Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಐ–ಡಿಜಿಟಲ್ ಫೊರೆನ್ಸಿಕ್ಸ್ ಪ್ರವರ್ತಕ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ*
  • *ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*
  • *ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*
  • *ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಸಿದ್ದರಾಮಯ್ಯರ ವಿರುದ್ಧದ ಹೇಳಿಕೆ ಖಂಡನೀಯ : ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಅಸಮಾಧಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸಿದ್ದರಾಮಯ್ಯರ ವಿರುದ್ಧದ ಹೇಳಿಕೆ ಖಂಡನೀಯ : ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಅಸಮಾಧಾನ

ಫೆಬ್ರವರಿ 18, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.18 : ವಿರೋಧದ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಚಿವ ಅಶ್ವಥ ನಾರಾಯಣ ಅವರು ನೀಡಿರುವ ಹೇಳಿಕೆ ಖಂಡನೀಯವೆoದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಎಂ.ಎ.ಉಸ್ಮಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು ಸಿದ್ದರಾಮಯ್ಯರ ಕುರಿತು ಸಚಿವರು ನೀಡಿರುವ ಪ್ರಚೋದನಾಕಾರಿ ಹೇಳಿಕೆ ಬಿಜೆಪಿಯ ಹೊಡಿ, ಬಡಿ ಸಂಸ್ಕೃತಿಯನ್ನು ಪ್ರತಿಬಿಂಬಿಸಿದೆ ಎಂದು ಟೀಕಿಸಿದ್ದಾರೆ.
ರಾಜಕೀಯ ಲಾಭಕ್ಕಾಗಿ ಇತಿಹಾಸವನ್ನು ಕೆಣಕಿ ಕ್ಷುಲ್ಲಕ ರಾಜಕಾರಣವನ್ನು ಮಾಡಲಾಗುತ್ತಿದೆ. ದೇಶದ ಭವಿಷ್ಯಕ್ಕೆ ಏನು ಬೇಕು ಎಂದು ಚಿಂತನೆ ಮಾಡದೆ ಆಗಿ ಹೋದ ಘಟನಾವಳಿಗಳನ್ನು ತಿರುಚಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲಾಗುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಇರುವ ಜನಪ್ರಿಯತೆಯನ್ನು ಸಹಿಸಲಾಗದೆ ಸೋಲಿನ ಹತಾಶೆಯಲ್ಲಿರುವ ಬಿಜೆಪಿ ಮುಖಂಡರು ಬಾಲಿಶ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಸಚಿವ ಅಶ್ವಥ ನಾರಾಯಣ ಅವರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಮುಖ್ಯಮಂತ್ರಿಗಳು ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿದ್ದಾರೆ.
::: ಕೊಡಗಿನ ನಿರ್ಲಕ್ಷ್ಯ :::
ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರು ಮಂಡಿಸಿರುವ ಬಜೆಟ್ ನಲ್ಲಿ ಕೊಡಗು ಜಿಲ್ಲೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಕೇವಲ 100 ಕೋಟಿ ರೂ.ಗಳನ್ನು ನೀಡಿ ಕಣ್ಣೊರೆಸುವ ತಂತ್ರ ಮಾಡಲಾಗಿದೆ ಎಂದು ಉಸ್ಮಾನ್ ಆರೋಪಿಸಿದ್ದಾರೆ.
ಜಿಲ್ಲೆಯ ಎಲ್ಲಾ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ಅಲ್ಪ ಪ್ರಮಾಣದ ಅನುದಾನದಿಂದ ಅಭಿವೃದ್ಧಿ ಕಾರ್ಯ ಸಾಧ್ಯವಿಲ್ಲ. ಇದು ಚುನಾವಣಾ ಗಿಮಿಕ್ ನ ಪ್ಯಾಕೇಜ್ ಆಗಿದ್ದು, ಈ ಬಾರಿ ಜಿಲ್ಲೆಯ ಮತದಾರರನ್ನು ಮೂರ್ಖರನ್ನಾಗಿ ಮಾಡಲು ಸಾಧ್ಯವಿಲ್ಲವೆಂದು ಅಭಿಪ್ರಾಯಪಟ್ಟಿದ್ದಾರೆ.
ಬಿಜೆಪಿಗೆ ಸರ್ಕಾರ ರಚನೆ ಮಾಡಲು ಮಾತ್ರ ಕೊಡಗಿನ ಶಾಸಕರುಗಳಿದ್ದರೆ ಸಾಕು, ಆದರೆ ಕೊಡಗಿನ ಅಭಿವೃದ್ಧಿ ಬೇಡ ಎನ್ನುವುದಕ್ಕೆ ಭರವಸೆಗಳನ್ನು ಹುಸಿ ಮಾಡಿದ ಈ ಬಜೆಟ್ ಸಾಕ್ಷಿಯಾಗಿದೆ ಎಂದು ಟೀಕಿಸಿದ್ದಾರೆ.
ತಕ್ಷಣ ಸರ್ಕಾರ ಜಿಲ್ಲೆಯ ರಸ್ತೆ ಹಾಗೂ ಸೇತುವೆಗಳ ಸಮಗ್ರ ಅಭಿವೃದ್ಧಿಗೆ ಒಂದು ಸಾವಿರ ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕೆಂದು ಉಸ್ಮಾನ್ ಒತ್ತಾಯಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಐ–ಡಿಜಿಟಲ್ ಫೊರೆನ್ಸಿಕ್ಸ್ ಪ್ರವರ್ತಕ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ*

ಆಗಷ್ಟ್ 25, 2026

*ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*

ಆಗಷ್ಟ್ 25, 2026

*ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*

ಆಗಷ್ಟ್ 25, 2026

*ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*

ಆಗಷ್ಟ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.25: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕುಗೊಂಡು ವ್ಯಾಪಕವಾಗಿ ಭಾರೀ ಗಾಳಿ ಹಾಗೂ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ,…

*ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*

ಆಗಷ್ಟ್ 25, 2026

*ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*

ಆಗಷ್ಟ್ 25, 2026

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.