Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಪ್ರವಾಸಿಗರ ಮನಸೆಳೆವ ಉತ್ತರ ಕನ್ನಡ ಜಿಲ್ಲೆಯ ಸಾತೋಡಿ ಜಲಪಾತ
ಪ್ರವಾಸಿತಾಣ

ಪ್ರವಾಸಿಗರ ಮನಸೆಳೆವ ಉತ್ತರ ಕನ್ನಡ ಜಿಲ್ಲೆಯ ಸಾತೋಡಿ ಜಲಪಾತ

March 7, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಸಾತೋಡಿ ಜಲಪಾತ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿರುವ ಒಂದು ಜಲಪಾತ. ಇದು ಸಿರ್ಸಿಯಿಂದ 73 ಕಿಲೋಮೀಟರ್ ದೂರದಲ್ಲಿದೆ. ಯಲ್ಲಾಪುರದಿಂದ ಸುಮಾರು 32 ಕಿ.ಮೀ. ದೂರದಲ್ಲಿದೆ. ಈ ಜಲಪಾತವು ದಾಂಡೇಲಿ ರಕ್ಷಿತಾರಣ್ಯದ ವ್ಯಾಪ್ತಿಯಲ್ಲಿ ಬರುವುದಲ್ಲದೆ ದಟ್ಟ ಕಾನನದ ನಡುವೆ ಸೇರಿಕೊಂಡಿದೆ. ಹಲವಾರು ಝರಿಗಳಿಂದ ಸೇರಿದ ನೀರು ಸುಮಾರು 15 ಮೀಟರ್ ಎತ್ತರದಿಂದ ಧುಮುಕುತ್ತದೆ. ನಂತರ ಕೊಡಸಳ್ಳಿ ಜಲಾಶಯದ ಮೂಲಕ ಕಾಳಿ ನದಿಯನ್ನು ಸೇರುತ್ತದೆ. ಯಲ್ಲಾಪುರದಿಂದ ಹುಬ್ಬಳ್ಳಿ-ಅಂಕೋಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಹುಬ್ಬಳ್ಳಿಗೆ ಹೋಗುವ ಮಾರ್ಗದಲ್ಲಿ 5 ಕಿ.ಮೀ. ನಷ್ಟು ಮುಂದೆ ಸಾಗಿ ಎಡಕ್ಕೆ (ಕಲಘಟಗಿ, ಹುಬ್ಬಳ್ಳಿಯಿಂದ ಬರುವವರು ಬಲಕ್ಕೆ ತಿರುಗಬೇಕು) ತಿರುಗಿ 25 ಕಿ.ಮೀ. ಸಾಗಿದರೆ ಸಾತೋಡಿ ಜಲಪಾತದ ಪ್ರದೇಶವು ಕಾಣಸಿಗುತ್ತದೆ. ಅರಣ್ಯ ಇಲಾಖೆಯ ಅನುಮತಿ ಪತ್ರ ಪಡೆದು(ಕೆಲವೊಮ್ಮೆ ಪಡೆಯದೆಯೂ ತೆರಳಬಹುದು) 2 ಕಿ.ಮೀ. ನಷ್ಟು ಕಚ್ಚಾರಸ್ತೆಯಲ್ಲಿ ನಡೆದು ಸಾಗಿದರೆ ಜಲಪಾತದ ಸೌಂದರ್ಯವು ಕಾಣುತ್ತದೆ.

ಉತ್ತರ ಕನ್ನಡ ಜಿಲ್ಲೆ, ಜಲಪಾತಗಳಿಗೆ ತವರು ಮನೆ. ಜಲಪಾತಗಳ ಜಿಲ್ಲೆಯೆಂದೇ ಕೆಲವೊಮ್ಮೆ ಕರೆಸಿಕೊಳ್ಳುವ ಈ ಪ್ರದೇಶ, ಮಳೆಗಾಲದ ದಿನಗಳಲ್ಲಿ ಜಿಲ್ಲೆಯ ಹಳ್ಳಿಗಳತ್ತ ‘ಪಾದಯಾತ್ರೆ’ ಮಾಡಿದರೆ ನಮಗೆ ಕಾಣಿಸುವುದು ಬಹುಪಾಲು ಜಲಪಾತಗಳೇ. ‘ಸಾತೊಡ್ಡಿಯ ಜಲಪಾತ’ವನ್ನು ಕಂಡವರು ಅದನ್ನು ಅಮೆರಿಕದ ಚಿಕ್ಕ ನಯಾಗರ ಜಲಪಾತ ಕ್ಕೆ ಹೋಲಿಸುವುದುಂಟು. ನಿತ್ಯ ಹರಿದ್ವರ್ಣದ ಕಾಡುಗಳು, ಮುಗಿಲೆತ್ತರದ ಬೆಟ್ಟಗಳಲ್ಲಿ ಹುಟ್ಟಿ ಪ್ರಪಾತಕ್ಕೆ ಧುಮುಕುವ ನದಿಗಳ ಜಲಧಾರೆ ನಿಧಾನವಾಗಿ ಪ್ರವಹಿಸುತ್ತಾ ಕಣಿವೆಗಳಲ್ಲಿ ನದಿಯಾಗಿ ಹರಿಯುವ ಪರಿ ಅನನ್ಯ.

