Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ರಾಜ್ಯ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ : ಅಧ್ಯಕ್ಷರಾಗಿ ಕೊಡಗಿನ ಟಿ.ಎಲ್.ಶ್ರೀನಿವಾಸ್
ಇತ್ತೀಚಿನ ಸುದ್ದಿಗಳು

ರಾಜ್ಯ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ : ಅಧ್ಯಕ್ಷರಾಗಿ ಕೊಡಗಿನ ಟಿ.ಎಲ್.ಶ್ರೀನಿವಾಸ್

January 23, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.23 : ಇಂಡಿಯನ್ ರಿಪೋರ್ಟರ್ಸ್ ಅಂಡ್ ಮೀಡಿಯಾ ಪರ್ಸನ್ಸ್ ಯೂನಿಯನ್ ಹೆಸರಿನ ಪತ್ರಕರ್ತರ ಸಂಘಟನೆ ನೆರೆಯ ಕೇರಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಕಳೆದ 6 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಕರ್ನಾಟಕದಲ್ಲಿ ಜ.29ರಂದು ಅಸ್ತಿತ್ವಕ್ಕೆ ಬರಲಿದೆ.
ಕರ್ನಾಟಕ, ಆಂಧ್ರ, ತೆಲಂಗಾಣ ಹಾಗೂ ಗೋವಾ ರಾಜ್ಯಗಳ ಪತ್ರಕರ್ತ ಸಂಘಟನೆಯ ಜವಾಬ್ದಾರಿಯನ್ನು ಕೇರಳ ಪತ್ರಕರ್ತರ ಒಕ್ಕೂಟವು ರಾಜ್ಯದ ಟಿ.ಎಲ್.ಶ್ರೀನಿವಾಸ್ ಅವರಿಗೆ ವಹಿಸಿದೆ. ಜ.29 ರಂದು ಕರ್ನಾಟಕ ರಾಜ್ಯ ಪತ್ರಕರ್ತರ ಯೂನಿಯನ್‌ನ ಅಧ್ಯಕ್ಷರಾಗಿ ಇವರು ಮೈಸೂರು ಜಲದರ್ಶಿನಿಯಲ್ಲಿ ಜರುಗುವ ಕಾರ್ಯಕ್ರಮದಲ್ಲಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಗೋಣಿಕೊಪ್ಪಲಿನಲ್ಲಿ ಮಾತನಾಡಿದ ಶ್ರೀನಿವಾಸ್, ಮ್ಯೆಸೂರಿನಲ್ಲಿ ಮೊದಲ ಸಭೆ ನಡೆಯಲಿದ್ದು, 30 ಜಿಲ್ಲೆಗಳ ಪ್ರವಾಸದ ನಂತರ ಪೂರ್ಣ ಪ್ರಮಾಣದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುವದು ಎಂದರು.
ನೂತನ ಒಕ್ಕೂಟವು ಮೈಸೂರು ಹಾಗೂ ಬೆಂಗಳೂರಿನಲ್ಲಿ ಕಚೇರಿಯನ್ನು ಹೊಂದಲಿದ್ದು, ಕೇರಳ ಹಾಗೂ ತಮಿಳುನಾಡು ರಾಜ್ಯಗಳಂತೆ ರಾಜ್ಯದಲ್ಲಿಯೂ ಸಂಘಟನೆಯನ್ನು ಬಲಿಷ್ಠವಾಗಿ ಕಟ್ಟಲಾಗುವುದು. ದಕ್ಷಿಣ ಭಾರತ ಸಂಘಟನೆಯ ನಂತರ ಕರ್ನಾಟಕ ರಾಜ್ಯದಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದು ತಿಳಿಸಿದರು.
ಯಾವದೇ ಪತ್ರಕರ್ತ ಸದಸ್ಯರು ಅಕಾಲಿಕ ನಿಧನ ಹೊಂದಿದ್ದಲ್ಲಿ ಅವರ ಅವಲಂಬಿತರಿಗೆ ತುರ್ತು ರೂ.3 ಲಕ್ಷ ಪರಿಹಾರವನ್ನು ಸಂಘದ ಮೂಲಕ ನೀಡುವ ನಿಯಮ ಕೇರಳ ಹಾಗೂ ತಮಿಳುನಾಡಿನಲ್ಲಿದೆ. ಅಪಘಾತ ವಿಮೆ, ಆರೋಗ್ಯ ವಿಮೆ, ನಿವೃತ್ತಿ ವೇತನ ಇತ್ಯಾದಿ ಸೌಲಭ್ಯಗಳು ಕರ್ನಾಟಕಕ್ಕಿಂತಲೂ ಇತರೆ ರಾಜ್ಯಗಳಲ್ಲಿ ಉತ್ತಮವಾಗಿದೆ.
