ಮಡಿಕೇರಿ ಮಾ.19 : ಭಾರತೀಯ ಜನತಾ ಪಾರ್ಟಿಯ ಸಿದ್ದಾಪುರ ಶಕ್ತಿ ಕೇಂದ್ರದ ವತಿಯಿಂದ ಇಂದು ಸಿದ್ದಾಪುರದಲ್ಲಿ “ಮಹಾಶಕ್ತಿ ಸಂಗಮ” ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಪಕ್ಷಕ್ಕಾಗಿ ದುಡಿದ ಹಿರಿಯರನ್ನು ಸನ್ಮಾನಿಸಲಾಯಿತು.ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯ ಗಣೇಶ್ ಕಾರ್ಣಿಕ್ ಹಾಗೂ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.











