Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಸಹಕಾರ ಸಂಘಗಳ ಅಧ್ಯಕ್ಷರುಗಳಿಗೆ ರಾಜ್ಯಮಟ್ಟದ ಕಾರ್ಯಕ್ರಮ : ಸಹಕಾರ ಕ್ಷೇತ್ರಕ್ಕೆ ವಿಧಾನಪರಿಷತ್ ಸ್ಥಾನ ಮೀಸಲಿರಿಸಬೇಕು : ಎ.ಕೆ. ಮನು ಮುತ್ತಪ್ಪ
ಇತ್ತೀಚಿನ ಸುದ್ದಿಗಳು

ಸಹಕಾರ ಸಂಘಗಳ ಅಧ್ಯಕ್ಷರುಗಳಿಗೆ ರಾಜ್ಯಮಟ್ಟದ ಕಾರ್ಯಕ್ರಮ : ಸಹಕಾರ ಕ್ಷೇತ್ರಕ್ಕೆ ವಿಧಾನಪರಿಷತ್ ಸ್ಥಾನ ಮೀಸಲಿರಿಸಬೇಕು : ಎ.ಕೆ. ಮನು ಮುತ್ತಪ್ಪ

March 2, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮಾ.2 : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಂಯುಕ್ತಾಶ್ರಯದಲ್ಲಿ ಆದಾಯ ತೆರಿಗೆ, ಜಿ.ಎಸ್.ಟಿ., ಮತ್ತು ಸಹಕಾರ ಸಂಘಗಳ ಚುನಾವಣೆ ಕುರಿತು ಜಿಲ್ಲೆಯ ಸಹಕಾರ ಸಂಘಗಳ ಅಧ್ಯಕ್ಷರುಗಳಿಗೆ ರಾಜ್ಯಮಟ್ಟದ ವಿಶೇಷ ಕಾರ್ಯಕ್ರಮ ನಡೆಯಿತು.

