Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಶಾಸಕರ ಮಧ್ಯಪ್ರವೇಶಕ್ಕೆ ಜಿ. ಪಂ ಮಾಜಿ ಸದಸ್ಯ ಬಿ.ಎನ್. ಪ್ರತ್ಯು ಆಗ್ರಹ
ಇತ್ತೀಚಿನ ಸುದ್ದಿಗಳು

ಶಾಸಕರ ಮಧ್ಯಪ್ರವೇಶಕ್ಕೆ ಜಿ. ಪಂ ಮಾಜಿ ಸದಸ್ಯ ಬಿ.ಎನ್. ಪ್ರತ್ಯು ಆಗ್ರಹ

January 4, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ವಿರಾಜಪೇಟೆ ಜ.4 :  ರಾಜ್ಯ ಸರಕಾರ ಇದೀಗ ಜಾರಿಗೆ ತಂದಿರುವ ಜಿ.ಪಂ. ಕ್ಷೇತ್ರಗಳ ಪುನರ್ ವಿಂಗಡನೆಯಿಂದ ಕೊಡಗು ಜಿಲ್ಲೆಗೆ ಅನ್ಯಾಯವಾಗಿದೆ. ಇದರಿಂದ ಜಿಲ್ಲೆಯ ಅಭಿವೃದ್ಧಿ ಗಣನೀಯ ಪ್ರಮಾಣದಲ್ಲಿ ಕುಂಠಿತವಾಗಲಿದೆ. ಆದ್ದರಿಂದ ಆಡಳಿತರೂಢ ಪಕ್ಷದ ಜಿಲ್ಲೆಯ ಶಾಸಕರು ಕೂಡಲೇ ಮಧ್ಯ ಪ್ರವೇಶಿಸಿ ಸರಕಾರಕ್ಕೆ ನೈಜತೆಯನ್ನು ಮನವರಿಕೆ ಮಾಡಿಕೊಡಬೇಕು. ಅದರ ಮೂಲಕ ಇದನ್ನು ಜಾರಿಗೊಳಿಸುವ ಸಂದರ್ಭದಲ್ಲಿ ವಿಶೇಷ ಪ್ರಕರಣದಡಿ ವಿನಾಯಿತಿ ಪಡೆಯಬೇಕು ಎಂದು ಕೊಡಗು ಜಿ.ಪಂ. ಮಾಜಿ ಸದಸ್ಯರೂ ಆಗಿರುವ ಕೊಡಗು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಬಿ. ಎನ್. ಪ್ರತ್ಯು ಆಗ್ರಹಿಸಿದ್ದಾರೆ.

ಈ ಕುರಿತು  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರ ಹೊರಡಿಸಿರುವ ಕೊಡಗು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡಣೆ ಪಟ್ಟಿಯಲ್ಲಿ ಈ ಹಿಂದೆ ಇದ್ದ ಒಟ್ಟು 29 ಜಿ.ಪಂ ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳು ಕಡಿಮೆಯಾಗಿದೆ. ಇದರಿಂದ ಜಿಲ್ಲೆಯ ಜಿ.ಪಂ ಕ್ಷೇತ್ರ 25ಕ್ಕೆ ಕುಸಿದಿದೆ. ಜಿಲ್ಲೆಯ ಅಭಿವೃದ್ಧಿ ವಿಷಯದಲ್ಲಿ ಇದೊಂದು ಬಹುದೊಡ್ಡ ದುರಂತವಾಗಲಿದೆ. ಕೊಡಗಿಗೆ ನಿರಂತರವಾಗಿ ಆಗುತ್ತಿರುವ ಅನ್ಯಾಯಗಳ ಪೈಕಿ ಇದೂ ಒಂದು ಅನ್ಯಾಯವಾಗಿದೆ ಎಂದು ಖಾರವಾಗಿ ಪ್ರತಿಕ್ರಿಸಿದರಲ್ಲದೆ, ಈ ಕುರಿತು ಆಡಳಿತರೂಢ ಬಿಜೆಪಿ ಪಕ್ಷ ತನ್ನ ಸ್ಪಷ್ಟ ನಿಲುವನ್ನು ಕೊಡಗಿನ ಜನತೆಗೆ ತಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕಳೆದ ಕೆಲವು ವರ್ಷಗಳ ಹಿಂದೆ ನಡೆದ ವಿಧಾನಸಭಾ ಕ್ಷೇತ್ರಗಳ ಪುನರ್ ವಿಂಗಡಣೆಯಲ್ಲೂ ಕೊಡಗು ಜಿಲ್ಲೆಗೆ ಅನ್ಯಾಯವಾಗಿತ್ತು. ಇದರಿಂದಾಗಿ 3 ವಿಧಾನಸಭಾ ಕ್ಷೇತ್ರವಿದ್ದ ಕೊಡಗಿನಲ್ಲಿ 2 ಕ್ಷೇತ್ರವಾಯಿತು. ಈ ಸಂದರ್ಭದಲ್ಲಿಯೂ ಕೊಡಗಿನಿಂದ ವ್ಯಾಪಕ ಪ್ರತಿರೋಧ ವ್ಯಕ್ತಗೊಳ್ಳಲಿಲ್ಲ. ಅಂದು ವಿಶೇಷ ಪ್ರಕರಣದಡಿ ವಿನಾಯಿತಿ ಪಡೆಯುವ ಯಾವ ಪ್ರಯತ್ನವೂ ನಡೆಯಲಿಲ್ಲ. ವಿಧಾನಸಭಾ ಕ್ಷೇತ್ರವೊಂದು ಕಡಿಮೆಯಾಗಿದ್ದು, ಕೊಡಗಿನ ಅಭಿವೃದ್ಧಿಗೆ ಬಹುದೊಡ್ಡ ಹಿನ್ನಡೆಯಾಯಿತು ಎಂದು ವಿವರಿಸಿದ ಬಿ.ಎನ್. ಪ್ರತ್ಯು , ಜನಪ್ರತಿನಿಧಿಗಳ ಇಚ್ಛಾಶಕ್ತಿ, ಮತ್ತು ಅಧಿಕಾರಿಗಳ ನಿರ್ಲಕ್ಷದಿಂದ ಕೊಡಗು ಅಭಿವೃದ್ಧಿಯಲ್ಲಿ ಹಿಂದುಳಿಯುವಂತಾಯಿತು. ಇನ್ನಾದರೂ ಈ ಕುರಿತು ಎಚ್ಚೆತ್ತುಕೊಳ್ಳದಿದ್ದರೆ ಕೊಡಗಿನ ಭವಿಷ್ಯಕ್ಕೆ ಮಾರಕವಾಗಲಿದೆ ಎಂದು ಎಚ್ಚರಿಸಿದರು.

