Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಕೊಡಗು ಪತ್ರಕರ್ತರ ಸಂಘದಿಂದ ಸಂವಾದ : 5 ವರ್ಷಗಳಲ್ಲಿ 2 ಸಾವಿರ ಕೋಟಿ ರೂ. ವಿನಿಯೋಗವಾಗಿದೆ : ಶ್ವೇತ ಪತ್ರ ಬಿಡುಗಡೆಗೂ ಸಿದ್ಧ : ಶಾಸಕ ಕೆ.ಜಿ.ಬೋಪಯ್ಯ
ಇತ್ತೀಚಿನ ಸುದ್ದಿಗಳು

ಕೊಡಗು ಪತ್ರಕರ್ತರ ಸಂಘದಿಂದ ಸಂವಾದ : 5 ವರ್ಷಗಳಲ್ಲಿ 2 ಸಾವಿರ ಕೋಟಿ ರೂ. ವಿನಿಯೋಗವಾಗಿದೆ : ಶ್ವೇತ ಪತ್ರ ಬಿಡುಗಡೆಗೂ ಸಿದ್ಧ : ಶಾಸಕ ಕೆ.ಜಿ.ಬೋಪಯ್ಯ

February 2, 20234 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಫೆ.2 : ಜಿಲ್ಲೆಯ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ 2 ಸಾವಿರ ಕೋಟಿ ರೂ.ಗೂ ಹೆಚ್ಚಿನ ಅನುದಾನ ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗವಾಗಿದ್ದು, ಈ ಬಗ್ಗೆ ಶ್ವೇತ ಪತ್ರ ಬಿಡುಗಡೆಗೂ ಸಿದ್ಧವಿರುವುದಾಗಿ ಶಾಸಕ ಕೆ.ಜಿ.ಬೋಪಯ್ಯ ತಿಳಿಸಿದ್ದಾರೆ.
ಕೊಡಗು ಪತ್ರಕರ್ತರ ಸಂಘ ಮತ್ತು ಕೊಡಗು ಪತ್ರಿಕಾಭವನ ಟ್ರಸ್ಟ್ ನ ಸಂಯುಕ್ತಾಶ್ರಯದಲ್ಲಿ ನಗರದ ಪತ್ರಿಕಾ ಭವನದಲ್ಲಿ ನಡೆದ ‘ಸಂವಾದ’ದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ತಮ್ಮ ನಾಲ್ಕು ಅವಧಿಯ ಶಾಸಕ ಸ್ಥಾನದ ನಡೆಗಳನ್ನು ಮೆಲುಕು ಹಾಕಿದರು.
ಹೊಗಳಿಕೆ ಮತ್ತು ತೆಗಳಿಕೆಗಳನ್ನು ಸಮಾನವಾಗಿ ಸ್ವೀಕರಿಸುತ್ತಲೆ, ತನ್ನನ್ನು ಆಯ್ಕೆ ಮಾಡಿದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದ ತೃಪ್ತಿ ಇದೆ ಎಂದರು.
ಕೊಡಗು ಜಿಲ್ಲೆಯನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಬೇಕೆನ್ನುವ ಏಕಮಾತ್ರ ಉದ್ದೇಶದೊಂದಿಗೆ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಸಕ್ತ ಆರ್ಥಿಕ ಸಾಲಿನಲ್ಲೆ ಕ್ಷೇತ್ರಕ್ಕೆ 5508 ಲಕ್ಷ ರೂ. ಅನುದಾನ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ದೊರಕುವಂತೆ ನೋಡಿಕೊಂಡಿರುವುದಾಗಿ ಹೇಳಿದರು.