ನಗರದ ಹೊಟೇಲ್ ಮಯೂರ ವ್ಯಾಲಿ ವ್ಯೂ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಹಿರಿಯ ಸಹಕಾರಿಗಳು ಹಾಗೂ ಪದ್ಮಶ್ರೀ ಪ್ರಶಸ್ತಿ ಭಾಜನರಾದ ರಾಣಿ ಮಾಚಯ್ಯ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಸಹಕಾರ ಕ್ಷೇತ್ರವು ಎಲ್ಲಾ ವರ್ಗದವರನ್ನು ಮುಕ್ತವಾಗಿ ಆಹ್ವಾನಿಸುತ್ತಿದ್ದು, ತಾನು ಸಹ ಕೋಟೆ ಮಹಿಳಾ ಸಹಕಾರ ಸಂಘ, ಮಹಿಳಾ ಪಟ್ಟಣ ಸಹಕಾರ ಬ್ಯಾಂಕ್ ಹಾಗೂ ಇನ್ನಿತರೆ ಸಹಕಾರ ಸಂಘದಲ್ಲಿ ಅಧ್ಯಕ್ಷೆಯಾಗಿ, ನಿರ್ದೇಶಕಿಯಾಗಿ ಕಾರ್ಯನಿರ್ವಹಿಸಿದ್ದೇನೆ. ಆ ಮೂಲಕ ಸಮಾಜ ಸೇವೆಯಲ್ಲಿ ಸಹ ತೊಡಗಿಸಿಕೊಳ್ಳಲು ಸಹಕಾರಿಯಾಯಿತೆಂದು ತಿಳಿಸಿದರು.
ತಾನು ಸಲ್ಲಿಸಿದ ಸೇವೆಗಾಗಿ ಭಾರತ ಸರ್ಕಾರವು ‘ಪದ್ಮಶ್ರೀ’ ಪ್ರಶಸ್ತಿಗೆ ಗುರುತಿಸಿರುವುದು ತನಗೆ ಹಾಗೂ ಪರೋಕ್ಷವಾಗಿ ಬೆಂಬಲವಾಗಿ ನಿಂತವರಿಗೂ, ವಿದ್ಯಾರ್ಥಿಗಳಿಗೂ, ಪೋಷಕರಿಗೆ ಎಲ್ಲರಿಗೂ ಸಂದ ಗೌರವವೆಂದು ಹೇಳಿದರು.
ಸಣ್ಣ ಜಿಲ್ಲೆಯಾದ ಕೊಡಗು ಜಿಲ್ಲೆಯನ್ನು ಸಹ ಇತ್ತೀಚೆಗೆ ಪ್ರಶಸ್ತಿಗೆ ಪರಿಗಣಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ತಿಳಿಸುತ್ತಾ ತಾನು ಈ ನೆಲದ ಕಲೆ, ಸಂಸ್ಕೃತಿಯನ್ನು ಬೆಳೆಸುವಲ್ಲಿ ಅಲ್ಪ ಕಾಣಿಕೆಯನ್ನು ನೀಡಿದ್ದು ಜಿಲ್ಲೆಯ ಜನತೆ ಕಲೆ, ಸಂಸ್ಕೃತಿಯನ್ನು ಬೆಳೆಸಬೇಕಾಗಿ ತಿಳಿಸುತ್ತಾ, ಕಾರ್ಯಕ್ರಮದಲ್ಲಿ ಸನ್ಮಾನಿಸಿದಕ್ಕಾಗಿ ಯೂನಿಯನ್‍ನ ಅಧ್ಯಕ್ಷರು ಮತ್ತು ಸಮಸ್ತ ಆಡಳಿತ ಮಂಡಳಿ ಸದಸ್ಯರಿಗೆ ಧನ್ಯವಾದ ಸಲ್ಲಿಸಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾದ ಜಯಕರಶೆಟ್ಟಿ ಇಂದ್ರಾಳಿ ಮಾತನಾಡಿ, ಪ್ರತಿಯೊಂದು ಸಹಕಾರ ಸಂಘವು ಕಾಯ್ದೆ-ಕಾನೂನಿನ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕಾಯ್ದೆ-ಕಾನೂನಿನಲ್ಲಾಗುವ ಬದಲಾವಣೆಗಳ ಅರಿವು ಇರಬೇಕಾಗುತ್ತದೆ. ಅಂತೆಯೇ ಪ್ರತಿಯೊಂದು ಸಂಘವು ಇಂದು ಜಿ.ಎಸ್.ಟಿ. ಮತ್ತು ಆದಾಯ ತೆರಿಗೆಯ ವ್ಯಾಪ್ತಿಗೊಳಪಡುವುದರಿಂದ ಅವುಗಳ ಜ್ಞಾನ ಇರಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಕೊಡಗು ಜಿಲ್ಲೆಯ ಸಹಕಾರ ಸಂಘಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಅವುಗಳು ಇನ್ನಷ್ಟು ಪ್ರಗತಿ ಸಾಧಿಸಿ ದೇಶಕ್ಕೆ ಕೊಡುಗೆಯನ್ನು ನೀಡಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ.ಮನು ಮುತ್ತಪ್ಪ, ಜಿಲ್ಲೆಯಲ್ಲಿ ಸಹಕಾರ ಸಂಘಗಳ ಅಧ್ಯಕ್ಷರುಗಳಿಗೆ ರಾಜ್ಯಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸುತ್ತಿದ್ದು, ಸದರಿ ಕಾರ್ಯಕ್ರಮದಲ್ಲಿ ಜಿ.ಎಸ್.ಟಿ. ಮತ್ತು ಆದಾಯ ತೆರಿಗೆ ಕುರಿತು ಉಪನ್ಯಾಸ ನೀಡಲಾಗುತ್ತಿದೆ. ಈ ವಿಷಯಗಳು ನಮ್ಮ ದೈನಂದಿನ ವ್ಯವಹಾರದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿದ್ದು, ಸಂಘಗಳು ಕಾನೂನುಬದ್ಧವಾಗಿ ಪಾವತಿಸಬೇಕಾದಂತಹ ತೆರಿಗೆಗಳ ಕುರಿತು ಮಾಹಿತಿಯನ್ನು ಅರಿತುಕೊಳ್ಳುವಂತಾಗಬೇಕು.
