Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಕನ್ನಡ ನುಡಿ ಜಾತ್ರೆಗೆ ಸಂಭ್ರಮದ ತೆರೆ : ಕೊಡವ ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು
ಇತ್ತೀಚಿನ ಸುದ್ದಿಗಳು

ಕನ್ನಡ ನುಡಿ ಜಾತ್ರೆಗೆ ಸಂಭ್ರಮದ ತೆರೆ : ಕೊಡವ ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು

January 22, 20232 Mins Read
Share
Facebook Twitter LinkedIn Pinterest WhatsApp Email

ವಿರಾಜಪೇಟೆ ಜ.22 : ವಿರಾಜಪೇಟೆಯ ಆರ್ಜಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ಕನ್ನಡ ನುಡಿ ಜಾತ್ರೆಗೆ ಸಂಭ್ರಮದ ತೆರೆ ಬಿದ್ದಿತು. ಸಮಾರೋಪ ಸಮಾರಂಭಕ್ಕೂ ಮುನ್ನ ನಡೆದ ಬಹಿರಂಗ ಅಧಿವೇಶನದಲ್ಲಿ ಆರು ನಿರ್ಣಯಗಳನ್ನು ಅಂಗೀಕರಿಸಲಾಯಿತು.
ಕೊಡವ ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಬೇಕು, ಗಡಿನಾಡಲ್ಲಿ ಕನ್ನಡ ಭವನಗಳನ್ನು ತೆರೆಯುವಂತಾಗಬೇಕು, ಕನ್ನಡಪರ ಚಟುವಟಿಕೆಗಳನ್ನು ಉತ್ತೇಜಿಸುವ ಸಲುವಾಗಿ ಸರಕಾರದಿಂದ ಅನುದಾನ ಬಿಡುಗಡೆಗೊಳಿಸಬೇಕು, ಕನ್ನಡ ಶಾಲೆಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಬೇಕು, ಕೊಡಗಿನ ಕೃಷಿ ಚಟುವಟಿಕೆಗೆ ಉತ್ತೇಜನವನ್ನು ನೀಡಬೇಕು, ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಿರ್ಣಯ ಅಂಗೀಕರಿಸಲಾಯಿತು.
ಕಸಾಪ ತಾಲೂಕು ಅಧ್ಯಕ್ಷ ರಾಜೇಶ್ ಪದ್ಮನಾಭ ಅಧ್ಯಕ್ಷತೆ ವಹಿಸಿದ್ದರು. ಕೋಶಾಧಿಕಾರಿ ಶಬರೀಶ್ ಶೆಟ್ಟಿ ನಿರ್ಣಯ ಮಂಡನೆ ಮಾಡಿದರು.
ಬಹಿರಂಗ ಅಧಿವೇಷನದ ನಂತರ ನಡೆದ ಸಮಾರೋಪ ಸಮಾರಂಭದಲ್ಲಿ ಕಸಾಪ ಕೊಡಗು ಜಿಲ್ಲೆ ಗೌರವ ಕಾರ್ಯದರ್ಶಿ ಮುನೀರ್ ಅಹಮದ್ ಸಮಾರೋಪ ಭಾಷಣ ಮಾಡಿ ಕನ್ನಡ ಬರಿ ಕರ್ನಾಟಕದಲ್ಲಿ ಅಲ್ಲ ಅದು ಅಸೀಮ, ಕೊಡಗು ಎಂದಾಕ್ಷಣ ಕುತೂಹಲ, ಆಸಕ್ತಿ, ಸದಾ ಗೌರವ ಮೂಡುವಂತದ್ದು, ಇಲ್ಲಿನ ನಾಡು ನುಡಿ ಸಂಸ್ಕೃತಿ ಆಚಾರ ವಿಚಾರ, ಪ್ರಕೃತಿ ಎಲ್ಲವೂ ವೈಶಿಷ್ಟö್ಯ ಎಂದೆನಿಸಿ ಪ್ರಖ್ಯಾತಿ ಹೊಂದಿದೆ, ಪಂಜೆ ಮಂಗೇಶರಾಯರು ಈ ಹಿಂದೆಯೇ ಬರೆದಂತೆ ಸುಂದರ ಜಿಲ್ಲೆಯ ಮುಕುಟಮಣಿ ವಿರಾಜಪೇಟೆಯಲ್ಲಿ ಎಲ್ಲೆಲ್ಲೂ ಹಸಿರು ಕಾಣಿಸುತ್ತದೆ. ಸಾಹಿತ್ಯ ಎನ್ನುವುದು ಜ್ಞಾನದ ಒಂದು ಭಾಗದಲ್ಲಿ ಮಿಳಿತವಾಗಿರುತ್ತದೆ. ಕವಿಯಾದವನಿಗೆ ಭಾವನೆಯ ನೂತನ ಪ್ರಪಂಚ ಸೃಷ್ಟಿಸುವ ಶಕ್ತಿಯಿರುತ್ತದೆ. ಪಂಪ ಮಹಾಕವಿಯ ತ್ಯಾಗ ಭೋಗಗಳ ಸಮನ್ವಯವೇ ಜೀವನ ಎಂಬುದನ್ನು ಸಾಹಿತ್ಯ ತೋರಿಸಿಕೊಡಬೇಕಿದೆ. ಸಾಹಿತ್ಯ ಸಮ್ಮೇಳವೆಂಬುವುದು ಕನ್ನಡಿಗರಿಗೆ ಒಂದು ರೀತಿಯ ಹಬ್ಬವಿದ್ದಂತೆ. ಕನ್ನಡದ ಮನಸ್ಸುಗಳನ್ನು ಸಮ್ಮೀಲನಗೊಳಿಸುವ ಈ ಹಬ್ಬ ದೇಶದ ಐಕ್ಯತೆ ಮತ್ತು ಸಮಗ್ರತೆಯನ್ನು ಕಾಪಾಡಿಕೊಂಡು ಹೋಗುವಂತಹ ವಾತಾವರಣವನ್ನು ಇಂತಹ ಸಮ್ಮೇಳನಗಳು ಉಂಟು ಮಾಡಬೇಕು. ಮನಸ್ಸಿನ ಆರೋಗ್ಯಕ್ಕೆ ಕಲೆ ಸಂಗೀತ, ಸಾಹಿತ್ಯ, ನಾಟಕ ಎಲ್ಲವೂ ಬೇಕು. ಈ ನಿಟ್ಟಿನಲ್ಲಿ ಇದನ್ನು ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಕೆಲಸ ಆಗಬೇಕೆಂದರು.
