Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*
  • *ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*
  • *ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*
  • ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ
  • *ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*
  • *ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
  • *ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಕ್ಕಳ ಕನಸಿನ ‘ಬಣ್ಣ’ದ ಹಬ್ಬಕ್ಕೆ ಚಾಲನೆ : ಪ್ರತಿಭೆಗಳ ಅನಾವರಣಕ್ಕೆ ಬೇಸಿಗೆ ಶಿಬಿರ ಸಹಕಾರಿ : ನವೀನ್ ಅಂಬೆಕಲ್ಲು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಕ್ಕಳ ಕನಸಿನ ‘ಬಣ್ಣ’ದ ಹಬ್ಬಕ್ಕೆ ಚಾಲನೆ : ಪ್ರತಿಭೆಗಳ ಅನಾವರಣಕ್ಕೆ ಬೇಸಿಗೆ ಶಿಬಿರ ಸಹಕಾರಿ : ನವೀನ್ ಅಂಬೆಕಲ್ಲು*

ಏಪ್ರಿಲ್ 22, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.22 :  ನಾಲ್ಕುಗೋಡೆಗಳ ನಡುವಣ ಶಿಕ್ಷಣದ ಒತ್ತಡಗಳನ್ನು ಕಳೆದುಕೊಂಡು, ತಮ್ಮೊಳಗಿನ ಪ್ರತಿಭೆಗಳ ಅನಾವರಣದೊಂದಿಗೆ, ವ್ಯಕ್ತಿತ್ವದ ಬದಲಾವಣೆಯನ್ನು ಬೇಸಿಗೆ ಶಿಬಿರಗಳ ಮೂಲಕ ಮಕ್ಕಳು ಕಂಡುಕೊಳ್ಳಲು ಸಾಧ್ಯವೆಂದು ಗಣ್ಯರು ಅನಿಸಿಕೆ ವ್ಯಕ್ತಪಡಿಸಿದರು.

ಸುಳ್ಯದ ರಂಗ ಮಯೂರಿ ಕಲಾ ಶಾಲೆ, ಮಡಿಕೇರಿಯ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದ ಫೀ.ಮಾ.ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಆಯೋಜಿತ ರಾಜ್ಯ ಮಟ್ಟದ ‘ಬಣ್ಣ’ ಮಕ್ಕಳ ಶಿಬಿರದಲ್ಲಿ ಪಾಲ್ಗೊಂಡ ಗಣ್ಯರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

‘ಡೋಲು’ ಬಾರಿಸುವ ಮೂಲಕ ಮಕ್ಕಳ ಕನಸಿನ ‘ಬಣ್ಣ’ದ ಹಬ್ಬಕ್ಕೆ ಚಾಲನೆ ನೀಡಿದ ಮಡಿಕೇರಿ ತಾಲ್ಲೂಕು ಕಸಾಪ ಅಧ್ಯಕ್ಷ ನವೀನ್ ಅಂಬೆಕಲ್ಲು, ಮಡಿಕೇರಿಯಲ್ಲಿ ಎರಡನೇ ಬಾರಿ ಆಯೋಜಿತವಾಗುತ್ತಿರುವ ಬಣ್ಣ ಶಿಬಿರದ ಮೂಲಕ, ಶಾಲಾ ಕಲಿಕೆಯನ್ನು ಮೀರಿದ ವಿವಿಧ ವಿಚಾರಗಳ ಅರಿವನ್ನು ಪಡೆದುಕೊಳ್ಳುವ0ತೆ ಮಕ್ಕಳಿಗೆ ಕರೆ ನೀಡಿದರು.

