Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಕನ್ನಡ ಸಾಹಿತ್ಯ ಸಮ್ಮೇಳನವನ್ನು ದಿಕ್ಕರಿಸಿದ ಹೆಚ್.ವಿಶ್ವನಾಥ್ : ಇದು ಕನ್ನಡಿಗರ ಸಮ್ಮೇಳನವಲ್ಲ, ರಾಜಕೀಯ ಸಮ್ಮೇಳನವೆಂದು ಕಿಡಿ
ಇತ್ತೀಚಿನ ಸುದ್ದಿಗಳು

ಕನ್ನಡ ಸಾಹಿತ್ಯ ಸಮ್ಮೇಳನವನ್ನು ದಿಕ್ಕರಿಸಿದ ಹೆಚ್.ವಿಶ್ವನಾಥ್ : ಇದು ಕನ್ನಡಿಗರ ಸಮ್ಮೇಳನವಲ್ಲ, ರಾಜಕೀಯ ಸಮ್ಮೇಳನವೆಂದು ಕಿಡಿ

January 5, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.5 : ಹಾವೇರಿಯಲ್ಲಿ ನಡೆಯುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ದಿಕ್ಕರಿಸಿದ್ದಾರೆ. ಇದು ಕನ್ನಡಿಗರ ಸಮ್ಮೇಳನವಲ್ಲ, ಆಲ್ ಪಾರ್ಟಿ ಲೀಡರ್ಸ್ ಅಸೋಸಿಯೇಷನ್ ನ ರಾಜಕೀಯ ಸಮ್ಮೇಳನ ಎಂದು ಅವರು ಕಿಡಿ ಕಾರಿದ್ದಾರೆ.
ಮಡಿಕೇರಿಯ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿಗಳ ಕ್ಷೇತ್ರದಲ್ಲಿ ನಡೆಯುತ್ತಿರುವ ಸಮ್ಮೇಳನಕ್ಕೆ ಸರ್ಕಾರ 20 ಕೋಟಿ ರೂ.ಗಳ ಬೃಹತ್ ಮೊತ್ತದ ಅನುದಾನವನ್ನು ನೀಡಿದೆ. ಆದರೆ ಸಮ್ಮೇಳನದ ಕುರಿತು ಪೂರ್ವಭಾವಿ ಸಭೆ ನಡೆಸಿಲ್ಲ, ಮಾರ್ಗಸೂಚಿಯನ್ನು ನೀಡಿಲ್ಲ. ಊಟ, ತಿಂಡಿ, ಬಾಜ, ಬಜಂತ್ರಿ, ಏಲಕ್ಕಿ ಮಾಲೆ ಇಷ್ಟೇ ಸಮ್ಮೇಳನವೇ ಎಂದು ಪ್ರಶ್ನಿಸಿದರು.
ಸಮ್ಮೇಳನದಲ್ಲಿ ಸುಮಾರು 85 ಸಾಧಕರನ್ನು ಸನ್ಮಾನಿಸಲಾಗುತ್ತಿದೆ, ಆದರೆ ಈ ಪಟ್ಟಿಯಲ್ಲಿ ಒಬ್ಬರೇ ಒಬ್ಬರು ಮುಸ್ಲಿಮರಿಲ್ಲ. ಜಾನಪದ ವಿದ್ವಾಂಸ ಡಾ.