Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
  • *ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*
  • *ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*
  • *ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*
  • *ಅನಾರೋಗ್ಯದಿಂದ ಅಭಿ ಸಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»2 ಮಾನವ ಜೀವ ಬಲಿ ಪಡೆದ ಹುಲಿ ಸೆರೆಗೆ ಕಾರ್ಯಾಚರಣೆ : 100 ಸಿಬ್ಬಂದಿಗಳ ತಂಡ ರಚನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

2 ಮಾನವ ಜೀವ ಬಲಿ ಪಡೆದ ಹುಲಿ ಸೆರೆಗೆ ಕಾರ್ಯಾಚರಣೆ : 100 ಸಿಬ್ಬಂದಿಗಳ ತಂಡ ರಚನೆ

ಫೆಬ್ರವರಿ 13, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.13 : ಪೊನ್ನಂಪೇಟೆ ವ್ಯಾಪ್ತಿಯ ಬಾಡಗ ಗ್ರಾಮದಲ್ಲಿ ಕಳೆದ 18 ಗಂಟೆಗಳಲ್ಲಿ ಒಂದೇ ಕುಟುಂಬದ ಎರಡು ಮಾನವ ಜೀವಗಳು ಹುಲಿದಾಳಿಗೆ ಬಲಿಯಾಗಿವೆ. ದಕ್ಷಿಣ ಕೊಡಗಿನಲ್ಲಿ ಆತಂಕ ಮನೆ ಮಾಡಿದ್ದು, ಸರ್ಕಾರ ಹಾಗೂ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಭಾನುವಾರ ಸಂಜೆ ಮಧು ಹಾಗೂ ವೀಣಾ ದಂಪತಿಯ ಪುತ್ರ ಚೇತನ್ (18) ಎಂಬ ಯುವಕನ ಮೇಲೆ ಹುಲಿ ದಾಳಿ ಮಾಡಿ ಕೊಂದು ಹಾಕಿತ್ತು. ಈ ಘಟನೆ ಮಾಸುವ ಮುನ್ನವೇ ಲೈನ್ ಮನೆಯ ನಿವಾಸಿ ಪಲ್ಲೇರಿಯ ರಾಜು(75) ಎಂಬುವವರನ್ನು ಹುಲಿ ಇಂದು ಬಲಿ ಪಡೆದಿದೆ. ಅಲ್ಲದೆ ಚೇತನ್ ನ್ನು ಹುಡುಕಿಕೊಂಡು ಹೋದ ಆತನ ತಂದೆ ಮಧು ಮೇಲೆಯೂ ಹುಲಿದಾಳಿ ಮಾಡಿ ಗಾಯಗೊಳಿಸಿದೆ.
ಸೋಮವಾರ ಬೆಳಗ್ಗೆ 7 ಗಂಟೆಯ ಸುಮಾರಿನಲ್ಲ್ಲಿ ರಾಜು ಅವರು ತಮ್ಮ ಲೈನ್ ಮನೆಯಿಂದ ಅನತಿ ದೂರ ಸಾಗುತ್ತಿದ್ದ ಸಂದರ್ಭ ತೋಟದಲ್ಲಿದ್ದ ಹುಲಿ ದಿಢೀರ್ ದಾಳಿ ಮಾಡಿದೆ. ತಲೆಯ ಭಾಗಕ್ಕೆ ಹುಲಿ ಕಚ್ಚಿದ್ದು, ರಾಜು ಹಾಗೂ ಮನೆ ಮಂದಿ ಕಿರುಚಿಕೊಂಡಾಗ ಹುಲಿ ಕಾಫಿ ತೋಟದೊಳಗೆ ಮರೆಯಾಗಿದೆ. ಆದರೆ ರಾಜು ಸ್ಥಳದಲ್ಲೇ ಮೃತಪಟ್ಟರು.
::: ತೀವ್ರ ಅಸಮಾಧಾನ :::
ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಹುಲಿ ದಾಳಿ ನಿರಂತರವಾಗಿದ್ದು, ಇಲ್ಲಿಯವರೆಗೆ ಜಾನುವಾರುಗಳನ್ನು ಬಲಿ ಪಡೆಯುತ್ತಿತ್ತು. ಇದೀಗ ನೇರವಾಗಿ ಮಾನವನ ಮೇಲೆ ದಾಳಿ ಮಾಡಿದೆ. ಭಾನುವಾರ ರಾತ್ರಿ ಚೇತನ್ ಮೇಲೆ ಹುಲಿದಾಳಿ ಮಾಡಿದಾಗ ಗ್ರಾಮಸ್ಥರು, ಕಾಫಿ ಬೆಳೆಗಾರರು ಹಾಗೂ ರೈತ ಸಂಘದ ಪ್ರಮುಖರು ಜಮಾಯಿಸಿ ಅರಣ್ಯ ಇಲಾಖೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.
