Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಕುಂಬಳಚೇರಿ : ಮಾ.3 ರಿಂದ ಶ್ರೀ ವಯನಾಟ್ ಕುಲವನ್ ದೈವಕಟ್ಟು ಮಹೋತ್ಸವ
ಇತ್ತೀಚಿನ ಸುದ್ದಿಗಳು

ಕುಂಬಳಚೇರಿ : ಮಾ.3 ರಿಂದ ಶ್ರೀ ವಯನಾಟ್ ಕುಲವನ್ ದೈವಕಟ್ಟು ಮಹೋತ್ಸವ

March 2, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ನಾಪೋಕ್ಲು ಮಾ.1 : ಪೆರಾಜೆ ಗ್ರಾಮದ ಕುಂಬಳಚೇರಿಯ ಶ್ರೀ ವೈನಾಟ್ ಕುಲವನ್ ದೈವಸ್ಥಾನದ ಶ್ರೀ ವಯನಾಟ್ ಕುಲವನ್ ದೈವಕಟ್ಟು ಮಹೋತ್ಸವವು  ಮಾ.3 ರಿಂದ ಮಾ.5ರ ವರೆಗೆ ಜರುಗಲಿದೆ.

ಸುಮಾರು 300 ವರ್ಷಗಳ ನಂತರ 50ಲಕ್ಷ ರೂ.ವೆಚ್ಚದಲ್ಲಿ ಅದ್ಧೂರಿ ಮಹೋತ್ಸವ ಜರುಗಲಿದ್ದು, ಈ ದೈವತಾ ಕಾರ್ಯದಲ್ಲಿ 50 ಸಾವಿರಕ್ಕೂ ಅಧಿಕ ಭಕ್ತರು ಪಾಲ್ಗೊಳ್ಳಲಿದ್ದಾರೆ ಎಂದು ವಿವಿಧ ಸಮಿತಿಗಳ ಆಶಯವಾಗಿದೆ.
ಜಾತ್ರಾ ಮಹೋತ್ಸವದ ಅಂಗವಾಗಿ ಪೆರಾಜೆಯ ಶ್ರೀಶಾಸ್ತಾವು ದೇವಸ್ಥಾನದಿಂದ ಮಾ.3ರಂದು ಬೆಳಿಗ್ಗೆ 7.30ಕ್ಕೆ ಹಸಿರು ವಾಣಿ ಮೆರವಣಿಗೆ ಹೊರಡಲಿದೆ. ಬಳಿಕ ಉಗ್ರಾಣ ತುಂಬುವ ಕಾರ್ಯಕ್ರಮ ನಡೆಯಲಿದೆ.

11 ಗಂಟೆಯಿಂದ ಧಾರ್ಮಿಕ ಸಭೆ ನಡೆಯಲಿದ್ದು, ಸಂಜೆ 5 ಗಂಟೆಯಿಂದ ದೈವಿಕ ಕಾರ್ಯಕ್ರಮ ಆರಂಭಗೊಳ್ಳಲಿದೆ. ದೈವಗಳ ಕೂಡುವಿಕೆ, ಶ್ರೀಪೊಟ್ಟನ್ ದೈವ ಕಾರ್ಯಕ್ರಮ ನಡೆಯಲಿದೆ.
ಮಾ.4 ರಂದು ಬೆಳಿಗ್ಗೆ 7 ಗಂಟೆಯಿಂದ ಶ್ರೀ ಕೊರತಿಯಮ್ಮ ದೈವ, 8.30 ರಿಂದ ಚಾಮುಂಡಿ ದೈವ, 9.30 ರಿಂದ ಶ್ರೀ ವಿಷ್ಣುಮೂರ್ತಿ ದೈವ, 12ರಿಂದ ಶ್ರೀ ಗುಳಿಗ ದೈವದ ಕೋಲ, ಮಧ್ಯಾಹ್ನ 3 ಗಂಟೆಯಿಂದ ಶ್ರೀಕಾರ್ನೋನ್ ದೈವದ ವೆಳ್ಳಾಟಂ, 5 ರಿಂದ ಶ್ರೀ ಕೊರಚನ್ ದೈವದ ವೆಳ್ಳಾಟಂ, 7 ರಿಂದ ಶ್ರೀ ಕಂಡನಾರ್ ಕೇಳನ್ ದೈವದ ವೆಳ್ಲಾಟಂ, ಲಾಟ ವಿಷ್ಣುಮೂರ್ತಿ ದೈವಗದ ಆರಂಭ ವೈ ನಾಟ್ ಕುಲವನ್ ದೈವದ ವೆಳ್ಳಾಟಂ, ರಾತ್ರಿ12.30 ರಿಂದ ಶ್ರೀವಿಷ್ಣುಮೂರ್ತಿದೈವದ ಕೋಲ ಆರಂಭವಾಗಲಿದೆ. 1 ಗಂಟೆಯಿಂದ ಶ್ರೀ ವಯನಾಟ್ ಕುಲವನ್ ದೈವದ ವೆಳ್ಲಾಟಂ ನಡೆಯಲಿದೆ.

