Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಸ್ವಾಥ೯ ಮೀರಿದ ಸೇವಾ ಗುಣಕ್ಕೆ ವಿಶ್ವದಲ್ಲಿಯೇ ರೋಟರಿ ಮಾದರಿ : ಎಚ್.ಟಿ.ಅನಿಲ್
ಇತ್ತೀಚಿನ ಸುದ್ದಿಗಳು

ಸ್ವಾಥ೯ ಮೀರಿದ ಸೇವಾ ಗುಣಕ್ಕೆ ವಿಶ್ವದಲ್ಲಿಯೇ ರೋಟರಿ ಮಾದರಿ : ಎಚ್.ಟಿ.ಅನಿಲ್

March 2, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮಾ.2  : ಸ್ವಾಥ೯ ಮೀರಿದ ಸೇವಾ ಗುಣಗಳಿಗೆ ರೋಟರಿ ವಿಶ್ವದಲ್ಲಿಯೇ ಮಾದರಿಯಾಗಿದ್ದು, ಹೀಗಾಗಿಯೇ ವಿಶ್ವವ್ಯಾಪಿ 12 ಲಕ್ಷ ಸದಸ್ಯರು ರೋಟರಿ ಸಂಸ್ಥೆಯಲ್ಲಿನ ವಿವಿಧ ಸಾಮಾಜಿಕ ಸೇವಾ ಕಾಯ೯ಗಳಲ್ಲಿ ಸಕ್ರಿಯವಾಗಿ ನಿರತರಾಗಿದ್ದಾರೆ ಎಂದು ರೋಟರಿ ಜಿಲ್ಲೆ 3181 ರ ಪಬ್ಲಿಕ್ ಇಮೇಜ್ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ. ಹೇಳಿದ್ದಾರೆ.

ನಗರದ ರೋಟರಿ ಸಭಾಂಗಣದಲ್ಲಿ ಮಡಿಕೇರಿ ರೋಟರಿ ವುಡ್ಸ್ ವತಿಯಿಂದ ರೋಟರಿ ಸಂಸ್ಥೆಯ 118 ನೇ ವಾಷಿ೯ಕೋತ್ಸವ ಸಂದಭ೯ ಮಾತನಾಡಿದ ಅನಿಲ್, 1905 ರ ಫೆಬ್ರವರಿ 23 ರಂದು ಚಿಕಾಗೋದ ಪುಟ್ಟ ಕೋಣೆಯಲ್ಲಿ ಪೌಲ್ ಹಾರಿಸ್ ಮತ್ತು ವಿವಿಧ ವೖತ್ತಿಯಲ್ಲಿನ ಅವರ 4 ಸ್ನೇಹಿತರಿಂದ ಪ್ರಾರಂಭಗೊಂಡ ರೋಟರಿ ಸಂಸ್ಥೆಯು ಇದೀಗ ಜಗತ್ತಿನ ಅತೀ ದೊಡ್ಡ ಸಾಮಾಜಿಕ ಸೇವಾ ಸಂಸ್ಥೆಯಾಗಿ ಬೆಳೆದಿದೆ. ಆರೋಗ್ಯ, ಶಿಕ್ಷಣ, ಪರಿಸರ ಸಂರಕ್ಷಣೆ ಮುಂತಾದ ಕಾಯ೯ಯೋಜನೆಗಳಲ್ಲಿ ರೋಟರಿ ಕೆಲಸ ಗಮನಾಹ೯ವಾದದ್ದು ಎಂದರು.

225 ದೇಶಗಳ 36 ಸಾವಿರ ರೋಟರಿ ಸಂಸ್ಥೆಗಳಲ್ಲಿ ಪ್ರತೀ ವಾರವೂ ಒಂದಲ್ಲ ಒಂದು ಸಾಮಾಜಿಕ ಸೇವಾ ಕಾಯ೯ಯೋಜನೆ ಜರುಗುತ್ತಿದ್ದು ಹೀಗಾಗಿಯೇ ವಿಶ್ವವ್ಯಾಪಿ ರೋಟರಿಯು ವಿಶ್ವಸಾಹ೯ ಮತ್ತು ಪಾರದಶ೯ಕ ಕಾಯ೯ಯೋಜನೆಗಳಿಗೆ ಹೆಸರುವಾಸಿಯಾಗಿದೆ ಎಂದು ಹೇಳಿದ ಅನಿಲ್, 118 ವಷ೯ಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅಂತರರಾಷ್ಟ್ರೀಯ ರೋಟರಿಗೆ ಜೆನಿಫರ್ ಜೋನ್ಸ್ ಮೂಲಕ ಪ್ರಥಮ ಬಾರಿಗೆ ಮಹಿಳಾ ಅಧ್ಯಕ್ಷೆಯಾಗಿರುವುದು ಮಹಿಳೆಯರಿಗೆ ಸಂದ ಗೌರವ ಎಂದೂ ಶ್ಲಾಘಿಸಿದರು. ಬೇರೆಲ್ಲಾ ಸಂಸ್ಥೆಗಳಿಗೆ ಹೋಲಿಸಿದರೆ ಪ್ರತೀ ವಷ೯ ಕಡ್ಡಾಯವಾಗಿ ರೋಟರಿಯಲ್ಲಿ ಅಧಿಕಾರ ಹಸ್ತಾಂತರವಾಗಲೇಬೇಕು. ಹುದ್ದೆ ಇರುವ ಒಂದೇ ವಷ೯ದಲ್ಲಿ ಹುದ್ದೆಯಲ್ಲಿರುವವರು ತಮ್ಮ ಸಾಮಥ್ಯ೯ ತೋರಬೇಕು. ಹೀಗಾಗಿಯೇ ಇತರೆಲ್ಲಾ ಸಂಸ್ಥೆಗಳಿಗಿಂತ ಬಿನ್ನವಾಗಿ, ವಿಶಿಷ್ಟವಾಗಿ ರೋಟರಿಯ ಕಾಯ೯ಕ್ರಮಗಳು ಜನಮನ್ನಣೆ ಪಡೆಯಲು ಸಾಧ್ಯವಾಗಿದೆ ಎಂದು ಅನಿಲ್ ಹೇಳಿದರು.

