Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಬಿಜೆಪಿ ಕಾರ್ಯಕರ್ತರ ಸಭೆ : ಜಾತಿ ರಾಜಕಾರಣಕ್ಕೆ ಭವಿಷ್ಯವಿಲ್ಲ : ಶಾಸಕ ಕೆ.ಜಿ.ಬೋಪಯ್ಯ
ಇತ್ತೀಚಿನ ಸುದ್ದಿಗಳು

ಬಿಜೆಪಿ ಕಾರ್ಯಕರ್ತರ ಸಭೆ : ಜಾತಿ ರಾಜಕಾರಣಕ್ಕೆ ಭವಿಷ್ಯವಿಲ್ಲ : ಶಾಸಕ ಕೆ.ಜಿ.ಬೋಪಯ್ಯ

March 3, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮಾ.3 : ಜಾತಿ ರಾಜಕಾರಣಕ್ಕೆ ಭವಿಷ್ಯವಿಲ್ಲ, ನಾವು ಹುಟ್ಟಿದ ಜಾತಿಯ ಬಗ್ಗೆ ಅಭಿಮಾನವಿರಲಿ ದುರಭಿಮಾನ ಬೇಡ. ಜಾತಿಯನ್ನು ಮುಂದೆ ಮಾಡಿ ನಡೆಸುವ ರಾಜಕೀಯವನ್ನು ಸವಾಲಾಗಿ ಸ್ವೀಕರಿಸಬೇಕೆಂದು ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಕರೆ ನೀಡಿದ್ದಾರೆ.
ನಗರದ ಗೌಡ ಸಮಾಜದ ಸಭಾಂಗಣದಲ್ಲಿ ನಡೆದ ಬಿಜೆಪಿ ಮಡಿಕೇರಿ ಗ್ರಾಮಾಂತರ ಮತ್ತು ನಗರ ಮಂಡಳ ‘ಕಾರ್ಯಕರ್ತರ ಮಿಲನ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಬಿಜೆಪಿ ಪಕ್ಷ ಅಭಿವೃದ್ಧಿಯೊಂದಿಗೆ ದೇಶದ ಅಖಂಡತೆಯ ಬಗ್ಗೆ ಚಿಂತನೆಗಳನ್ನು ಹರಿಸುವ ಪಕ್ಷವಾಗಿದ್ದು, ಇಂತಹ ಚಿಂತನೆಗಳಿಲ್ಲದಿದ್ದಲ್ಲಿ ದೇಶ ದೇಶವಾಗಿ ಉಳಿಯಲಾರದು. ಕಾಂಗ್ರೆಸ್‌ನ ಅಪಪ್ರಚಾರಗಳನ್ನು ಮೆಟ್ಟಿ ನಿಲ್ಲುವ ಮೂಲಕ ಬಿಜೆಪಿ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗಳಿಸಬೇಕು. ಪಕ್ಷ ಸ್ವತಂತ್ರವಾಗಿ ಅಧಿಕಾರಕ್ಕೆ ಬರುವಂತೆ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು ಎಂದರು.
ಕರ್ನಾಟಕವನ್ನು ಬಿಜೆಪಿ ಮಾರಾಟ ಮಾಡುತ್ತಿದೆ ಎನ್ನುವ ಕಾಂಗ್ರೆಸ್ ಟೀಕೆಗೆ ಇದೇ ಸಂದರ್ಭ ತಿರುಗೇಟು ನೀಡಿದ ಕೆ.ಜಿ.ಬೋಪಯ್ಯ, ಪಾಕಿಸ್ತಾನಕ್ಕೆ ಪಿಒಕೆಯನ್ನು ಬಿಟ್ಟು ಕೊಟ್ಟದ್ದು ಯಾರು, ಇಂಡೋ ಚೀನಾ ಬಾಯಿ ಬಾಯಿ ಎನ್ನುತ್ತಲೆ ನಡೆದ ಯುದ್ಧದಲ್ಲಿ ಟಿಬೆಟ್ ಪ್ರಾಂತ್ಯವನ್ನು ಬಿಟ್ಟು ಕೊಟ್ಟದ್ದು ಯಾರೆಂದು ಪ್ರಶ್ನಿಸಿದರು. ಬಿಜೆಪಿಯ ವಿರುದ್ಧ ಅನಗತ್ಯ ಅಪಪ್ರಚಾರದಲ್ಲಿ ತೊಡಗಿದಲ್ಲಿ ಕಾಂಗ್ರೆಸ್ ವಂಶಸ್ಥರ ನಡೆಗಳನ್ನು ಪ್ರಶ್ನಿಸಬೇಕಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ, ವಿಧ್ವಂಸಕ ಕೃತ್ಯವೆಸಗಿದವರನ್ನು ಸಮರ್ಥಿಸುವ ಕೆಲಸ ಮಾಡಿರುವ ಸಿದ್ದರಾಮಯ್ಯ ಹಾಗೂ ಸ್ವಾಭಿಮಾನಿ ಸ್ವಾವಲಂಬಿ ಬದುಕನ್ನು ಜನಸಾಮಾನ್ಯರಿಗೆ ಒದಗಿಸುವ ಬಿಜೆಪಿ ನಡುವಿನ ಹೋರಾಟವೇ ಮುಂದಿನ ವಿಧಾನಸಭಾ ಚುನಾವಣೆ ಆಗಿದೆ. ಪೂರ್ಣ ಬಹುಮತವಿಲ್ಲದ ಬಿಜೆಪಿ ಇತರ ಪಕ್ಷಗಳಿಂದ ಬಂದವರನ್ನು ಸೇರಿಸಿಕೊಂಡು ಸರ್ಕಾರ ರಚಿಸಿದೆ ಎಂದರು.
ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಒಂದು ವರ್ಗಕ್ಕೆ ಸೀಮಿತವಾಗಿ ಶಾದಿಭಾಗ್ಯ ಯೋಜನೆ ಜಾರಿಗೆ ತಂದರು ಆದರೆ, ಯಡಿಯೂರಪ್ಪ ಅವರ ಅವಧಿಯಲ್ಲಿ ಭಾಗ್ಯಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದು ಎಲ್ಲಾ ವರ್ಗಕ್ಕೂ ಅದನ್ನು ತಲುಪುವಂತೆ ಮಾಡಿದರು. ಸರ್ವ ಜನರ ಹಿತವನ್ನು ಬಿಜೆಪಿ ಬಯಸುತ್ತದೆ ಎಂದು ತಿಳಿಸಿದರು.
ಕೊಡಗು ಜಿಲ್ಲೆಯ ಎರಡು ಕ್ಷೇತ್ರಗಳಿಗೆ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ ವಿಶೇಷ ಅನುದಾನಗಳು ಸೇರಿದಂತೆ ಒಟ್ಟು 4 ಸಾವಿರ ಕೋಟಿ ರೂ. ದೊರತ್ತಿದೆ ಎಂದು ಹೇಳಿದರು.
::: ಟೂರಿಸ್ಟ್ ಅಭ್ಯರ್ಥಿ :::
ವಿರಾಜಪೇಟೆ ಕ್ಷೇತ್ರಕ್ಕೆ ‘ಟೂರಿಸ್ಟ್ ಕ್ಯಾಂಡಿಟೇಟ್’ ಬರುತ್ತಿದ್ದಾರೆಂದು ಕಾಂಗ್ರೆಸ್‌ನ್ನು ಲೇವಡಿ ಮಾಡಿದ ಅಪ್ಪಚ್ಚು ರಂಜನ್, ವಾರಕ್ಕೊಮ್ಮೆ ಜಿಲ್ಲೆಗೆ ಬರುವ, ಜನಸಾಮಾನ್ಯರ ಸಂಪರ್ಕಕ್ಕೆ ದೊರಕದ ಇಂತಹವರು ನಮಗೆ ಬೇಕೆ ಎಂದು ಪ್ರಶ್ನಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿ, ಮಾರ್ಚ್ 18 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಡಿಕೇರಿಯಲ್ಲಿ ನಡೆಯುವ ಫಲಾನುಭವಿಗಳ ಸಮಾವೇಶ ಹಾಗೂ ನಾಪೋಕ್ಲುವಿನಲ್ಲಿ ನಡೆಯುವ ಕೊಡವ ಕೌಟುಂಬಿಕ ಹಾಕಿ ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಾರ್ಚ್ 5 ರಿಂದ 20 ರವರೆಗೆ ಜಿಲ್ಲೆಯ ವಿವಿಧ ಕಡೆ ವಿವಿಧ ಮೋರ್ಚಾಗಳ ಸಮಾವೇಶ ಆಯೋಜಿತವಾಗಿದೆ. ಮಾರ್ಚ್ 10 ಮತ್ತು 11 ರಂದು ಬಿಜೆಪಿಯ ರಥಯಾತ್ರೆಯೂ ಕೊಡಗಿನಲ್ಲಿ ಸಂಚರಿಸಲಿದೆ ಎಂದು ಮಾಹಿತಿ ನೀಡಿದರು.
ಮಡಿಕೇರಿ ಕ್ಷೇತ್ರದ ಉಸ್ತುವಾರಿ ತಿಮ್ಮಪ್ಪ ಶೆಟ್ಟಿ, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ರಾಜ್ಯ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷ ರವಿ ಕಾಳಪ್ಪ, ಪಕ್ಷದ ಪ್ರಮುಖರಾದ ಶಾಂತೆಯಂಡ ರವಿ ಕುಶಾಲಪ್ಪ, ಅಪ್ಪಚಟ್ಟೋಳಂಡ ಮನು ಮುತ್ತಪ್ಪ, ತಳೂರು ಕಿಶೋರ್ ಕುಮಾರ್, ಮನು ಮಂಜುನಾಥ್, ಉಮೇಶ್ ಸುಬ್ರಮಣಿ, ಜಿ.ಪಂ ಮಾಜಿ ಅಧ್ಯಕ್ಷ ಹರೀಶ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Articleಹೊಟೇಲ್ ನಲ್ಲಿ ಗಾಂಜಾ ಮಾರಾಟ : ಇಬ್ಬರನ್ನು ವಶಕ್ಕೆ ಪಡೆದ ಕುಶಾಲನಗರ, ಸುಂಟಿಕೊಪ್ಪ ಪೊಲೀಸರು
Next Article ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಗೆ ಉಪ್ಪು ಹಾಕಬೇಕು : ಕೆಜಿಬಿ ಕಿಡಿ

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.