ಮಡಿಕೇರಿ ಫೆ.3 : ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದoತೆ ಮೂವರು ಆರೋಪಿಗಳನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ. 12 ಲಕ್ಷ ರೂ. ಮೌಲ್ಯದ 190 ಗ್ರಾಂ ಚಿನ್ನಾಭರಣ ಮತ್ತು 3 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಕುರಿತು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಕುಶಾಲನಗರದ ಡಿವೈಎಸ್ಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಗ್ರಾಮದ ಎಂ.ಎ.ಇಬ್ರಾಹಿಂ (27), ಕೋಕೇರಿ ಗ್ರಾಮದ ಸುದೀಪ್ (21) ಹಾಗೂ ಮಡಿಕೇರಿಯ ಅಜಾದ್ ನಗರ ಬಡಾವಣೆಯ ಎಂ.ಎಂ.ವಾಸಿo (29) ಬಂಧಿತ ಆರೋಪಿಗಳು. ಇವರೊಂದಿಗೆ ಇನ್ನೂ ಮೂವರು ಭಾಗಿಯಾಗಿದ್ದು, ಇವರುಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಕಳ್ಳತನದ ಹಣದಿಂದ ಖರೀದಿಸಿದ ಮೂರು ಕಾರುಗಳು ಮತ್ತು ಕಳ್ಳತನ ಮಾಡಿದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಇವರುಗಳ ಬಂಧನದಿಂದ ಕುಶಾಲನಗರ ವ್ಯಾಪ್ತಿಯ 2, ನಾಪೋಕ್ಲು ವ್ಯಾಪ್ತಿಯ 2 ಮತ್ತು ವೀರಾಜಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯ 1 ಪ್ರಕರಣವನ್ನು ಬಯಲಿಗೆಳೆಯಲಾಗಿದೆ.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜು, ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ, ವೃತ್ತ ನಿರೀಕ್ಷಕ ಬಿ.ಜಿ.ಮಹೇಶ ಹಾಗೂ ಜಿ.ಎನ್.ಶ್ರೀಕಾಂತ ಅವರುಗಳ ಮರ್ಗರ್ಶನದಲ್ಲಿ ಕುಶಾಲನಗರ ಗ್ರಾಮಾಂತರ ಠಾಣಾಧಿಕಾರಿ ಚಂದ್ರಶೇಖರ್ ನೇತೃತ್ವದಲ್ಲಿ ಪಿಎಸೈ ಗಳಾದ ಅಪ್ಪಾಜಿ, ಭಾರತಿ, ಶ್ರೀಧರ್, ಲೋಹಿತ್, ಎಎಸೈ ವೆಂಕಟೇಶ್, ಗೋಪಾಲ್, ಗಣಪತಿ, ಸಿಬ್ಬಂದಿಗಳಾದ ಸತೀಶ್, ಮಂಜುನಾಥ್, ದಯಾನಂದ, ನಾಗರಾಜ್, ಸುಧೀಶ್ ಕುಮಾರ್, ಪ್ರಕಾಶ್, ಪ್ರವೀಣ್, ಸಂದೇಶ್, ದಿವೇಶ್, ರಂಜಿತ್, ಗಣೇಶ್, ಸಹನಾ, ರ್ಮಿಳಾ, ಸಿಡಿಆರ್ ಘಟಕದ ರಾಜೇಶ್, ಗಿರೀಶ್, ಪ್ರವೀಣ್, ಚಾಲಕರಾದ ರಾಜು, ಅರುಣ್, ಯೋಗೀಶ್ ಹಾಗೂ ಶೇಷಪ್ಪ ಅವರುಗಳು ಕರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.














