Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
  • *ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*
  • *ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*
  • *ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ವಸತಿ ಶಾಲೆ : 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಸತಿ ಶಾಲೆ : 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಜನವರಿ 12, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.12 : ಕೊಡಗು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 2023-24ನೇ ಸಾಲಿಗೆ 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯ ಸರ್ಕಾರವು ಸ್ಥಾಪಿಸಿರುವ ಮೊರಾರ್ಜಿ ದೇಸಾಯಿ ಶಾಲೆಗಳಲ್ಲಿ 6ನೇ ತರಗತಿಯಿಂದ 10 ನೇ ತರಗತಿಯವರೆಗೆ ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 06 ರಿಂದ 12 ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯ ಪುಸ್ತಕ ಹಾಗೂ ಇನ್ನಿತರೆ ಸಾಮಾಗ್ರಿಗಳನ್ನು ನೀಡುವುದರ ಜೊತೆಗೆ ಉತ್ತಮವಾದ ವಿದ್ಯಾಭ್ಯಾಸ ನೀಡಲಾಗುತ್ತಿದೆ. ಈ ಶಾಲೆಗಳಲ್ಲಿ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಅಂದರೆ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರವೇಶ ಲಭ್ಯವಿದೆ.
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ರೂ.2.50 ಲಕ್ಷಗಳು, ಪರಿಶಿಷ್ಟ ವರ್ಗದವರಿಗೆ ರೂ.2.50 ಲಕ್ಷಗಳು ಹಾಗೂ ಹಿಂದುಳಿದ ವರ್ಗದ ಪ್ರವರ್ಗ-1 ರವರಿಗೆ ರೂ. 2.50 ಲಕ್ಷ ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ರವರಿಗೆ ರೂ. 1 ಲಕ್ಷಗಳ ಆದಾಯ ಮಿತಿ ಇರುತ್ತದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಶೇ.50 ರಷ್ಟು ಸೀಟುಗಳು ವಿದ್ಯಾರ್ಥಿನಿಯರಿಗೆ ಲಭ್ಯವಿರುತ್ತದೆ. ಒಮ್ಮೆ ಈ ವಸತಿ ಶಾಲೆಗಳಿಗೆ ವಿದ್ಯಾರ್ಥಿ ಸೇರಿದಲ್ಲಿ 12 ನೇ ತರಗತಿಯವರೆಗೆ ಉಚಿತವಾಗಿ ವಿದ್ಯಾಭ್ಯಾಸ ಮಾಡಬಹುದು.
ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ 2022-23ನೇ ಸಾಲಿನಲ್ಲಿ 6ನೇ ತರಗತಿಗೆ 50 ವಿದ್ಯಾರ್ಥಿಗಳನ್ನು, ಅಟಲ್ ಬಿಹಾರಿ ವಾಜಪೇಯಿ ಶಾಲೆಗಳಲ್ಲಿ 6 ನೇ ತರಗತಿ 80 ವಿದ್ಯಾರ್ಥಿಗಳನ್ನು ಮಾತ್ರ ಸೇರಿಸಿಕೊಳ್ಳಲಾಗುವುದು. ಪ್ರಸ್ತುತ ಕರ್ನಾಟಕದ ಯಾವುದೇ ಶಾಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮತ್ತು ಈಗಾಗಲೇ ಮಾಡಿರುವ ಅರ್ಹ ವಿದ್ಯಾರ್ಥಿಗಳು ಈ ಬಗ್ಗೆ ಅರ್ಜಿ ಸಲ್ಲಿಸಬಹುದು.
ಈ ಬಗ್ಗೆ ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು. ಈ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಅರ್ಹತೆ ಮತ್ತು ಮೀಸಲಾತಿಯಂತೆ ಪಟ್ಟಿ ತಯಾರಿಸಿ, ಮೆರಿಟ್ ಆಧಾರದ ಮೇಲೆ ಮೀಸಲಾತಿ ಅನ್ವಯ ಕೌನ್ಸಲಿಂಗ್ ಮೂಲಕ ಆಯ್ಕೆ ಮಾಡಲಾಗುವುದು. ಮೊದಲ ಪ್ರಾಶಸ್ತ್ಯವಾಗಿ ಕೊಡಗು ಜಿಲ್ಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಇತರೆ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಎರಡನೇ ಆಧ್ಯತೆ ನೀಡಲಾಗುವುದು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಯು ಪ್ರಾಧಿಕಾರದ ವೆಬ್‍ಸೈಟ್ http://kea.kar.nic.in ಹಾಗೂ www.kreis.kar.nic.in ಅಲ್ಲಿ ಅರ್ಜಿ ಸಲ್ಲಿಸಬಹುದು.
ಪ್ರವೇಶ ಪರೀಕ್ಷೆಗೆ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಜನವರಿ, 22 ರವರೆಗೆ ಪಡೆಯಬಹುದು. ಅರ್ಜಿ ಸಲ್ಲಿಸಲು ಜನವರಿ, 22 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರವನ್ನು ಅರ್ಜಿ ಸಲ್ಲಿಸಿದ ವಸತಿ ಶಾಲೆಯ ಪ್ರಾಂಶುಪಾಲರ ಮುಖಾಂತರ ಪಡೆದುಕೊಳ್ಳುವುದು. ಪ್ರವೇಶ ಪರೀಕ್ಷೆಯು ಮಾರ್ಚ್, 12 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ಈಶಾ ಔಟ್‌ರೀಚ್ ಸಹಕಾರ ಮತ್ತು ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತಿರುವ ನಾಪೋಕ್ಲುವಿನ ಪೊನ್ನಾಡ್ ರೈತ ಉತ್ಪಾದಕ…

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026

*ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*

ಆಗಷ್ಟ್ 23, 2026

*ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 23, 2026

*ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ 20ನೇ ವರ್ಷದ ಗೌರಿ ಗಣೇಶೋತ್ಸವ – ಹಲವು ಕಾರ್ಯಕ್ರಮಗಳ ಆಕರ್ಷಣೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.