Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*
  • *ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*
  • *ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*
  • ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ
  • *ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*
  • *ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
  • *ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆಯಲ್ಲಿ ವಾಹನ ನಿಲುಗಡೆ ಶುಲ್ಕ ಮತ್ತು ತೆರಿಗೆ ಏರಿಕೆ ಅವೈಜ್ಞಾನಿಕ : ನಾಗರಿಕ ಸಮಿತಿ ಆರೋಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆಯಲ್ಲಿ ವಾಹನ ನಿಲುಗಡೆ ಶುಲ್ಕ ಮತ್ತು ತೆರಿಗೆ ಏರಿಕೆ ಅವೈಜ್ಞಾನಿಕ : ನಾಗರಿಕ ಸಮಿತಿ ಆರೋಪ*

ಏಪ್ರಿಲ್ 25, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ 25 : ನಗರದಲ್ಲಿ ವಾಹನ ದಟ್ಟಣೆಯನ್ನು ನಿಯಂತ್ರಣಗೊಳಿಸಲು ಪುರಸಭೆಯು ವಿಧಿಸಿರುವ ಶುಲ್ಕ ಅವೈಜ್ಞಾನಿಕವಾಗಿದೆ ಅಲ್ಲದೆ ಮೂಲಭೂತ ಸೌಕರ್ಯಗಳನ್ನು ನೀಡದೆ ತೆರಿಗೆ ಏರಿಕೆಗೊಳಿಸಿರುವುದು ಖಂಡನೀಯ ಎಂದು ನಾಗರಿಕ ಸಮಿತಿ ಸಂಚಾಲಕ ಇ.ಆರ್.ದುರ್ಗಾ ಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದರು.

