Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ರಾಷ್ಟ್ರೀಯ ಪಕ್ಷಗಳು ಮತದಾರರನ್ನೇ ಭ್ರಷ್ಟರನ್ನಾಗಿಸುತ್ತಿವೆ : ಎಸ್‌ಡಿಪಿಐ ಆರೋಪ
ಇತ್ತೀಚಿನ ಸುದ್ದಿಗಳು

ರಾಷ್ಟ್ರೀಯ ಪಕ್ಷಗಳು ಮತದಾರರನ್ನೇ ಭ್ರಷ್ಟರನ್ನಾಗಿಸುತ್ತಿವೆ : ಎಸ್‌ಡಿಪಿಐ ಆರೋಪ

March 13, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮಾ.13 : ಎರಡು ರಾಷ್ಟ್ರೀಯ ಪಕ್ಷಗಳು ಮತದಾರರನ್ನು ಓಲೈಸುವ ಕೆಲಸ ಮಾಡುತ್ತಿದ್ದು, ಚುನಾವಣೆಯ ನೀತಿ ನಿಯಮಗಳನ್ನು ಗಾಳಿಗೆ ತೂರಿ ಮತದಾರರನ್ನು ಭ್ರಷ್ಟರನ್ನಾಗಿಸುವ ಕೆಲಸ ಮಾಡುತ್ತಿವೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ರಾಷ್ಟ್ರೀಯ ಪಕ್ಷಗಳಿಗೆ ತಮ್ಮ ಸಾಧನೆಗಳನ್ನು ಹೇಳಿಕೊಂಡು ಜನರ ಮುಂದೆ ಹೋಗಲು ಅಜೆಂಡಾಗಳಿಲ್ಲ. ಓಟ್ ಬ್ಯಾಂಕ್‌ಗಾಗಿ ಚುನಾವಣೆಯ ನೀತಿಗಳನ್ನು ಗಾಳಿಗೆ ತೂರಿ ಮತದಾರರಿಗೆ ಆಮಿಷಗಳನ್ನೊಡ್ಡುತ್ತಿವೆ. ಚನಾವಣಾ ಆಯೋಗ ತಕ್ಷಣ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಬೇಕೆAದು ಒತ್ತಾಯಿಸಿದರು.
ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ, ತನ್ನ ತಪ್ಪುಗಳನ್ನು ಮರೆಮಾಚಲು ಭಾವನಾತ್ಮಕವಾಗಿ ಜನರನ್ನು ಕೆಣಕುತ್ತಿದೆ ಎಂದು ಆರೋಪಿಸಿದರು.
ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ರಚನಾತ್ಮಕವಾಗಿ ಭ್ರಷ್ಟ ವ್ಯವಸ್ಥೆಯನ್ನು ವಿರೋಧಿಸುವಲ್ಲಿ ವಿಫಲವಾಗಿವೆ. ಕೊಡಗಿನ ಜ್ವಲಂತ ಸಮಸ್ಯೆಗಳನ್ನು ಸರಿಪಡಿಸುವಲ್ಲಿ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವಲ್ಲಿ ವಿಫಲವಾಗಿರುವ ಬಿಜೆಪಿ ಸರ್ಕಾರದ ವಿರುದ್ಧ ಈ ಪಕ್ಷಗಳು ಯಾವ ರೀತಿಯ ಹೋರಾಟವನ್ನು ಮಾಡಿವೆ ಎಂದು ಪ್ರಶ್ನಿಸಿದರು.
ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ವಿತರಿಸುವ ಬದಲು ಚುನಾವಣೆ ಮುಗಿದ ಮೇಲೆ ಕಾಂಗ್ರೆಸ್ ಪಕ್ಷದ ಎಂಎಲ್‌ಎ ಗಳು ಬಿಜೆಪಿಗೆ ಮಾರಾಟ ಆಗುವುದಿಲ್ಲ ಎಂಬ ಬಗ್ಗೆ ಗ್ಯಾರಂಟಿ ನೀಡಲಿ ಎಂದು ವ್ಯಂಗ್ಯವಾಡಿದರು.
