Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*
  • *ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*
  • *ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕುಶಾಲನಗರ : “ಹಳ್ಳಿ ಹಬ್ಬ” ಸಮಾರೋಪ : ಮುಂದಿನ ಪೀಳಿಗೆಗೆ ಉತ್ತಮ ಸಂಸ್ಕಾರ ನೀಡಿ : ಬಿ.ಜಿ.ಅನಂತಶಯನ*
ಇತ್ತೀಚಿನ ಸುದ್ದಿಗಳು

*ಕುಶಾಲನಗರ : “ಹಳ್ಳಿ ಹಬ್ಬ” ಸಮಾರೋಪ : ಮುಂದಿನ ಪೀಳಿಗೆಗೆ ಉತ್ತಮ ಸಂಸ್ಕಾರ ನೀಡಿ : ಬಿ.ಜಿ.ಅನಂತಶಯನ*

March 31, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link
ಕುಶಾಲನಗರ ಮಾ.31 :   ಮುಂದಿನ ಪೀಳಿಗೆಗೆ  ಉತ್ತಮ ಸಂಸ್ಕೃತಿ, ಸಂಸ್ಕಾರವನ್ನು ತಿಳಿಸಿಕೊಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್  ಕೊಡಗು ಜಿಲ್ಲಾಧ್ಯಕ್ಷ  ಬಿ.ಜಿ. ಅನಂತಶಯನ ತಿಳಿಸಿದ್ದಾರೆ.
 ಕರ್ನಾಟಕ ಜಾನಪದ ಪರಿಷತ್ ಕೊಡಗು ಜಿಲ್ಲೆ ಮತ್ತು ಕುಶಾಲನಗರ ತಾಲೂಕು ಘಟಕ ಹಾಗೂ ಕಣಿವೆ ಶ್ರೀ ರಾಮಲಿಂಗೇಶ್ವರ ದೇವಾಲಯ ಸಮಿತಿ ಆಶ್ರಯದಲ್ಲಿ ಕಣಿವೆ ಶ್ರೀ ರಾಮಲಿಂಗೇಶ್ವರ ದೇವಾಲಯ ರಥೋತ್ಸವ ಪ್ರಯುಕ್ತ ನಡೆದ ಹಳ್ಳಿ ಹಬ್ಬ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
 ಅಭಿವೃದ್ಧಿಯ ನಾಗಾಲೋಟದಲ್ಲಿ ಅಳಿದು ಹೋಗುತ್ತಿರುವ ಜನಪದೀಯ ಸಂಸ್ಕೃತಿಯ ಬಗ್ಗೆ ಮಕ್ಕಳಿಗೆ ತಿಳಿ ಹೇಳಬೇಕಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಹಿಂದಿನ ಕಾಲದಲ್ಲಿ ಜೀವನಕ್ಕೆ ಆಧಾರವಾಗಿದ್ದ ಜನಪದ ಕಥೆಗಳನ್ನು ಯುವ ಪೀಳಿಗೆಗೆ ಹೇಳಿಕೊಡಬೇಕಾಗಿದೆ. ಆ ಮೂಲಕ ಜಾನಪದ ಸಾಹಿತ್ಯದ ಅರಿವು ಮೂಡಿಸಲು ಸಾಧ್ಯ, ಮುಂದಿನ ಪೀಳಿಗೆಗೆ ಹಿಂದಿನ ಸಂಸ್ಕೃತಿ ಬಗ್ಗೆ ಪರಿಚಯಿಸುವ ಸಲುವಾಗಿ ಜಾನಪದ ಪರಿಷತ್ ಜಿಲ್ಲೆಯ ವಿವಿಧೆಡೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ  ಎಂದು ಅನಂತಶಯನ ಹೇಳಿದರು.
