Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ವ್ಯಾಘ್ರನ ದೇಹದಲ್ಲಿ ಗಾಯಗಳು ಗೋಚರ : ಕೂಂಬಿಂಗ್ ನಿಂತಿಲ್ಲ, ಎಚ್ಚರ ಅಗತ್ಯ
ಇತ್ತೀಚಿನ ಸುದ್ದಿಗಳು

ವ್ಯಾಘ್ರನ ದೇಹದಲ್ಲಿ ಗಾಯಗಳು ಗೋಚರ : ಕೂಂಬಿಂಗ್ ನಿಂತಿಲ್ಲ, ಎಚ್ಚರ ಅಗತ್ಯ

February 14, 20233 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಫೆ.14 : ಪೊನ್ನಂಪೇಟೆ ತಾಲೂಕಿನ ಕೆ.ಬಾಡಗ ಗ್ರಾಮದ ಚೂರಿಕಾಡು ವ್ಯಾಪ್ತಿಯಲ್ಲಿ ಇಬ್ಬರು ವ್ಯಕ್ತಿಗಳ ಜೀವ ಬಲಿ ಪಡೆದ ವ್ಯಾಘ್ರನನ್ನು ಮಂಗಳವಾರ ಮಧ್ಯಾಹ್ನದ ವೇಳೆಗೆ ಜೀವಂತವಾಗಿ ಸೆರೆ ಹಿಡಿಯಲಾಗಿದೆ. ಮತ್ತಿಗೋಡು ಸಾಕಾನೆ ಶಿಬಿರದ ಅಭಿಮನ್ಯು ಆನೆಯ ಸಹಾಯದಿಂದ ಒಟ್ಟು 4 ಸಾಕಾನೆಗಳು, 150ಕ್ಕೂ ಹೆಚ್ಚು ಅರಣ್ಯ ಇಲಾಖೆಯ ನುರಿತ ಸಿಬ್ಬಂದಿಗಳು ನಾಣಚ್ಚಿ ಗೇಟ್ ಬಳಿ ಹುಲಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಮಂಗಳವಾರ ಬೆಳಿಗ್ಗೆ 6 ಗಂಟೆಯಿAದ ಸಾಕಾನೆ ಅಭಿಮನ್ಯು ನೇತೃತ್ವದಲ್ಲಿ ಚಿಕ್ಕಭೀಮ, ದೊಡ್ಡಭೀಮ, ಅಶ್ವತ್ಥಾಮ ಹಾಗೂ ಶ್ರೀಕಂಠ ಆನೆಗಳ ಸಹಾಯದಿಂದ ನಾಗರಹೊಳೆ ಅರಣ್ಯಕ್ಕೆ ಹೊಂದಿಕೊAಡಿರುವ ಪ್ರದೇಶಗಳಲ್ಲಿ ಕೂಂಬಿAಗ್ ಕಾರ್ಯಾಚರಣೆ ನಡೆಸಲಾಯಿತು. ಹುಲಿ ಹೆಜ್ಜೆಯ ಜಾಡು ಅರಸಿದ ಕೂಂಬಿAಗ್ ತಂಡ ಮಧ್ಯಾಹ್ನ 2.30ರ ವೇಳೆಗೆ ನಾಣಚ್ಚಿ ಗೇಟ್ ಬಳಿ ವ್ಯಾಘ್ರವನ್ನು ಮೊದಲಿಗೆ ಪತ್ತೆ ಹಚ್ಚಿತ್ತು. ಈ ವೇಳೆ ಮಾನವ ಜೀವ ಬಲಿ ಪಡೆದ ಹುಲಿಯ ಗುರುತನ್ನು ಖಾತರಿಪಡಿಸಲಾಯಿತು. ಬಳಿಕ ಟೈಗರ್ ಸ್ಕಾ÷್ವಡ್‌ನ ವೈದ್ಯಾಧಿಕಾರಿ ಡಾ.ರಂಜನ್ ಅವರು ಆನೆ ಮೇಲಿಂದ ಅರವಳಿಕೆ ಚುಚ್ಚು ಮದ್ದನ್ನು ಹುಲಿಗೆ ಡಾಟ್ ಮಾಡಿದರು. ಈ ವೇಳೆ ಹುಲಿ ಸ್ಥಳದಿಂದ ಕೆಲ ದೂರು ಓಡಿ ಕುಸಿದು ಬಿದ್ದಿದೆ. ಸಂಪೂರ್ಣವಾಗಿ ಪ್ರಜ್ಞೆ ತಪ್ಪಿರುವುದನ್ನು ಖಾತರಿಪಡಿಸಿಕೊಂಡು ಹುಲಿಯನ್ನು ಸೆರೆ ಹಿಡಿಯಲಾಯಿತು.