ನಗರದ ಫೀ.ಮಾ.ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಧ್ಯಾಪಕರಾದ ಕಾಂಚನ ಕೆದಂಬಾಡಿ ಮಾತನಾಡಿ, ಶಾಲಾ ಚಟುವಟಿಕೆಗಳಲ್ಲಿ ಕಲಿಯಲು ಸಾಧ್ಯವಾಗದ ಹಲವಷ್ಟು ವಿಚಾರಗಳನ್ನು ಬಣ್ಣ ಶಿಬಿರದ ಮೂಲಕ ಮಕ್ಕಳು ಆಸಕ್ತಿಯಿಂದ ಕಲಿಯಲು ಸಾಧ್ಯವಿದೆ. ಇದರಿಂದ ನಿಶ್ಚಿತವಾಗಿ ಶಿಬಿರದ ಬಳಿಕ ಮಕ್ಕಳ ವ್ಯಕ್ತಿತ್ವದಲ್ಲಿ ಬದಲಾವಣೆಯನ್ನು ಕಾಣಬಹುದೆಂದು ತಿಳಿಸಿ, ಶಿಬಿರದಲ್ಲಿ ರಂಗ ಚಟುವಟಿಕೆಗಳ ಬಗ್ಗೆಯೂ ಮಕ್ಕಳಲ್ಲಿ ಅರಿವನ್ನು ಮೂಡಿಸಲಾಗುತ್ತದೆ. ಈ ರಂಗ ಚಟುವಟಿಕೆ ಮಕ್ಕಳ ಕಲಿಕೆಗೂ ಸಹಕಾರಿಯಾಗುತ್ತದೆಂದು ದೃಢವಾಗಿ ನುಡಿದರು.

ಸರ್ಕಾರಿ ಪದವಿ ಪೂರ್ವ ಕಲೇಜಿನ ರಾಜಕೀಯ ಶಾಸ್ತ್ರದ ಪ್ರಾಧ್ಯಾಪಕರಾದ ಚಿದಾನಂದ ಅವರು ಮಾತನಾಡಿ, ಹಿಂದೆ ಬೇಸಿಗೆ ರಜೆಯಲ್ಲಿ ಮಕ್ಕಳು ತಮ್ಮ ಬಂಧು ಬಳಗದ ಮನೆಗೆ ತೆರಳುತ್ತಿದ್ದರು. ಇಂದು ಬಿಡುವಿನ ಅವಧಿಯನ್ನು ಸದುಪಯೋಗಪಡಿಸಿಕೊಳ್ಳಲು ಇಂತಹ ಶಿಬಿರಗಳು ಲಭ್ಯವಿದ್ದು, ಇದರ ಸದ್ಬಳಕೆ ಮಾಡಿಕೊಳ್ಳುವುದರಿಂದ ಮಕ್ಕಳ ಸುಪ್ತ ಪ್ರತಿಭೆಯ ಅನಾವರಣ ಸಾಧ್ಯವೆಂದು ತಿಳಿಸಿದರು.

ನೃತ್ಯ ತರಬೇತುದಾರರಾದ ವಿನೋದ್ ಕರ್ಕೇರ ಅವರು ಮಾತನಾಡಿ, ಒಂದೇ ಛಾವಣಿಯಡಿ ವಿವಿಧ ಕಲಾ ಪ್ರಕಾರಗಳನ್ನು ಒಳಗೊಂಡಂತೆ ತರಬೇತಿ ನೀಡುವ ಕಲ್ಪನೆಯೊಂದಿಗೆ ರೂಪು ತಳೆದ ಸಂಸ್ಥೆ ‘ರಂಗ ಮಯೂರಿ’. ಈ ಸಂಸ್ಥೆಯ ಅಡಿಯಲ್ಲಿ ನಡೆಯುವ ಬಣ್ಣ ಶಿಬಿರದಲ್ಲಿ ರಂಗ ತರಬೇತಿ, ಚಿತ್ರಕಲೆ ಸೇರಿದಂತೆ ವಿವಿಧ ಕಲಾ ಪ್ರಕಾರಗಳ ಬಗ್ಗೆ ಮಕ್ಕಳಿಗೆ ತರಬೇತಿಯನ್ನು ನೀಡುವ ಮೂಲಕ ಅವರ ವ್ಯಕ್ತಿತ್ವ ವಿಕಸನಕ್ಕೆ ಹಾದಿಯನ್ನು ಕಲ್ಪಿಸಲಾಗುತ್ತ್ತದೆಯೆಂದು ಹೇಳಿದರು.

