Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಆರೋಗ್ಯದ ಸಮಸ್ಯೆಗೆ ರಾಮಬಾಣ ಕರ್ಪೂರ
ಇತ್ತೀಚಿನ ಸುದ್ದಿಗಳು

ಆರೋಗ್ಯದ ಸಮಸ್ಯೆಗೆ ರಾಮಬಾಣ ಕರ್ಪೂರ

March 31, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಹಿಂದೂ ಸಂಸ್ಕೃತಿಯಲ್ಲಿ ಕರ್ಪೂರಕ್ಕೆ ಎಲ್ಲಿಲ್ಲದ ಸ್ಥಾನಮಾನವಿದೆ. ಯಾವುದೇ ಶುಭಕಾರ್ಯವಿರಲಿ ಅಥವಾ ಪೂಜೆಗಳಿರಲಿ ಕರ್ಪೂರ ಇರಲೇಬೇಕು. ಆದರೆ ಇಷ್ಟಕ್ಕೆ ಕರ್ಪೂರದ ಬಳಕೆ ಮುಗಿಯುವುದಿಲ್ಲ. ಏಕೆಂದರೆ ಆರೋಗ್ಯದ ದೃಷ್ಟಿಯಿಂದಲೂ ಕರ್ಪೂರ ಬಲು ಉಪಕಾರಿ.

ಕರ್ಪೂರದಲ್ಲಿ ಎರಡು ವಿಧ. ಒಂದು ಸೇವನೆಗೆ ಯೋಗ್ಯವಾದ ಕರ್ಪೂರ ಇನ್ನೊಂದು ತಯಾರು ಮಾಡಲ್ಪಟ್ಟ ಕರ್ಪೂರ. ಕರ್ಪೂರದ ಮರದ ಕಾಂಡದಿಂದ ತಯಾರಿಸ್ಪಡುವುದು ಒಂದು ರೀತಿಯ ಕರ್ಪೂರವಾದರೆ ಇನ್ನೊಂದನ್ನು ಟರ್ಪೆಂಟೈನ್ ತೈಲದಿಂದ ತಯಾರಿಸಲಾಗುತ್ತದೆ.

ಕರ್ಪೂರದಲ್ಲಿ ಪ್ರತಿಜೀವಕ ಮತ್ತು ಆಂಟಿಫಂಗಲ್ ಗುಣಗಳಿವೆ. ಈ ಕಾರಣಕ್ಕಾಗಿ, ಇದು ನಮ್ಮ ಆರೋಗ್ಯ ಮತ್ತು ಸೌಂದರ್ಯಕ್ಕೂ ತುಂಬಾ ಪ್ರಯೋಜನಕಾರಿಯಾಗಿದೆ. ಕರ್ಪೂರ ಮತ್ತು ಕರ್ಪೂರ ಎಣ್ಣೆ ಎರಡೂ ಬಹಳ ಉಪಯುಕ್ತ ವಸ್ತುಗಳು.

ಸಾಮಾನ್ಯವಾಗಿ ನರಗಳ ಉಳುಕುವಿಕೆ. ಉರಿ ಬಾವು ಮತ್ತು ವಾತಗ್ರಸ್ತ ನೋವುಗಳಿಗೆ ಲೇಪಿ ಸಲು ಇದನ್ನು ಉಪಯೋಗಿಸುತ್ತಾರೆ. ಅತಿಸಾರದಂಥ ರೋಗ ಗಳಲ್ಲಿ ಶಮನಕಾರಿ ಯಾಗಿ ಹೃದಯವನ್ನು ಉತ್ತೇಜನಗೊಳಿಸುವಲ್ಲಿ ಉತ್ತೇಜನಕಾರಿ ಯಾಗಿ ಇದರ ಉಪಯೋಗವಿದೆ. ಸೌಮ್ಯ ನಂಜುನಿರೋಧಕ ಹಾಗೂ ಸುಗಂಧಗುಣಯುಕ್ತವಾದ್ದರಿಂದ ಇದನ್ನು ಸೌಂದರ್ಯವರ್ಧಕ ವನ್ನಾಗಿಯೂ ಬಳಸುತ್ತಾರೆ. ಪೂಜಾಸಮಾರಂಭದಲ್ಲಿ ದೇವರ ಮುಂದೆ ಉರಿಸಲು ಉಪಯೋಗಿಸುವ ಕರ್ಪುರದಲ್ಲಿ ಶುದ್ಧ ಕರ್ಪುರದ ಪ್ರಮಾಣ ಅತ್ಯಲ್ಪ; ಏನೂ ಇರುವುದಿಲ್ಲವೆಂದರೂ ತಪ್ಪಾಗಲಾರದು. ಸೆಲ್ಯುಲೋಸ್ ಅಸಿಟೇಟ್ ಮತ್ತು ಸೆಲ್ಯುಲೋಸ್ ನೈಟ್ರೇಟ್ ಎಂಬ ಪ್ಲಾಸ್ಟಿಕುಗಳಲ್ಲಿ ಕರ್ಪುರವನ್ನು ಬಳಸುವುದರಿಂದ ಅವು ಮೃದುತ್ವ ಪಡೆಯುತ್ತವೆ. ಇಂಥ ಮೃದು ಪ್ಲಾಸ್ಟಿಕುಗಳಿಂದ ಬೇಕಾದ ಆಟಿಕೆಗಳನ್ನು ಹಾಗೂ ಜೀವನದ ನಿತ್ಯೋಪಯೋಗಿ ವಸ್ತುಗಳನ್ನು ತಯಾರಿಸಬಹುದು.