ಆಡಳಿತ ಮಂಡಳಿ ಸದಸ್ಯರು ಸದರಿ ಎಲ್ಲಾ ಮಾಹಿತಿಗಳನ್ನು ಸೂಕ್ಷ್ಮವಾಗಿ ತಿಳಿದುಕೊಂಡಲ್ಲಿ ಸಂಘದ ಸುಲಲಿತ ಬೆಳವಣಿಗೆ ಸಾಧ್ಯವಾಗುತ್ತದೆ. ಅಂತೆಯೇ ಈ ಬಾರಿ ಅನೇಕ ಸಂಘಗಳಿಗೆ ಚುನಾವಣೆ ಇರುವುದರಿಂದ ಯಾವುದೇ ಗೊಂದಲಗಳಾಗದ ರೀತಿಯಲ್ಲಿ ಕಾರ್ಯನಿರ್ವಹಿಸಲು ಸಹಕಾರಿಯಾಗಲೆಂದು ಇಂದು ಕಾರ್ಯಕ್ರಮವನ್ನು ಆಯೋಜಿಸಿದ್ದು ತರಬೇತಿ ಮತ್ತು ಶಿಕ್ಷಣ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕೆಂದು ಹೇಳಿದರು. ಅಲ್ಲದೆ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಸಹಕಾರ ಕ್ಷೇತ್ರದಿಂದಲೂ ಆಯ್ಕೆ ಮಾಡುವಂತೆ ಸ್ಥಾನಗಳನ್ನು ಮೀಸಲಿರಿಸಬೇಕೆಂದು ತಿಳಿಸಿದುದನ್ನು ಹಾಜರಿದ್ದ ಎಲ್ಲಾ ಪ್ರತಿನಿಧಿಗಳು ಒಪ್ಪಿ ಈ ಕುರಿತು ನಿರ್ಣಯ ಅಂಗೀಕರಿಸಲಾಯಿತು.
ಸನ್ನದು ಲೆಕ್ಕಿಗರಾದ ಎಸ್.ವಿ. ಶಂಭುಲಿಂಗಪ್ಪ ಆದಾಯ ತೆರಿಗೆ, ಜಿ.ಎಸ್.ಟಿ., ಮತ್ತು ಸಂಘದ ಆರ್ಥಿಕತೆ ಹಾಗೂ ಸಿಬ್ಬಂದಿ ವೇತನ ಸಮನ್ವಯತೆ ಬಗ್ಗೆ ಸುದೀರ್ಘ ಉಪನ್ಯಾಸ ನೀಡಿದರು.
ಸಹಕಾರ ಸಂಘಗಳ ಚುನಾವಣೆ ಕುರಿತು ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಂ.ಈ. ಮೋಹನ್‍ರವರು ಮಾಹಿತಿ ನೀಡಿದರು.
ವೇದಿಕೆಯಲ್ಲಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ಪಿ.ಸಿ. ಮನು ರಾಮಚಂದ್ರ, ನಿರ್ದೇಶಕರಾದ ಎನ್.ಎ. ರವಿ ಬಸಪ್ಪ, ಪ್ರೇಮ ಸೋಮಯ್ಯ, ಕೆ.ಎಂ. ತಮ್ಮಯ್ಯ, ಪಿ.ಸಿ. ಅಚ್ಚಯ್ಯ, ಎನ್.ಎಂ. ಉಮೇಶ್ ಉತ್ತಪ್ಪ, ಪಿ.ವಿ. ಭರತ್, ಪಿ.ಬಿ.ಯತೀಶ್, ಕನ್ನಂಡ ಸಂಪತ್ ಉಪಸ್ಥಿತರಿದ್ದರು.
ಯೂನಿಯನ್ ನಿರ್ದೇಶಕ ಕೆ.ಎಸ್. ಗಣಪತಿ ಸ್ವಾಗತಿಸಿ, ವ್ಯವಸ್ಥಾಪಕಿ ಆರ್. ಮಂಜುಳ ಪ್ರಾರ್ಥಿಸಿ, ವಂದಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ ಕಾರ್ಯಕ್ರಮ ನಿರೂಪಿಸಿ, ಬಿ.ಸಿ. ಅರುಣ್ ಕುಮಾರ್ ಕಾರ್ಯಕ್ರಮ ನಿರ್ವಹಣೆಗೆ ಸಹಕರಿಸಿದರು.

Share. Facebook Twitter Pinterest LinkedIn Tumblr Email WhatsApp
Previous Articleಮಡಿಕೇರಿಯಲ್ಲಿ ಗ್ಯಾರಂಟಿ ಕಾರ್ಡ್ ಅಭಿಯಾನ : ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಬಯಲು : ರಣ್‍ದೀಪ್ ಸಿಂಗ್ ಸುರ್ಜೇವಾಲ
Next Article ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉದ್ಯೋಗವನ್ನು ಪಡೆಯಲು ಕೌಶಲ್ಯ ಅತ್ಯಗತ್ಯ : ಮಾಳೇಟಿರ ತೃಪ್ತಿ ಬೋಪಣ್ಣ

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.