ಮಡಿಕೇರಿ ಏ.1 : ವಿರಾಜಪೇಟೆ ಕ್ಷೇತದ ಶಾಸಕ ಕೆ.ಜಿ.ಬೋಪಯ್ಯ ಅವರಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ನೋಟೀಸ್ ನೀಡಿದ್ದಾರೆ. ಪರೀಕ್ಷೆಯ ಹಿನ್ನೆಲೆ 10ನೇ ತರಗತಿ ವಿದ್ಯಾರ್ಥಿಗಳಿಗೆ ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯ ಕೋರಿದ ಕಾರಣಕ್ಕಾಗಿ ನೋಟೀಸ್ ನೀಡಿ 24 ಗಂಟೆಯೊಳಗೆ ಉತ್ತರ ನೀಡುವಂತೆ ತಿಳಿಸಲಾಗಿದೆ.
ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪ್ರೇರಿತ ಚಿತ್ರವನ್ನು ಹಂಚಿಕೊAಡಿರುವುದರಿAದ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ನೋಟೀಸ್ ನಲ್ಲಿ ತಿಳಿಸಲಾಗಿದೆ.
::: ಮತ್ತೊಬ್ಬರಿಗೆ ನೋಟೀಸ್ :::
ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಜನ್ಮ ದಿನದ ಸಂದರ್ಭ ಸಾಮಾಜಿಕ ಜಾಲತಾಣದಲ್ಲಿ ಶುಭಕೋರಿದ ಹಿನ್ನೆಲೆ ಶ್ರೀಮಂಗಲದ ನಾಲ್ಕೇರಿ ಗ್ರಾಮದ ಸಚಿನ್ ಚೆರಿಯಮನೆ ಎಂಬುವವರಿಗೂ ನೋಟೀಸ್ ನೀಡಲಾಗಿದೆ. ರಾಜಕೀಯ ಪ್ರೇರಿತ ಚಿತ್ರವನ್ನು ಹಂಚಿಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ.












