ಮಡಿಕೇರಿ ಜ.9 : “ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಕ.ವಿ.ಪ್ರ.ನಿ.ನಿ. ರವರ ಕೋರಿಕೆಯಂತೆ ಜನವರಿ, 10 ರಂದು ಬೆಳಗ್ಗೆ 9.30 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 66/11 ಕೆವಿ ಪೊನ್ನಂಪೇಟೆ, 66/11 ಕೆವಿ, ವಿರಾಜಪೇಟೆ, 33/11 ಕೆವಿ, ಶ್ರೀಮಂಗಲ, 33/11 ಕೆವಿ, ಸಿದ್ದಾಪುರ 33/11ಕೆವಿ ಮೂರ್ನಾಡು ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಪೊನ್ನಂಪೇಟೆ, ಗೋಣಿಕೊಪ್ಪಲು, ನಲ್ಲೂರು, ಹುದಿಕೇರಿ, ತಿತಿಮತಿ, ಹಾತೂರು, ಪಾಲಿಬೆಟ್ಟ, ಶ್ರೀಮಂಗಲ, ಬಾಳಲೆ, ಕಾನೂರು, ಬಿರುನಾಣಿ, ಕುಟ್ಟ ವಿರಾಜಪೇಟೆ, ಬಿ ಶೆಟ್ಟಗೇರಿ, ಬೇತ್ರೀ, ಕಡಗಮರೂರು, ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರುಗೋಡು, ನಾಪೋಕ್ಲು, ಕಕ್ಕಬೆ, ಅರೆಕಾಡು, ಐಯ್ಯಂಗೇರಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ತಿಳಿಸಿದ್ದಾರೆ.