::: ‘ಕೊಂಗಣ ಹೊಳೆ’ಯಿಂದ ನೀರು :::
ವಿರಾಜಪೇಟೆ ಕ್ಷೇತ್ರದ ಪೊನ್ನಂಪೇಟೆ ವ್ಯಾಪ್ತಿಗೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಸಲುವಾಗಿ, ‘ಕೊಂಗಣ ಹೊಳೆ’ಯಿಂದ ನೀರು ಸರಬರಾಜಿನ ಯೋಜನೆ ಕಾರ್ಯಗತಗೊಳಿಸಲು ಉತ್ತಮ ಅವಕಾಶವಿದೆ. ವಿರಾಜಪೇಟೆ ಸೇರಿದಂತೆ ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಬೋರ್‍ವೆಲ್‍ಗಳು ವಿಫಲವಾಗುತ್ತಿರುವುದರಿಂದ ಅವುಗಳನ್ನು ನೀರಿನ ಮೂಲವಾಗಿ ಪರಿಗಣಿಸಲು ಸಾಧ್ಯವಾಗಲಾರದು. ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಯೋಜನೆಯಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ 60:40 ಅನುಪಾದ ಅನುದಾನದಲ್ಲಿ ಪ್ರತಿ ಮನೆಗೆ ನಲ್ಲಿ ನೀರನ್ನು ಕಲ್ಪಿಸಲಾಗುತ್ತದೆಯಾದರು, ಇದರಲ್ಲಿ ಬೋರ್‍ವೆಲ್‍ಗಳನ್ನು ನೀರಿನ ಮೂಲವಾಗಿ ಪರಿಗಣಿಸುವುದು ಜಿಲ್ಲೆಗೆ ಸಂಬಂಧಿಸಿದಂತೆ ಉಚಿತವಲ್ಲವೆಂದು ತಿಳಿಸಲಾಗಿದೆಯೆಂದು ಮಾಹಿತಿ ನೀಡಿದರು.
ಕ್ಷೇತ್ರ ವ್ಯಾಪ್ತಿಯಲ್ಲಿ ‘ಮಲ್ಟಿ ವಿಲೆÉೀಜ್ ಯೋಜನೆ’ಯಡಿ ಬರಪ್ಪೊಳೆ, ಕಾವೇರಿ ಮತ್ತು ಕೊಂಗಣ ಹೊಳೆಯನ್ನು ಬಳಸಿ ಗ್ರಾಮೀಣ ಭಾಗಗಳಿಗೆ ನೀರೊದಗಿಸುವ ಚಿಂತನೆ ಇದೆ. ಜಲಜೀವನ್ ಮಿಷನ್ ಮತ್ತು ಮಲ್ಟಿ ವಿಲೇಜ್ ಸ್ಕೀಂಗಳೆರಡರಿಂದ ಕುಡಿಯುವ ನೀರಿನ ವ್ಯವಸ್ಥೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆಂದು ತಿಳಿಸಿದರಲ್ಲದೆ, ಅಮೃತ್ ಯೋಜನೆ’ಯಡಿ ಕಾವೇರಿ ನದಿ ನೀರನ್ನು ವಿರಾಜಪೇಟೆ ಸುತ್ತಮುತ್ತಲ ವ್ಯಾಪ್ತಿಗೆ ಮತ್ತು ಕುಶಾಲನಗರಕ್ಕೆ ಒದಗಿಸುವ 64 ಕೋಟಿ ರೂ. ವೆಚ್ಚದ ಯೋಜನೆ ಇರುವುದಾಗಿ ತಿಳಿಸಿದರು.
::: ವನ್ಯಜೀವಿಗಳ ಹಾವಳಿಗೆ ಕಾರಣ :::
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಾಡಾನೆ ಸೇರಿದಂತೆ ವಿವಿಧ ವನ್ಯ ಜೀವಿಗಳ ಹಾವಳಿಯ ಗಂಭೀರ ಸಮಸ್ಯೆಯತ್ತ ಶಾಸಕರ ಗಮನ ಸೆಳೆದಾಗ ಅವರು, ಎಸಿ ಕೊಠಡಿಗಳಲ್ಲಿ ಕುಳಿತು ಅಧಿಕಾರಿಗಳು ತೆಗೆದುಕೊಳ್ಳ್ಳುವ ನಿಲುವುಗಳಿಂದ ಸಮಸ್ಯೆ ಉಲ್ಬಣಿಸಿದೆ. ವನ್ಯ ಪ್ರಾಣಿಗಳಿಗೆ ಅರಣ್ಯದಲ್ಲಿ ಅಗತ್ಯ ಆಹಾರ ಮತ್ತು ನೀರು ಲಭ್ಯವಾಗುವಂತೆ ಅಗತ್ಯ ಕ್ರಮ ಕೈಗೊಳ್ಳದಿರುವುದು ಇದಕ್ಕೆ ಮೂಲ ಕಾರಣ. ಸರ್ಕಾರ ಆದೇಶಗಳನ್ನು ಮಾಡಬಹುದಾದರು, ಅದನ್ನು ಅನುಷ್ಟಾನಗೊಳಿಸುವ ಅಧಿಕಾರಿ ವರ್ಗ ಆ ನಿಟ್ಟಿನಲ್ಲಿ ಕೆಲಸ ಮಾಡದಿದ್ದಲ್ಲಿ ಸಮಸ್ಯೆ ಬಗೆಹರಿಯುವುದಿಲ್ಲವೆಂದು ವಿಷಾದಿಸಿದರು.