ಜಿ.ಪಂ.ಯಲ್ಲಿ ಸರ್ಕಾರದ ವಿವಿಧ ಯೋಜನೆಯ ಅನುದಾನವನ್ನು ಕ್ಷೇತ್ರವಾರು ಹಂಚಿಕೆ ಮಾಡಲಾಗುತ್ತದೆ. ಕ್ಷೇತ್ರ ಕಡಿಮೆಯಾದಷ್ಟು ಅನುದಾನವು ಕಡಿಮೆಯಾಗಲಿದೆ. ಇದು ಕ್ಷೇತ್ರಗಳ ಅಭಿವೃದ್ಧಿ ಮೇಲೆ ಭಾರಿ ಪರಿಣಾಮ ಬೀರಲಿದೆ. ಆದ್ದರಿಂದ ಈ ಕುರಿತು ಕೊಡಗಿನಿಂದ ಮತ್ತಷ್ಟು ಗಟ್ಟಿ ಧ್ವನಿಗಳು ಮೊಳಗಬೇಕಿದೆ ಎಂದು ಅಭಿಪ್ರಾಯಪಟ್ಟ ಬಿ.ಎನ್. ಪ್ರತ್ಯು , ಜಿ.ಪಂ.ಗೆ ಸರಕಾರದ ಒಟ್ಟು 29 ಇಲಾಖೆಗಳು ಒಳಪಡುತ್ತಿದ್ದು, ಈ ಪೈಕಿ ಬಹುತೇಕ ಇಲಾಖೆಗಳ ಅನುದಾನ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಹೀಗಾದರೆ ಜಿ.ಪಂ. ಸದಸ್ಯರಿಗೆ ಯಾವುದೇ ಕೆಲಸವಿರುವುದಿಲ್ಲ. ಭವಿಷ್ಯದಲ್ಲಿ ನಾಮಕಾವಸ್ಥೆಗೆ ಮಾತ್ರ ಜಿ.ಪಂ. ಇರುತ್ತದೆ ಎಂದು  ಹೇಳಿದರು.

