Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*
  • *ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*
  • *ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*
  • ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ
  • *ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*
  • *ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
  • *ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೃಷಿ ಮತ್ತು ಸಮಾಜ ಸೇವೆ ತೊಡಗಿಸಿಕೊಂಡಿರುವ ಬಾಳೆಯಡ ಕಿಶನ್ ಪೂವಯ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೃಷಿ ಮತ್ತು ಸಮಾಜ ಸೇವೆ ತೊಡಗಿಸಿಕೊಂಡಿರುವ ಬಾಳೆಯಡ ಕಿಶನ್ ಪೂವಯ್ಯ*

ಮೇ 6, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 6 :  ಬಾಳೆಯಡ ಕಿಶನ್ ಪೂವಯ್ಯ ಮೂಲತಃ ನಾಪೋಕ್ಲುವಿನ ಬಾಳೆಯಡ ಬಿ.ಕೆ ಚರ್ಮಣ್ಣ, ಬಿ.ಸಿ‌.ಮಾಚಮ್ಮ ದಂಪತಿಯ ಪುತ್ರ.
ವಿರಾಜಪೇಟೆಯಲ್ಲಿ ಜನಿಸಿದ  ಕೊಡಗಿನ ವಿವಿಧ ಸ್ಥಳಗಳಲ್ಲಿ ತಮ್ಮ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಣವನ್ನು ಪಡೆದಿದ್ದಾರೆ. ಬಳಿಕ ಬೆಂಗಳೂರಿನ ಕ್ರೈಸ್ಟ್ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರಿನಲ್ಲಿ ಎಂ.ಎ.ಪದವಿ ಪಡೆದಿದ್ದಾರೆ. ಬಳಿಕ ಬೆಂಗಳೂರಿನ ಹಾವನೂರು ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದು ಮಡಿಕೇರಿಯಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ.

ವೃತ್ತಿಯಿಂದ ವಕೀಲರು ಮತ್ತು ನೋಟರಿಯಾದರೂ ಸಹ ಪ್ರವೃತ್ತಿಯು ಕೃಷಿ ಮತ್ತು ಸಮಾಜ ಸೇವೆ, ರಾಜಕೀಯ, ಕ್ರೀಡೆ ಇತ್ಯಾದಿ ಇವರ ವಿಶೇಷತೆ. ಸುಮಾರು 8 ವರ್ಷಗಳ ಕಾಲ ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಯಾಗಿದ್ದ ಇವರು ಪ್ರಸ್ತುತ ಜಿಲ್ಲಾ ಸಮಿತಿಯ ಆಹ್ವಾನಿತ ಸದಸ್ಯರಾಗಿದ್ದಾರೆ. ಕಾಲೇಜು ದಿನಗಳಲ್ಲಿಯೇ ಕನ್ನಡ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುತ್ತಿದ್ದವರು ಕೊಡವ ಸಾಹಿತ್ಯ ಅಕಾಡೆಮಿಯ ಸಮಾರಂಭಗಳಲ್ಲಿ, ಉಪ ಸಮಿತಿಗಳ ಸದಸ್ಯನಾಗಿ, ಸ್ಥಳೀಯ ವಾಹಿನಿಗಳಲ್ಲಿ ಮತ್ತು ಆಕಾಶ ವಾಹಿನಿಯಲ್ಲಿ ನಿರೂಪಕರಾಗಿ ಕಾರ್ಯ ನಿರ್ವಹಣೆ,  2014ರಲ್ಲಿ ಮಡಿಕೇರಿಯಲ್ಲಿ ನಡೆದ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಮಾಹಿತಿ ಸಮಿತಿಯ ಪ್ರಧಾನ ಸಂಚಾಲಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಸ್ಥಳೀಯ ಹಲವಾರು ಪತ್ರಿಕೆಗಳಲ್ಲಿ ಅಂಕಣಗಾರರಾಗಿ ಬರವಣಿಗೆಯ ಕೃಷಿ ನಡೆಸಿದ್ದಾರೆ.