ಗುಳ್ಳೆಗಳು ಅಥವಾ ಬೆವರುಸಾಲೆಗಳಿಗೆ ಪರಿಹಾರ: ಕರ್ಪೂರ ಎಣ್ಣೆಯನ್ನು ಚರ್ಮದ ಮೇಲೆ ಹಚ್ಚುವುದರಿಂದ ಬೆವರುಸಾಲೆ ಮತ್ತು ಗುಳ್ಳೆಗಳ ಸಮಸ್ಯೆಗೆ ಪರಿಹಾರ ಕಾಣಬಹುದು.

ಹಳೆಯ ಕಲೆಗಳಿಗೆ ಪರಿಹಾರ: ಮುಖದ ಮೇಲಿರುವ ಹಳೆಯ ಕಲೆಗಳನ್ನು ಅಥವಾ ದೇಹದ ಇತರ ಭಾಗಗಳಲ್ಲಿರುವ ಕಲೆಗಳನ್ನು ಕರ್ಪೂರದ ಎಣ್ಣೆ ಹಚ್ಚುದರಿಂದ ಹೋಗಲಾಡಿಸಬಹುದು.

ಒತ್ತಡ ಕಡಿಮೆ ಮಾಡುತ್ತದೆ: ಕರ್ಪೂರದ ಎಣ್ಣೆಯನ್ನು ಹಣೆಯ ಮೇಲೆ ಹಚ್ಚುವುದರಿಂದ ಒತ್ತಡ ಕಡಿಮೆಯಾಗುತ್ತದೆ.

ಕೂದಲು ಸಮಸ್ಯೆಗೆ ಪರಿಹಾರ: ಕರ್ಪೂರ ಎಣ್ಣೆಯಿಂದ ಮಸಾಜ್ ಮಾಡುವುದರಿಂದ ಕೂದಲು ಉದುರುವುದು ಮತ್ತು ತಲೆಹೊಟ್ಟು ಸಮಸ್ಯೆಯನ್ನು ದೂರ ಮಾಡಬಹುದು.

ಬೋಳು ಸಮಸ್ಯೆ: ಇನ್ನು ಬೋಳು ಸಮಸ್ಯೆಯಿದ್ದರೆ ಕರ್ಪೂರ ಎಣ್ಣೆ ಕೂದಲನ್ನು ಮತ್ತೆ ಬೆಳೆಯಲು ಸಹಾಯ ಮಾಡುತ್ತದೆ ಎಂದು ಹೇಳಾಗುತ್ತದೆ. ಇದಕ್ಕಾಗಿ ಕರ್ಪೂರ ಎಣ್ಣೆಯನ್ನು ಮೊಸರಿನಲ್ಲಿ ಬೆರೆಸಿ ಕೂದಲಿನ ಬೇರುಗಳಿಗೆ ಹಚ್ಚಿ ಒಂದು ಗಂಟೆಯ ನಂತರ ಕೂದಲು ತೊಳೆಯಬೇಕು.

