Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ವಿಧಾನಸಭಾ ಚುನಾವಣೆ : ಅಂತರ ರಾಜ್ಯ ಗಡಿ ಪ್ರದೇಶದಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಿ : ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿಧಾನಸಭಾ ಚುನಾವಣೆ : ಅಂತರ ರಾಜ್ಯ ಗಡಿ ಪ್ರದೇಶದಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಿ : ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್

ಫೆಬ್ರವರಿ 17, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.17 : ಕೊಡಗು ಜಿಲ್ಲೆಗೆ ಹೊಂದಿಕೊಂಡಿರುವ ಅಂತರರಾಜ್ಯ ಗಡಿ ಪ್ರದೇಶದಲ್ಲಿ ಅಬಕಾರಿ ಅಕ್ರಮ ಚಟುವಟಿಕೆಗಳು ನಡೆಯದಂತೆ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಮಂಗಳೂರು ಅಬಕಾರಿ ವಿಭಾಗದ ಜಂಟಿ ನಿರ್ದೇಶಕರು ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಜೊತೆ ಸಮಾಲೋಚನಾ ಸಭೆಯು ನಡೆಯಿತು.
ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ವಿಧಾನಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಾದ ಸಂದರ್ಭದಲ್ಲಿ ಕೊಡಗು ಜಿಲ್ಲೆಗೆ ಹೊಂದಿಕೊಂಡಿರುವ ಕೇರಳ ರಾಜ್ಯ ಗಡಿಭಾಗದ ಕಾಸರಗೋಡು, ಕಣ್ಣೂರು ಮತ್ತು ವಯನಾಡು ಜಿಲ್ಲಾ ಗಡಿ ಪ್ರದೇಶದಲ್ಲಿ ಹೆಚ್ಚಿನ ನಿಗಾವಹಿಸಬೇಕಿದೆ. ಆ ನಿಟ್ಟಿನಲ್ಲಿ ಎರಡು ರಾಜ್ಯಗಳ ಅಬಕಾರಿ ಇಲಾಖೆಯ ಅಧಿಕಾರಿಗಳು ಅಗತ್ಯ ಸಹಕಾರ ನೀಡುವಂತೆ ಕೋರಿದರು.
ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳಿಗೆ ಅವಕಾಶ ಮಾಡದೆ ಸುಗಮ ಹಾಗೂ ಶಾಂತಿಯುತವಾಗಿ ವಿಧಾನಸಭೆ ಚುನಾವಣೆ ನಡೆಸಲು ಅಂತರ ರಾಜ್ಯ ಗಡಿ ಪ್ರದೇಶದಲ್ಲಿ ಹೆಚ್ಚಿನ ಕಣ್ಗಾವಲು ವಹಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಈಗಾಗಲೇ ಪೆರುಂಬಾಡಿಯಲ್ಲಿ ಅಬಕಾರಿ ಇಲಾಖೆಯ ಚೆಕ್‍ಪೋಸ್ಟ್ ಇದ್ದು, ಕುಟ್ಟ ಮತ್ತು ಮಾಕುಟ್ಟದಲ್ಲಿ ಕೋವಿಡ್ ಸಂದರ್ಭದಲ್ಲಿ ನಿರ್ಮಾಣವಾಗಿದ್ದ ಕಂಟೈನರ್ ಮಳಿಗೆಯನ್ನು ತಾತ್ಕಾಲಿಕವಾಗಿ ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ಇದೇ ಸಂದರ್ಭದಲ್ಲಿ ಸಲಹೆ ಮಾಡಿದರು.
ಅಬಕಾರಿ ಇಲಾಖೆಯ ಮಂಗಳೂರು ವಿಭಾಗದ ಜಂಟಿ ಆಯುಕ್ತರಾದ ಟಿ.ನಾಗರಾಜಪ್ಪ ಅವರು ಮಾತನಾಡಿ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಮಂಗಳೂರು ವಿಭಾಗಕ್ಕೆ ಸಂಬಂಧಿಸಿದಂತೆ ಅಂತರರಾಜ್ಯ ಗಡಿ ಹೊಂದಿಕೊಂಡಿರುವ ಕಾಸರಗೋಡು, ಕಣ್ಣೂರು, ವಯನಾಡು ಜಿಲ್ಲೆಗಳು ಬರಲಿದ್ದು, ಈ ಅಂತರರಾಜ್ಯ ಗಡಿ ಪ್ರದೇಶದಲ್ಲಿ ಎರಡು ರಾಜ್ಯಗಳ ಅಬಕಾರಿ ಇಲಾಖೆ ಅಧಿಕಾರಿಗಳು ‘ಜಂಟಿ ಕಾರ್ಯಾಚರಣೆ’ ಕೈಗೊಳ್ಳಬೇಕು ಎಂದರು.