ಜಲಪಾತದ ಅಕ್ಕ-ಪಕ್ಕ :  ತಂಪಾದ ವಾತಾವರಣ ಹಚ್ಚ ಹಸುರಿನ ವನಸಿರಿ, ಬಣ್ಣಬಣ್ಣದ ವಿದಿಧ ಪ್ರಕಾರದ ಹಕ್ಕಿಗಳ ಚಿಲಿಪಿಲಿ ಕಲರವ, ಬಂಡೆಗಳ ಮೇಲೆ ಮಧ್ಯೆ ಚಿಮ್ಮಿಕೊಂಡು ಕೆಳಗೆ ಹರಿದೋಡುವ ಜಲರಾಶಿ ಕಣ್ಣಿಗೆ ಮುದಕೊಡುತ್ತದೆ. ವರುಷವಿಡೀ ತನ್ನ ವೈಯಾರದಿಂದ ಶೋಭಿಸುವ ಸಾತೊಡ್ಡಿ ಜಲಪಾತ ಮಳೆಗಾಲದ ವೇಳೆ ತನ್ನ ಸೌಂದರ್ಯ ಮತ್ತು ಮೋಹಕತೆಯನ್ನು ಅರೆದು ಹೊಯ್ದಿರುವಂತೆ ಭಾಸವಾಗುತ್ತದೆ. ನಿಸರ್ಗದ ಮಧ್ಯೆ ಹಾಲುನೊರೆಯೋಪಾದಿಯಲ್ಲಿ ದುಮ್ಮಿಕ್ಕುವ ಜಲಪಾತದ ವೈಭವವನ್ನು ಕಾಣಲು ಪ್ರತಿದಿನ ಪ್ರವಾಸಿಕರ ದಂಡೇ ಸೇರಿರುತ್ತದೆ. ಈ ಜಲಧಾರೆಯ ಉಗಮ ಕಾಳಿನದಿಯ ಉಪನದಿಯಾದ ‘ಸೂರಬ್ಬಿ ಹಳ್ಳ”ದಿಂದಾಗಿದೆಯೆಂಬುದು ತಿಳಿದುಬರುವ ಸಂಗತಿ. ಸುಮಾರು ೫೦ ಅಡಿ ಎತ್ತರದಿಂದ ವಿಶಾಲವಾಗಿ ಕೆಳಗೆ ಧುಮುಕುತ್ತಾ ಝೇಂಕಾರಮಾಡಿ ಹರಿಯುವ ನದಿ ಪರ್ಯಟಕರನ್ನು ಮರುಳುಮಾಡುತ್ತದೆ.

ಜಲಪಾತ ತಲುಪಲು : ಯಲ್ಲಾಪುರದಿಂದ, ಸುಮಾರು ೨೦ ಕಿ.ಮೀ.ದೂರ ಸಾಗಲು,(ಆನಗೋಡ, ದೇಹಳ್ಳಿ, ಮಾರ್ಗದಲ್ಲಿ ಕ್ರಮಿಸಬೇಕು) ಸರಕಾರಿ ಬಸ್ಸುಗಳಿವೆ. ಆದರೆ ಅವುಗಳ ಸಂಖ್ಯೆ ಅತಿ ಕಡಿಮೆ. ಮಳೆಗಾಲದಲ್ಲಿ ಕೊನೆಯ ೮-೧೦ ಕಿ.ಮೀ.ದೂರದ ದಾರಿಯನ್ನು ಪಾದಯಾತ್ರೆ ಮಾಡಿ ಮುಟ್ಟುವುದು ಅನಿವಾರ್ಯವಾಗುತ್ತದೆ. ಸ್ವಂತ ವಾಹನ ವ್ಯವಸ್ಥೆಯಲ್ಲಿ ದಾರಿಯಲ್ಲಿ ಹೋಗುವಾಗ ಬಲಿತ ಭಾರಿ ಗಾತ್ರದ ಮರಗಳನ್ನು ನೋಡಬಹುದು. ಪರ್ವತಗಳು ಹಚ್ಚಹಸುರಿನಿಂದ ಆವೃತವಾಗಿರುವ ದೃಶ್ಯ ಕಣ್ಣಿಗೆ ಮುದಕೊಡುತ್ತದೆ. ಅಂಕುಡೊಂಕಾದ ರಸ್ತೆಯಲ್ಲಿ ಹೋಗುವುದು ಮನಸ್ಸಿಗೆ ಮುದಕೊಟ್ಟರೆ, ಅಲ್ಲಿನ ವನಸಂಪತ್ತನ್ನು ಫೋಟೋ ಕಣ್ಣುಗಳಿಂದ ಸೆರೆಹಿಡಿಯುವ ಪರಿ ಅನನ್ಯ.

Share. Facebook Twitter Pinterest LinkedIn Tumblr Email WhatsApp
Previous Articleತೀರ್ಥರೂಪದಲ್ಲಿ ಭಕ್ತರ ಇಷ್ಟಾರ್ಥ ನೆರವೇರಿಸುತ್ತಿರುವ ಬಿಲಗುಂಜಿ ಕಮಲೇಶ್ವರ
Next Article ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ 100 ನೇ ಜನೌಷಧಿ ಕೇಂದ್ರ ಉದ್ಘಾಟನೆ

Related Posts

ಎಸ್‌ಬಿಎಸ್ ಫಾರ್ಮ್‌ಹೌಸ್ ಮಂಗಳೂರು – ನಿಮ್ಮ ಕುಟುಂಬ ಮತ್ತು ಸ್ನೇಹಿತರಿಗಾಗಿ ಒಂದು ನೆಮ್ಮದಿಯ ತಾಣ

April 18, 2025

*ಕರಿಬಂಡೆಗಳ ಮೇಲೆ ಧುಮ್ಮಿಕ್ಕಿ ಹರಿಯುತ್ತಿರುವ ಉಂಚಳ್ಳಿ ಜಲಪಾತದ*

January 3, 2025

*ಉತ್ತರ ಕರ್ನಾಟಕ ಸಂಸ್ಕೃತಿಯನ್ನು ಬಿಂಬಿಸುವ ಉತ್ಸವ್ ರಾಕ್ ಗಾರ್ಡನ್*

November 28, 2024

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.