ಸಮ್ಮೇಳನಾಧ್ಯಕ್ಷ ಡಾಕ್ಟರ್ ಎಸ್.ವಿ ನರಸಿಂಹನ್ ಆಶಯ ನುಡಿಗಳನ್ನಾಡಿ ಸಾಹಿತ್ಯವೆಮಬುವುದು ಜನರ ಬದುಕಿನ ಪ್ರತಿಬಿಂಬವಾಗಬೇಕು, ಮನಸ್ಸುಗಳ ನಡುವಿನ ಕಂದರ ಹೆಚ್ಚಿಸದೆ ಮನಸ್ಸುಗಳನ್ನು ಕೂಡಿಸುವ ಸೇತುವೆಯಾಗಬೇಕು. ಇತ್ತಿಚೆಗೆ ಶಿಶು ಗೀತೆಗಳನ್ನು ಬರೆಯುವುದು ಕಡಿಮೆಯಾಗಿದೆ. ಶಿಶು ಗೀತೆಗಳನ್ನು ರಚಿಸಲು ಶಿಶುಗಳೇ ಆಗಬೇಕೆಂದಿಲ್ಲ. ದೊಡ್ಡವರು ಮಗುವಿನ ಮನಸ್ಸಿನ ಭಾವನೆಗಳನ್ನು ಹೊರಗೆಡವಬಹುದು ಎಂದರಲ್ಲದೆ ವಿರಾಜಪೇಟೆಯ ಗಡಿಭಾಗವಾದ ಆರ್ಜಿ ಗ್ರಾಮದಲ್ಲಿ ಹೆಚ್ಚು ಅನ್ಯ ಭಾಷಿಕರು ಇರುವ ಇಲ್ಲಿ ಅವರುಗಳನ್ನೇ ಬಳಸಿಕೊಂಡು ಯಶಸ್ವಿ ಸಮ್ಮೇಳನ ನಡೆದಿರುವುದು ಹೆಮ್ಮೆಯ ವಿಚಾರ. ಗಡಿನಾಡು ಎಂದು ಹೇಳುವ ಪ್ರಮೇಯವೇ ಇಲ್ಲಿಲ್ಲ. ಎಲ್ಲವೂ ಅಚ್ಚುಕಟ್ಟಾಗಿಯೇ ನಡೆದಿದೆ ಎಂದು ಪ್ರಶಂಸನೀಯ ನುಡಿಗಳನ್ನಾಡಿದರು.
ಜಿಲ್ಲಾಧ್ಯಕ್ಷ ಕೇಶವ ಕಾಮತ್ ಮಾತನಾಡಿ ಕನ್ನಡ ನಾಡು ನುಡಿಯನ್ನು ಕಾಪಾಡುವುದು, ಸಾಹಿತ್ಯ, ಕಲೆ, ಸಂಗೀತ ಹಾಗೂ ಸಂಸ್ಕೃತಿಯನ್ನು ಬೆಳೆಸುವುದು ಈ ಸಾಹಿತ್ಯ ಸಮ್ಮೇಳನದ ಮುಖ್ಯ ಉದ್ದೇಶ. ಗಡಿನಾಡಿನಲ್ಲಿ ಅತ್ಯಂತ ಯಶಸ್ವಿಯಾಗಿ ಸಮ್ಮೇಳನ ನಡೆದಿದೆ. ಇದು ಹೆಚ್ಚು ಸಂತೋಷದ ವಿಚಾರ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಕಸಾಪ ಅಧ್ಯಕ್ಷ ರಾಜೇಶ್ ಪದ್ಮನಾಭ ವಹಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ತಾ.ಪಂ.ಕಾರ್ಯ ನಿರ್ವಹಣಾಧಿಕಾರಿ ಕೆ.ಅಪ್ಪಣ್ಣ, ತಾ.ಪಂ. ಮಾಜಿ ಉಪಾಧ್ಯಕ್ಷ ಧರಣಿಕಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜಿ ಪೂಣಚ್ಚ, ವಿ.ಎಸ್‌ಎಸ್‌ಎನ್‌ಎಲ್ ಅಧ್ಯಕ್ಷ ಪಟ್ಟಡ ಮನು ರಾಮಚಂದ್ರ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಮಣಿ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Articleವಿರಾಜಪೇಟೆ : ಸಾಧಕರಿಗೆ ಸನ್ಮಾನ
Next Article ವಿರಾಜಪೇಟೆ : ಸಾಹಿತ್ಯಾಭಿಮಾನಿಗಳ ಮೆಚ್ಚುಗೆಗೆ ಪಾತ್ರರಾದ ವಿದ್ಯಾರ್ಥಿಗಳು

Related Posts

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

ಮೈಸೂರು, NEWS DESK ಫೆ. 11: ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿ ಹೊರಹೊಮ್ಮುತ್ತಿದೆ. ಇಲ್ಲಿಂದ…

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.