 ಜಾನಪದ ಸಂಭ್ರಮಕ್ಕೆ ಚಾಲನೆ ನೀಡಿದ ಜಾನಪದ ಪರಿಷತ್ ಜಿಲ್ಲಾ ಘಟಕದ ಪ್ರಮುಖರಾದ ಜಯಶ್ರೀ ಅನಂತಶಯನ ಮಾತನಾಡಿ, ಮಕ್ಕಳಿಗೆ ಜಾನಪದ ಗೀತೆ ಗಾಯನದ ಬಗ್ಗೆ ತಿಳಿ ಹೇಳಬೇಕಾಗಿದೆ ಎಂದರು. ಜಾನಪದ ಗೀತೆ ಹಾಗೂ ಶ್ರೀರಾಮ ದೇವರ ಹಾಡು ಹೇಳುವ ಮೂಲಕ ಅವರು ಜಾನಪದ ಸಂಭ್ರಮಕ್ಕೆ ಚಾಲನೆ ನೀಡಿದರು.
 ಶ್ರೀ ರಾಮಲಿಂಗೇಶ್ವರ ದೇವಾಲಯ ಆಡಳಿತ ಸಮಿತಿಯ ಅಧ್ಯಕ್ಷ  ಕೆ.ಎನ್.ಸುರೇಶ್ ಅಧ್ಯಕ್ಷತೆಯಲ್ಲಿ ನಡೆದ  ಕಣಿವೆ ಹಿರಿಯ ಸಾಹಿತಿ ಭಾರದ್ವಾಜ ಆನಂದ್ ತೀರ್ಥ ಅವರು ಮಾತನಾಡಿ, ಮುಂದಿನ ವರ್ಷದಿಂದ ಜಾತ್ರೆಯ ಸಂದರ್ಭ ಜಾನಪದ ಪರಿಷತ್ ಮೂಲಕ ಜಾನಪದ ಸಮ್ಮೇಳನ ಏರ್ಪಡಿಸುವ ಬಗ್ಗೆ ಚಿಂತನೆ ಹರಿಸುವಂತೆ ಕೋರಿದರು. ಕಣಿವೆ ಗ್ರಾಮಸ್ಥರ ಎಲ್ಲರ ಸಹಕಾರ ನೀಡುವ ಭರವಸೆ ವ್ಯಕ್ತಪಡಿಸಿದರು.
ಪರಿಷತ್ತಿನ ತಾಲೂಕು ಗೌರವಾಧ್ಯಕ್ಷರಾದ ಫ್ಯಾನ್ಸಿ ಮುತ್ತಣ್ಣ, ಕಾರ್ಯಕ್ರಮ ಸಂಯೋಜಕರಾದ ವನಿತಾ ಚಂದ್ರಮೋಹನ ಮಾತನಾಡಿದರು.
 ಕಾರ್ಯಕ್ರಮದಲ್ಲಿ ಜಾನಪದ ಗೀತೆ, ಸಮೂಹ ಗೀತೆಗಳ ಸ್ಪರ್ಧೆಗಳು ನಡೆದವು. ಕುಶಾಲನಗರ ಗೌಡ ಸಮಾಜ, ಕೊಡವ ಸಮಾಜ, ಮಹಿಳಾ ಭಜನಾ ಮಂಡಳಿ  ತಂಡದ ಸದಸ್ಯರು, ಗ್ರಾಮದ ಯುವಕ ಯುವತಿಯರು  ಸ್ಪರ್ಧಾ ಕಾರ್ಯಕ್ರಮದಲ್ಲಿ  ಪಾಲ್ಗೊಂಡಿದ್ದರು.
ಇದೇ ಸಂದರ್ಭ ಖಾಸಗಿ ವಾಹಿನಿಯ ಸರಿಗಮಪ ರಿಯಾಲಿಟಿ ಶೋ ದಲ್ಲಿ ಪ್ರಥಮ ಸ್ಥಾನ ಗಳಿಸಿ ಸಾಧನೆಗೈದ  ಕುಶಾಲನಗರದ ವಿದ್ಯಾರ್ಥಿನಿ ಪ್ರಗತಿ ಬಡಿಗೇರ್ ಹಾಡುವ ಮೂಲಕ ನೆರೆದಿದ್ದ ಸಾವಿರಾರು ಪ್ರೇಕ್ಷಕರ ಮೆಚ್ಚುಗೆ ಗಳಿಸಿದರು.
ಕಾರ್ಯಕ್ರಮದಲ್ಲಿ ಜನಪದ ಪರಿಷತ್ತು ಜಿಲ್ಲಾಧ್ಯಕ್ಷರಾದ ಬಿ ಜಿ ಅನಂತಶಯನ, ದೇವಾಲಯ ಅಧ್ಯಕ್ಷರಾದ ಕೆ.ಎನ್ ಸುರೇಶ್  ಸಾಹಿತಿಗಳಾದ ಭಾರದ್ವಾಜ್ ಅನಂದ ತೀರ್ಥ ಮತ್ತು ವಿದ್ಯಾರ್ಥಿನಿ ಪ್ರಗತಿ ಬಡಿಗೇರ್ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
