ಮಡಿಕೇರಿ ಏ.2 : ಪೊಲೀಸ್ ಇಲಾಖೆಯಲ್ಲಿನ ಶ್ಲಾಘನೀಯ ಸೇವೆಗೆ ನೀಡಲಾಗುವ ಮುಖ್ಯಮಂತ್ರಿಗಳ ಪದಕಕ್ಕೆ ಕೊಡಗು ಜಿಲ್ಲೆಯ ಇಬ್ಬರು ಪೊಲೀಸ್ ಅಧಿಕಾರಿಗಳು ಭಾಜನರಾಗಿದ್ದಾರೆ. ಮಡಿಕೇರಿ ವಿಭಾಗದ ಸಿಐಡಿ ಅರಣ್ಯ ಸಂಚಾರಿ ಪೊಲೀಸ್ ದಳದ ಉಪನಿರೀಕ್ಷಕಿ ಸಿ.ಯು.ಸವಿ ಹಾಗೂ ಜಿಲ್ಲಾ ಅಪರಾಧ ಪತ್ತೆ ದಳದ ಮುಖ್ಯಪೇದೆ ಎಂ.ಎನ್.ನಿರಂಜನ್ ಪದಕ ವಿಜೇತರು.
ಸವಿ ಅವರು ಕಳೆದ 13 ವರ್ಷಗಳಿಂದ ಪೊಲೀಸ್ ಸೇವೆಯಲ್ಲಿದ್ದು, ನಂಜನಗೂಡು, ಬೈಲುಕುಪ್ಪೆ ಸೇರಿದಂತೆ ವಿವಿಧೆಡೆ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಮಡಿಕೇರಿ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಮೂಲತಃ ಕೊಳಕೇರಿಯ ನಿವಾಸಿಯಾಗಿದ್ದಾರೆ.
ಮಡಿಕೇರಿಯ ಅಶೋಕಪುರ ನಿವಾಸಿಯಾಗಿರುವ ಎಂ.ಎನ್.ನಿರಂಜನ್ ಅವರು ಕಳೆದ 22 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಜಿಲ್ಲಾ ಅಪರಾಧ ಗುಪ್ತ ದಳದಲ್ಲಿ ಸೇವೆಯಲ್ಲಿರುವ ನಿರಂಜನ್ ಅವರು ಈ ಹಿಂದೆ ಮಡಿಕೇರಿ ಗ್ರಾಮಾಂತರ ಠಾಣೆ ಸೇರಿದಂತೆ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದರು. ಅಪರಾಧ ಗುಪ್ತ ದಳದಲ್ಲಿ ಪತ್ತೆ ಕಾರ್ಯದಲ್ಲಿ ಉತ್ತಮ ಸೇವೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಇವರನ್ನು ಮುಖ್ಯಮಂತ್ರಿ ಪೊಲೀಸ್ ಪದಕಕ್ಕೆ ಆಯ್ಕೆ ಮಾಡಲಾಗಿದೆ.