::: ಮೈಸೂರಿಗೆ ಸ್ಥಳಾಂತರ :::
ಇದೀಗ ಸೆರೆ ಸಿಕ್ಕ ಹೆಣ್ಣು ಹುಲಿ ಅಂದಾಜು 11 ರಿಂದ 12 ವರ್ಷದ್ದಾಗಿದೆ ಎಂದು ಅರಣ್ಯ ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ. ಹುಲಿಯ ದೇಹವನ್ನು ಪರಿಶೀಲನೆ ನಡೆಸಿದ ಸಂದರ್ಭ ಅದರ ಮುಂಗೈನ ಭುಜದ ಭಾಗದಲ್ಲಿ ಬಲವಾದ ಗಾಯದ ಗುರುತುಗಳು ಪತ್ತೆಯಾಗಿವೆ. ಮುಂಗೈನಲ್ಲಿ ಆಳವಾದ ಗಾಯಗಳಾಗಿದ್ದರಿಂದ ಕಾಡು ಪ್ರಾಣಿಗಳನ್ನು ಬೇಟೆಯಾಡಲು ಸಾಧ್ಯವಾಗದೇ, ಮಾನವನ ಮೇಲೆ ದಾಳಿ ನಡೆಸಿ ಜೀವ ಹಾನಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಸೆರೆಸಿಕ್ಕ ಹುಲಿಗೆ ಚಿಕಿತ್ಸೆಯ ಅಗತ್ಯವಿರುವ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಕೂರ್ಗಳ್ಳಿಯಲ್ಲಿರುವ ಹುಲಿ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು.
::: ಕೂಂಬಿಂಗ್ ಮುಂದುವರಿಯಲಿದೆ :::
ಇನ್ನು ಮಾನವ ಜೀವ ಬಲಿ ಪಡೆದ ಹುಲಿಯ ಬಗ್ಗೆ ಪ್ರಾಥಮಿಕ ಮಾಹಿತಿ ಆಧರಿಸಿ ಒಂದು ಹುಲಿಯನ್ನು ಸೆರೆ ಹಿಡಿದಿದ್ದರೂ, ಮುಂದಿನ 3-4 ದಿನಗಳ ಕಾಲ ಕೂಂಬಿAಗ್ ಕಾರ್ಯಾಚರಣೆ ಮುಂದುವರೆಯಲಿದೆ. ಆ ಮೂಲಕ ಮಾನವ ಜೀವ ಹಾನಿ ಮಾಡಿದ ಹುಲಿ ಇದುವೇ ಎಂದು ಖಚಿತವಾಗಲಿದೆ ಎಂದು ಕೊಡಗು ವೃತ್ತದ ಸಿಸಿಎಫ್ ನಿರಂಜನ್ ಮೂರ್ತಿ ಸ್ಪಷ್ಟಪಡಿಸಿದ್ದಾರೆ.
