾಸಕರು ಇದನ್ನು ಪಕ್ಷಾತೀತವಾಗಿ ಪರಿಗಣಿಸಿ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಇದರಿಂದ ಕೊಡಗಿಗೆ ಆಗುವ ಅನ್ಯಾಯವನ್ನು ಸರಿಪಡಿಸಲು ತಮ್ಮ ಇಚ್ಛಾಸಕ್ತಿ ತೋರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಿತಿ ಮೀರಿದ ವನ್ಯಜೀವಿ ದಾಳಿ : ಐದು ಜಿಲ್ಲೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ : ಬಿಜೆಪಿ ನಿರ್ಧಾರ*

ಜೂನ್ 10, 2026

*ಶರಣ ಸಾಹಿತ್ಯ ಸಮ್ಮೇಳನ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ*

ಜೂನ್ 10, 2026

*ಕೊಡಗು ಜಿಲ್ಲೆಯ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಿಆರ್‌ಎಫ್ ಅಡಿಯಲ್ಲಿ ರೂ.22 ಕೋಟಿ ಮಂಜೂರು : ಸಂಸದ  ಯದುವೀರ್ ಒಡೆಯರ್*

ಜೂನ್ 10, 2026

*ಶರಣ ಸಾಹಿತ್ಯ ಸಮ್ಮೇಳನ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ*

ಜೂನ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ  ಜೂ.10 NEWS DESK :  ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಜೂ.23 ರಂದು ಕುಶಾಲನಗರದ ರೈತ…

*ಕೊಡಗು ಜಿಲ್ಲೆಯ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಿಆರ್‌ಎಫ್ ಅಡಿಯಲ್ಲಿ ರೂ.22 ಕೋಟಿ ಮಂಜೂರು : ಸಂಸದ  ಯದುವೀರ್ ಒಡೆಯರ್*

ಜೂನ್ 10, 2026

*ಜೂ.14ಕ್ಕೆ ಮರಾಠ-ಮರಾಟಿ ಸಮಾಜದ ವಾರ್ಷಿಕ ಮಹಾಸಭೆ*

ಜೂನ್ 9, 2026

*ಮಡಿಕೇರಿಯಲ್ಲಿ ಫಿಟ್ ಇಂಡಿಯಾ ಆಂದೋಲನಕ್ಕೆ ಚಾಲನೆ*

ಜೂನ್ 9, 2026

*ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕ-ಶಿಕ್ಷಕರ ಸಭೆ*

ಜೂನ್ 9, 2026

*ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ : ಪ್ರಕೃತಿ, ವನ್ಯಜೀವಿಗಳ ಮೇಲೆ ಕಾಳಜಿ ಅಗತ್ಯ : ಸಂಸದ ಯದುವೀರ್ ಒಡೆಯರ್*

ಜೂನ್ 9, 2026

*ಬಿಜೆಪಿ ಪಕ್ಷದ ವಿರಾಜಪೇಟೆ ಮಂಡಲ ಕಚೇರಿಯನ್ನು ಉದ್ಘಾಟಿಸಿದ ಸಂಸದ ಯದುವೀರ್ ಒಡೆಯರ್*

ಜೂನ್ 9, 2026

*ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ ಆಚರಣೆ : ಮಾದಕ ವ್ಯಸನದಿಂದ ದೂರವಿರಲು ಎನ್.ಜೆ.ಲತಾ ಕರೆ*

ಜೂನ್ 9, 2026

*ಸೋಮವಾರಪೇಟೆ : ಕಾರ್ಯಕರ್ತರ ಸಮಸ್ಯೆ ಆಲಿಸಿದ ಶಾಸಕ ಡಾ.ಮಂತರ್ ಗೌಡ*

ಜೂನ್ 9, 2026

*ಐಗೂರು : ಕೈತೋಟದಿಂದ ವಿದ್ಯಾರ್ಥಿಗಳಿಗೆ ರಸಾಯನ ಮುಕ್ತ ಆಹಾರ ದೊರೆಯಲಿದೆ : ಸಿ.ಬಿ.ಸುರೇಶ್ ಶೆಟ್ಟಿ*

ಜೂನ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.