ಮಾ.5 ರಂದು ಬೆಳಿಗ್ಗೆ 7 ಗಂಟೆಯಿಂದ ಶ್ರೀ ಕಾರ್ನೋನ್ ದೈವ, 9 ರಿಂದ ಶ್ರೀ ಕೋರಚ್ಚನ್ ದೈವ, 11 ರಿಂದ ಶ್ರೀ ಕಂಡನಾರ್ ಕೇಳನ್ ದೈವ, 2 ರಿಂದ ಶ್ರೀ ವಯನಾಟ್ ಕುಲವನ್ ದೈವದ ಅಂಗಣ ಪ್ರವೇಶ ಮತ್ತು ಸೂಟೆ ಸಮರ್ಪಣೆ ನಡೆಯಲಿದೆ. ಅಪರಾಹ್ನ 3 ಗಂಟೆಯಿಂದ ಶ್ರೀ ವಿಷ್ಣುಮೂರ್ತಿ ದೈವದ ಅಂಗಣ ಪ್ರವೇಶ ನಡೆಯಲಿದೆ.

ಇತಿಹಾಸ : ಕೊಡಗು ಜಿಲ್ಲೆಯ ಗಡಿ ಭಾಗದಲ್ಲಿ ವೈಷ್ಣವಾಂಶ, ಶೈವಾಂಶ ಶಕ್ತಿಯ ವಿವಿಧ ಅವತಾರ ಶಕ್ತಿಯನ್ನು, ದೈವಗಳನ್ನು ಕೋಲ ರೂಪದಲ್ಲಿ ಆರಾಧಿಸಲಾಗುತ್ತಿದ್ದು, ಅವುಗಳಲ್ಲಿ ವಯನಾಟ್ ಕುಲವನ್ ಸಹ ಒಂದು. ಚೈತನ್ಯ ಮೂರ್ತಿ ಶ್ರೀ ಪರಮಶಿವನ ಅಂಶಾವತಾರದ ಆದಿ ದಿವ್ಯನಾಗಿ ಶ್ರೀ ವಯನಾಟ್ ಕುಲವನ್ ಭೂಮಿಯಲ್ಲಿ ಅವತರಿಸಿ, ವೈನಾಡಿನಲ್ಲಿ ನೆಲೆಸಿದರು. ವೈನಾಡಿನ ರಕ್ಷಕನಾಗಿ ಶೈವಾಂಶ ಸಂಭೂತನಾದ ಶ್ರೀ ವಯನಾಟ್ ಕುಲವನ್ ಬೇಟೆಗಾರ ದೈವವೆಂದು ಕರೆಯಲ್ಪಡುತ್ತಿದೆ. ಮಲೆನಾಡಿಗೆ ಪ್ರವೇಶಿಸಿ ಶ್ರೀ ತೊಂಡಚ್ಚನ್ ಎಂದು ಕರೆಯಲ್ಪಟ್ಟು ಅನೇಕ ಪ್ರದೇಶಗಳಲ್ಲಿ ಸಂಚರಿಸಿ ತುಳುನಾಡಿಗೆ ಆಗಮಿಸಿ ಅಲ್ಲಲ್ಲಿ ನೆಲೆ ಐತಿಹ್ಯವಿದೆ.
ಆದಿಪರಂಬು ಕಣ್ಣನ ಆತಿಥ್ಯ ಮತ್ತು ಭಕ್ತಿಗೆ ಮೆಚ್ಚಿ ತನ್ನೊಡನೆ ಲೀನಗೊಳಿಸಿ ತೀಯರ ಕಾರ್ನವನನ್ನಾಗಿ ಸಂಭೋದಿಸಿ ಗೌರವಿಸಲಾಯಿತು. ಭಾಗಮಂಡಲ ಸೀಮೆಯ ಪೆರಾಜೆ ಶ್ರೀ ಶಾಸ್ತವು ಕ್ಷೇತ್ರ ಪರಿಧಿಯ ಕುಂಬಳಚೇರಿಯಲ್ಲಿ ನೆಲೆನಿಂತಿರುವುದಾಗಿ ಹೇಳಲಾಗಿದೆ.