ಮಾನವ ಜೀವಹಾನಿಯಾದ ಸ್ಥಳಗಳು, ಹುಲಿ ಸಂಚರಿಸಿದ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಬೇಕಿದೆ ಎಂದು ಹೇಳಿದ ಸಿಸಿಎಫ್ ನಿರಂಜನ್ ಮೂರ್ತಿ, ಕಾಫಿ ತೋಟಗಳಲ್ಲಿ ಕಾಫಿ ಕುಯಿಲು, ತೋಟಗಳಲ್ಲಿ ಸಂಚರಿಸುವುದನ್ನು ಮೂರ್ನಾಲ್ಕು ದಿನಗಳ ಕಾಲ ನಿಷೇಧಿಸಬೇಕಿದೆ. ಈ ಅವಧಿಯಲ್ಲಿ ಕೂಂಬಿಂಗ್ ಕಾರ್ಯ ನಡೆಸಲಾಗುತ್ತದೆ ಎಂದರು.
4 ಸಾಕಾನೆಗಳು, 150 ಮಂದಿ ಅರಣ್ಯ ಇಲಾಖೆ ಸಿಬ್ಬಂದಿಗಳು ಮೇಲಾಧಿಕಾರಿಗಳ ನಿರ್ದೇಶನದಂತೆ ಕಾರ್ಯಾಚರಣೆ ನಡೆಸಿ ಹುಲಿಯನ್ನು ಸೆರೆ ಹಿಡಿದಿದ್ದಾರೆ ಎಂದು ನಾಗರಹೊಳೆ ಎಸಿಎಫ್ ಗೋಪಾಲ್ ಮಾಹಿತಿ ನೀಡಿದರು.
ಕಾರ್ಯಾಚರಣೆಯಲ್ಲಿ ವನ್ಯಜೀವಿ ವಲಯದ ಹಿರಿಯ ಅರಣ್ಯ ಅಧಿಕಾರಿಗಳಾದ ಕುಮಾರ್ ಪುಷ್ಕರ್, ಹರ್ಷ ಕುಮಾರ್, ನಾಗರಹೊಳೆ ಅರಣ್ಯದ ಝೀಶಾನ್, ವೈದ್ಯರಾದ ಡಾ.ಚಿಟ್ಟಿಯಪ್ಪ, ಡಾ.ರಮೇಶ್, ಕೊಡಗು ಸಿಸಿಎಫ್ ನಿರಂಜನ್ ಮೂರ್ತಿ, ಚಾಮರಾಜನಗರ, ಹೆಚ್.ಡಿ.ಕೋಟೆ, ತಿತಿಮತಿ ಅರಣ್ಯ ಸಿಬ್ಬಂದಿಗಳು, ಆರ್.ಆರ್.ಟಿ ತಂಡ, ಕೊಡಗು ಪೊಲೀಸ್ ಶ್ವಾನ ದಳ, ಕುಟ್ಟ ಪೊಲೀಸ್ ಠಾಣೆಯ ಸಿಬ್ಬಂದಿಗಳು ಮತ್ತು ಅಧಿಕಾರಿಗಳು ಪಾಲ್ಗೊಂಡಿದ್ದರು.
::: 154 ನೇ ಕಾರ್ಯಾಚರಣೆ :::
ಇನ್ನು ಮತ್ತಿಗೋಡು ಸಾಕಾನೆ ಶಿಬಿರದ ಕ್ಯಾಪ್ಟನ್ ಅಭಿಮನ್ಯು, ಹುಲಿ ಸೆರೆ ಕಾರ್ಯಾಚರಣೆಯಲ್ಲಿ ಕೂಂಬಿAಗ್ ನೇತೃತ್ವ ವಹಿಸುವ ಮೂಲಕ ಪ್ರಮುಖ ಪಾತ್ರವಹಿಸಿದ್ದ. ಇಂದಿನ ಹುಲಿ ಸೆರೆ ಕಾರ್ಯಾಚರಣೆ ಮೂಲಕ ಅಭಿಮನ್ಯು ತನ್ನ 154ನೇ ಯಶಸ್ವಿ ಕಾರ್ಯಾಚರಣೆ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರನಾದ.
