Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಬುಡಕಟ್ಟು ಸಮಾಜಗಳ ಭಾಷೆ ಅಭಿವೃದ್ಧಿಗೆ ಅಕಾಡೆಮಿ ಅಗತ್ಯ : ಶಾಸಕ ಕೆ.ಜಿ.ಬೋಪಯ್ಯ
ಇತ್ತೀಚಿನ ಸುದ್ದಿಗಳು

ಬುಡಕಟ್ಟು ಸಮಾಜಗಳ ಭಾಷೆ ಅಭಿವೃದ್ಧಿಗೆ ಅಕಾಡೆಮಿ ಅಗತ್ಯ : ಶಾಸಕ ಕೆ.ಜಿ.ಬೋಪಯ್ಯ

January 28, 20233 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.28 : ಜಿಲ್ಲೆಯಲ್ಲಿನ ಬುಡಕಟ್ಟು ಭಾಷೆಗಳನ್ನು ಉಳಿಸಿ, ಬೆಳೆಸುವಂತಾಗಲು ಮತ್ತೊಂದು ಅಕಾಡೆಮಿ ಅತ್ಯಗತ್ಯ. ಆ ನಿಟ್ಟಿನಲ್ಲಿ ಪ್ರಯತ್ನಗಳು ಮುಂದುವರೆಯಬೇಕು ಎಂದು ಶಾಸಕರಾದ ಕೆ.ಜಿ.ಬೋಪಯ್ಯ ಹೇಳಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಡಿಕೇರಿ ತಾಲ್ಲೂಕಿನ ಬೆಟ್ಟಗೇರಿಯಲ್ಲಿ ನಡೆದ 11 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೊಡಗು ಜಿಲ್ಲೆಯಲ್ಲಿ ಮೂಲ ಸಂಸ್ಕೃತಿ ಉಳಿಸುವಲ್ಲಿ ಬುಡಕಟ್ಟು ಸಮುದಾಯಗಳ ಭಾಷೆ ಅಭಿವೃದ್ಧಿಗೆ ಮುಂದಾಗಬೇಕು. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿನ ಯರವ, ಕುಡಿಯ, ಕಾಡುಕುರುಬ, ಜೇನುಕುರುಬ, ಬೆಟ್ಟಕುರುಬ, ಸೋಲಿಗ ಹೀಗೆ ಬುಡಕಟ್ಟು ಸಮುದಾಯಗಳು ತಮ್ಮದೇ ಆದ ಭಾಷೆ ಮಾತನಾಡುತ್ತಿದ್ದು, ಇವುಗಳು ಕನ್ನಡದ ಉಪ ಭಾಷೆಗಳಾಗಿದ್ದು, ಇವುಗಳನ್ನು ಉಳಿಸಿ ಬೆಳೆಸಬೇಕಿದೆ ಎಂದು ಕೆ.ಜಿ.ಬೋಪಯ್ಯ ಅವರು ತಿಳಿಸಿದರು.
ಈಗಾಗಲೇ ಜಿಲ್ಲೆಯಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಗಳು ಸ್ಥಾಪನೆಯಾಗಿದೆ. ಜೊತೆಗೆ ಬುಡಕಟ್ಟು ಸಮಾಜಗಳು ಮಾತನಾಡುವ ಭಾಷೆ ಉಳಿಸಿ, ಬೆಳೆಸುವಲ್ಲಿ ಅಕಾಡೆಮಿ ಸ್ಥಾಪನೆ ಸಮಯೋಚಿತವಾಗಿದೆ ಎಂದು ನುಡಿದರು.
ಆಧುನಿಕತೆ ಬೆಳೆದಂತೆ ನಗರ ಪಟ್ಟಣ ಪ್ರದೇಶಗಳಲ್ಲಿ ಮಕ್ಕಳಿಗೆ ಕನ್ನಡ ಭಾಷೆ ಬರದಿದ್ದರೆ ಹೆಮ್ಮೆಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಒಳ್ಳೆಯ ಬೆಳವಣಿಗೆಯೇ ಎಂದು ಆತ್ಮವಲೋಕನ ಮಾಡಬೇಕಿದೆ. ಇಂತಹುದು ಗ್ರಾಮೀಣ ಪ್ರದೇಶಗಳಿಗೂ ಇತ್ತೀಚೆಗೆ ತಲುಪುತಿದೆ ಎಂದರು.
ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ಎಂಬುದನ್ನು ಯಾರೂ ಸಹ ಮರೆಯಬಾರದು. ಭಾರತೀಯ ಸಂಸ್ಕøತಿಯು ಅನೇಕತೆಯಲ್ಲಿ ಏಕತೆಯನ್ನು ಹೊಂದಿದ್ದು, ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲೀಷ್ ವ್ಯವಹಾರಿಕ ಭಾಷೆಯಾದರೂ ಸಹ, ನಮ್ಮ ಮಾತೃ ಭಾಷೆಗಳನ್ನು ಮರೆಯಬಾರದು ಎಂದು ಕೆ.ಜಿ.ಬೋಪಯ್ಯ ಅವರು ತಿಳಿಸಿದರು. ಕನ್ನಡ ಭಾಷೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸರ್ಕಾರ ಹೆಚ್ಚಿನ ಸಹಕಾರ ನೀಡುತ್ತಿದೆ ಎಂದು ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ವಿವಿಧ ಭಾμÉಗಳಿದ್ದು, ಕೊಡಗಿನ ಬುಡಕಟ್ಟು ಸಂಸ್ಕೃತಿ ಉಳಿಸಲು ಶ್ರಮಿಸಬೇಕಿದೆ ಎಂದರು.
ಯುವಜನರು ಸಾಹಿತ್ಯ ಅಭಿರುಚಿ ಬೆಳೆಸಿಕೊಳ್ಳಬೇಕು. ಪೂರ್ವಿಕರಿಂದ ಉಳಿಸಿಕೊಂಡು ಬಂದಿರುವ ಭಾಷೆಯನ್ನು ಮುಂದುವರಿಸಬೇಕು. ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಬೇಕು. ಸಾಹಿತ್ಯ ಪ್ರಕಾರದ ವಿಚಾರಗಳನ್ನು ತಿಳಿದುಕೊಳ್ಳಬೇಕು ಎಂದರು.
ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಡಾ.ಡಿ.ರವಿ ಅವರು ಮಾತನಾಡಿ ರಾಷ್ಟ್ರದಲ್ಲಿ ಗುರುತಿಸುವಂತಹ ಪುಣ್ಯಭೂಮಿ ಕೊಡಗು. ಕಾವೇರಿ ಮಾತೆಯನ್ನು ನಾವು ಸದಾ ಪೂಜಿಸಬೇಕು. ಕೊಡಗಿನ ಪುಣ್ಯಭೂಮಿಯಲ್ಲಿ ಕಿಟಲ್ ಅವರು ಪದಕೋಶವನ್ನು ಆರಂಭಿಸಿದರು. ಇದು ಹೆಮ್ಮೆಯ ವಿಚಾರವಾಗಿದೆ ಎಂದರು.
ಇಂದಿಗೂ ಸಹ ಗ್ರಾಮೀಣ ಹಾಗೂ ಬುಡಕಟ್ಟು ಜನರು ವಾಸಿಸುವ ಪ್ರದೇಶದಲ್ಲಿ ಕನ್ನಡ ಭಾಷೆ ಉಳಿದಿದೆ ಎಂದರೆ ತಪ್ಪಾಗಲಾರದು. ಕನ್ನಡವು ಸಮಸ್ತ ನಾಡಿನ ಭಾಷೆಯಾಗಿದೆ. ಪಂಪ, ರನ್ನ, ಪೊನ್ನ, ಹೀಗೆ ಹಲವರು ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸಿದ್ದಾರೆ ಎಂದು ಡಾ.ಡಿ.ರವಿ ಅವರು ಹೇಳಿದರು.
ರಾಷ್ಟ್ರದಲ್ಲಿ ಭಾಷೆಯ ಮೂಲಕ ರಾಜ್ಯಗಳನ್ನು ವಿಂಗಡಣೆ ಮಾಡಲಾಗಿದೆ. ಆ ನಿಟ್ಟಿನಲ್ಲಿ ಯಾವುದೇ ಜಾತಿ, ಧರ್ಮ, ಪಂಥಕ್ಕಿಂತ ನಾಡಿನ ಭಾಷೆಯೇ ಎಲ್ಲರನ್ನೂ ಒಟ್ಟುಗೂಡಿಸಲು ಸಾಧ್ಯ ಎಂಬುದನ್ನು ಮರೆಯುವಂತಿಲ್ಲ ಎಂದರು.
