ಸೋಮವಾರಪೇಟೆ ಮಾ.25 : ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ, ಆರೋಗ್ಯ ಮತ್ತು ನೈರ್ಮಲ್ಯ ಇಲಾಖೆಯ ಸಹಯೋಗದಲ್ಲಿ ನೀರು, ನೈರ್ಮಲ್ಯ, ಆರೋಗ್ಯ ಸಂರಕ್ಷಣೆ, ನೀರಿನಿಂದ ಹರಡುವ ರೋಗಗಳು, ಶೌಚಗೃಹಗಳ ಬಳಕೆಯ ಜಾಗೃತಿ ಬಗ್ಗೆ ಈಚೆಗೆ ಆಯೋಜಿಸಿದ್ದ ಆನ್ಲೈನ್ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ 9 ನೇ ತರಗತಿ ವಿದ್ಯಾರ್ಥಿಗಳಾದ ಪಿ.ಬಿ.ಸಂಜನಾ ಕೊಡಗು ಜಿಲ್ಲಾ ಮಟ್ಟದಲ್ಲಿ ಪ್ರಥಮ ಹಾಗು ಕೆ.ಎಚ್.ಸೌಜನ್ಯ ದ್ವಿತೀಯ ಸ್ಥಾನ ಪಡೆದಿದ್ದಾರೆ.