ಮಾ.3 ರಂದು ಧಾರ್ಮಿಕ ಸಭೆ : ದೈವಕಟ್ಟು ಮಹೋತ್ಸವ ಸಮಿತಿ ಅಧ್ಯಕ್ಷ ಹೊನ್ನಪ್ಪ ಕೊಳಂಗಾಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸವನ್ನು ನೀಲೇಶ್ವರ ಕ್ಷೇತ್ರದ ಬ್ರಹ್ಮಶ್ರೀ ವೇದಮೂರ್ತಿ ಉಚ್ಚಿಲತ್ತಾಯ ಪದ್ಮನಾಭ ತಂತ್ರಿ ನೀಡಲಿದ್ದಾರೆ.
ಶಾಸಕ ಕೆ.ಜಿ.ಬೋಪಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದ ಪ್ರತಾಪ್ ಸಿಂಹ, ಸಚಿವ ಅಂಗಾರ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ರವಿ ಕಾಳಪ್ಪ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಪೆರಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಂದ್ರಕಲಾ ಬಾಲಚಂದ್ರ, ಪೆರಾಜೆ ಶ್ರೀ ಶಾಸ್ತಾವು ದೇವಾಲಯದ ಆಡಳಿತ ಮೊಕ್ತೇಸರ ಜಿತೇಂದ್ರ ನಿಡ್ಯಮಲೆ ,ವಯನಾಟ್ ಕುಲವನ್ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಪದ್ಮಯ್ಯ ಕುಂಬಳಚೇರಿ, ತಂಬುರಾಟಿ ಭಗವತಿ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಕುಂಞಕಣ್ಣ ಬೇಡಗಂತೊಡಿಕಾನದ ಶ್ರೀಮಲ್ಲಿಕಾರ್ಜುನ ದೇವಾಲಯದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಿವಾಕರ ರೈ ಉಪಸ್ಥಿತರಿರುವರು ಎಂದು ದೇವಾಲಯದ ವಿವಿಧ ಸಮಿತಿಗಳು ಪ್ರಕಟಣೆಯಲ್ಲಿ ತಿಳಿಸಿದ್ದೆ.

ವರದಿ : ದುಗ್ಗಳ ಸದಾನಂದ    

Share. Facebook Twitter Pinterest LinkedIn Tumblr Email WhatsApp
Previous Articleನಾಪೋಕ್ಲು : ಬಸ್ ಪಲ್ಟಿಯಾಗಿ ಮಹಿಳೆ ಸಾವು
Next Article ಮಡಿಕೇರಿ ಮತ್ತು ಕುಶಾಲನಗರದಲ್ಲಿ ಔಷಧೀಯ ಸಸ್ಯಗಳ ಉದ್ಯಾನ ನಿರ್ಮಾಣ

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.