 ಪಾದದ ತೊಂದರೆಗೆ ಪ್ರಯೋಜನಕಾರಿ: ಪಾದದ ಸಮಸ್ಯೆಯಿದ್ದರೆ, ಒಂದು ಟಬ್‌ನಲ್ಲಿ ಉಗುರು ಬೆಚ್ಚಗಿನ ನೀರಿನಲ್ಲಿ ಕರ್ಪೂರ ಎಣ್ಣೆ ಮಿಶ್ರಣ ಮಾಡಿ ಪಾದಗಳನ್ನು ಮುಳುಗಿಸಿಡಿ. ಇದರಿಂದ ಪಾದಗಳು ಸ್ವಚ್ಛಗೊಳ್ಳುವುದಲ್ಲದೆ, ಪಾದಗಳಲ್ಲಿನ ಸೋಂಕು ಅಥವಾ ಶಿಲೀಂಧ್ರಗಳ ಸಮಸ್ಯೆಯನ್ನು ದೂರ ಮಾಡುತ್ತದೆ.

ನೋವಿಗೆ ಪರಿಹಾರ: ದೇಹದ ಯಾವುದೇ ಭಾಗವು ನೋವಿನಿಂದ ಕೂಡಿದ್ದರೆ, ಕರ್ಪೂರ ಎಣ್ಣೆಯನ್ನು ಸ್ಪಲ್ಪ ಬಿಸಿ ಮಾಡಿ ನೋವಿರುವ ಭಾಗದಲ್ಲಿ ಮಸಾಜ್ ಮಾಡಿಕೊಳ್ಳಿ. ಇದರಿಂದ ಸಹ ನೋವು ಕಡಿಮೆಯಾಗುತ್ತದೆ.

ಉರಿಯೂತ: ಗಾಯವಾಗಿ ಉರಿಯೂತ ಅನುಭವಿಸುತ್ತಿದ್ದರೆ ಅಥವಾ ಊದಿಕೊಂಡಿದ್ದರೆ ಆ ಭಾಗಕ್ಕೆ ಕರ್ಪೂರದ ಎಣ್ಣೆಯನ್ನು ಹಚ್ಚಿದರೆ ನೋವು ಶಮನವಾಗುತ್ತದೆ. ದೇಹದಲ್ಲಿ ಮೊಡವೆ ಅಥವಾ ತ್ವಚೆಯ ಮೇಲೆ ಇನ್ಯಾವುದೇ ಸಮಸ್ಯೆಗಳಿದ್ದರೆ ಅಲ್ಲಿಗೆ ಕರ್ಪೂರ ಹಚ್ಚಿದರೆ ಉತ್ತಮ.

ಸ್ನಾಯು ಸೆಳೆತ: ಸ್ನಾಯು ಸೆಳೆತವಿರುವ ಜಾಗಕ್ಕೆ ಕರ್ಪೂರ ಹಚ್ಚಿದರೆ ಸೆಳೆತ ನಿಲ್ಲುತ್ತದೆ.

ಶೀತ ನೆಗಡಿ: ಶೀತ ನೆಗಡಿಯಿಂದ ಬಳಲುತ್ತಿದ್ದರೆ, ಮೂಗು ಕಟ್ಟಿದ್ದರೆ ಕರ್ಪೂರದ ಗಂಧವನ್ನು ಒಳಸೇದಿಕೊಳ್ಳುತ್ತಿದ್ದರೆ ಶೀತ ಕಡಿಮೆಯಾಗುತ್ತದೆ.

Share. Facebook Twitter Pinterest LinkedIn Tumblr Email WhatsApp
Previous Article*ಭವಿಷ್ಯದಲ್ಲಿ ಕೊಡಗಿನ ಆಟಗಾರರು ಭಾರತ ಫುಟ್ಬಾಲ್ ತಂಡವನ್ನು ಪ್ರತಿನಿಧಿಸಲಿದ್ದಾರೆ :  ಲಕ್ಷ್ಮಣ್ ಭಟ್ರೈ*
Next Article *ಅಶ್ವಿನಿ ಆಸ್ಪತ್ರೆಯ ಸ್ಥಾಪಕ ದಿ.ಬೇ.ಸು. ಶೇಷಾದ್ರಿಯವರಿಗೆ ನುಡಿ ನಮನ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.