ಮಡಿಕೇರಿ ಜ.16 : ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ನಾವೀನ್ಯತೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ವೈದ್ಯ ಅಮೃತ್ ನಾಣಯ್ಯ ಹೇಳಿದರು. ಜೆಸಿ ವಿದ್ಯಾ ಸಂಸ್ಥೆಯ 33ನೇ ವಾರ್ಷಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪೋಷಕರಿಗೂ, ಶಿಕ್ಷಕರಿಗೂ ತಮ್ಮ ಅನುಭವದ ಮೂಲಕ ಜ್ಞಾನದ ಬೆಳಕನ್ನು ಚೆಲ್ಲಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಶೈಲಬೆಳಗಿ ಮಾತನಾಡಿ, ಸಮಯದ ಮಹತ್ವವನ್ನು ಅರಿತು ಶ್ರದ್ಧೆಯನ್ನು ಹೆಚ್ಚಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಹೇಳಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಕೋಟ್ರಂಗಡ ಸುಬ್ರಮಣಿ, (ಕರೆಸ್ಪಾಂಡೆಂಟ್ ) ವರದಿಗಾರ ಮಚ್ಚಮಾಡ ಸುರೇಶ್, ಆಡಳಿತಾಧಿಕಾರಿ ಕೋಟ್ರಂಗಡ ತಿಮ್ಮಯ್ಯ , ಟ್ರಸ್ಟಿಗಳಾದ ಕೋಟ್ರಂಗಡ ಯಶೋಧ, ಕೋಟ್ರಂಗಡ ಸುನಿಲ್ ಸುಬ್ಬಯ್ಯ, ಮಚ್ಚಮಾಡ ಅಪ್ಪಣ್ಣ , ಮುಖ್ಯಶಿಕ್ಷಕ ಎನ್. ಬಿ. ಸತೀಶ್ ಹಾಗೂ ಕೆ.ಕೆ. ಸಿಂಧೂರ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ನೆರೆದಿದ್ದ ಜನರ ಮನಸೂರೆಗೊಂಡಿತು. ಕೋಟ್ರಂಗಡ ತಿಮ್ಮಯ್ಯ ಸರ್ವರಿಗೂ ಸ್ವಾಗತ ಕೋರಿದರು. ಮಕ್ಕಳ ಕಾರ್ಯಕ್ರಮಕ್ಕೆ ಜನರಿಂದ ಪ್ರಶಂಸೆಗಳ ಸುರಿಮಳೆಯೇ ಸುರಿಯಿತು. ಶಿಕ್ಷಕ ವೃಂದದವರು ಕಾರ್ಯಕ್ರಮ ನಿರ್ವಹಿಸಿದರು. ಸಹ ಶಿಕ್ಷಕ ಪ್ರಸನ್ನ ಹಾಗೂ ಚಂಚಲ ಕಾರ್ಯಕ್ರಮದ ನಿರೂಪಣೆ ಮಾಡಿದರು. ಸಹಶಿಕ್ಷಕ ಬಿಂದುಸಾರ ವಂದನಾರ್ಪಣೆ ಮಾಡಿದರು.



