ಜಿ.ಪಂ. ಅನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಶೇ. 70 ರಷ್ಟಿರುವ ಜಿ.ಪಂ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆಯಾಗುತ್ತಿಲ್ಲ. ಸರಕಾರದ ವಿವಿಧ ಹಣಕಾಸು ಯೋಜನೆಗಳು ರದ್ದುಗೊಂಡಿದೆ. ಜಿ.ಪಂ ಕ್ಷೇತ್ರಗಳಲ್ಲಿರುವ ಶಾಲೆಗಳ ಅಭಿವೃದ್ಧಿಗೆ ಅನುದಾನ ಲಭ್ಯವಿಲ್ಲ. ಹಲವು ಸಮಯಗಳಿಂದ ಕುಡಿಯುವ ನೀರಿಗಾಗಿ ತೆರೆದ ಬಾವಿಗಳ ನಿರ್ಮಾಣ ಆಗುತ್ತಿಲ್ಲ. ಬೇಸಿಗೆಯಲ್ಲಿ ಕುಡಿಯುವ ನೀರಿನ ತೆರೆದ ಬಾವಿಗಳು ಬತ್ತಿಹೋದರೆ ಅದಕ್ಕೆ ಬುಷ್ ಇಳಿಸಲು ಅನುದಾನ ದೊರೆಯುತ್ತಿಲ್ಲ. ಪರಿಶಿಷ್ಟ ಜಾತಿ ಮತ್ತು ಪಂಗಡದ ಬಡಜನರ ಮನೆ ರಿಪೇರಿಗೆ ಅನುದಾನವನ್ನು ಸ್ಥಗಿತಗೊಳಿಸಲಾಗಿದೆ. ಕಳೆದ ಕೆಲವು ವರ್ಷಗಳಿಂದ ವಸತಿ ಯೋಜನೆಗಳೇ ಜಾರಿಯಾಗುತ್ತಿಲ್ಲ. ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆಯಿಂದ ಯಾವುದೇ ವಿಶೇಷ ಅನುದಾನ ದೊರೆಯುತ್ತಿಲ್ಲ. ಬಯಲು ರಂಗ ಮಂದಿರಗಳ ನಿರ್ಮಾಣವು ದೂರದ ಮಾತಾಗಿದೆ. ಇದರ ಜೊತೆಗೆ ಇದೀಗ ಕ್ಷೇತ್ರ ಕಡಿಮೆಯಾಗಿರುವುದು ಕಾವೇರಿ ತವರಿನ ಜಿಲ್ಲೆಗೆ ಬಿದ್ದ ದೊಡ್ಡ ಹೊಡೆತವಾಗಿದೆ ಎಂದು ಪ್ರತ್ಯು ವಿವರಿಸಿದರು.

ಕೊಡಗಿನ ಜಿ.ಪಂ ಕ್ಷೇತ್ರ ವಿಂಗಡನೆಯನ್ನು ಪುನರ್ ಪರಿಶೀಲಿಸಬೇಕು. ಕೊಡಗು ಜಿಲ್ಲೆಯನ್ನು ಗುಡ್ಡಗಾಡು ಪ್ರದೇಶವೆಂದು ಎಂದು ವಿಶೇಷ ಪ್ರಕರಣದಲ್ಲಿ ಪರಿಗಣಿಸಬೇಕು. ಹಿಮಾಚಲ ಪ್ರದೇಶ ಹಾಗೂ ಈಶಾನ್ಯ ರಾಜ್ಯಗಳಿಗೆ ನೀಡಿದಂತೆ ಕೊಡಗು ಜಿಲ್ಲೆಗೂ ವಿನಾಯಿತಿ ನೀಡಬೇಕು. ಈ ಹಿಂದೆ ಇದ್ದ 29 ಕ್ಷೇತ್ರಕ್ಕಿಂತ ಹೆಚ್ಚುವರಿ ಜಿ.ಪಂ ಕ್ಷೇತ್ರಗಳನ್ನು ಕೊಡಗು ಜಿಲ್ಲೆಗೆ ನೀಡಬೇಕು ಎಂದು ಆಗ್ರಹಿಸಿರುವ ಬಿ.ಎನ್. ಪ್ರತ್ಯು, ಕೊಡಗಿನ ಶಾಸಕರು ಇದನ್ನು ಪಕ್ಷಾತೀತವಾಗಿ ಪರಿಗಣಿಸಿ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಇದರಿಂದ ಕೊಡಗಿಗೆ ಆಗುವ ಅನ್ಯಾಯವನ್ನು ಸರಿಪಡಿಸಲು ತಮ್ಮ ಇಚ್ಛಾಸಕ್ತಿ ತೋರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Articleಮಡಿಕೇರಿಯಲ್ಲಿ ‘ಸಂವಾದ’ ಕಾರ್ಯಕ್ರಮ : ತಮ್ಮ ಅಧಿಕಾರದ ಅವಧಿಯುದ್ದಕ್ಕೂ ಶಿಕ್ಷಣಕ್ಕೆ ಒತ್ತು : ಶಾಸಕ ಎಂ.ಪಿ.ಅಪ್ಪಚ್ಚು ರಂಜನ್
Next Article ತಾಳತ್ತಮನೆ : ಜ.23 ರಂದು ಜಿಲ್ಲಾಮಟ್ಟದ ವಾಲಿಬಾಲ್, ಥ್ರೋಬಾಲ್ ಹಾಗೂ ಮ್ಯಾರಥಾನ್

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.