Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಅಪ್ಪಚೆಟ್ಟೋಳಂಡ ಕೌಟುಂಬಿಕ ಹಾಕಿ ಉತ್ಸವದ ಮಾಹಿತಿ ಕೈಪಿಡಿ ಬಿಡುಗಡೆ : ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಸರ್ಕಾರದ ನೆರವು : ಶಾಸಕ ಕೆ.ಜಿ.ಬೋಪಯ್ಯ
ಇತ್ತೀಚಿನ ಸುದ್ದಿಗಳು

ಅಪ್ಪಚೆಟ್ಟೋಳಂಡ ಕೌಟುಂಬಿಕ ಹಾಕಿ ಉತ್ಸವದ ಮಾಹಿತಿ ಕೈಪಿಡಿ ಬಿಡುಗಡೆ : ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಸರ್ಕಾರದ ನೆರವು : ಶಾಸಕ ಕೆ.ಜಿ.ಬೋಪಯ್ಯ

February 12, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ನಾಪೋಕ್ಲು ಫೆ.12 : ಕೊಡವ ಕೌಟುಂಬಿಕ ಹಾಕಿ ಉತ್ಸವ ವಿಶ್ವದ ಗಮನ ಸೆಳೆದಿದ್ದು, ಅನೇಕ ಕ್ರೀಡಾಪಟುಗಳು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಈ ಉತ್ಸವದ ಮೂಲಕ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸರ್ಕಾರ ಆರ್ಥಿಕ ನೆರವನ್ನು ನೀಡುತ್ತಿದೆ ಎಂದು ಶಾಸಕ ಕೆ.ಜಿ.ಬೋಪಯ್ಯ ತಿಳಿಸಿದ್ದಾರೆ.
ನಾಪೋಕ್ಲು ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ಅಪ್ಪಚೆಟ್ಟೋಳಂಡ ಕೌಟುಂಬಿಕ ಹಾಕಿ ಉತ್ಸವದ ಮಾಹಿತಿ ಕೈಪಿಡಿ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕೌಟುಂಬಿಕ ಹಾಕಿ ಉತ್ಸವಕ್ಕಾಗಿ ಸರ್ಕಾರ ಅನುದಾನ ಘೋಷಿಸಿದ್ದು, ಆಯೋಜಕರು ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. 1997 ರಲ್ಲಿ ಕೊಡಗಿನಲ್ಲಿ ಕೊಡವ ಹಾಕಿ ಉತ್ಸವ ಆರಂಭವಾಗಿದ್ದು, ಕುಟುಂಬಗಳು ಉತ್ಸವವನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿವೆ. ಈ ಹಿಂದಿನ ಕೊಡವ ಹಾಕಿ ಉತ್ಸವಕ್ಕೆ ಸರ್ಕಾರ 50 ಲಕ್ಷ ರೂ. ಬಿಡುಗಡೆ ಮಾಡಿತ್ತು. ಇದೀಗ ಸರ್ಕಾರ ಒಂದು ಕೋಟಿ ರೂ. ಬಿಡುಗಡೆ ಮಾಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ಜನಾಂಗದವರು ಕ್ರೀಡಾಕೂಟಗಳನ್ನು ನಡೆಸುತ್ತಿದ್ದು, ಸಮಾಜದ ಒಗ್ಗೂಡುವಿಕೆ ಸಾಧ್ಯವಾಗಿದೆ. ಹಾಕಿ ಉತ್ಸವಕ್ಕೆ ಶಾಶ್ವತ ಅನುದಾನ ಸಿಗುವಂತಾಗಬೇಕು ಎಂದರು.
ಹಾಕಿ ಕರ್ನಾಟಕದ ಕಾರ್ಯದರ್ಶಿ ಮಾಜಿ ಒಲಂಪಿಯನ್ ಡಾ.ಎ.ಬಿ.ಸುಬ್ಬಯ್ಯ ಮಾತನಾಡಿ ಕ್ರೀಡಾಕೂಟಗಳನ್ನು ನಡೆಸುವುದರಿಂದ ಜಿಲ್ಲೆಯ ಮಕ್ಕಳಿಗೆ ಹಾಗೂ ಯುವ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಿದಂತ್ತಾಗುತ್ತದೆ ಎಂದು ತಿಳಿಸಿದರು.