::: ಆದೇಶ :::
ಎರಡು ಮಾನವ ಜೀವಗಳನ್ನು ಬಲಿ ಪಡೆದ ಹುಲಿಯನ್ನು ಗುರುತಿಸಿ ಸೆರೆ ಹಿಡಿಯುವಂತೆ ರಾಜ್ಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ವನ್ಯಜೀವ ವಿಭಾಗ) ಹಾಗೂ ಪ್ರಧಾನ ವನ್ಯಜೀವಿ ಪರಿಪಾಲಕರು ಫೆ.13ರಂದು ಆದೇಶ ಹೊರಡಿಸಿದ್ದರು. ಈ ಆದೇಶದಲ್ಲಿ ಮಾನವ ಜೀವ ಬಲಿ ಪಡೆದ ಹುಲಿಯನ್ನು ಸೆರೆ ಹಿಡಿಯುವುದಕ್ಕೆ ಮೊದಲ ಪ್ರಾಧಾನ್ಯತೆ ನೀಡಬೇಕು. ಕಾರ್ಯಾಚರಣೆ ಸಂದರ್ಭ ಹುಲಿ ಮರಳಿ ದಾಳಿಗೆ ಯತ್ನಿಸುವುದು, ಸೆರೆ ಅಸಾಧ್ಯವಾಗುವುದು ಅಥವಾ ಮತ್ತೊಂದು ಜೀವ ಬಲಿ ಪಡೆಯುವ ಎಲ್ಲಾ ಸಾಧ್ಯತೆಗಳು ಇದ್ದಲ್ಲಿ ಮಾತ್ರವೇ ಅಂತಿಮ ಪ್ರಯತ್ನವಾಗಿ ಗುಂಡಿಕ್ಕುವಂತೆ ಸ್ಪಷ್ಟ ನಿರ್ದೇಶನ ಹೊರಡಿಸಲಾಗಿತ್ತು. ಕಾರ್ಯಾಚರಣೆ ಸಂದರ್ಭ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಸೂಚಿಸಿರುವ ಎಲ್ಲಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆಯೂ ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು.
::: ದೇಹದಲ್ಲಿ ಗಾಯ :::
ಇಂದು ನಾಣಚ್ಚಿ ಭಾಗದಲ್ಲಿ ಸೆರೆಯಾದ ಹುಲಿಯ ದೇಹದಲ್ಲಿ ಗಂಭೀರ ಗಾಯದ ಗುರುತುಗಳು ಪತ್ತೆಯಾಗಿವೆ. ಇಂತಹ ಹುಲಿಗಳು ಸಹಜವಾಗಿಯೇ ಮಾನವನ ಜೊತೆ ಸಂಘರ್ಷ ನಡೆಸುತ್ತವೆ. ನಾಣಚ್ಚಿ ಹಾಡಿ ಸಹಿತ ಬಿ.ಡಿ. ಕುಪ್ಪೆ ವ್ಯಾಪ್ತಿಯಲ್ಲಿ ಮಾನವ ಸಂಘರ್ಷಕ್ಕೆ ಇಳಿದಿದ್ದ ಮತ್ತೊಂದು ಹುಲಿ ಸಹಿತ ಒಟ್ಟು 2 ಹುಲಿಗಳನ್ನು ಸೆರೆಹಿಡಿಯಲಾಗಿದೆ. ಈ ಹುಲಿಗಳನ್ನು ಕೂರ್ಗಳ್ಳಿ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.
ನಿರಂಜನ್ ಮೂರ್ತಿ
ಸಿಸಿಎಫ್ ಕೊಡಗು

Share. Facebook Twitter Pinterest LinkedIn Tumblr Email WhatsApp
Previous Articleಫೆ.19 ರಂದು ಬಾಳೆಯಡ ಕಿಶನ್ ಪೂವಯ್ಯ ರಚಿತ ಎರಡು ಪುಸ್ತಕಗಳು ಬಿಡುಗಡೆ
Next Article ಇದೇ ಅಲ್ಲವೇ ಅಭಿವೃದ್ಧಿಯೆಂದರೆ !

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.