ಮಡಿಕೇರಿ ಮಾ.18 : ಜಿಲ್ಲಾಡಳಿತ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಯ ಫಲಾನುಭವಿಗಳ ಸಮ್ಮೇಳನ ಕಾರ್ಯಕ್ರಮದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಡಗಿಗೆ ಆಗಮಿಸಿದ್ದು, ಕೆ.ಬಾಡಗ ಗ್ರಾಮದ ಗಾಲ್ಫ್ ಮೈದಾನದ ಹೆಲಿಪ್ಯಾಡ್ ನಲ್ಲಿ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಹಾಗೂ ಕೆ.ಜಿ.ಬೋಪಯ್ಯ ಆತ್ಮೀಯವಾಗಿ ಬರಮಾಡಿಕೊಂಡರು.