ಸೋಮವಾರ ಮತ್ತೆ ವೃದ್ಧ ರಾಜು ಅವರನ್ನು ಹುಲಿ ಬಲಿ ಪಡೆದ ನಂತರವಂತು ಸ್ಥಳೀಯರ ಅಸಮಾಧಾನ ತೀವ್ರಗೊಂಡಿತ್ತು. ಹುಲಿಗೆ ಗುಂಡಿಕ್ಕುವಂತೆ ಅಖಿಲ ಕೊಡವ ಸಮಾಜ ಯೂತ್ ವಿಂಗ್ ಅಧ್ಯಕ್ಷ ಚೆಮ್ಮಟ್ಟಿರ ಪ್ರವೀಣ್ ಉತ್ತಪ್ಪ ಪತ್ರಿಕಾ ಹೇಳಿಕೆ ಮೂಲಕ ಆಗ್ರಹಿಸಿದರು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಹಾಗೂ ಹೈಕೋರ್ಟ್ ವಕೀಲ ಎ.ಎಸ್.ಪೊನ್ನಣ್ಣ, ಭಾನುವಾರ ದಿನ ಮೃತಪಟ್ಟ ಯುವಕ ಚೇತನ್ ಎಂಬುವವರ ತಂದೆ ಮಧು ಅವರ ಮೇಲೂ ಹುಲಿ ದಾಳಿ ನಡೆಸಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲು ಕೂಡ ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅರಣ್ಯ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು, ಅಧಿಕಾರಿಗಳ ತಲೆ ದಂಡವಾಗಬೇಕೆಂದು ಪೊನ್ನಣ್ಣ ಹೇಳಿದರು.
::: ಅಧಿಕಾರಿಗಳಿಗೆ ಘೇರಾವ್ :::
ಘಟನಾ ಸ್ಥಳಕ್ಕೆ ಹಿರಿಯ ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡದೆ ಹೋದಲ್ಲಿ ಮೃತದೇಹವನ್ನು ಕೊಂಡೊಯ್ಯಲು ಬಿಡುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟುಹಿಡಿದರು. ಸ್ಥಳಕ್ಕೆ ಡಿಎಫ್‍ಓ ಎ.ಟಿ.ಪೂವಯ್ಯ, ಸಿಸಿಎಫ್ ನಿರಂಜನ್ ಮೂರ್ತಿ, ನಾಗರಹೊಳೆ ಅಭಯಾರಣ್ಯದ ಆರ್‍ಎಫ್‍ಓ ಮೊಹಮದ್ ಜಶಾನ್, ಇತರ ಅರಣ್ಯ ಇಲಾಖೆ ಅಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಅಡಿಷನಲ್ ಎಸ್.ಪಿ. ಸುಂದರ್ ರಾಜ್ ಅವರುಗಳು ತೆರಳಿ ಪರಿಶೀಲನೆ ನಡೆಸಿದರು.
ಈ ಸಂದರ್ಭ ಅಧಿಕಾರಿಗಳಿಗೆ ಘೇರಾವ್ ಹಾಕಿದ ಪ್ರತಿಭಟನಾಕಾರರು, ಧಿಕ್ಕಾರದ ಘೋಷಣೆಗಳನ್ನು ಕೂಗಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಭಾನುವಾರ ದಿನ ಮಾನವ ಜೀವ ಬಲಿ ನಡೆದ ಸಂದರ್ಭವೇ ಹುಲಿ ಸೆರೆಗೆ ಕಾರ್ಯಾಚರಣೆ ಏಕೆ ನಡೆಸಲಿಲ್ಲ, ಸ್ಥಳದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳನ್ನು ನಿಯೋಜಿಸಲು ವಿಫಲವಾಗಿದ್ದೇ ಮತ್ತೊಂದು ಜೀವ ಬಲಿಗೆ ಕಾರಣವಾಗಿದೆ. ಈ ಘಟನೆಗಳಿಗೆ ಅರಣ್ಯ ಇಲಾಖೆ ಅಧಿಕಾರಿಗಳು ನೇರ ಕಾರಣ ಎಂದು ಆರೋಪಿಸಿದರು.
ಎಸಿಎಫ್ ಹಾಗೂ ಆರ್‍ಎಫ್‍ಓ ವಿರುದ್ಧ ಎಫ್‍ಐಆರ್ ದಾಖಲಿಸಿ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
::: 25 ಹುಲಿ ಸೆರೆಗೆ ಕ್ರಮ :::
