Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಎನ್.ಯು.ನಾಚಪ್ಪ ವಿರುದ್ಧ ಕೊಡವ ಭಾಷಿಕ ಸಮುದಾಯಗಳ ಕೂಟ ಅಸಮಾಧಾನ : ಅಪ್ರಬುದ್ಧ ಹೇಳಿಕೆಯನ್ನು ಹಿಂಪಡೆಯಲು ಒತ್ತಾಯ
ಇತ್ತೀಚಿನ ಸುದ್ದಿಗಳು

ಎನ್.ಯು.ನಾಚಪ್ಪ ವಿರುದ್ಧ ಕೊಡವ ಭಾಷಿಕ ಸಮುದಾಯಗಳ ಕೂಟ ಅಸಮಾಧಾನ : ಅಪ್ರಬುದ್ಧ ಹೇಳಿಕೆಯನ್ನು ಹಿಂಪಡೆಯಲು ಒತ್ತಾಯ

March 3, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮಾ.3 : ಕೊಡವರ ಹೆಸರಿನಲ್ಲಿ ಕೊಡವರಲ್ಲದವರ ಅಧ್ಯಯನ ನಡೆಯುತ್ತಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಕೊಡವ ಭಾಷಿಕ 18 ಮೂಲನಿವಾಸಿ ಸಮುದಾಯಗಳ ವಿರುದ್ಧ ತೀರಾ ಅಪ್ರಬುದ್ಧ ಹೇಳಿಕೆಯನ್ನು ನೀಡಿದ್ದಾರೆ. ಈ ಹೇಳಿಕೆಯನ್ನು ಹಿಂಪಡೆಯದಿದ್ದಲ್ಲಿ ಹೋರಾಟ ನಡೆಸಬೇಕಾಗುತ್ತದೆ ಎಂದು ಕೊಡವ ಭಾಷಿಕ ಸಮುದಾಯಗಳ ಕೂಟದ ಅಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ ಎಚ್ಚರಿಕೆ ನೀಡಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡವ ಭಾಷೆ, ಸಂಸ್ಕೃತಿಯ ಉಳಿವಿಗಾಗಿ ಬದುಕನ್ನೇ ಮುಡುಪಾಗಿಟ್ಟುಕೊಂಡು ಮುನ್ನಡೆಯುತ್ತಿರುವ 18 ಕೊಡವ ಭಾಷಿಕ ಮೂಲ ನಿವಾಸಿ ಜನಾಂಗದವರ ಬಗ್ಗೆ ತುಚ್ಚವಾಗಿ ಅಸವಿಂಧಾನಿಕ ಹೇಳಿಕೆ ನೀಡಿರುವುದನ್ನು ಖಂಡಿಸುವುದಾಗಿ ತಿಳಿಸಿದ್ದಾರೆ.
ಫೆ.19ರಂದು ಬಿಟ್ಟಂಗಾಲ ಹೆಗ್ಗಡೆ ಸಮಾಜದಲ್ಲಿ ನಡೆದ ಕೊಡವ ಭಾಷಿಕ 18 ಮೂಲನಿವಾಸಿ ಸಮುದಾಯಗಳ ಸಮಾವೇಶದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರು 18 ಸಮುದಾಯ ಮೂಲ ನಿವಾಸಿಗಳ ಕುಲಶಾಸ್ತ್ರ ಅಧ್ಯಯನ ಮಾಡಿಸಲಾಗುವುದು. ಜನಾಂಗ ಬಾಂಧವರ ಹಿಂದಿನ ಕಾಲಘಟ್ಟದ ಐನ್‍ಮನೆ, ಮುಂದುಮನೆ, ಕೈಮಡ ನವೀಕರಣಕ್ಕೆ ರೂ. 5 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗುವುದೆಂದು ಘೋಷಿಸಿದ್ದರು. ಸಮಾರಂಭದಲ್ಲಿ ಉಪಸ್ಥಿತರಿದ್ದ ಜಿಲ್ಲೆಯ ಶಾಸಕರುಗಳು ಕೂಡ ಸಚಿವರ ಅಭಿಪ್ರಾಯಕ್ಕೆ ಪ್ರಶಂಶೆ ವ್ಯಕ್ತಪಡಿಸಿ ಮಾತನಾಡಿದ್ದಾರೆ.
ಆದರೆ ಇದೀಗ ಎನ್.ಯು.ನಾಚಪ್ಪ ಅವರು ಸಚಿವರ ಭರವಸೆಯನ್ನು ಸ್ವಾರ್ಥ ಚಿಂತನೆಯಿಂದ ಅವಲೋಕಿಸುತ್ತಿದ್ದಾರೆ. ಕೊಡವ ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ, ಪದ್ಧತಿ ಮತ್ತು ಸಂಪ್ರದಾಯಗಳನ್ನು ಮೈಗೂಡಿಸಿಕೊಂಡು ಪೋಷಿಸಿ ಉಳಿಸಿ ಬೆಳೆಸಿಕೊಂಡು ಮುನ್ನಡೆಯುತ್ತಿರುವ 18 ಕೊಡವ ಭಾಷಿಕ ಮೂಲ ನಿವಾಸಿ ಸಮುದಾಯದ ಬಗ್ಗೆ ಒಂದು ಮೂಲ ನಿವಾಸಿ ಸಮುದಾಯದ ಪ್ರತಿನಿಧಿಯಾಗಿ ಇಷ್ಟೊಂದು ಸಣ್ಣತನದ ಹೇಳಿಕೆ ನೀಡಿದ್ದಾರೆ. ಜಾತಿ ಜಾತಿಗಳ ಮಧ್ಯೆ ಸಂಘರ್ಷ ತಂದೊಡ್ಡುವ ಕೆಲಸ ಇದಾಗಿದೆ ಎಂದು ಆರೋಪಿಸಿದ್ದಾರೆ.
