Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ರೋಟರಿಯಿಂದ ಮಾಜಿ ಸೇನಾಧಿಕಾರಿಗಳಿಗೆ ಸನ್ಮಾನ :  ಭಾರತದ ಹಿರಿಮೆಯನ್ನು ಪ್ರತೀಯೋವ೯ರೂ ಗೌರವಿಸಿ : ಪ್ರಕಾಶ್ ಕಾರಂತ್ ಕರೆ
ಇತ್ತೀಚಿನ ಸುದ್ದಿಗಳು

ರೋಟರಿಯಿಂದ ಮಾಜಿ ಸೇನಾಧಿಕಾರಿಗಳಿಗೆ ಸನ್ಮಾನ :  ಭಾರತದ ಹಿರಿಮೆಯನ್ನು ಪ್ರತೀಯೋವ೯ರೂ ಗೌರವಿಸಿ : ಪ್ರಕಾಶ್ ಕಾರಂತ್ ಕರೆ

February 25, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಫೆ.25 :  ದೇಶಪ್ರೇಮ ಎಂಬುದು ಪ್ರತೀಯೋವ೯ ಭಾರತೀಯನ ಮನಸ್ಸಿನಲ್ಲಿಯೂ ಹಾಸುಹೊಕ್ಕಾಗಬೇಕು. ಭಾರತ ದೇಶದ ಹಿರಿಮೆಯನ್ನು ಪ್ರತೀಯೋವ೯ರೂ ಗೌರವಿಸುವಂತಾಗಬೇಕು ಎಂದು ರೋಟರಿ ಜಿಲ್ಲೆ 3181 ನ ಗವನ೯ರ್ ಪ್ರಕಾಶ್ ಕಾರಂತ್ ಹೇಳಿದ್ದಾರೆ.

ಮಡಿಕೇರಿಯ ಜನರಲ್ ತಿಮ್ಮಯ್ಯ ಮ್ಯೂಸಿಯಂನಲ್ಲಿರುವ ಅಮರ್ ಜವಾನ್ ಸ್ಮಾರಕದಲ್ಲಿ ಆಯೋಜಿತ ದೇಶಪ್ರೇಮ ಕುರಿತ ರೋಟರಿ ಜಿಲ್ಲಾ ಕಾಯ೯ಕ್ರಮದಲ್ಲಿ ನಿವೃತ್ತ ಸೇನಾಧಿಕಾರಿಗಳನ್ನು ಸನ್ಮಾನಿಸಿ ಮಾತನಾಡಿದ ಪ್ರಕಾಶ್ ಕಾರಂತ್, ಯುವಪೀಳಿಗೆಯಲ್ಲಿ ದೇಶಪ್ರೇಮ ಮೂಡಿಸುವಂತ ಕಾಯ೯ಕ್ರಮಗಳು ಹೆಚ್ಚು ಹೆಚ್ಚು ಆಯೋಜಿತವಾಗಬೇಕು. ಭಾರತದ ಅಪ್ರತಿಮ ಸೇನಾಧಿಕಾರಿಗಳನ್ನು ಯುವಪೀಳಿಗೆಗೆ ಪರಿಚಯಿಸುವ ಯೋಜನೆಗಳು ನಡೆಯಬೇಕು ಎಂದರಲ್ಲದೇ, ಈ ನಿಟ್ಟಿನಲ್ಲಿ ರೋಟರಿ ಜಿಲ್ಲೆ 3181 ಮಂಗಳೂರಿನಿಂದ ಮೈಸೂರಿನವರೆಗೆ ದೇಶಪ್ರೇಮ ಬಿಂಬಿಸುವ ಸಂದೇಶ ಸಾರುವ ವಾಹನ ಜಾಥಾ ಆಯೋಜಿಸಿದ್ದು, 30 ರೋಟರಿ ಸದಸ್ಯರು ಪಾಲ್ಗೊಂಡಿದ್ದಾರೆ ಎಂದರು.

ಭಾರತದ ಅಪ್ರತಿಮ ಸೇನಾ ನಾಯಕ ಜನರಲ್ ತಿಮ್ಮಯ್ಯ ನೆನಪುಗಳನ್ನು ಹೊಂದಿರುವ ಭವನವಾದ ತಿಮ್ಮಯ್ಯ ಮ್ಯೂಸಿಯಂಗೆ ರೋಟರಿ ಸದಸ್ಯರ ಭೇಟಿ ಸಾಥ೯ಕತೆ ಮೂಡಿಸಿದೆ. ಪ್ರತೀಯೋವ೯ ದೇಶಪ್ರೇಮಿಯೂ ಈ ಸ್ಮಾರಕ ಭವನಕ್ಕೆ ಭೇಟಿ ನೀಡಿದಾಗ ಖಂಡಿತಾ ದೇಶಪ್ರೇಮ ವೃದ್ಧಿಸುತ್ತದೆ ಎಂದೂ ಪ್ರಕಾಶ್ ಕಾರಂತ್ ಹೇಳಿದರು.

