Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಬುಡಕಟ್ಟು ಸಮಾಜಗಳ ಭಾಷೆ ಅಭಿವೃದ್ಧಿಗೆ ಅಕಾಡೆಮಿ ಅಗತ್ಯ : ಶಾಸಕ ಕೆ.ಜಿ.ಬೋಪಯ್ಯ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಬುಡಕಟ್ಟು ಸಮಾಜಗಳ ಭಾಷೆ ಅಭಿವೃದ್ಧಿಗೆ ಅಕಾಡೆಮಿ ಅಗತ್ಯ : ಶಾಸಕ ಕೆ.ಜಿ.ಬೋಪಯ್ಯ

ಜನವರಿ 28, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.28 : ಜಿಲ್ಲೆಯಲ್ಲಿನ ಬುಡಕಟ್ಟು ಭಾಷೆಗಳನ್ನು ಉಳಿಸಿ, ಬೆಳೆಸುವಂತಾಗಲು ಮತ್ತೊಂದು ಅಕಾಡೆಮಿ ಅತ್ಯಗತ್ಯ. ಆ ನಿಟ್ಟಿನಲ್ಲಿ ಪ್ರಯತ್ನಗಳು ಮುಂದುವರೆಯಬೇಕು ಎಂದು ಶಾಸಕರಾದ ಕೆ.ಜಿ.ಬೋಪಯ್ಯ ಹೇಳಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಡಿಕೇರಿ ತಾಲ್ಲೂಕಿನ ಬೆಟ್ಟಗೇರಿಯಲ್ಲಿ ನಡೆದ 11 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೊಡಗು ಜಿಲ್ಲೆಯಲ್ಲಿ ಮೂಲ ಸಂಸ್ಕೃತಿ ಉಳಿಸುವಲ್ಲಿ ಬುಡಕಟ್ಟು ಸಮುದಾಯಗಳ ಭಾಷೆ ಅಭಿವೃದ್ಧಿಗೆ ಮುಂದಾಗಬೇಕು. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿನ ಯರವ, ಕುಡಿಯ, ಕಾಡುಕುರುಬ, ಜೇನುಕುರುಬ, ಬೆಟ್ಟಕುರುಬ, ಸೋಲಿಗ ಹೀಗೆ ಬುಡಕಟ್ಟು ಸಮುದಾಯಗಳು ತಮ್ಮದೇ ಆದ ಭಾಷೆ ಮಾತನಾಡುತ್ತಿದ್ದು, ಇವುಗಳು ಕನ್ನಡದ ಉಪ ಭಾಷೆಗಳಾಗಿದ್ದು, ಇವುಗಳನ್ನು ಉಳಿಸಿ ಬೆಳೆಸಬೇಕಿದೆ ಎಂದು ಕೆ.ಜಿ.ಬೋಪಯ್ಯ ಅವರು ತಿಳಿಸಿದರು.
ಈಗಾಗಲೇ ಜಿಲ್ಲೆಯಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಗಳು ಸ್ಥಾಪನೆಯಾಗಿದೆ. ಜೊತೆಗೆ ಬುಡಕಟ್ಟು ಸಮಾಜಗಳು ಮಾತನಾಡುವ ಭಾಷೆ ಉಳಿಸಿ, ಬೆಳೆಸುವಲ್ಲಿ ಅಕಾಡೆಮಿ ಸ್ಥಾಪನೆ ಸಮಯೋಚಿತವಾಗಿದೆ ಎಂದು ನುಡಿದರು.
ಆಧುನಿಕತೆ ಬೆಳೆದಂತೆ ನಗರ ಪಟ್ಟಣ ಪ್ರದೇಶಗಳಲ್ಲಿ ಮಕ್ಕಳಿಗೆ ಕನ್ನಡ ಭಾಷೆ ಬರದಿದ್ದರೆ ಹೆಮ್ಮೆಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಒಳ್ಳೆಯ ಬೆಳವಣಿಗೆಯೇ ಎಂದು ಆತ್ಮವಲೋಕನ ಮಾಡಬೇಕಿದೆ. ಇಂತಹುದು ಗ್ರಾಮೀಣ ಪ್ರದೇಶಗಳಿಗೂ ಇತ್ತೀಚೆಗೆ ತಲುಪುತಿದೆ ಎಂದರು.
ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ಎಂಬುದನ್ನು ಯಾರೂ ಸಹ ಮರೆಯಬಾರದು. ಭಾರತೀಯ ಸಂಸ್ಕøತಿಯು ಅನೇಕತೆಯಲ್ಲಿ ಏಕತೆಯನ್ನು ಹೊಂದಿದ್ದು, ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲೀಷ್ ವ್ಯವಹಾರಿಕ ಭಾಷೆಯಾದರೂ ಸಹ, ನಮ್ಮ ಮಾತೃ ಭಾಷೆಗಳನ್ನು ಮರೆಯಬಾರದು ಎಂದು ಕೆ.ಜಿ.ಬೋಪಯ್ಯ ಅವರು ತಿಳಿಸಿದರು. ಕನ್ನಡ ಭಾಷೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸರ್ಕಾರ ಹೆಚ್ಚಿನ ಸಹಕಾರ ನೀಡುತ್ತಿದೆ ಎಂದು ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ವಿವಿಧ ಭಾμÉಗಳಿದ್ದು, ಕೊಡಗಿನ ಬುಡಕಟ್ಟು ಸಂಸ್ಕೃತಿ ಉಳಿಸಲು ಶ್ರಮಿಸಬೇಕಿದೆ ಎಂದರು.
ಯುವಜನರು ಸಾಹಿತ್ಯ ಅಭಿರುಚಿ ಬೆಳೆಸಿಕೊಳ್ಳಬೇಕು. ಪೂರ್ವಿಕರಿಂದ ಉಳಿಸಿಕೊಂಡು ಬಂದಿರುವ ಭಾಷೆಯನ್ನು ಮುಂದುವರಿಸಬೇಕು. ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಬೇಕು. ಸಾಹಿತ್ಯ ಪ್ರಕಾರದ ವಿಚಾರಗಳನ್ನು ತಿಳಿದುಕೊಳ್ಳಬೇಕು ಎಂದರು.
ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಡಾ.ಡಿ.ರವಿ ಅವರು ಮಾತನಾಡಿ ರಾಷ್ಟ್ರದಲ್ಲಿ ಗುರುತಿಸುವಂತಹ ಪುಣ್ಯಭೂಮಿ ಕೊಡಗು. ಕಾವೇರಿ ಮಾತೆಯನ್ನು ನಾವು ಸದಾ ಪೂಜಿಸಬೇಕು. ಕೊಡಗಿನ ಪುಣ್ಯಭೂಮಿಯಲ್ಲಿ ಕಿಟಲ್ ಅವರು ಪದಕೋಶವನ್ನು ಆರಂಭಿಸಿದರು. ಇದು ಹೆಮ್ಮೆಯ ವಿಚಾರವಾಗಿದೆ ಎಂದರು.
ಇಂದಿಗೂ ಸಹ ಗ್ರಾಮೀಣ ಹಾಗೂ ಬುಡಕಟ್ಟು ಜನರು ವಾಸಿಸುವ ಪ್ರದೇಶದಲ್ಲಿ ಕನ್ನಡ ಭಾಷೆ ಉಳಿದಿದೆ ಎಂದರೆ ತಪ್ಪಾಗಲಾರದು. ಕನ್ನಡವು ಸಮಸ್ತ ನಾಡಿನ ಭಾಷೆಯಾಗಿದೆ. ಪಂಪ, ರನ್ನ, ಪೊನ್ನ, ಹೀಗೆ ಹಲವರು ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸಿದ್ದಾರೆ ಎಂದು ಡಾ.ಡಿ.ರವಿ ಅವರು ಹೇಳಿದರು.
ರಾಷ್ಟ್ರದಲ್ಲಿ ಭಾಷೆಯ ಮೂಲಕ ರಾಜ್ಯಗಳನ್ನು ವಿಂಗಡಣೆ ಮಾಡಲಾಗಿದೆ. ಆ ನಿಟ್ಟಿನಲ್ಲಿ ಯಾವುದೇ ಜಾತಿ, ಧರ್ಮ, ಪಂಥಕ್ಕಿಂತ ನಾಡಿನ ಭಾಷೆಯೇ ಎಲ್ಲರನ್ನೂ ಒಟ್ಟುಗೂಡಿಸಲು ಸಾಧ್ಯ ಎಂಬುದನ್ನು ಮರೆಯುವಂತಿಲ್ಲ ಎಂದರು.
