ಮಡಿಕೇರಿ ಜ.20 : ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ಹಿನ್ನಲೆಯಲ್ಲಿ ಮಡಿಕೇರಿ ಉಪ ವಿಭಾಗದ ಹಾಕತ್ತೂರು ಹಿರಿಯ ಪ್ರಾಥಮಿಕ ಶಾಲೆ, ಗೋಣಿಕೊಪ್ಪಲು ಉಪ ವಿಭಾಗದ ದೇವರಪುರ ಗ್ರಂಥಾಲಯ ಗ್ರಾ.ಪಂ.ಸಭಾಂಗಣದಲ್ಲಿ, ವಿರಾಜಪೇಟೆ ಉಪ ವಿಭಾಗದ ತೋರ ಕೆದಮುಳ್ಳೂರು ಗ್ರಾಮದ ಕೆದಮುಳ್ಳೂರು ತೋಮರ ಸಮುದಾಯ ಭವನ, ಕುಶಾಲನಗರ ಉಪ ವಿಭಾಗದ ವಾಲ್ನೂರು ತ್ಯಾಗತ್ತೂರು ಸೊಸೈಟಿ ಸಮುದಾಯ ಭವನ ಹಾಗೂ ಸೋಮವಾರಪೇಟೆ ಉಪ ವಿಭಾಗದ ಕಣಗಾಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜನವರಿ, 21 ರಂದು ಬೆಳಗ್ಗೆ 11 ಗಂಟೆಯಿಂದ ವಿದ್ಯುತ್ ಅದಾಲತ್ ನಡೆಯಲಿದೆ.
ಆದ್ದರಿಂದ ಈ ವ್ಯಾಪ್ತಿಯ ಸಾರ್ವಜನಿಕರು/ ವಿದ್ಯುತ್ ಗ್ರಾಹಕರು ಸಭೆಗೆ ಹಾಜರಾಗಿ ತಮ್ಮ ಅಹವಾಲುಗಳನ್ನು ಸಲ್ಲಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಅವರು ಕೋರಿದ್ದಾರೆ.