ಮಡಿಕೇರಿ ರೋಟರಿ ಸಂಸ್ಥೆ, ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ , ಮಡಿಕೇರಿ ರೋಟರಿ ವುಡ್ಸ್ ವತಿಯಿಂದ ನಿವೃತ್ತ ಮೇಜರ್ ವೆಂಕಟಗಿರಿ ಮತ್ತು ಗೌಡಂಡ ಸುಬೇದಾರ್ ಮೇಜರ್ ತಿಮ್ಮಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ವಿರಾಜಪೇಟೆಯ ಮೇಜರ್ ಎಸ್.ವೆಂಕಟಗಿರಿ, ಓವ೯ ಸೈನಿಕ ಪ್ರಾಣ ಕೊಡಲೆಂದೇ ಸೈನ್ಯಕ್ಕೆ ಸೇರುವುದಿಲ್ಲ. ಆದರೆ ಸೇನೆ ಸೇರಿದ ನಂತರ ತನ್ನ ದೇಶಕ್ಕಾಗಿ ನಿಜವಾದ ಸೈನಿಕ ಪ್ರಾಣ ನೀಡಲೂ ಹಿಂಜರಿಯುವುದಿಲ್ಲ. ಇದೇ ನಿಜವಾದ ದೇಶಭಕ್ತಿ ಎಂದರು. ಯೋಗೇಂದ್ರ ಸಿಂಗ್ ಯಾದವ್ ಎಂಬ 18 ವಷ೯ದ ಯುವಕ ತನಗೆ 18 ಗುಂಡಿನೇಟುಗಳು ಕಾಲಿಗೆ ಬಿದ್ದಾಗಲೂ ದೇಶಕ್ಕಾಗಿ ಹೋರಾಡಿದ. ಚೀನಾ ಗಡಿಯ ತವಾಂಗ್ ನಲ್ಲಿ ಭಾರತೀಯ ಸೈನಿಕರು ಕ್ಷಣಕ್ಷಣವೂ ಪ್ರಾಣ ರಕ್ಷಣೆ ಮಾಡುತ್ತಲೇ ದೇಶ ರಕ್ಷಣೆ ಮಾಡುತ್ತಾ ಬಂದಿದ್ದಾರೆ. ಇಂಥ ವೀರ ಸೈನಿಕ ರು ನಮಗೆ ಆದಶ೯ವಾಗಬೇಕೆಂದು ಹೇಳಿದರು. ನಮ್ಮ ದೇಶ ನಮಗೆ ಅನ್ನ ನೀಡುವ ತಾಯಿ ಎಂಬ ಮನೋಭಾವ ನಮ್ಮಲ್ಲಿ ಮೂಡಬೇಕೆಂದು ವೆಂಕಟಗಿರಿ ಹೇಳಿದರು. ರೋಟರಿಯಂಥ ಸಂಸ್ಥೆಗಳು ಸಾಮಾಜಿಕ ಸೇವಾ ಕಾಯ೯ಗಳ ಮೂಲಕ ದೇಶಕ್ಕಾಗಿ ಮಹತ್ವದ ಕೊಡುಗೆ ನೀಡುತ್ತಿದೆ ಎಂದೂ ಮೇಜರ್ ವೆಂಕಟಗಿರಿ ಶ್ಲಾಘೀಸಿದರು.

ನಿವೃತ್ತ ಸುಬೇದಾರ್ ಮೇಜರ್ ಗೌಡಂಡ ತಿಮ್ಮಯ್ಯ ಮಾತನಾಡಿ, ಭಾರತೀಯರು ಸುರಕ್ಷಿತ ಜೀವನ ನಡೆಸುವಲ್ಲಿ ನಮ್ಮ ಹೆಮ್ಮೆಯ ವೀರಸೈನಿಕರ ಕೊಡುಗೆಯಿದೆ ಎಂದರು. ಪ್ರಸ್ತುತ ಭಾರತಕ್ಕೆ ದೇಶದ ಹೊರಗಿನ ಶತ್ರುಗಳಿಗಿಂತ ದೇಶದ ಒಳಗಿನ ಗುಪ್ತ ಶತ್ರುಗಳ ವಿರುದ್ದ ಹೋರಾಡುವುದೇ ಸವಾಲಾಗಿದೆ ಎಂದೂ ಅವರು ಹೇಳಿದರು.