ಪ್ರಸ್ತುತ ಶಿಕ್ಷಣವೆಂದರೆ ಕೇವಲ ಮಾಹಿತಿಯನ್ನು ನೀಡುವ ವ್ಯವಸ್ಥೆಯಾಗಿ ಮಾತ್ರ ಕಂಡು ಬರುತ್ತಿರುವ ದುರಂತವನ್ನು ನಾವು ಕಾಣುತ್ತಿದ್ದೇವೆ. ಶಿಕ್ಷಣದೊಂದಿಗೆ ಜೀವನ ಮೌಲ್ಯಗಳನ್ನು ತುಂಬುವ ಪ್ರಯತ್ನ ನಡೆಯುತ್ತಿಲ್ಲವೆಂದು ವಿಷಾದಿಸಿ, ಇಂತಹ ಶಿಬಿರಗಳಲ್ಲಿ ಮಕ್ಕಳನ್ನು ಮುಕ್ತವಾಗಿ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸುವ ಮೂಲಕ ಅವರಲ್ಲಿನ ಕ್ರಿಯಾತ್ಮಕತೆಯನ್ನು ಉತ್ತೇಜಿಸಲಾಗುತ್ತದೆ. ಕಲಿಕೆ ಎನ್ನುವುದು ಕೇವಲ ಶಾಲೆಗಳಲ್ಲಿ ಮಾತ್ರ ದೊರಕುವಂತಹದ್ದಲ್ಲ ಅದು ಮನೆಗಳಲ್ಲಿ, ತಾಯಿಯ ಕೈಯಲ್ಲಿದೆ. ಒಬ್ಬ ‘ಶಿವಾಜಿ’ ಹುಟ್ಟುಕೊಳ್ಳಲು ಆತನ ತಾಯಿ ಕಾರಣಳಾಗುತ್ತಾಳೆಂದು ಉದಾಹರಿಸಿದ ಅವರು, ಮಕ್ಕಳ ಕಲ್ಪನೆಯ ಬಣ್ಣದ ಚಿತ್ತಾರಗಳನ್ನು ಸಾಕಾರ ಗೊಳಿಸುವ ಕ್ಯಾನ್ವಾಸ್ ‘ಬಣ್ಣ’ ಶಿಬಿರವೆಂದು ಮುಕ್ತವಾಗಿ ನುಡಿದರು.

ಶಿಬಿರದ ಆಯೋಜಕರಾದ ಲೋಕೇಶ್ ಊರುಬೈಲು ಅವರು, ಮಕ್ಕಳ ವ್ಯಕ್ತಿತ್ವ ವಿಕಸನ, ಸ್ವತಂತ್ರವಾದ ಬದುಕು, ಅವರ ಕೆಲಸಗಳನ್ನು ಅವರೇ ಮಾಡಿಕೊಳ್ಳುವುದಕ್ಕೆ ಪ್ರೇರಣೆ ನೀಡುವುದು, ಪ್ರತಿಭಾ ಅನಾವರಣ ಶಿಬಿರದ ಮೂಲ ಉದ್ದೇಶವೆಂದು ಸ್ಪಷ್ಟಪಡಿಸಿದರು.

ವೀರ ಸೇನಾನಿಗೆ ಪುಷ್ಪಾರ್ಚನೆ- ಸಭಾಂಗಣದ ಪ್ರವೇಶ ದ್ವಾರದಲ್ಲಿರುವ ಫೀ.ಮಾ.ಕೆ.ಎಂ.ಕಾರ್ಯಪ್ಪ ಪುತ್ತಳಿಗೆ ಶಿಬಿರದ ಆಯೋಜಕರು, ಅತಿಥಿಗಳು, ಶಿಬಿರಾರ್ಥಿಗಳು, ಪೋಷಕರು ಪುಷ್ಪಾರ್ಚನೆ ಮಾಡುವುದರೊಂದಿಗೆ ‘ಬಣ್ಣ’ ಶಿಬಿರಕ್ಕೆ ವಿದ್ಯುಕ್ತ ಚಾಲನೆ ದೊರಕಿತು ಶಿಬಿರ ಏಪ್ರಿಲ್ 30 ರವರೆಗೆ ನಡೆಯಲಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.29 NEWS DESK : ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟನ್ನು ಹಾಕಿಕೊಟ್ಟು, ವ್ಯಾಕರಣದ ಶಿಸ್ತನ್ನು ರೂಢಿಸಿದವರು ಭಾಷಾ ವಿಜ್ಞಾನಿ ಡಾ.…

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026

*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*

ಆಗಷ್ಟ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.