Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಕೊಡವ ಭಾಷಿಕರ ಅವಹೇಳನ ಆರೋಪ : ಕಾನೂನು ಕ್ರಮಕ್ಕೆ ಒತ್ತಾಯ
ಇತ್ತೀಚಿನ ಸುದ್ದಿಗಳು

ಕೊಡವ ಭಾಷಿಕರ ಅವಹೇಳನ ಆರೋಪ : ಕಾನೂನು ಕ್ರಮಕ್ಕೆ ಒತ್ತಾಯ

March 3, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮಾ.3 : ಕೊಡವ ಕುಲಶಾಸ್ತ್ರ ಅಧ್ಯಯನಕ್ಕೆ ಸಂಬಂಧಿಸಿದಂತೆ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಕೊಡವ ಭಾಷಿಕ ಜನಾಂಗದವರನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿರುವ ಕೊಡವ ತಕ್ಕ್ ಜನಾಂಗಕಾರಡ ಒಕ್ಕೂಟದ ಅಧ್ಯಕ್ಷ ಕೆ.ಎಂ.ಸರ ಚಂಗಪ್ಪ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪುಟ್ಟ ಜಿಲ್ಲೆ ಕೊಡಗಿನಲ್ಲಿ ಎಲ್ಲಾ ಜಾತಿ ಜನಾಂಗದವರು ಪ್ರೀತಿ, ವಿಶ್ವಾಸದಿಂದ ಜೀವನ ಸಾಗಿಸುತ್ತಿದ್ದಾರೆ. ಪ್ರತಿಯೊಂದು ಜನಾಂಗಕ್ಕೂ ತಮ್ಮ ಹಕ್ಕನ್ನು ಪಡೆಯುವ ಸ್ವಾತಂತ್ರ್ಯವನ್ನು ಸಂವಿಧಾನ ನೀಡಿದೆ. ಕೊಡವ ಭಾಷಿಕ ಜನಾಂಗ ತನ್ನ ಹಕ್ಕನ್ನು ಪಡೆಯಲು ನಾಚಪ್ಪ ಅವರ ಅಪ್ಪಣೆ ಪಡೆಯಬೇಕಾಗಿಲ್ಲ ಎಂದರು.
ಕೊಡವ ಭಾಷಿಕರ ಕುಲಶಾಸ್ತ್ರ ಅಧ್ಯಯನಕ್ಕಾಗಿ 2020 ರಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಿದ ಪರಿಣಾಮ ಇದೀಗ ಸ್ಪಂದನೆ ದೊರೆತ್ತಿದೆ. ಇತ್ತೀಚೆಗೆ ಸಮಾಜ ಕಲ್ಯಾಣ ಸಚಿವರು ಕುಲಶಾಸ್ತ್ರ ಅಧ್ಯಯನಕ್ಕಾಗಿ 25 ಲಕ್ಷ ರೂ.ಗಳನ್ನು ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ. ಈ ಬಗ್ಗೆ ತಪ್ಪು ಕಲ್ಪನೆ ಮಾಡಿಕೊಂಡಿರುವ ನಾಚಪ್ಪ ಅವರು ಕೊಡವ ಭಾಷಿಕರ ವಿರುದ್ಧ ಅವಹೇಳನ ಮಾಡಿದ್ದಾರೆ. ಕೊಡವ ಕುಲಶಾಸ್ತ್ರ ಅಧ್ಯಯನಕ್ಕೆ ನಾವು ವಿರೋಧ ವ್ಯಕ್ತಪಡಿಸಿಲ್ಲ, ಅವರ ಹಕ್ಕನ್ನು ಅವರು ಮಂಡಿಸಿದ್ದಾರೆ, ನಮ್ಮ ಹಕ್ಕನ್ನು ನಾವು ಕೇಳಿದ್ದೇವೆ ಎಂದು ತಿಳಿಸಿದರು.
ಕೊಡವ ಭಾಷಿಕ ಮೂಲನಿವಾಸಿಗಳು ಶ್ರೀಮಂತ ಕೊಡವ ಸಂಸ್ಕೃತಿಯ ಏಳಿಗೆಗೆ ಕಾರಣೀಭೂತರಾಗಿದ್ದಾರೆ. ಕೊಡಗಿನ ಮಂದ್, ಮಾನಿ, ದೇವಾಸ್ಥಾನಗಳಲ್ಲಿ ಸ್ಥಾನಮಾನಗಳನ್ನು ವಹಿಸಿಕೊಂಡು ಸಂಸ್ಕೃತಿ ಮತ್ತು ಧಾರ್ಮಿಕ ಆಚರಣೆಯ ಪಾಲುದಾರಾರಾಗಿದ್ದಾರೆ. ಆದರೆ ನಾಚಪ್ಪ ಅವರು ಕೊಡವ ಭಾಷಿಕ ಮೂಲ ನಿವಾಸಿಗಳನ್ನು ಟೀಕಿಸುವ ಭರದಲ್ಲಿ ಹುಲಿ, ಕಾಡು ಬೆಕ್ಕು ಪದ ಬಳಕೆಯ ಮೂಲಕ ಹೋಲಿಕೆ ಮಾಡಿದ್ದು, ಇದು ಮಾನಸಿಕವಾಗಿ ಕುಗ್ಗಿಸುವ ಪ್ರಯತ್ನವಾಗಿದೆ. ಅಲ್ಲದೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಚಿಂತನೆಗೆ ವಿರುದ್ಧವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಿಎನ್‍ಸಿ ಸಂಘಟನೆಯ ಮೂಲಕ ಜನಾಂಗ ಜನಾಂಗಗಳ ನಡುವೆ ಒಡಕು ಮೂಡಿಸಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಕಾರ್ಯದಲ್ಲಿ ನಾಚಪ್ಪ ತೊಡಗಿದ್ದಾರೆ ಎಂದು ಆರೋಪಿಸಿರುವ ಸರ ಚಂಗಪ್ಪ, ಸರ್ಕಾರ ತಕ್ಷಣ ಸಂಘಟನೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಉಪಾಧ್ಯಕ್ಷೆ ಬಬ್ಬಿರ ಸರಸ್ವತಿ ಮಾತನಾಡಿ ಕೊಡವರಲ್ಲದ ಪ್ರಭಾವಿ ರಾಜಕಾರಣಿಗಳಿಗೆ ಪೀಚೆ ಕತ್ತಿ, ಒಡಿ ಕತ್ತಿ ನೀಡಿ ಮೆರವಣಿಗೆ ಮಾಡುವಾಗ ನಾಚಪ್ಪ ಅವರ ಕೊಡವ ಸಂಸ್ಕೃತಿ ಮೇಲಿನ ಅಭಿಮಾನ ಮತ್ತು ಸ್ವಾಭಿಮಾನ ಎಲ್ಲಿ ಹೋಗಿತ್ತು ಎಂದು ಪ್ರಶ್ನಿಸಿದರು.
ಸಮಾಜವನ್ನು ಒಡೆದು ಅಶಾಂತಿ ಮೂಡಿಸಿ ನಾಯಕರಾಗಬಾರದು, ಒಗ್ಗೂಡಿಸಿ ನಾಯಕರಾಗಬೇಕು. ನಾಚಪ್ಪ ಅವರು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ತಮ್ಮ ಸಂಘಟನೆಯ ಮೂಲಕ ತಮಗೆ ಬೇಕಾದ ಹಕ್ಕನ್ನು ಕೇಳಲಿ, ಅದು ಬಿಟ್ಟು ಕೊಡವ ಭಾಷಿಕರ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡುವುದು ಬೇಡ. ಮೂಲೆಗುಂಪಾಗಿದ್ದ ನಮಗೆ ಈಗ ಜಾಗೃತಿ ಮೂಡಿದೆ, ನಮ್ಮ ಹಕ್ಕನ್ನು ಪಡೆಯುವುದು ಹೇಗೆಂದು ತಿಳಿದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬುಡಕಟ್ಟು ಕೃಷಿಕರ ಸಂಘದ ಮಡಿಕೇರಿ ಅಧ್ಯಕ್ಷ ಕುಡಿಯರ ಮುತ್ತಪ್ಪ ಮಾತನಾಡಿ ನಾಚಪ್ಪ ಅವರ ಬಗ್ಗೆ ಕೊಡವ ಸಮಾಜಗಳು ಎಚ್ಚೆತ್ತುಕೊಳ್ಳಬೇಕು ಎಂದರು.
ಕೊಡವ ಭಾಷಿಕ ಸಮುದಾಯಗಳ ಕೂಟದ ಉಪಾಧ್ಯಕ್ಷ ಪಿ.ಜಿ.ಅಯ್ಯಪ್ಪ ಮಾತನಾಡಿ ನಾಚಪ್ಪ ಅವರ ಹೇಳಿಕೆಯನ್ನು ಖಂಡಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಜೆ.ಎ.ಜೀವನ್ ಹಾಗೂ ಅರುಣ್ ಪೂವಯ್ಯ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Articleಸಂಭ್ರಮದಿಂದ ನಡೆದ ಮದೆನಾಡು ಬಿ.ಜಿ.ಎಸ್. ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ
Next Article ರಾಜಸೀಟು ಉದ್ಯಾನವನಕ್ಕೆ ಮತ್ತಷ್ಟು ಮೆರುಗು ತಂದ ಮಕ್ಕಳ ಸಾಹಸ ಕ್ರೀಡೆ : ಶಾಸಕರಿಂದ ಉದ್ಘಾಟನೆ

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.