 ಹಳ್ಳಿ ಹಬ್ಬ ಅಂಗವಾಗಿ ನಡೆದ ಗ್ರಾಮೀಣ ಕ್ರೀಡೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು.
 ಜಾನಪದ ಪರಿಷತ್ ತಾಲೂಕು ಘಟಕದ ಅಧ್ಯಕ್ಷರಾದ ಎಂ ಎನ್ ಚಂದ್ರಮೋಹನ್ ಪ್ರಾಸ್ತಾವಿಕ ನುಡಿಗಳನಾಡಿದರು. ಜಾನಪದ ಪರಿಷತ್ ಜಿಲ್ಲಾ ಘಟಕದ ಮತ್ತು ವಿವಿಧ ತಾಲೂಕು ಘಟಕಗಳ ಪದಾಧಿಕಾರಿಗಳು ಸದಸ್ಯರು ಹಾಗೂ ದೇವಾಲಯ ಸಮಿತಿ ಪ್ರಮುಖರು ಉಪಸ್ಥಿತರಿದ್ದರು.
ಶಿಕ್ಷಕಿ ಮಾಲಾ ಮೂರ್ತಿ ಅವರು ಕಾರ್ಯಕ್ರಮ ನಿರೂಪಣೆ, ಬಿ.ಎಸ್ ಪರಮೇಶ್ ಪ್ರಾರ್ಥನೆ, ಕೊಡಗನ ಹರ್ಷ ವಂದಿಸಿದರು.
Share. Facebook Twitter Pinterest LinkedIn Tumblr Email WhatsApp
Previous Article*ಜನರಲ್ ತಿಮ್ಯಯ್ಯ ಪುತ್ಥಳಿ ಅನಾವರಣ : ಜನರಲ್ ತಿಮ್ಮಯ್ಯ ಅವರು ಸೇನಾ ಕ್ಷೇತ್ರಕ್ಕೆ ಮಾದರಿ : ಏರ್ ಮಾರ್ಷಲ್ ನಂದಾ ಕಾರ್ಯಪ್ಪ*
Next Article *ಬೆಳ್ಳುಮಾಡು ಆಡುಕೋಣಿ ಶಾಸ್ತಾವು ಈಶ್ವರ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ರೂ.2 ಲಕ್ಷ*

Recommended: Website design development company services in Mangalore Forex Trading Teacher in India

Related Posts

*ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*

February 12, 2026

*ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*

February 12, 2026

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026

*ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*

February 12, 2026

ಕಣಿವೆ NEWS DESK ಫೆ.12 : ಕೊಡಗು ಜಿಲ್ಲಾ ಅರೆಸೇನಾಪಡೆಯ ಮಾಜಿ ಯೋಧರ ಸಂಘದ ಪದಾಧಿಕಾರಿಗಳು ಗುರುವಾರ ಮಡಿಕೇರಿಯ ಜಿಲ್ಲಾ…

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.