ಮಡಿಕೇರಿ ಮಾ.16 : ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್, 20 ರಂದು ಕೈಗಾರಿಕಾ ಸ್ಪಂದನಾ ಸಭೆ ನಡೆಯಲಿದೆ. ಈ ಸಭೆಯಲ್ಲಿ ಉದ್ದಿಮೆದಾರರ ಸಮಸ್ಯೆ ಚರ್ಚಿಸಲಾಗುವುದು.
ಆದ್ದರಿಂದ ಕೈಗಾರಿಕೆಗಳ ಬಗ್ಗೆ ಸಮಸ್ಯೆಗಳಿದ್ದಲ್ಲಿ, ಲಿಖಿತ ರೂಪದಲ್ಲಿ ಈ ಕಾರ್ಯಾಲಯಕ್ಕೆ ಮಾರ್ಚ್, 18 ರೊಳಗೆ ಇ-ಮೇಲ್ dicjdkodagu@gmail.com ಮುಖಾಂತರ ಅಥವಾ ಖುದ್ದಾಗಿ ಲಿಖಿತವಾಗಿ ಸಲ್ಲಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.