ಮಡಿಕೇರಿ ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರು ಮಾತನಾಡಿ ಕನ್ನಡ ಸಾಹಿತ್ಯ ಮತ್ತು ಸಂಸ್ಕøತಿಯನ್ನು ಉಳಿಸಿದಲ್ಲಿ ಮಾತ್ರ ಕನ್ನಡ ಅಸ್ಮಿತೆ ಉಳಿಯಲು ಸಾಧ್ಯ. ಆ ನಿಟ್ಟಿನಲ್ಲಿ ಯಾವುದೇ ಭಾಷೆಯನ್ನು ಮಾತನಾಡಿದರೂ ಸಹ ಕನ್ನಡಕ್ಕೆ ಪ್ರಥಮ ಆದ್ಯತೆ ನೀಡಬೇಕು. ಕನ್ನಡ ಸಾಹಿತ್ಯ ಅಧ್ಯಯನದಿಂದ ಹೆಚ್ಚಿನ ಜ್ಞಾನ ಸಂಪಾದಿಸಲು ಸಾಧ್ಯ ಎಂದು ಹೇಳಿದರು.
ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ರಾಣಿ ಮಾಚಯ್ಯ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ 10 ಸಾವಿರ ಮಕ್ಕಳಿಗೆ ಕೊಡವ ಸಾಂಪ್ರದಾಯಿಕ ‘ಉಮ್ಮತ್ತಾಟ್’ ಕಲಿಸಲು ಪ್ರಯತ್ನಿಸಲಾಗಿದೆ. ನನಗೆ ಸಿಕ್ಕಿರುವ ಪದ್ಮಶ್ರೀ ಪ್ರಶಸ್ತಿಯು ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ದೊರೆತಂತೆ ಎಂದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಪ್ರತಿಯೊಬ್ಬರೂ ಕನ್ನಡದಲ್ಲಿ ಮಾತನಾಡಬೇಕು. ಕನ್ನಡದಲ್ಲಿ ಬರೆಯಬೇಕು. ಕನ್ನಡ ಭಾಷೆ ಬಗ್ಗೆ ಪ್ರೀತಿ, ಅಭಿಮಾನ ಇರಬೇಕು. ಕನ್ನಡ ಕೆಲಸಗಳಿಗೆ ಸದಾ ಬೆಂಬಲವಿರುತ್ತದೆ ಎಂದರು.
ಸಾಹಿತಿ ಕಿಗ್ಗಾಲು ಗಿರೀಶ್ ಅವರು ಮಾತನಾಡಿ ಕನ್ನಡ ಭಾಷೆ ಮಾತನಾಡಲು ಹಿಂಜರಿಕೆ ಬೇಡ. ಕನ್ನಡ ಪುಸ್ತಕಗಳನ್ನು ಹೆಚ್ಚು ಅಧ್ಯಯನ ಮಾಡಬೇಕು ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷರಾದ ಕೇಶವ ಕಾಮತ್ ಅವರು ಮಾತನಾಡಿದರು. ಬೆಟ್ಟಗೇರಿ ಗ್ರಾ.ಪಂ.ಅಧ್ಯಕ್ಷರಾದ ನಾಪಂಡ ರ್ಯಾಲಿ ಮಾದಯ್ಯ, ಸಾಹಿತಿ ಬಾಚರಣಿಯಂಡ ಕೆ.ಅಪ್ಪಣ್ಣ, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ನವೀನ್ ಅಂಬೆಕಲ್ಲು, ಬೆಟ್ಟಗೇರಿ ಉದಯ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ತಳೂರು ಕಿಶೋರ್ ಕುಮಾರ್, ಮಡಿಕೇರಿ ತಾಲ್ಲೂಕು ಕಸಾಪ ನಿಕಟಪೂರ್ವ ಅಧ್ಯಕ್ಷರಾದ ಕುಡೆಕಲ್ ಸಂತೋಷ್, ಕಸಾಪ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಮುನೀರ್ ಅಹಮ್ಮದ್, ರೇವತಿ ರಮೇಶ್, ಕಸಾಪ ತಾಲ್ಲೂಕು ಅಧ್ಯಕ್ಷರು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.