ಕರೀಂ ಖಾನ್, ಅಖಿಲ ಭಾರತ ಸಾಹಿತ್ಯ ಪ್ರಶಸ್ತಿ ಸೇರಿದಂತೆ ಉನ್ನತ ಪ್ರಶಸ್ತಿಗಳನ್ನು ಪಡೆದವರನ್ನು ಕೂಡ ಸನ್ಮಾನಿತರ ಪಟ್ಟಿಯಲ್ಲಿ ಸೇರಿಸಿಲ್ಲ. ಹಿಂದಿನ ಸಮ್ಮೇಳನಗಳಲ್ಲಿ ದಲಿತ ಸಮಾವೇಶ ನಡೆಯುತ್ತಿತ್ತು, ಆದರೆ ಈ ಬಾರಿ ದಮನಿತರ ಸಮಾವೇಶ ಎಂದು ಬದಲಾಯಿಸಲಾಗಿದೆ. ಅಧ್ಯಕ್ಷರಿಗೆ ದಲಿತ, ದಮನಿತರ ವ್ಯತ್ಯಾಸ ತಿಳಿದಿಲ್ಲವೇ ಎಂದು ಅಸಮಾಧಾನ ವ್ಯಕ್ತಪಡಿಸಿದ ವಿಶ್ವನಾಥ್, ಎಲ್ಲರನ್ನು ಒಗ್ಗೂಡಿಸಿ ಕನ್ನಡ ಸಮ್ಮೇಳನ ಮಾಡಬೇಕೆ ಹೊರತು ಜಾತಿ, ಧರ್ಮದ ಸಮ್ಮೇಳನವನ್ನಾಗಿ ಮಾಡುವುದು ಸರಿಯಲ್ಲ. ಶೇ.70 ರಷ್ಟು ಮಂದಿ ಕನ್ನಡ ಮಾತನಾಡುವ ಮುಸ್ಲಿಮರಿದ್ದಾರೆ, 14 ಲಕ್ಷಕ್ಕೂ ಅಧಿಕ ಮಂದಿ ಬ್ಯಾರಿಗಳಿದ್ದಾರೆ, ಕೊಡವ, ತುಳು ಭಾಷಿಕರೂ ಇದ್ದಾರೆ. ಎಲ್ಲರನ್ನು ದೂರ ಇಟ್ಟು ಸಮ್ಮೇಳನ ಮಾಡುತ್ತಿದ್ದಾರೆ. ಪುಸ್ತಕ ಪ್ರಾಧಿಕಾರ ಪುಸ್ತಕಗಳನ್ನು ಖರೀದಿ ಮಾಡಿದೆ, ಆದರೆ ಲೇಖಕರಿಗೆ ಸರ್ಕಾರ ಇಲ್ಲಿಯವರೆಗೆ ಹಣವನ್ನು ನೀಡಿಲ್ಲ ಎಂದು ಟೀಕಿಸಿದರು.
ಕನ್ನಡ ಶಾಲೆಗಳು ಮುಚ್ಚಲ್ಪಡುತ್ತಿವೆ, ರಾಜಕೀಯ ಕ್ಷೇತ್ರ ಮೈಲಿಗೆಯಾಗುತ್ತಿದೆ, ಈ ವಿಚಾರಗಳು ಸೇರಿದಂತೆ ಸಾಹಿತ್ಯ, ಶಿಕ್ಷಣ, ಅಕ್ಷರ, ಕನ್ನಡಿಗರ ಪರ ಗಂಭೀರ ಚರ್ಚೆಗೆ ಸಮ್ಮೇಳನ ಸಾಕ್ಷಿಯಾಗುವ ಬದಲು ದಿಕ್ಕು ದಿಸೆಯಿಲ್ಲದಂತ್ತಾಗಿದೆ. ಈ ಕಾರಣದಿಂದ ಹಲವರು ಸಮ್ಮೇಳವನ್ನು ಬಹಿಷ್ಕರಿಸಿದ್ದಾರೆ, ನನಗೂ ತೀವ್ರ ಬೇಸರವಾಗಿರುವುದರಿಂದ ಸಮ್ಮೇಳನವನ್ನು ದಿಕ್ಕರಿಸಿ ಹಾಜರಾಗದೆ ಇರಲು ನಿರ್ಧರಿಸಿರುವುದಾಗಿ ಹೇಳಿದರು.
ಜನತಂತ್ರ ವ್ಯವಸ್ಥೆಯಲ್ಲಿ ಮತದಾರ ಆತ್ಮವಿದ್ದಂತೆ, ಆದರೆ ಆತ್ಮವನ್ನೇ ಕಳವು ಮಾಡುವಂತಹ ಇಂದಿನ ಬೆಳವಣಿಗೆ ಅತ್ಯಂತ ವಿಷಾದಕರ ಎಂದು ಬೇಸರ ವ್ಯಕ್ತಪಡಿಸಿದರು.
