Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *2.60 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲು ಆಗ್ರಹ*
ಇತ್ತೀಚಿನ ಸುದ್ದಿಗಳು

*2.60 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲು ಆಗ್ರಹ*

March 28, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮಾ.28 : ಜನ ಕಲ್ಯಾಣಕ್ಕಾಗಿ ಹತ್ತು ಹಲ ಕಾರ್ಯಕ್ರಮಗಳನ್ನು ರೂಪಿಸುವ ಸರ್ಕಾರ, ಇವುಗಳ ಅನುಷ್ಠಾನಕ್ಕೆ ಪೂರಕವಾಗಿ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.60 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ-ಎಸ್‌ಟಿ ನೌಕರರ ಸಮನ್ವಯ ಸಮಿತಿಯ ಕೇಂದ್ರ ಸಮಿತಿಯ ರಾಜ್ಯಾಧ್ಯಕ್ಷ ಡಿ.ಶಿವಶಂಕರ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧ ಇಲಾಖೆಗಳಲ್ಲಿ ಮಂಜೂರಾತಿಯ 7.73 ಲಕ್ಷ ಹುದ್ದೆಗಳಿವೆ. ಇದರಲ್ಲಿ 5.20 ಲಕ್ಷ ಹುದ್ದೆಗಳು ಭರ್ತಿಯಾಗಿವೆ. ಸುಮಾರು 80 ಸಾವಿರ ಪರಿಶಿಷ್ಟ ಜಾತಿಗೆ ಸೇರಿದವರು ಮತ್ತು 25 ಸಾವಿರ ಪರಿಶಿಷ್ಟ ಪಂಗಡಕ್ಕೆ ಸೇರಿದವರು ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಮುಖವಾಗಿ ಸರ್ಕಾರದ ಯೋಜನೆಗಳ ಅನುಷ್ಟಾನ ಕಾರ್ಯಕ್ಕೆ ಇವರುಗಳ ಅಗತ್ಯತೆ ಹೆಚ್ಚಾಗಿದೆ. ಹೀಗಿದ್ದೂ, ಪ್ರಸ್ತುತ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆಯೇ ಹೊರತು, ಅವುಗಳ ಅನುಷ್ಟಾನಕ್ಕೆ ಪೂರಕವಾಗಿ ಖಾಲಿ ಹುದ್ದೆಗಳ ಭರ್ತಿಯಾಗುತ್ತಿಲ್ಲವೆಂದು ಟೀಕಿಸಿದರು.
ರಾಜ್ಯದ ವಿವಿಧ ಇಲಾಖೆಗಳಲ್ಲಿ 2001 ರಿಂದಲೇ 20 ಸಾವಿರಕ್ಕೂ ಹೆಚ್ಚಿನ ‘ಬ್ಯಾಕ್ ಲಾಗ್’ ಹುದ್ದೆಗಳು ಭರ್ತಿಯಾಗದೆ ಹಾಗೆಯೇ ಉಳಿದಿದೆ. ಇಂದು ಖಾಲಿ ಇರುವ ಹುದ್ದೆಗಳ ಭರ್ತಿಗೆ ಬದಲಾಗಿ ಹೊರ ಗುತ್ತಿಗೆ ನೌಕರರನ್ನು ನೇಮಕ ಮಾಡಿಕೊಂಡು ಅವರನ್ನು ಶೋಷಣೆಗೆ ಒಳಪಡಿಸಲಾಗುತ್ತಿದೆಯೆಂದು ಆರೋಪಿಸಿದ ಶಿವಶಂಕರ, ಹೊರ ಗುತ್ತಿಗೆ ನೌಕರರನ್ನು ಖಾಯಂ ಗೊಳಿಸಬೇಕೆಂದು ಒತ್ತಾಯಿಸಿದರು.
ಜೇಷ್ಠತಾ ಪಟ್ಟಿಗೆ ಒತ್ತಾಯ- ವಿವಿಧ ಇಲಾಖೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರು ಮುಂಬಡ್ತಿ ಇಲ್ಲದೆ ಶೋಷಣೆೆಗೆ ಒಳಗಾಗಿದ್ದಾರೆ. ಯಾವುದೇ ಇಲಾಖೆಯಲ್ಲಿ ನೌಕರರ ಜೇಷ್ಠತಾ ಪಟ್ಟಿ ಇಲ್ಲದಿರುವುದು ಮುಂಬಡ್ತಿಗೆ ತೊಡಕನ್ನುಂಟು ಮಾಡುತ್ತಿದೆಯೆಂದು ಆರೋಪಿಸಿ, ತಕ್ಷಣ ಎಲ್ಲಾ ಇಲಾಖೆಗಳಲ್ಲು ಜೇಷ್ಠತಾ ಪಟ್ಟಿಯನ್ನು ಸಿದ್ಧಪಡಿಸಿ ಮುಂಬಡ್ತಿಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಗೌರವ ನೀಡುವಲ್ಲಿ ಜಾತಿ ಅಡ್ಡ- ಪ್ರಸ್ತುತ ರಾಜ್ಯದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸುವ ಯೋಗ್ಯತೆ, ಪ್ರತಿಭೆಗಳು ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದಲ್ಲಿ ಇದ್ದಾರೆ. ಹೀಗಿದ್ದೂ ಅಂತಹ ಹುದ್ದೆಗಳನ್ನು ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ನೀಡುವಲ್ಲಿ ಜಾತಿ ಕೆಲಸ ಮಾಡುವ ಮೂಲಕ ಅವರಿಗೆ ದೊರಕದಂತೆ ಮಾಡುತ್ತಿದೆ. ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಪ್ರೊ.ಚಂದ್ರಕಾಂತ್ ಎಂಬ ಪ್ರಾಮಾಣಿಕ, ಅಣುಭವಿ ಇದ್ದರು ಆ ಹುದ್ದೆಯಿಂದ ಅವರನ್ನು ವಂಚಿಸಲಾಗಿದೆಯೆoದು ಶಿವಶಂಕರ ಅವರು ಆರೋಪಿಸಿದರು.