ಕಾಶ್ಮೀರದಲ್ಲಿ ಭಾರತೀಯ ಸೈನಿಕರ ಅನೇಕ ವಷ೯ಗಳ ಪರಿಶ್ರಮದಿಂದಾಗಿಯೇ ಇಂದು ಅಲ್ಲಿನವರು ನೆಮ್ಮದಿಯ ಜೀವನ ನಡೆಸಲು ಕಾರಣವಾಗಿದೆ ಎಂದರಲ್ಲದೇ, ತಾನು ಕಾಶ್ಮೀರದಲ್ಲಿ ಸಲ್ಲಿಸಿದ ಸೇನಾ ಕತ೯ವ್ಯದ ದಿನಗಳು, ಪಂಡಿತರ ಹತ್ಯೆಯ ಘಟನೆಗಳನ್ನು ಸ್ಮರಿಸಿಕೊಂಡರು.

ಕಾಯ೯ಕ್ರಮದಲ್ಲಿ ರೋಟರಿ ಸಹಾಯಕ ಗವನ೯ರ್ ರತನ್ ತಿಮ್ಮಯ್ಯ ಸ್ವಾಗತಿಸಿ, ಪಬ್ಲಿಕ್ ಇಮೇಜ್ ಜಿಲ್ಲಾ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ. ನಿರೂಪಿಸಿ ವಂದಿಸಿದರು. ಮಡಿಕೇರಿ ರೋಟರಿ ಅಧ್ಯಕ್ಷ ಕೆ.ಕಾಯ೯ಪ್ಪ, ಮಿಸ್ಟಿ ಹಿಲ್ಸ್ ಅಧ್ಯಕ್ಷ ಪ್ರಸಾದ್ ಗೌಡ, ಕಾಯ೯ದಶಿ೯ ಪ್ರಮೋದ್ ಕುಮಾರ್ ರೈ, ರೋಟರಿ ವುಡ್ಸ್ ಕಾಯ೯ದಶಿ೯ ವಸಂತ್ ಕುಮಾರ್ ನಿವ೯ಹಿಸಿದರು.

ಈ ಸಂದಭ೯ ರೋಟರಿ ಜಿಲ್ಲೆಯ ಕಾಯ೯ದಶಿ೯ ನಾರಾಯಣ ಹೆಗಡೆ, ನಿಯೋಜಿತ ಗವನ೯ರ್ ವಿಕ್ರಂ ದತ್ತ, ಮಾಜಿ ಗವನ೯ರ್ ಗಳಾದ ಡಾ.ರವಿ ಅಪ್ಪಾಜಿ, ಮಾತಂಡ ಸುರೇಶ್ ಚಂಗಪ್ಪ, ರೋಟರಿ ಜಿಲ್ಲಾ ಪ್ರಮುಖರಾದ ಸತೀಶ್ ಬೊಳಾರ್, ಜಾಥಾ ಸಮಿತಿ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ, ಆಯೋಜಕ ಸಂಸ್ಶೆಯಾದ ಬೈಕಂಪಾಡಿ ರೋಟರಿ ಸಂಸ್ಥೆಯ ಅಧ್ಯಕ್ಷ ಅಶೋಕ್, ಬಿ.ಜಿ. ಅನಂತಶಯನ, ಮೋಹನ್ ಪ್ರಭು, ಡಿ.ಎಂ.ತಿಲಕ್, ಬಿ.ಕೆ. ರವೀಂದ್ರರೈ, ಕೆ.ಕೆ.ವಿಶ್ವನಾಥ್, ಸೋಮಣ್ಣ, ಪಿ.ವಿ. ಅಶೋಕ್ , ಗೀತಾಗಿರೀಶ್, ಇನ್ನರ್ ವೀಲ್ ಕಾಯ೯ದಶಿ೯ ಲಲಿತಾರಾಘವನ್, ನಿದೇ೯ಶಕಿಯರಾದ ಮಲ್ಲಿಗೆಪೈ, ಪಾವ೯ತಿ ಚೀಯಣ್ಣ ಸೇರಿದಂತೆ ರೋಟರಿ ಸದಸ್ಯರು ಹಾಜರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Articleಚೆಟ್ಟಳ್ಳಿ : ಶ್ರೀ ಅಯ್ಯಪ್ಪ ದೇವಾಲಯದಲ್ಲಿ ಫೆ.28 ರಂದು ಮಂಡಳ ಪೂಜೆ
Next Article ಸರ್ಕಾರಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ : ಸುಂಟಿಕೊಪ್ಪದಲ್ಲಿ ವಿವಿಧ ಇಲಾಖೆಗಳಿಂದ ಬೆಂಬಲ

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.