ಕಾಡಾನೆ ಹಾವಳಿ ತಡೆಗೆ ಅಲ್ಲಲ್ಲಿ ಸೋಲಾರ್ ಬೆÉೀಲಿಗಳನ್ನು, ಕಂದಕಗಳನ್ನು ನಿರ್ಮಿಸಲಾಗಿದೆಯಾದರು, ಅವುಗಳ ಸಮರ್ಪಕ ನಿರ್ವಹಣೆಯಾಗುತ್ತಿಲ್ಲ. ಜಿಲ್ಲೆಯನ್ನು ಸುತ್ತುವರೆದಿರುವ ನಾಲ್ಕು ವನ್ಯ ಜೀವಿ ಸಂರಕ್ಷಣಾ ಅರಣ್ಯ ಪ್ರದೇಶದಲ್ಲಿ ವನ್ಯ ಜೀವಿಗಳಿಗೆ ಅಗತ್ಯವಾದ ಆಹಾರ, ನೀರು ಲಭ್ಯವಾಗುತ್ತಿಲ್ಲ. ಈ ಬಗ್ಗೆ ಗಮನ ಹರಿಸದ ಅಧಿಕಾರಿಗಳು ಏಕ ರೂಪದ ತೇಗದ ಕಾಡು ರೂಪಿಸುತ್ತಾರೆಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರಲ್ಲದೆ, ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭ ಅರಣ್ಯ ಸಚಿವರಾಗಿ ಮಲೆನಾಡು ಭಾಗದ ಜನಪ್ರತಿನಿಧಿಗೆ ಅವಕಾಶ ನೀಡಬೇಕೆಂದು ನಾನು ಸಲಹೆ ನೀಡಿದ್ದೇನೆ. ಕಾಡು ಎನ್ನುವುದು ಏನೆಂದೇ ತಿಳಿಯದವರು ಅರಣ್ಯ ಸಚಿವರಾಗುವುದರಿಂದ ಸಮಸ್ಯೆಗೆ ಪರಿಹಾರ ರೂಪಿಸುವುದು ಕಷ್ಟವೆಂದು ತಿಳಿಸಿದರು.
::: ‘ಐನ್ ಮನೆ’ ಕಲ್ಪನೆ ವಿಫಲ :::
ಕೊಡಗಿನ ಕೊಡವ ಜನಾಂಗದ ಅಭಿವೃದ್ಧಿಗೆ ಈ ಹಿಂದೆ 10 ಕೋಟಿ ಅನುದಾನವನ್ನು ಘೋಷಿಸಲಾಗಿತ್ತು. ಇದರಲ್ಲಿ 4 ಕೋಟಿಯನ್ನು ಕೊಡವ ಸಮಾಜಗಳ ಒಕ್ಕೂಟಕ್ಕೆ ಒದಗಿಸಲಾಯಿತಾದರೆ, ಉಳಿದ ಅನುದಾನವನ್ನು ಕೊಡವ ಸಂಸ್ಕೃತಿಯ ಮೂಲಸೆಲೆಯಾದ ‘ಐನ್ ಮನೆ’ಗಳಿಗೆ ಒದಗಿಸಬೇಕೆಂದು, ಕ್ರಿಡಾ ಚಟುವಟಿಕೆಗಳಿಗೆ ನೀಡಬೇಕೆನ್ನುವ ಸಲಹೆಗಳು ವಿವಿಧೆಡೆಗಳಿಂದ ಬಂದಿದೆ. ಈ ಹಂತದಲ್ಲಿ ‘ಐನ್ ಮನೆ’ ಸಂಸ್ಕೃತಿಯ ಉಳಿವಿಗೆ ನೀಡಬೇಕೆನ್ನುವ ಬಗ್ಗೆ ತಾನು ಸರ್ಕಾರಕ್ಕೆ ಅಧಿಕಾರಿಗಳಿಗೆ ಮನದಟ್ಟು ಮಾಡುವ ಪ್ರಯತ್ನಗಳನ್ನು ಮಾಡಿದ್ದೆನಾದರು, ಐನ್ ಮನೆ ಎನ್ನುವುದನ್ನು ‘ಮನೆ’ ಎನ್ನುವ ಸೀಮಿತ ದೃಷ್ಟಿಯಿಂದ ನೋಡಿದ್ದರಿಂದ ಅನುದಾನ ಹಾಗೆ ಉಳಿದಿದೆಯೆಂದು ಬೇಸರ ವ್ಯಕ್ತಪಡಿಸಿದರು.