ಮಡಿಕೇರಿ ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರು ಮಾತನಾಡಿ ಕನ್ನಡ ಸಾಹಿತ್ಯ ಮತ್ತು ಸಂಸ್ಕøತಿಯನ್ನು ಉಳಿಸಿದಲ್ಲಿ ಮಾತ್ರ ಕನ್ನಡ ಅಸ್ಮಿತೆ ಉಳಿಯಲು ಸಾಧ್ಯ. ಆ ನಿಟ್ಟಿನಲ್ಲಿ ಯಾವುದೇ ಭಾಷೆಯನ್ನು ಮಾತನಾಡಿದರೂ ಸಹ ಕನ್ನಡಕ್ಕೆ ಪ್ರಥಮ ಆದ್ಯತೆ ನೀಡಬೇಕು. ಕನ್ನಡ ಸಾಹಿತ್ಯ ಅಧ್ಯಯನದಿಂದ ಹೆಚ್ಚಿನ ಜ್ಞಾನ ಸಂಪಾದಿಸಲು ಸಾಧ್ಯ ಎಂದು ಹೇಳಿದರು.
ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ರಾಣಿ ಮಾಚಯ್ಯ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ 10 ಸಾವಿರ ಮಕ್ಕಳಿಗೆ ಕೊಡವ ಸಾಂಪ್ರದಾಯಿಕ ‘ಉಮ್ಮತ್ತಾಟ್’ ಕಲಿಸಲು ಪ್ರಯತ್ನಿಸಲಾಗಿದೆ. ನನಗೆ ಸಿಕ್ಕಿರುವ ಪದ್ಮಶ್ರೀ ಪ್ರಶಸ್ತಿಯು ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ದೊರೆತಂತೆ ಎಂದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಪ್ರತಿಯೊಬ್ಬರೂ ಕನ್ನಡದಲ್ಲಿ ಮಾತನಾಡಬೇಕು. ಕನ್ನಡದಲ್ಲಿ ಬರೆಯಬೇಕು. ಕನ್ನಡ ಭಾಷೆ ಬಗ್ಗೆ ಪ್ರೀತಿ, ಅಭಿಮಾನ ಇರಬೇಕು. ಕನ್ನಡ ಕೆಲಸಗಳಿಗೆ ಸದಾ ಬೆಂಬಲವಿರುತ್ತದೆ ಎಂದರು.
ಸಾಹಿತಿ ಕಿಗ್ಗಾಲು ಗಿರೀಶ್ ಅವರು ಮಾತನಾಡಿ ಕನ್ನಡ ಭಾಷೆ ಮಾತನಾಡಲು ಹಿಂಜರಿಕೆ ಬೇಡ. ಕನ್ನಡ ಪುಸ್ತಕಗಳನ್ನು ಹೆಚ್ಚು ಅಧ್ಯಯನ ಮಾಡಬೇಕು ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷರಾದ ಕೇಶವ ಕಾಮತ್ ಅವರು ಮಾತನಾಡಿದರು. ಬೆಟ್ಟಗೇರಿ ಗ್ರಾ.ಪಂ.ಅಧ್ಯಕ್ಷರಾದ ನಾಪಂಡ ರ್ಯಾಲಿ ಮಾದಯ್ಯ, ಸಾಹಿತಿ ಬಾಚರಣಿಯಂಡ ಕೆ.ಅಪ್ಪಣ್ಣ, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ನವೀನ್ ಅಂಬೆಕಲ್ಲು, ಬೆಟ್ಟಗೇರಿ ಉದಯ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ತಳೂರು ಕಿಶೋರ್ ಕುಮಾರ್, ಮಡಿಕೇರಿ ತಾಲ್ಲೂಕು ಕಸಾಪ ನಿಕಟಪೂರ್ವ ಅಧ್ಯಕ್ಷರಾದ ಕುಡೆಕಲ್ ಸಂತೋಷ್, ಕಸಾಪ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಮುನೀರ್ ಅಹಮ್ಮದ್, ರೇವತಿ ರಮೇಶ್, ಕಸಾಪ ತಾಲ್ಲೂಕು ಅಧ್ಯಕ್ಷರು ಇತರರು ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Articleಸುಂಟಿಕೊಪ್ಪದಲ್ಲಿ ಪರಿಸರ, ನೀರು ಆಹಾರದ ಕುರಿತು ಜಾಗೃತಿ
Next Article ಕಾರ್ಯಪ್ಪ ಕಾಲೇಜ್ ನಲ್ಲಿ ಫೀ.ಮಾ.ಕಾರ್ಯಪ್ಪ ಜನ್ಮ ದಿನಾಚರಣೆ : ಕಾರ್ಯಪ್ಪ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.