ಮಡಿಕೇರಿ ಜ.11 : ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 33ನೇ ಮಕರ ಸಂಕ್ರಾಂತಿ ಮಹೋತ್ಸವ ಜ.14 ರಂದು ನಡೆಯಲಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಸುಧೀರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕರ ಸಂಕ್ರಾಂತಿ ಪ್ರಯುಕ್ತ ದೇವಾಲಯದಲ್ಲಿ ನಡೆಯಲಿರುವ ವಿವಿಧ ಪೂಜಾ ಕೈಂಕರ್ಯಗಳ ಕುರಿತು ಮಾಹಿತಿ ನೀಡಿದರು.
ಜ.13 ರಂದು ಬೆಳಗ್ಗೆ 8 ಗಂಟೆಗೆ ಗಣಪತಿ ಹೋಮ, ಪಂಚಾಮೃತ ಅಭಿಷೇಕ ಇತ್ಯಾದಿ ಸೇವೆಗಳು ನಡೆಯಲಿದೆ. ಜ.14 ರಂದು ಪ್ರಾತಃಕಾಲ 6.30ಕ್ಕೆ ನಿರ್ಮಾಲ್ಯ ವಿಸರ್ಜನೆ, ಉಷಾ ಪೂಜೆ, 7 ಗಂಟೆಗೆ ಶ್ರೀ ಮುತ್ತಪ್ಪ ಹಾಗೂ ಶ್ರೀ ಸುಬ್ರಹ್ಮಣ್ಯ ದೇವರ ಪೂಜೆ ಜರುಗಲಿದ್ದು, ಬೆಳಿಗ್ಗೆ 7.30 ರಿಂದ ಪಂಚಾಮೃತಾಭಿಷೇಕ, ತುಪ್ಪಾಭಿಷೇಕ, ಕ್ಷೀರಾಭಿಷೇಕ, ಭಸ್ಮಾಭಿಷೇಕ, ಎಳನೀರಭಿಷೇಕ, ಪುಷ್ಪಾರ್ಚನೆ ನಡೆಯಲಿದೆ.
ಬೆಳಿಗ್ಗೆ 8.30 ಗಂಟೆಗೆ ಶ್ರಿ ಕುಟ್ಟಿಚಾತನ್ ದೇವರ ವೆಳ್ಳಾಟಂ, 9 ಗಂಟೆಗೆ ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ, 10 ಗಂಟೆಗೆ ಶ್ರೀ ಗುಳಿಗ ದೇವರ ವೆಳ್ಳಾಟಂ, 10.30 ಗಂಟೆಗೆ ಶ್ರೀ ಅಯ್ಯಪ್ಪ ದೇವರ ಅಲಂಕಾರ ಪೂಜೆ, 11 ಗಂಟೆಗೆ ಶ್ರೀ ಅಯ್ಯಪ್ಪ ದೇವರ ಉತ್ಸವ ಮೂರ್ತಿಯ ಕ್ಷೇತ್ರ ಪ್ರದಕ್ಷಿಣೆಯಾಗಲಿದೆ. ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ, ಪ್ರಸಾದ ವಿತರಣೆ ಹಾಗೂ ಸಂಜೆ 6 ರಿಂದ ಭಜನೆ ಕಾರ್ಯಕ್ರಮ ಜರುಗಲಿದೆ.
ಸಂಜೆ 7 ರಿಂದ ಅಲಂಕಾರ ಪೂಜೆ, ಪಡಿಪೂಜೆ, ರಾತ್ರಿ 8 ಗಂಟೆಗೆ ದೀಪಾರಾಧನೆ ಹಾಗೂ ಪ್ರಸಾದ ವಿತರಣೆಯಾಗಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಉತ್ಸವ ಸಮಿತಿಯ ಅಧ್ಯಕ್ಷ ಎಸ್.ಸುರೇಶ್ ಮುತ್ತಪ್ಪ, ಗೌರವಾಧ್ಯಕ್ಷ ಡಾ.ಎಂ.ಜಿ.ಪಾಟ್ಕರ್, ಪ್ರಧಾನ ಕಾರ್ಯದರ್ಶಿ ವಿ.ಎಸ್.ವಿನೋದ್, ಸದಸ್ಯರಾದ ಪೂವಪ್ಪ ಹಾಗೂ ತಿಮ್ಮಯ್ಯ ಉಪಸ್ಥಿತರಿದ್ದರು.