::: ಮೀಸಲಾತಿ ಸಂವಿಧಾನ ವಿರೋಧಿ :::
ಮೀಸಲಾತಿ ಮತ್ತು ಸಾಮಾಜಿಕ ನ್ಯಾಯದಲ್ಲಿ ದೇಶದಲ್ಲಿಯೇ ಕರ್ನಾಟಕ ಮಾದರಿ ರಾಜ್ಯವಾಗಿದೆ. ಆದರೆ ಇತ್ತೀಚೆಗೆ ಮೀಸಲಾತಿಯ ಹಂಚಿಕೆಯ ವಿಚಾರದಲ್ಲಿ ಸರ್ಕಾರ ಸಂವಿಧಾನ ವಿರೋಧಿ ನಡೆಗಳನ್ನು ಅನುಸರಿಸುತ್ತಿದೆ. ಪಂಚಮಸಾಲಿ ಮಠಾಧೀಶರು ಇಟ್ಟ ಬೇಡಿಕೆಗೆ ವ್ಯತಿರಿಕ್ತವಾಗಿ ಭರವಸೆ ನೀಡಿರುವ ಸರ್ಕಾರ ಗೊಂದಲ ಸೃಷ್ಟಿ ಮಾಡಿದೆ, ಸಂವಿಧಾನದಲ್ಲಿ ಅವಕಾಶವಿಲ್ಲದ ಭರವಸೆಗಳನ್ನು ನೀಡಿ ಜನರಿಗೆ ಸುಳ್ಳು ಹೇಳಿ ಹಾದಿ ತಪ್ಪಿಸುತ್ತಿದೆ ಎಂದು ವಿಶ್ವನಾಥ್ ಗಂಭೀರ ಆರೋಪ ಮಾಡಿದರು.
ಮೀಸಲಾತಿ ಎನ್ನುವುದು ಬಡತನ ನಿರ್ಮೂಲನೆಯ ಕಾರ್ಯಕ್ರಮವಲ್ಲ, ಸರ್ಕಾರ ಮೀಸಲಾತಿ ನೀಡುವುದಾದರೆ ನೀಡುವುದಾಗಿ ದೃಢವಾಗಿ ಹೇಳಲಿ. ಮೀಸಲಾತಿ ಹೆಸರಿನಲ್ಲಿ ಜಾತಿ, ಜಾತಿಗಳ ನಡುವೆ ಕಲಹಕ್ಕೆ ದಾರಿ ಮಾಡಿಕೊಡಬಾರದು. ಸಾಮರಸ್ಯ ಮೂಡಿಸುವುದು ಸರ್ಕಾರದ ಜವಾಬ್ದಾರಿಯೇ ಹೊರತು ದಾರಿ ತಪ್ಪಿಸುವುದಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
::: ಆಡಳಿತ ಕುಂಟಿತ :::
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಡಳಿತ ಕುಟಿಂತವಾಗಿದೆ, ಬಜರಂಗದಳ, ಶ್ರೀರಾಮಸೇನೆಯಂತಹ ಎಕ್ಸ್‍ಟ್ರಾ ಫೋರ್ಸ್ ರೂಲ್ಸ್ ರಾಜ್ಯದಲ್ಲಿದೆ ಎಂದು ವಿಶ್ವನಾಥ್ ಟೀಕಿಸಿದರು.

Share. Facebook Twitter Pinterest LinkedIn Tumblr Email WhatsApp
Previous Articleಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ 11 ನೇ ಸಮ್ಮೇಳನ : ಎಲ್ಲರೂ ಕೈಜೋಡಿಸಲು ಶಾಸಕ ಕೆ.ಜಿ.ಬೋಪಯ್ಯ ಕರೆ
Next Article ಕ್ರೀಡಾ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.