ಗೋಣಿಕೊಪ್ಪ ರಸ್ತೆಯಲ್ಲಿರುವ ಸಮಿತಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ನಗರದಲ್ಲಿ ವಾಹನ ನಿಲುಗಡೆಗೆ ಶುಲ್ಕ ವಿಧಿಸುವ ಕ್ರಮವನ್ನು ಪುರಸಭೆಯ ಆಡಳಿತರೂಢ ಸದಸ್ಯರು ಒಪ್ಪಿರುವುದು ಅವೈಜ್ಞಾನಿಕ. ಈ ಬಗ್ಗೆ ವಿರೋಧ ಪಕ್ಷದ ಸದಸ್ಯರು ಪ್ರತಿರೋಧ ವ್ಯಕ್ತಪಡಿಸಿದರು ಆದೇಶ ಜಾರಿಗೆ ಮಾಡಲಾಗಿದೆ ಎಂದು ಆರೋಪಿಸಿದರು.
ವಾಹನ ಶುಲ್ಕ ವಿಧಿಸುವುದರಿಂದ ವಾಹನ ದಟ್ಟಣೆ ನಿಯಂತ್ರಣ ಮಾಡಬಹುದಾಗಿದೆ ಎಂದು ಸಭೆಯು ಒಪ್ಪಿಗೆ ಸೂಚಿಸಿ ಶುಲ್ಕ ವಿಧಿಸುವ ಕ್ರಮ ಜಾರಿಗೆಗೊಳಿಸಿದೆ. ನಗರದ ರಸ್ತೆಯ ಇಕ್ಕೆಲಗಳಲ್ಲಿ ವಾಹನ ನಿಲುಗಡೆ ಅವ್ಯವಸ್ಥೆಯಿಂದ ಕೂಡಿದೆ. ಪಾದಚಾರಿಗಳಿಗೆ ಸಂಚಾರ ಮಾಡಲು ಯೋಗ್ಯವಾದ ಪಾದಚಾರಿ ರಸ್ತೆಗಳು ಇಲ್ಲಾ, ಒಳಚರಂಡಿ ವ್ಯವಸ್ಥೆಯು ಕ್ರಮಬದ್ಧವಾಗಿ ನಿರ್ವಹಣೆಯಿಲ್ಲಾ. ವಾಹನ ಮಾಲೀಕರು ಎಲ್ಲೆಂದರಲ್ಲಿ ವಾಹನ ನಿಲುಗಡೆಗೊಳಿಸಿ ಇತರ ಪ್ರದೇಶಗಳಿಗೆ ತೆರಳುವುದು ಸಾಮಾನ್ಯವಾಗಿದೆ. ನೂತನವಾಗಿ ಕಟ್ಟಡ ನಿರ್ಮಾಣ ಮಾಡುವವರು ವಾಹನ ನಿಲುಗಡೆಗೆ ಸ್ಥಳಾವಕಾಶ ನೀಡಬೇಕು ಎಂಬುದು ಕಾನೂನು ಇದ್ದರು ಸೂಕ್ತ ಸೌಕರ್ಯಯಿಲ್ಲದೆ ರಸ್ತೆಯ ಬದಿಯಲ್ಲಿ ವಾಹನ ನಿಲುಗಡೆಗೊಳಿಸಲಾಗುತ್ತಿದೆ ಇದು ಸರಿಯಾದ ಕ್ರಮವಲ್ಲ ಎಂದರು.
ಮುಖ್ಯ ರಸ್ತೆ ಸೇರಿದಂತೆ ಗೊಣಿಕೊಪ್ಪಲು ರಸ್ತೆ ಎಲ್ಲಾ ರಸ್ತೆ ಸಂಚಾರವು ದುಸ್ತರವಾಗಿದೆ. ಸಮಿತಿ ಹಲವು ಬಾರಿ ವಾಹನ ದಟ್ಟಣೆಯನ್ನು ನಿಯಂತ್ರಣ ಮಾಡಲು ಕೆಲವು ಸಲಹೆಗಳನ್ನು ನೀಡಿತ್ತು. ಸಲಹೆಗಳಿಗೆ ಬೆಲೆ ನೀಡದೆ ತನ್ನ ಬೇಜವಾಬ್ದಾರಿಯನ್ನು ಪ್ರದರ್ಶನ ಮಾಡಿದೆ. ಪುರಸಭೆಯ ಅಧ್ಯಕ್ಷರು ಸರ್ವಾಧಿಕಾರದ ಧೋರಣೆಯಿಂದ ಆದೇಶವನ್ನು ಮಾಡಿದ್ದಾರೆ. ಒಳಚರಂಡಿ ವ್ಯವಸ್ಥೆ ಸರಿಪಡಿಸಬೇಕು, ಬಾರಿ ವಾಹನಗಳಿಗೆ ಮತ್ತು ದ್ವಿಚಕ್ರ ವಾಹನಗಳಿಗೆ ನಿಲುಗಡೆಗಾಗಿ ಸೂಕ್ತ ಅವಕಾಶ ಕಲ್ಪಿಸಬೇಕು. ಜನತೆಯ ಹಣ ಸಂಗ್ರಹ ಮಾಡುವತ್ತಾ ಪುರಸಭೆಯ ಚಿತ್ತವಾಗಿದೆ ಎಂದು ದೂರಿದರು.
ಸಮಸ್ಯೆಗಳು ಬೆಟ್ಟದಷ್ಟುಯಿದ್ದರು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ವಿಫಲರಾಗಿದ್ದಾರೆ. ವಾಹನಗಳ ದಟ್ಟಣೆಯ ಸಮಸ್ಯೆಯ ಬಗೆಹರಿಸುವ ಬದಲು ವಾಹನಗಳ ಮೇಲಿನ ಶುಲ್ಕ ಹೆಚ್ಚಿಸಿರುವುದು ಮೂರ್ಖತನವಾಗಿದೆ ಎಂದು ಆರೋಪಿಸಿದ ದುರ್ಗಾಪ್ರಸಾದ್ ವಾಹನ ಶುಲ್ಕ ಏರಿಕೆಯನ್ನು ವಿರೋಧಿಸುತ್ತದೆ ಅಲ್ಲದೆ ನಾಗರಿಕ ಸಮಿತಿ ನೀಡಿರುವ ಸಲಹೆಗಳನ್ನು ಅನುಷ್ಠಾನಕ್ಕೆ ತರುವುವಂತೆ ಒತ್ತಾಯಿಸಿದರು.
ಸಮಿತಿಯ ಸದಸ್ಯ ಅಬ್ದುಲ್ ರೆಹಮಾನ್ ಮಾತನಾಡಿ, ನಗರದಲ್ಲಿ ಕುಡಿಯುವ ನೀರಿಗೆ ಆಹಕಾರ ತೆಲೆದೊರತ್ತದೆ ಎಂದು ತಿಳಿದಿದ್ದರು ಯಾವುದೇ ಮುಂಜಾಗೃತ ಕ್ರಮಕ್ಕೆ ಮುಂದಾಗದಿರುವುದು ಶೋಚನೀಯ, ನಾಗರಿಕರಿಗೆ ಕುಡಿಯುವ ನೀರು ಸಮರ್ಪಕವಾಗಿ ಒದಗಿಸಲು ಪುರಸಭೆಯು ವಿಫಲವಾಗಿದೆ, ಕೋಟಿ ಕೋಟಿ ಅನುದಾನಗಳು ಬಂದರು ಮುಂದಾಲೋಚನೆಯಿಲ್ಲದೆ ಕ್ರಿಯಾಯೋಜನೆ ತಯಾರಿಸುವಲ್ಲಿ ವಿಫಲತೆಯನ್ನು ಕಾಣಲಾಗಿದೆ. ಸಮಸ್ಯೆಗಳಿದ್ದರು ಈ ಹಿಂದೆ ನಡೆದ ಪುರಸಭೆಯ ಸಮಾನ್ಯ ಸಭೆಯಲ್ಲಿ ಅಧ್ಯಕ್ಷರು, ಉಪಧ್ಯಕ್ಷರು ಇಲ್ಲದೆ ಚುನಾಯಿತ ಪ್ರತಿನಿಧಿಯಿಂದ ಸಭೆಯನ್ನು ನಡೆಸಲಾಗಿದೆ. ಪುರಸಭೆಯು ಸಾಮಾನ್ಯ ಜನತೆಯ ಮೇಲಿರುವ ಹೊಣೆಗಾರಿಕೆಯನ್ನು ಮರೆತಿದೆ, ಈ ಎಲ್ಲಾ ಕಾರಣಗಳಿಂದ ಪುರಸಭೆಯನ್ನು ವಿಸರ್ಜನೆ ಮಾಡಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಟಿಯಲ್ಲಿ ವಕೀಲ ಮತ್ತು ನಾಗರಿಕ ಸಮಿತಿಯ ಸಹ ಸಂಚಾಲಕ ಬಿ.ಇ.ಸೋಮಲೋಕನಾಥ್, ಸದಸ್ಯರಾದ ಎಲ್.ಜಿ. ಆಶೋಕ್ ಮತ್ತು ಶರೀಫ್ ಉಪಸ್ಥಿತರಿದ್ದರು.

ವರದಿ : ಕಿಶೋರ್ ಕುಮಾರ್ ಶೆಟ್ಟಿ 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.29 NEWS DESK : ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟನ್ನು ಹಾಕಿಕೊಟ್ಟು, ವ್ಯಾಕರಣದ ಶಿಸ್ತನ್ನು ರೂಢಿಸಿದವರು ಭಾಷಾ ವಿಜ್ಞಾನಿ ಡಾ.…

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026

*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*

ಆಗಷ್ಟ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.