ಅಪ್ಪಚೆಟ್ಟೋಳಂಡ ಹಾಕಿ ಉತ್ಸವ ಆಯೋಜನಾ ಸಮಿತಿ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಮಾತನಾಡಿ ಕೊಡವ ಕೌಟುಂಬಿಕ ಹಾಕಿ ಉತ್ಸವ ಈಗಾಗಲೇ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಸ್ಥಾನ ಪಡೆದಿದೆ. ಗಿನ್ನಿಸ್ ದಾಖಲೆಗಾಗಿ ವಿಶೇಷ ಪ್ರಯತ್ನ ಮಾಡಲಾಗುತ್ತಿದೆ. ಭಾರತ ತಂಡವನ್ನು ಪ್ರತಿನಿಧಿಸಿದ ಕೊಡಗಿನ ರಾಷ್ಟ್ರೀಯ ಮತ್ತು ಅಂತರ ರಾಷ್ಟ್ರೀಯ ಆಟಗಾರರನ್ನು ಹಾಕಿ ಉತ್ಸವದ ಸಂದರ್ಭ ಗೌರವಿಸಲಾಗುವುದು ಎಂದರು.
ಮಾ.17 ರಿಂದ ಏ.10 ರವರೆಗೆ 23 ದಿನಗಳ ಕಾಲ ಹಾಕಿ ಉತ್ಸವವನ್ನು ಆಯೋಜಿಸಲಾಗಿದೆ. ಪ್ರತಿದಿನ ಮೂರು ಮೈದಾನಗಳಲ್ಲಿ 24 ಪಂದ್ಯಗಳು ನಡೆಯಲಿವೆ. 2018 ರಲ್ಲಿ 230 ತಂಡಗಳು ಪಾಲ್ಗೊಂಡಿದ್ದು, ಈ ಬಾರಿ 350 ತಂಡಗಳು ಸೆಣಸಾಡುವ ನೀರಿಕ್ಷೆ ಇದೆ ಎಂದು ಹೇಳಿದರು.
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಕಲಾವಿದೆ ರಾಣಿ ಮಾಚಯ್ಯ ಹಾಗೂ ಹಾಕಿ ಉತ್ಸವದ ಲಾಂಛನವನ್ನು ರಚಿಸಿದ ಸುಳ್ಳಿಮಾಡ ದರ್ಶನ್ ಪೂವಪ್ಪ ಅವರನ್ನು ಸನ್ಮಾನಿಸಲಾಯಿತು. ಒಲಂಪಿಯನ್ ಗಳಾದ ಡಾ.ಎ.ಬಿ.ಸುಬ್ಬಯ್ಯ ಹಾಗೂ ಬಾಳೆಯಡ ಕೆ.ಸುಬ್ಬಯ್ಯ ಮಾಹಿತಿ ಕೈಪಿಡಿ ಬಿಡುಗಡೆ ಮಾಡಿ ಶುಭ ಹಾರೈಸಿದರು.
ಅಪ್ಪಚೆಟ್ಟೋಳಂಡ ಕುಟುಂಬದ ಪಟ್ಟೆದಾರ ಮಿಟ್ಟು ಈರಪ್ಪ ಅವರು ಅಧ್ಯಕ್ಷತೆ ವಹಿಸಿದ್ದರು. ಕೊಡವ ಹಾಕಿ ಕೂರ್ಗ್ ಅಸೋಸಿಯೇಷನ್ ಅಧ್ಯಕ್ಷ ಮೇಕೇರಿರ ರವಿ ಪೆಮ್ಮಯ್ಯ, ಉಪಾಧ್ಯಕ್ಷ ಬಡಕಡ ದೀನ ಪೂವಯ್ಯ, ನಿರ್ದೇಶಕ ಮಾಳೇಟಿರ ಶ್ರೀನಿವಾಸ್, ಕೊಡವ ಹಾಕಿ ಅಸೋಸಿಯೇಷನ್ ನ ಪಳಂಗಂಡ ಲವ, ರಾಜಾ ಭೀಮಯ್ಯ, 2024 ರ ಹಾಕಿ ಉತ್ಸವದ ಆಯೋಜನ ಸಮಿತಿ ಅಧ್ಯಕ್ಷ ಕುಂಡ್ಯೋಳಂಡ ರಮೇಶ್ ಮುದ್ದಯ್ಯ ಮತ್ತಿತರರು ಉಪಸ್ಥಿತರಿದ್ದರು.
ಕಲಿಯಂಡ ಬೀನಾ ನವೀನ್ ಪ್ರಾರ್ಥಿಸಿ, ಬಾಳೆಯಡ ದಿವ್ಯ ಮಂದಪ್ಪ ನಿರೂಪಿಸಿ, ಕ್ರೀಡಾಕೂಟದ ಕಾರ್ಯದರ್ಶಿ ಅಪ್ಪಚೆಟ್ಟೋಳಂಡ ಮಿಥುನ್ ಮಾಚಯ್ಯ ವಂದಿಸಿದರು. (ವರದಿ : ದುಗ್ಗಳ ಸದಾನಂದ)

Share. Facebook Twitter Pinterest LinkedIn Tumblr Email WhatsApp
Previous Articleಮೀನು ಹಿಡಿಯಲು ಹೋದ ಇಬ್ಬರು ಬಾಲಕರು ನೀರುಪಾಲು
Next Article ಮಡಿಕೇರಿ : ಅಹ್ಮದಿಯಾ ಮುಸ್ಲಿಂ ಜಮಾಅತ್ ನಿಂದ ವಿಚಾರ ಸಂಕಿರಣ : ಮನಸ್ಸು ಮನಸ್ಸುಗಳನ್ನು ಬೆಸೆಯುವ ಕಾರ್ಯದಿಂದ ಶಾಂತಿ ಸ್ಥಾಪಿಸಲು ಸಾಧ್ಯ : ಮಂಗಳೂರು ವಿವಿ ಉಪಕುಲಪತಿ ಡಾ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.