ಯಾವುದೇ ರೀತಿಯ ಮಾದಕ ವಸ್ತುಗಳು, ಅಬಕಾರಿ ವಸ್ತುಗಳ ಕಳ್ಳಸಾಗಾಣಿಕೆಗೆ ಅವಕಾಶ ಮಾಡಬಾರದು. ಆ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಹೆಚ್ಚಿನ ನಿಗಾವಹಿಸಬೇಕು ಎಂದು ತಿಳಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ ಅವರು ಮಾತನಾಡಿ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಿಂದ ಗಡಿ ಪ್ರದೇಶದಲ್ಲಿ ಹೆಚ್ಚಿನ ನಿಗಾವಹಿಸಲಾಗುವುದು. ಪೊಲೀಸ್ ಇಲಾಖೆಯೊಂದಿಗೆ ಅಬಕಾರಿ ಇಲಾಖೆ ಅಧಿಕಾರಿಗಳು ಕೈಜೋಡಿಸಿ, ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ನಡೆಯದಂತೆ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಹೇಳಿದರು.
ಅಬಕಾರಿ ಇಲಾಖೆಯ ಕೊಡಗು ಜಿಲ್ಲಾ ಉಪ ಆಯುಕ್ತರಾದ ಜಗದೀಶ್ ನಾಯಕ್ ಅವರು ಮಾಹಿತಿ ನೀಡಿ, ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಕುಟ್ಟ, ಮಾಕುಟ್ಟ, ಕರಿಕೆ ಭಾಗದ ಚೆಕ್‍ಪೋಸ್ಟ್‍ಗಳು ಅಂತರರಾಜ್ಯ ಗಡಿ ವ್ಯಾಪ್ತಿಗೆ ಬರಲಿದ್ದು, ಈ ಚೆಕ್‍ಪೋಸ್ಟ್‍ಗಳಲ್ಲಿ ಯಾವುದೇ ರೀತಿಯ ಅಬಕಾರಿ ಅಕ್ರಮಗಳ ಚಟುವಟಿಕೆಗಳು ನಡೆಯದಂತೆ ಮುನ್ನೆಚ್ಚರ ವಹಿಸಲಾಗುತ್ತದೆ. ಆ ನಿಟ್ಟಿನಲ್ಲಿ ನೆರೆ ರಾಜ್ಯದವರು ಸಹಕಾರ ನೀಡುವಂತಾಗಬೇಕು ಎಂದರು.
ಚುನಾವಣಾ ಸಂದರ್ಭದಲ್ಲಿ ಅಬಕಾರಿ ಚೆಕ್ ಪೋಸ್ಟ್‍ನಲ್ಲಿ ಅಬಕಾರಿ ಇನ್ಸ್‍ಪೆಕ್ಟರ್, ಸಬ್ ಇನ್ಸ್‍ಪೆಕ್ಟರ್, ಆರು ಮಂದಿ ಕಾನ್ಸ್‍ಟೇಬಲ್‍ಗಳು ಕರ್ತವ್ಯ ನಿರ್ವಹಿಸಲಿದ್ದಾರೆ ಎಂದರು.
ಕೇರಳ ರಾಜ್ಯದ ಗಡಿ ಜಿಲ್ಲೆಯ ಉಪ ಅಬಕಾರಿ ಆಯುಕ್ತರಾದ ಕೆ.ಎಸ್.ಶಾಜಿ(ವಯನಾಡು), ಕೆ.ಪ್ರೇಮ ಕೃಷ್ಣ(ಕಣ್ಣೂರು), ಸಹಾಯಕ ಅಬಕಾರಿ ಆಯುಕ್ತರಾದ ಜಾಯ್ ಜೋಸೆಫ್(ಕಾಸರಗೋಡು) ಅವರು ಮಾತನಾಡಿ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಅಂತರರಾಜ್ಯ ಗಡಿ ಪ್ರದೇಶದಲ್ಲಿ ಯಾವುದೇ ರೀತಿಯ ಅಬಕಾರಿ ಅಕ್ರಮಗಳು ನಡೆಯದಂತೆ ಗಮನಹರಿಸಲಾಗುವುದು. ಆ ನಿಟ್ಟಿನಲ್ಲಿ ಶಾಂತಿಯುತ ಚುನಾವಣೆಗೆ ಸಹಕರಿಸಲಾಗುವುದು ಎಂದರು.
ಕೊಡಗು, ದಕ್ಷಿಣ ಕನ್ನಡ, ವಯನಾಡು, ಕಣ್ಣೂರು, ಕಾಸರಗೋಡು ಜಿಲ್ಲಾ ವ್ಯಾಪ್ತಿಯ ಅಬಕಾರಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಕೊಡಗು ಜಿಲ್ಲೆಯ ಅಬಕಾರಿ ಇಲಾಖೆಯ ಉಪ ಅಧೀಕ್ಷಕ ಲಕ್ಷ್ಮೀಶ ನಿರೂಪಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*

ಆಗಷ್ಟ್ 25, 2026

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ, NEWS DESK ಆ.24:ಕೊಡಗಿನಲ್ಲಿ ಮೋಡಬಿತ್ತನೆ ಮಾಡಿದರೆ ಕೃಷಿ ಫಸಲಿನ ಮೇಲೆ ದುಷ್ಪರಿಣಾಮ ಬೀರಲಿದ್ದು, ಸರ್ಕಾರ ಮೋಡಬಿತ್ತನೆ ಮಾಡಬಾರದು ಎಂದು…

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.