ರಾಜಸ್ಥಾನ ರಾಜ್ಯದಲ್ಲಿ ಕೋವಿಡ್ ಸೋಂಕಿನಿAದ ಸಾವನ್ನಪ್ಪಿದ ಪತ್ರಕರ್ತರಿಗೆ ಅಲ್ಲಿನ ಸರ್ಕಾರ ರೂ.25 ಲಕ್ಷದವರೆಗೆ ಪರಿಹಾರ ನೀಡುತ್ತಿದೆ. ರೂ.10 ಲಕ್ಷ ಆರೋಗ್ಯ ವಿಮಾ ಸೌಲಭ್ಯ ಅಲ್ಲಿನ ಪತ್ರಕರ್ತರಿಗಿದೆ. ಆದರೆ ಕರ್ನಾಟಕ ರಾಜ್ಯದಲ್ಲಿ ಅದರಲ್ಲೂ ಪ್ರಮುಖವಾಗಿ ಗ್ರಾಮೀಣ ಭಾಗದ ಪತ್ರಕರ್ತರು ಸರ್ಕಾರದ ಸೌಲಭ್ಯ, ಪಿಂಚಣಿ ಪಡೆಯುವಲ್ಲಿ ವಂಚಿತರಾಗುತ್ತಿದ್ದಾರೆ.
ರಾಜ್ಯದ 30 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಪ್ರಾರಂಭದ ಹಂತದಲ್ಲಿ 5 ಸಾವಿರ ಪತ್ರಕರ್ತರಿಗೆ ಸದಸ್ಯತನ ನೀಡುವ ಉದ್ದೇಶವಿದೆ. ರಾಜ್ಯದ ಪ್ರಮುಖ ಹಿರಿಯ ಪತ್ರಕರ್ತರ ಮಾರ್ಗದರ್ಶನದೊಂದಿಗೆ ಶಿಸ್ತು ಬದ್ಧವಾಗಿ, ಕಾನೂನು ಬದ್ಧವಾಗಿ ಸಂಘಟನೆಯನ್ನು ಬಲಪಡಿಸಲಾಗುತ್ತದೆ. ರಾಜ್ಯದಲ್ಲಿ ಇದೀಗ ಅಸ್ತಿತ್ವದಲ್ಲಿರುವ ಸಂಘಟನೆಗಳ ವಿರುದ್ಧವಾಗಿ ನೂತನ ಸಂಘಟನೆ ಹುಟ್ಟು ಹಾಕುತ್ತಿಲ್ಲ. ರಾಜ್ಯದ ಯಾವುದೇ ಕಾರ್ಯನಿರತ ಪತ್ರಕರ್ತರು ಸದಸ್ಯತನ ಹೊಂದಬಹುದಾಗಿದೆ. ಆರ್ಥಿಕವಾಗಿ ಸಂಕಷ್ಟದಲ್ಲಿರುವ, ಆರೋಗ್ಯ ಸಮಸ್ಯೆ ಹೊಂದಿರುವ ಪತ್ರಕರ್ತರಿಗೆ ಸಕಾಲದಲ್ಲಿ ನೆರವು ಒದಗಿಸುವ ಚಿಂತನೆಯೂ ಸಂಘದಲ್ಲಿದೆ. ಪತ್ರಕರ್ತರು ಎದುರಿಸುತ್ತಿರುವ ಕಾನೂನು ಬಿಕ್ಕಟ್ಟನ್ನೂ ಪರಿಹರಿಸುವ ನಿಟ್ಟಿನಲ್ಲಿಯೂ ಸಂಘ ಕಾರ್ಯೋನ್ಮುಖವಾಗಲಿದೆ ಎಂದು ಅವರು ಹೇಳಿದರು.
ಜಲದರ್ಶಿನಿಯಲ್ಲಿ ನಡೆಯುವ ಪತ್ರಕರ್ತರ ಒಕ್ಕೂಟದ ಮೊದಲ ಸಭೆಯಲ್ಲಿ ಕೇರಳ ರಾಜ್ಯದ ಪತ್ರಕರ್ತ ಸಂಘಟನೆಯ ಅಧ್ಯಕ್ಷ ಪಿ.ಕೆ.ಹ್ಯಾರಿಸ್, ಕಾರ್ಯಾಧ್ಯಕ್ಷ ಉಸ್ಮಾನ್ ಅಂಜುಕುನ್ನು, ಪ್ರಧಾನ ಕಾರ್ಯದರ್ಶಿ ಡಿ.ದೀಪೇಶ್ ಬಾಬು, ಖಜಾಂಚಿ ಅಶ್ರಫ್ ಮುಂತಾದವರು ಪಾಲ್ಗೊಳ್ಳಲಿದ್ದಾರೆ. ಬೆಂಗಳೂರು, ಮೈಸೂರು, ಕೊಡಗು, ಹುಬ್ಬಳ್ಳಿ, ಧಾರವಾಡ, ಕಾರವಾರ, ಉಡುಪಿ, ವಿಜಯಪುರ, ದಾವಣಗೆರೆ, ರಾಮನಗರ, ಬಾಗಲಕೋಟೆ, ಹಾವೇರಿ, ಶಿವಮೊಗ್ಗ ಮುಂತಾದ ಜಿಲ್ಲೆಗಳ ಪತ್ರಕರ್ತರು ಭಾಗವಹಿಸಲಿದ್ದಾರೆ ಎಂದು ಶ್ರೀನಿವಾಸ್ ಮಾಹಿತಿ ನೀಡಿದರು.

Share. Facebook Twitter Pinterest LinkedIn Tumblr Email WhatsApp
Previous Articleನಾಪಂಡ ಮುತ್ತಪ್ಪಗೆ ನೋಟಿಸ್
Next Article ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.