ಮಡಿಕೇರಿ ಏ.18 : ಮೇ 10 ರಂದು ನಡೆಯುವ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಸ್ವೀಪ್ ಕಾರ್ಯಕ್ರಮದ ಅಂಗವಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮತದಾನದ ಬಗ್ಗೆ ತಮ್ಮ ಪೋಷಕರಿಗೆ ಜಾಗೃತಿ ಮೂಡಿಸಲು ಕಾರ್ಡಿನಲ್ಲಿ ಪತ್ರ ಬರೆಯುವುದರ ಮೂಲಕ ಮತದಾನದ ಅರಿವು ಮೂಡಿಸಿದರು.









