ಮಡಿಕೇರಿ ಮೇ 5 : ಕುಂಜಿಲದಲ್ಲಿ ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪೊನ್ನಣ್ಣ ಪರ ಬಿರುಸಿನ ಮತ ಪ್ರಚಾರ ನಡೆಯಿತು. ಈ ಸಂದರ್ಭ ಕಕ್ಕಬ್ಬೆ ಗ್ರಾ.ಪಂ ಅಧ್ಯಕ್ಷ ಕಲಿಯಂಡ ಸಂಪ, ಪ್ರಮುಖರಾದ ಮಹಮ್ಮದ್ ಹಾಜಿ, ಬಶೀರ್ ಪೊಯಕರೆ ರಝು ಕುಂಡಂಡ, ಮುಸ್ತು ಬಾರಿಕೆ, ಹಸನ್ ಪಯ್ಯಡಿ , ಹಂಸ ಮಾತನಾಡಿ ಕಾಂಗ್ರೆಸ್ ಗೆ ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲ ಸೂಚಿಸಲಾಗುತ್ತಿದ್ದು, ಪೊನ್ನಣ್ಣ ಅವರು ಅತೀ ಹೆಚ್ಚು ಮತಗಳಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕುಂಜಿಲ ಬೂತ್ ಕಾಂಗ್ರೆಸ್ ನಾಯಕರು ಮತ್ತು ಪಕ್ಷದ ಕಾರ್ಯಕರ್ತರು ಪಕ್ಷದ ಗೆಲುವಿಗೆ ನಿರಂತರ ಶ್ರಮಿಸುವುದಾಗಿ ತಿಳಿಸಿದರು. ಈ ಸಂದರ್ಭ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಹಾಜರಿದ್ದರು.