ಎರಡೂವರೆ ದಶಕಗಳ ಕಾಲ ಕೊಡಗಿನ ಜನತೆ ಬಿಜೆಪಿಯನ್ನು ಆಯ್ಕೆ ಮಾಡಿ ವಿಧಾನಸೌಧದಲ್ಲಿ ಕೊಡಗಿನ ಪರ ಧ್ವನಿಯಾಗಬೇಕೆಂದು ಬಯಸಿದರು. ಆದರೆ ಜಮ್ಮಾ ಬಾಣೆ ಮತ್ತು ರೈತರ ಸಮಸ್ಯೆಗೆ ಸ್ಪಂದನೆ ಸಿಕ್ಕಿಲ್ಲ, ಕೃಷಿ ಅವಲಂಬಿತ ಜಿಲ್ಲೆ ಕೊಡಗಿಗೆ ವಿಶೇಷ ಅನುದಾನ ತರುವಲ್ಲಿ ಶಾಸಕರು ವಿಫಲರಾಗಿದ್ದಾರೆ, ಕಸ್ತೂರಿ ರಂಗನ್ ವರದಿಯ ಗೊಂದಲ ಮುಂದುವರೆದಿದೆ, ವನ್ಯಜೀವಿಗಳ ಉಪಟಳ ನಿಂತ್ತಿಲ್ಲ ಎಂದು ಟೀಕಿಸಿದರು.
ಎಸ್‌ಡಿಪಿಐ ಪಕ್ಷದಿಂದ ಈ ಬಾರಿ ಮಡಿಕೇರಿ ವಿಧಾನಸಭಾ ಕ್ಷೇತ್ರದಿಂದ ಅಮೀನ್ ಮೊಹಿಸಿನ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದ್ದು, ಅಭಿವೃದ್ಧಿ ಪರ, ಭ್ರಷ್ಟಾಚಾರ ಮುಕ್ತ ಕೊಡಗನ್ನು ನಿರ್ಮಿಸಲು ಇವರಿಗೆ ಜನತೆ ಮತ ನೀಡಬೇಕೆಂದು ಅಬ್ದುಲ್ ಮಜೀದ್ ಮನವಿ ಮಾಡಿದರು.
ಮಡಿಕೇರಿ ಕ್ಷೇತ್ರದ ಎಸ್‌ಡಿಪಿಐ ಅಭ್ಯರ್ಥಿ ಅಮಿನ್ ಮೊಹಿಸಿನ್ ಮಾತನಾಡಿ, ರಾಷ್ಟ್ರೀಯ ಪಕ್ಷಗಳು ಕುಟುಂಬ ರಾಜಕಾರಣ ಮಾಡುತ್ತಿದ್ದು, ಬಡವರ ಪರವಾದ ಕಾಳಜಿಯನ್ನು ಹೊಂದಿಲ್ಲ. ಬಿಜೆಪಿ ಸರ್ಕಾರದ ನಿರ್ಲಕ್ಷ್ಯದಿಂದ ಕೊಡಗು ಅಭಿವೃದ್ಧಿ ಶೂನ್ಯವಾಗಿದೆ ಎಂದು ಆರೋಪಿಸಿದರು.
ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷರು ಜಿಲ್ಲೆಯ ಶಾಸಕರಾಗಿದ್ದರೂ ಬಡವರ ಪರ ಕೆಲಸ ಮಾಡುವ ಬದಲು ಭೂಮಾಲೀಕರ ಪರ ಉತ್ಸುಕತೆ ತೋರುತ್ತಿದ್ದಾರೆ. ಇವರ ಅಧೀನದ ಅಕ್ರಮ ಸಕ್ರಮ ಸಮಿತಿ ಸಭೆ ಎಷ್ಟು ನಡೆದಿದೆೆ ಎನ್ನುವುದನ್ನು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.