ನಾಗರಹೊಳೆ ವ್ಯಾಪ್ತಿಯಲ್ಲಿ ಹುಲಿಗಳ ಸಂಖ್ಯೆ ಮಿತಿ ಮೀರಿದೆ. 2 ಕಿ.ಮೀ ಗೆ 1 ರಂತೆ ಹುಲಿಗಳ ಸಂಖ್ಯೆ ಏರಿಕೆಯಾಗಿರುವುದೇ ಸಮಸ್ಯೆಗೆ ಕಾರಣವಾಗಿದೆ. ಒಂದು ಹುಲಿ ಸೆರೆಯಿಂದ ಮೂಲ ಸಮಸ್ಯೆ ಪರಿಹಾರವಾಗಲ್ಲ. ಮುಂದಿನ ದಿನಗಳಲ್ಲಿ ಮತ್ತಷ್ಟು ಜೀವ ಬಲಿ ನಡೆಯುವ ಎಲ್ಲಾ ಸಾಧ್ಯತೆಗಳಿವೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದರು.
ಸಿಸಿಎಫ್ ನಿರಂಜನ್ ಮೂರ್ತಿ ಮಾತನಾಡಿ ನಾಗರಹೊಳೆ ವ್ಯಾಪ್ತಿಯಲ್ಲಿ ಒಟ್ಟು 25 ಹುಲಿಗಳನ್ನು ಸೆರೆ ಹಿಡಿದು ಬೇರೆಡೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮೊದಲ ಹಂತವಾಗಿ ಈಗಾಗಲೇ 6 ಹುಲಿಗಳನ್ನು ಗುರುತಿಸಲಾಗಿದೆ. ಮುಂದಿನ 5 ತಿಂಗಳ ಒಳಗೆ ಎಲ್ಲಾ ಹುಲಿಗಳನ್ನು ಗುರುತಿಸಿ ಸೆರೆ ಹಿಡಿದು ಸ್ಥಳಾಂತರ ಮಾಡಲಾಗುತ್ತಿದೆ. ಈ ಹುಲಿಗಳಿಗೆ ರೇಡಿಯೋ ಕಾಲರ್ ಅಳವಡಿಸಲಾಗುತ್ತದೆ. ಒಂದು ತಿಂಗಳ ಒಳಗೆ ರೇಡಿಯೊ ಕಾಲರ್ ಕೂಡ ವಿತರಣೆಯಾಗಲಿದೆ ಎಂದು ಮಾಹಿತಿ ನೀಡಿದರು.
ಮಾನವನ ಮೇಲೆ ದಾಳಿ ಮಾಡಿರುವ ಹುಲಿ ಸೆರೆಗೆ ಕೂಂಬಿಂಗ್ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇದಕ್ಕಾಗಿ ಮೈಸೂರು, ಚಾಮರಾಜನಗರ, ನಾಗರಹೊಳೆ, ಕೊಡಗು ವೃತ್ತದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಹಿತ 100 ಮಂದಿಯ ಒಂದು ತಂಡ ರಚಿಸಲಾಗಿದೆ. ಕಾರ್ಯಾಚರಣೆಗಾಗಿ 4 ಸಾಕಾನೆಗಳು, ಅರವಳಿಕೆ ತಜ್ಞರು, ಪಶು ವೈದ್ಯಾಧಿಕಾರಿಗಳನ್ನು ಬಳಸಿಕೊಳ್ಳಲಾಗುತ್ತಿದೆ. ಗ್ರಾಮಸ್ಥರು ಹಾಗೂ ಸಂಘಟನೆಗಳು ಸಹಕರಿಸುವಂತೆ ನಿರಂಜನ್ ಮೂರ್ತಿ ಮನವಿ ಮಾಡಿದರು.
ಪೊನ್ನಂಪೇಟೆ ವ್ಯಾಪ್ತಿಯ ನಾಣಚ್ಚಿ ಭಾಗದಲ್ಲಿ ಹುಲಿ ದಾಳಿಯಿಂದ ಒಂದೇ ಕುಟುಂಬದ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ಹುಲಿ ಸೆರೆಗೆ ಕಾರ್ಯಾಚರಣೆ ನಡೆಸಲಾಗುತ್ತಿದ್ದು, 48 ಗಂಟೆಯ ಒಳಗೆ ಹುಲಿಯನ್ನು ಸೆರೆ ಹಿಡಿಯಲಾಗುತ್ತದೆ. ಮೃತರ ಕುಟುಂಬಕ್ಕೆ ಮೊದಲ ಹಂತವಾಗಿ 5 ಲಕ್ಷ ರೂ.ಗಳ ಪರಿಹಾರ ವಿತರಿಸಲಾಗಿದೆ. ಹುಲಿ ಸೆರೆಗೆ 100 ಮಂದಿಯ ತಂಡ ರಚಿಸಲಾಗಿದ್ದು, ಎಲ್ಲಾ ಸಿದ್ಧತೆಗಳನ್ನು ಈಗಾಗಲೇ ಮಾಡಿಕೊಳ್ಳಲಾಗಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.9 NEWS DESK : ನಗರಸಭೆಯ 2026-27ನೇ ಸಾಲಿನ ಆಯವ್ಯಯ ಮಂಜೂರಾತಿಗೆ ಮಾರ್ಚ್, 11 ರಂದು ಬೆಳಗ್ಗೆ 11.30…

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026

*ಅನಾರೋಗ್ಯದಿಂದ ಅಭಿ ಸಾವು*

ಮಾರ್ಚ್ 9, 2026

*ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.