::: ಕಾವೇರಿ ಹೂಳೆತ್ತುವುದಕ್ಕೆ ಕ್ರಮ :::
ಭಾಗಮಂಡಲದ ಮೇಲ್ಸೇತುವೆ ಕಾಮಗಾರಿ ವಿಳಂಬಗೊಳ್ಳುತ್ತಿರುವ ಹಿನ್ನೆಲೆ, ಮುಂಗಾರಿನ ಅವಧಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗದಂತೆ ಕಳೆದ ಬಾರಿ ನದಿಯ ಹೂಳೆತ್ತಲಾಗಿತ್ತು. ಇದರಿಂದ ದೊಡ್ಡ ಪ್ರಮಾಣದ ಪ್ರವಾಹ ಪರಿಸ್ಥಿತಿ ಉದ್ಭವವಾಗಲಿಲ್ಲ. ಇದೀಗ ತಲಕಾವೇರಿಯ ಕೆಲ ಭಾಗದಲ್ಲಿ ನದಿ ಹರಿಯುವ ಪ್ರದೇಶದಲ್ಲಿ ಮತ್ತು ಭಾಗಮಂಡಲದಲ್ಲಿ ಕಾವೇರಿಯ ನದಿಯ ಸುಮಾರು 3 ಕಿ.ಮೀ. ವರೆಗೆ ಹೂಳೆತ್ತುವ 99 ಲಕ್ಷ ವೆಚ್ಚದ ಕಾಮಗಾರಿಗೆ ಮಂಜೂರಾತಿ ದೊರಕಿದೆಯೆಂದು ಮಾಹಿತಿ ನೀಡಿದರು.
ಭಾಗಮಂಡಲ ಸಂಗಮ ಕ್ಷೇತ್ರದ ಕನ್ನಿಕೆ ನದಿಯ ಪ್ರವಾಹ ನಿಯಂತ್ರಿಸಲು ತಡೆಗೋಡೆ ನಿರ್ಮಾಣ ಮಾಡಲು ಮತ್ತು ಅಲ್ಲಿನ ಹೋಳೆತ್ತಲು 1.02 ಕೋಟಿ ರೂ. ಕಾಮಗಾರಿ ನಡೆಯಲಿದೆಯೆಂದು ಶಾಸಕ ಕೆ.ಜಿ. ಬೋಪಯ್ಯ ಮಾಹಿತಿ ನೀಡಿದರು.
ಮಾದಕ ದ್ರವ್ಯ ಮಾರಾಟಕ್ಕೆ ಕಡಿವಾಣಕ್ಕೆ ಸೂಚನೆ- ಜಿಲ್ಲಾ ವ್ಯಾಪ್ತಿಯಲ್ಲಿ ಗಾಂಜಾ ಸೇರಿದಂತೆ ಮಾದಕದ್ರವ್ಯಗಳ ಮಾರಾಟ ದಂಧೆಗೆ ಕಡಿವಾಣ ಹಾಕಿ, ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ನೂತನ ಎಸ್‍ಪಿ ಅವರಿಗೆ ಈಗಾಗಲೆ ಅಗತ್ಯ ನಿರ್ದೇಶನ ನೀಡಿರುವುದಾಗಿ ಶಾಸಕರು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ತಿಳಿಸಿದರು.
::: ಮತಾಂತರ ತಡೆಗೆ ಕ್ರಮ :::
ಮತಾಂತರ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಕಾನೂನಿನಂತೆ ಮತಾಂತರಕ್ಕೆ ಪ್ರಚೋದನೆ ನೀಡುವುದೆ ಜಾಮೀನು ರಹಿತ ಕೃತ್ಯವಾಗಿದೆ. ಕಾನೂನಿನ ಮೂಲಕ ಇಂತಹ ಘಟನೆಗಳನ್ನು ನಿಗ್ರಹಿಸಬೇಕಾಗಿದೆಯೆಂದು ಅನಿಸಿಕೆ ವ್ಯಕ್ತಪಡಿಸಿದರು.