ಕೊಡಗಿನಲ್ಲಿ ಕೂಲಿಕಾರ್ಮಿಕರು, ತೋಟ ಕಾರ್ಮಿಕರ ಸಮಸ್ಯೆಗೆ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಪರಿಶಿಷ್ಟ ಜಾತಿ ಮತ್ತು ಪಂಗಡದ ಆದಿವಾಸಿಗಳ ಹಾಡಿಗಳನ್ನು ಅಭಿವೃದ್ಧಿಗೊಳಿಸದೆ ಮೂಲ ನಿವಾಸಿಗಳಿಗೆ ಅನ್ಯಾಯ ಮಾಡಲಾಗಿದೆ. ಬಿಜೆಪಿ ಪ್ರಣಾಳಿಕೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಇದ್ದರೂ, ಶಾಸಕರ ಇಚ್ಛಾಶಕ್ತಿಯ ಕೊರತೆಯಿಂದ ಕೊಡಗು ಇದರಿಂದ ಹೊರತಾಗಿದೆ. ಗ್ರಾಮೀಣ ಭಾಗದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇದೆ, ಜನತೆಯ ಬಹುದಿನಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಬೇಡಿಕೆಯನ್ನು ಕಡೆಗಣಿಸಲಾಗಿದೆ ಎಂದು ಟೀಕಿಸಿದರು.
ವಿರೋಧ ಪಕ್ಷವಾದ ಕೊಡಗು ಕಾಂಗ್ರೆಸ್‌ಗೆ ಹೋರಾಟ ಮಾಡುವ ಎದೆಗಾರಿಕೆ ಇಲ್ಲದಾಗಿದೆ. ಕಾಂಗ್ರೆಸ್ ಪಕ್ಷದ ನಾಯಕರು ಜಿಲ್ಲೆಗೆ ಆಗಮಿಸಿದಾಗ ವಿರೋಧ ಪಕ್ಷದವರಿಂದ ಅವಮಾನವಾಗಿದ್ದರು, ನಾಯಕನಿಗೆ ನ್ಯಾಯಕೊಡಿಸುವ ಧೈರ್ಯವನ್ನು ಇಲ್ಲಿನ ಮುಖಂಡರು ತೋರಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಗ್ರಾ.ಪಂ ಚುನಾವಣೆಯನ್ನು ಎದುರಿಸಲು ಕೂಡ ಅರ್ಹತೆ ಇಲ್ಲದಾಗಿದೆ. ನಗರಸಭೆಯಲ್ಲಿ 10 ಸದಸ್ಯರನ್ನು ಹೊಂದಿದ್ದ ಪಕ್ಷ ಇದೀಗ ಒಬ್ಬ ಸದಸ್ಯನಿಂದ ತೃಪ್ತಿ ಪಡುವಂತ್ತಾಗಿದೆ. ಕಾಂಗ್ರೆಸ್ ನ ಈ ದುಸ್ಥಿತಿಯನ್ನು ಜನರು ಅರಿತ್ತಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ಅಮ್ಜದ್ ಖಾನ್, ಜಿಲ್ಲಾಧ್ಯಕ್ಷ ಅಬ್ದುಲ್ ಅಡ್ಕರ್, ಮಡಿಕೇರಿ ಕ್ಷೇತ್ರ ಸಮಿತಿ ಅಧ್ಯಕ್ಷ ಉಸ್ಮಾನ್ ಹಾಗೂ ಜಿಲ್ಲಾ ಸಮಿತಿ ಸದಸ್ಯೆ ಮೇರಿ ವೇಗಸ್ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Articleಈಶ್ವರಪ್ಪ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಜೆಡಿಎಸ್ ಒತ್ತಾಯ
Next Article ಮಾ.14 ರಿಂದ ಮಡಿಕೇರಿ ತಾಲ್ಲೂಕಿನ ಗ್ರಾಮಗಳಿಗೆ ಸರಕಾರದ ಪ್ರಗತಿ ರಥಯಾತ್ರೆ

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.