ರೋಟರಿ ವುಡ್ಸ್ ಗೌರವ ಸಲಹೆಗಾರ ಬಿ.ಜಿ.ಅನಂತಶಯನ ದೇಶಭಕ್ತಿ ಕುರಿತು ಮಾತನಾಡಿ, ಸೈನ್ಯದಲ್ಲಿರುವಂತೆ ರೋಟರಿಯಲ್ಲಿಯೂ ಸಮಯಪಾಲನೆ ಮತ್ತು ಶಿಸ್ತಿಗೆ ಪ್ರಾಮುಖ್ಯತೆ ಇದೆ. ಇದರಿಂದಾಗಿ ರೋಟರಿ ಸಂಸ್ಥೆಗಳಲ್ಲಿ ಉದ್ದೇಶಿತ ರೀತಿಯಲ್ಲಿ ಕಾಯ೯ಕ್ರಮಗಳು ಯಶಸ್ವಿಯಾಗಿ ಜರುಗುತ್ತದೆ ಎಂದರು.

ಶಿಸ್ತು ಪಾಲನೆಗೆ ಹೆಸರಾದ ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಅವರ ಜೀವನದ ಕೆಲವು ಮಹತ್ವದ ಘಟನೆಗಳನ್ನೂ ಅನಂತಶಯನ ಈ ಸಂದಭ೯ ಸ್ಮರಿಸಿಕೊಂಡು ಇಂಥ ಮಹಾನ್ ಸೇನಾಧಿಕಾರಿಗಳ ಜೀವನ ಕ್ರಮ ಪ್ರತೀಯೋವ೯ರಿಗೂ ಆದಶ೯ಪ್ರಾಯ ಎಂದರು.

ರೋಟರಿ ವುಡ್ಸ್ ಅಧ್ಯಕ್ಷ ಎಸ್.ಎಸ್.ಸಂಪತ್ ಕುಮಾರ್ ಮಾತನಾಡಿ, ರೋಟರಿಯಂಥ ಮಹಾನ್ ಸಂಸ್ಥೆಗೆ 118 ವಷ೯ಗಳು ತುಂಬಿದ ಸಂಭ್ರಮವನ್ನು ಸಂಸ್ಥೆಯ ಸದಸ್ಯರೆಲ್ಲಾ ಒಗ್ಗೂಡಿ ಆಚರಿಸುವುದು ಮಹತ್ವದ್ದಾಗಿದೆ. ಇಂಥ ಆಚರಣೆಗಳು ರೋಟರಿ ಕುರಿತು ಮತ್ತಷ್ಟು ಬದ್ದತೆಗೆ ಕಾರಣವಾಗುತ್ತದೆ ಎಂದರು.

ರೋಟರಿ ವುಡ್ಸ್ ಕಾಯ೯ದಶಿ೯ ವಸಂತ್ ಕುಮಾರ್ ವಂದಿಸಿದರು. ರೋಟರಿ ವುಡ್ಸ್ ನಿದೇ೯ಶಕರು, ಸದಸ್ಯರು ಹಾಜರಿದ್ದು ರೋಟರಿ ಸಂಸ್ಥಾಪಕ ಪೌಲ್ ಹಾರಿಸ್ ಭಾವಚಿತ್ರಕ್ಕೆ ನಮನ ಸಲ್ಲಿಸಿ ಕೇಕ್ ಕತ್ತರಿಸುವ ಮೂಲಕ ಸಂಸ್ಥಾಪಕರನ್ನು ಗೌರವಪೂವ೯ಕವಾಗಿ ಸ್ಮರಿಸಿದರು. ರಂಜಿತ್ ಕಿಗ್ಗಾಲು, ಪ್ರಶಾಂತ್, ಬೋಪಣ್ಣ ಕಾಯ೯ಕ್ರಮ ನಿವ೯ಹಿಸಿದರು.  

Share. Facebook Twitter Pinterest LinkedIn Tumblr Email WhatsApp
Previous Articleನಾಪೋಕ್ಲು- ಕೊಳಕೇರಿ ಮುಖ್ಯ ರಸ್ತೆಯಲ್ಲಿ ಖಾಸಗಿ ಬಸ್ ಪಲ್ಟಿ
Next Article ಚಾಕುವಿನಿಂದ ಇರಿದು ವ್ಯಕ್ತಿಯ ಹತ್ಯೆ : ಹರಿಹರ ಗ್ರಾಮದಲ್ಲಿ ಘಟನೆ 

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.