::: ಮಲ್ಟಿ ಸ್ಪಷಾಲಿಟಿ ಆಗ್ರಹ ಬೇಡ :::
ಜಿಲ್ಲೆಯಲ್ಲಿ ಮಲ್ಟಿ ಸ್ಪಷಾಲಿಟಿ ಆಸ್ಪತ್ರೆಯೇ ಬೇಕೆನ್ನುವ ಆಗ್ರಹ ಬೇಡ. ಮಡಿಕೇರಿಯಲ್ಲಿ ಇರುವ ಜಿಲ್ಲಾ ಆಸ್ಪತ್ರೆಯಲ್ಲಿ ಎಲ್ಲಾ ಚಿಕಿತ್ಸಾ ಸೌಲಭ್ಯಗಳು ಇದೆ, ಒಳ್ಳೆಯ ವೈದ್ಯರಿದ್ದಾರೆ. ಮೈಸೂರು ಜಯದೇವದಂತಹ ಆಸ್ಪತ್ರೆಯೇ ಇಲ್ಲ್ಲಿಗೆ ಬೇಕೆಂದರೆ ಕಷ್ಟಸಾಧ್ಯವೆಂದು ತಿಳಿಸಿದ ಶಾಸಕರು, ಅಗತ್ಯ ಚಿಕಿತ್ಸಾ ಸೌಲಭ್ಯ ಇಲ್ಲಿದ್ದರು ರೋಗಿಗಳನ್ನು ಹೊರ ಆಸ್ಪತ್ರೆಗೆ ಕಳುಹಿಸುವ ಕೆಲ ಘಟನೆಗಳು ತನ್ನ ಗಮನಕ್ಕೆ ಬಂದಿದೆ. ಆ ರೀತಿ ಆಗಬಾರದೆಂದು ತಿಳಿಸಿದರು.
::: ಸ್ಪರ್ಧಿಸುವ ದುರಾಸೆ ಇಲ್ಲ :::
ಭಾರತೀಯ ಜನತಾ ಪಾರ್ಟಿ ತನಗೆ ಎಲ್ಲವನ್ನೂ ನೀಡಿದೆ. ಮುಂಬರುವ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷ ಏನು ಹೇಳುತ್ತದೋ ಅದರಂತೆ ನಡೆದುಕೊಳ್ಳುತ್ತೇನೆ. ಪಕ್ಷ ಸ್ಪರ್ಧಿಸು ಅಂದರೆ ಸ್ಪರ್ಧಿಸುತ್ತೇನೆ. ಇತರೆ ಯಾರಿಗೆ ಅವಕಾಶ ಕೊಟ್ಟರು ಅದಕ್ಕೆ ತಾನು ಸಿದ್ಧ. ನಾನೇ ಸ್ಪರ್ಧಿಸಬೇಕೆನ್ನುವ ದುರಾಸೆ ಇಲ್ಲವೆಂದು ಶಾಸಕ ಕೆ.ಜಿ.ಬೋಪಯ್ಯ ಸ್ಪಷ್ಟಪಡಿಸಿದರು.
ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ.ಮುರಳೀಧರ್ ಹಾಗೂ ಕೊಡಗು ಪತ್ರಿಕಾ ಭವನ ಟ್ರಸ್ಟನ್ ಖಜಾಂಚಿ ಕೆ.ತಿಮ್ಮಪ್ಪ ಮಾತನಾಡಿದರು.
ಕೊಡಗು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಸ್ವಾಗತಿಸಿ, ಸಂಘದ ಸದಸ್ಯ ರಂಜಿತ್ ಕವಲಪಾರ ನಿರೂಪಿಸಿದರು.

Share. Facebook Twitter Pinterest LinkedIn Tumblr Email WhatsApp
Previous Articleಫೆ.14 ರಂದು ಗ್ರಾ.ಪಂ ನೌಕರರ ಪ್ರತಿಭಟನೆ : ಸುಂಟಿಕೊಪ್ಪದಲ್ಲಿ ಭಿತ್ತಿಪತ್ರ ಬಿಡುಗಡೆ
Next Article ಸ್ಪರ್ಧಿಸುವ ದುರಾಸೆ ಇಲ್ಲ

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.