ಮೂಗಿಗೆ ತುಪ್ಪ ಸವರಿದ ಸರ್ಕಾರ- ಮೀಸಲಾತಿಗಾಗಿ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಗಳು ಸುದೀರ್ಘ ಧರಣಿ ನಡೆಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶೇ.17 ರ ಮೀಸಲಾತಿಗೆ ಮತ್ತೆ ಶೇ.7 ರಷ್ಟು ಮೀಸಲಾತಿ ಸೇರಿಸುವುದಾಗಿ ತಿಳಿಸಿ ಮೂಗಿಗೆ ತುಪ್ಪ ಸವರಿದೆ. ಮೀಸಲಾತಿಯ ಹೆಚ್ಚಳದ ಬಗ್ಗೆ ಲೋಕಸಭೆಯಲ್ಲಿ ಚರ್ಚಿತವಾಗಿ ರಾಷ್ಟ್ರಪತಿಗಳ ಅಂಕಿತ ಬೀಳುವುದು ಅವಶ್ಯ. ಆದರೆ, ರಾಜ್ಯ ಸರ್ಕಾರ ಇಂತಹ ಪ್ರಸ್ತಾವನೆಯನ್ನೆ ಕೇಂದ್ರಕ್ಕೆ ಕಳುಹಿಸಿಲ್ಲವೆಂದು ಗಂಭಿರ ಆರೋಪ ಮಾಡಿದರು.
ಸರ್ಕಾರಿ ನೌಕರರ ಬೇಡಿಕೆಯಂತೆ ಎನ್‌ಪಿಎಸ್ ಪಿಂಚಣಿ ಯೋಜನೆಯ ಬದಲು ಹಳೆಯ ಪಿಂಚಣಿ ಯೋಜನೆಯನ್ನೆ ಜಾರಿಗೆ ತರಬೇಕೆಂದು ಅವರು ಒತ್ತಾಯಿಸಿದರು.
ನೂತನ ಸಮಿತಿ- ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ-ಎಸ್‌ಟಿ ನೌಕರರ ಸಮನ್ವಯ ಸಮಿತಿಯ ಕೊಡಗು ಜಿಲ್ಲಾ ಘಟಕವನ್ನು ಮರು ರಚಿಸಲಾಗಿದ್ದು, ಅಧ್ಯಕ್ಷರಾಗಿ ಎಂ.ಎಸ್.ಮಹೇoದ್ರ, ಪ್ರಧಾನ ಕಾರ್ಯದರ್ಶಿಯಾಗಿ ಕೆ.ಎಸ.ಚಂದ್ರಮೌಳಿ, ಕೋಶಾಧ್ಯಕ್ಷರಾಗಿ ಜಿ. ಮಂಜುನಾಥ್, ಕುಶಾಲನಗರ ತಾಲ್ಲೂಕು ಅಧ್ಯಕ್ಷರಾಗಿ ನಂದೀಶ್ ಕುಮಾರ್, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕು ಅಧ್ಯಕ್ಷರಾಗಿ ಟಿ.ಎಸ್.ಮಹೇಶ್, ಮಡಿಕೇರಿ ತಾಲ್ಲೂಕು ಅಧ್ಯಕ್ಷರಾಗಿ ಎಂ.ಎನ್. ಜನಾರ್ಧನ, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷರಾಗಿ ಬಿ.ಎಸ್. ದಿನೇಶ್ ಕಾರ್ಯನಿರ್ವಹಿಸಲಿದ್ದಾರೆ. ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ ಎಸ್.ಕೆ. ರಾಣಿ ಅವರು ಕಾರ್ಯನಿರ್ವಹಿಸಲಿದ್ದಾರೆಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ರಾಜ್ಯ ಉಪಾಧ್ಯಕ್ಷರಾದ ಕೆಂಪ ಸಿದ್ದಯ್ಯ, ಪದಾಧಿಕಾರಿಗಳಾದ ಸಿದ್ದರಾಜು, ಅರುಣ್, ಸತೀಶ್ ಹಾಗೂ ಮುತ್ತಪ್ಪ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ನಾಪೋಕ್ಲು ಪೋಲೀಸರ ಕಾರ್ಯಾಚರಣೆ : ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ*
Next Article *ಕೊಡವ ಅಭಿವೃದ್ಧಿ ನಿಗಮಕ್ಕೆ 250 ಕೋಟಿ ರೂ. ಮೀಸಲಿಡಲು ಒತ್ತಾಯ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.