ಮಲಗಿರುವ ಹುಲಿಯನ್ನು ಕೆಣಕಿ ಮೈ ಮೇಲೆ ಬೀಳಿಸಿಕೊಂಡು ಘಾಸಿಗೊಳಿಸಿದಂತಾಗಿದೆ. ಸರ್ಕಾರಿ ಮಟ್ಟದಲ್ಲಿ ನಿಯಮಬದ್ಧವಾಗಿ ಕುಲಶಾಸ್ತ್ರ ಅಧ್ಯಯನಗೊಳಿಸಲು ಅದಕ್ಕೆಂದೇ ಒಂದು ವಿಶೇಷ ಸಮಿತಿ ಇರುವಾಗ ಅನಾವಶ್ಯಕ ಜನಾಂಗದ ಮಧ್ಯೆ ಗೊಂದಲ ಸೃಷ್ಟಿಸುವ ಹೇಳಿಕೆಯನ್ನು ನೀಡುವುದರಲ್ಲಿ ಅರ್ಥವಿಲ್ಲ. ಕನಿಷ್ಠ ಜ್ಞಾನ ಮತ್ತು ಸಂಸ್ಕೃತಿಯ ಅರಿವಿಲ್ಲದೆ ಹುಲಿ-ಬೆಕ್ಕು ಪದಗಳ ಬಳಕೆ ಖಂಡನೀಯವೆಂದು ಸುಭಾಷ್ ನಾಣಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೊಡಗಿನಲ್ಲಿ ನೆಲೆಸಿರುವ 18 ಕೊಡವ ಭಾಷಿಕ ಜನಾಂಗದವರ ಸಂಸ್ಕೃತಿ- ಕಲೆ, ಸಂಪ್ರದಾಯದ ಬಗ್ಗೆ ಕನಿಷ್ಠ ಅರಿವು, ಗೌರವ ಇದ್ದಿದ್ದರೆ ಇಂತಹ ಬಾಲಿಶತನದ ಹೇಳಿಕೆ ಹೊರ ಬರುತ್ತಿರಲಿಲ್ಲ. ಅಪ್ರಬುದ್ಧ ಮಾತುಗಳಿಂದ 18 ಮೂಲ ನಿವಾಸಿ ಸಮುದಾಯಗಳ ಜನಾಂಗ ಬಾಂಧವರಲ್ಲಿ, ತೀವ್ರತರಹದ ನೋವು ಉಂಟಾಗಿದ್ದು, ಈ ರೀತಿಯ ಬಾಲಿಶ ಹೇಳಿಕೆಗಳನ್ನು ನೀಡುವುದನ್ನು ನಾಚಪ್ಪ ಅವರು ತಕ್ಷಣ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಯಾವುದೇ ರೀತಿಯಲ್ಲಿ ಸರ್ಕಾರದ ಹಾದಿ ತಪ್ಪಿಸುವ ಕೆಲಸ ಆಗಬಾರದು, ಒಕ್ಕೂಟವಾಗಲಿ ಅಥವಾ 18 ಮೂಲ ನಿವಾಸಿ ಜನಾಂಗದವರಾಗಲಿ, ಅವರ ಸಮುದಾಯದ ವಿಚಾರವಾಗಿ ಎಲ್ಲೂ ಮಧ್ಯಸ್ಥಿಕೆ ವಹಿಸಿಲ್ಲ ಮತ್ತು ಮಾತನಾಡುತ್ತಿಲ್ಲ. ಹೀಗಿರುವಾಗ 18 ಕೊಡವ ಭಾಷಿಕ ಮೂಲ ನಿವಾಸಿ ಜನಾಂಗ ಬಾಂಧವರ ಬಗ್ಗೆ ಅನಾವಶ್ಯಕ ಮೂಗು ತೂರಿಸುವುದು ಅವರಿಗೆ ಶೋಭೆ ತರುವುದಿಲ್ಲ.
ಕೊಡವ ಭಾಷಿಕ ಜನಾಂಗದವರ ಬಗ್ಗೆ ನೀಡಿರುವ ಬಾಲಿಶ ಹೇಳಿಕೆಯನ್ನು ನಾಚಪ್ಪ ಅವರು ತಕ್ಷಣ ಹಿಂಪಡೆಯಬೇಕು ಮತ್ತು ಮುಂದೆ ಈ ರೀತಿಯ ಹೇಳಿಕೆಗಳನ್ನು ನೀಡಬಾರದು. ಇದು ಹೀಗೇ ಮುಂದುವರೆದರೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಸುಭಾಷ್ ನಾಣಯ್ಯ ಎಚ್ಚರಿಕೆ ನೀಡಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Articleಗುಡ್ಡೆ ಹೊಸೂರು : ಪಾಲಿಟೆಕ್ನಿಕಲ್ ಕಾಲೇಜಿನ ವಿದ್ಯಾರ್ಥಿಗಳಿಂದ ತ್ಯಾಜ್ಯ ನಿರ್ವಹಣೆಯ ಕುರಿತು  ಜಾಗೃತಿ
Next Article ಮುಳ್ಳೂರು ಗ್ರಾಮದಲ್ಲಿ ಕಾಫಿ ತೋಟಕ್ಕೆ ಬೆಂಕಿ : ಫಸಲು ನಾಶ

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.