ಸಾರಸ್ವತ ಲೋಕಕ್ಕೆ ಇವರು “ರಾಜಕೀಯ ಮತ್ತು ಪ್ರಕೃತಿ”, “ವ್ಯಕ್ತಿ ಪರಿಚಯ ಮತ್ತು ಸಾಮಾಜಿಕ ಚಿಂತನೆ” ಎಂಬ ಎರಡು ಕೃತಿಗಳನ್ನು ರಚಿಸಿ ಲೋಕಾರ್ಪಣೆ ಮಾಡಿದ್ದಾರೆ. ಅಲ್ಲಾರಂಡ ವಿಠ್ಠಲ ನಂಜಪ್ಪ, ಬೇಟೆ ಸಾಹಿತ್ಯ ಕೃತಿಯಲ್ಲಿ ಇವರ ಲೇಖನ ಪ್ರಕಟವಾಗಿದೆ. ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸಿದ ಕಾರಣಕ್ಕಾಗಿ ಜಿಲ್ಲಾ ಕನ್ನಡ ಪರಿಷತ್ತಿನಿಂದ ಸನ್ಮಾನಿಸಿದ್ದಾರೆ.  ಅರಮೇರಿ ಮಠದ ವತಿಯಿಂದ ಸನ್ಮಾನಿಸಿದ್ದಾರೆ.

ಸುಮಾರು 27 ವರ್ಷಗಳ ಕಾಲ ಕಾವೇರಿ ಕೊಡವ ಕೇರಿ ಮಡಿಕೇರಿ ಇಲ್ಲಿ ಮಾಡಿದ ಸೇವೆಗಾಗಿ ಸಂಸ್ಥೆಯ ಬೆಳ್ಳಿ ಮಹೋತ್ಸವದಲ್ಲಿ ಸನ್ಮಾನಿಸಿದ್ದಾರೆ. ಮಡಿಕೇರಿ ವಕೀಲರ ಸಂಘದಲ್ಲಿ ವಿವಿಧ ಹುದ್ದೆಗಳಲ್ಲಿ 18 ವರ್ಷಗಳ ಕಾಲ ನಿರಂತರ ಸೇವೆಯನ್ನು ಪರಿಗಣಿಸಿ ಸನ್ಮಾನಿಸಿ ಗೌರವಿಸಿದ್ದಾರೆ.

ಇಂದಿನ ಸಾಹಿತ್ಯಾಸಕ್ತರು ಮತ್ತು ವಿಶೇಷವಾಗಿ ಮಕ್ಕಳು, ವಿದ್ಯಾರ್ಥಿಗಳಿಗಾಗಿ “ಹೆಚ್ಚಾಗಿ ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ಇಂದಿನ ತಾಂತ್ರಿಕ ವ್ಯವಸ್ಥೆಯಡಿಯಲ್ಲಿ ಓದುವ ಹಾಗೂ ಬರೆಯುವ ಹವ್ಯಾಸವು ನಶಿಸಿ ಹೋಗುತ್ತಿದೆ. ಇದರಿಂದ ಸಾಹಿತ್ಯವು ಸೊರಗುತ್ತದೆ. ಚಿಂತನೆಗಳು ಕ್ರಿಯಾತ್ಮಕ ವಿಷಯಗಳು ದೂರವಾಗುತ್ತಿವೆ. ಕೊನೆಯ ಪಕ್ಷ ದಿನನಿತ್ಯ ದಿನಪತ್ರಿಕೆಗಳನ್ನು ಓದುವುದು ಬಹು ಮುಖ್ಯ ಸಾಹಿತ್ಯ ಕ್ಷೇತ್ರಕ್ಕೆ ಪತ್ರಿಕೆಗಳ ಕೊಡುಗೆ ಬಹುದೊಡ್ಡದು. ಪತ್ರಿಕೆ ಓದುವುದರಿಂದ ಪ್ರಚಲಿತ ವಿದ್ಯಮಾನಗಳನ್ನೂ, ಇತಿಹಾಸವನ್ನೂ, ರಾಜಕೀಯವನ್ನೂ, ಕ್ರೀಡೆ, ಕೃಷಿ, ಸಾಹಿತ್ಯ ಹೀಗೆ ಹಲವು ಹತ್ತು ವಿಷಯಗಳನ್ನು ಅರಿಯಬಹುದು. ಬರವಣಿಗೆಯನ್ನು ರೂಢಿಸಿ ಕೊಳ್ಳಲು ಕೊನೆಯ ಪಕ್ಷ ಎಲ್ಲರೂ ಆತ್ಮೀಯರಿಗೆ ಪತ್ರ ಬರೆಯುವ ಮೂಲಕ ಮತ್ತು ದಿನನಿತ್ಯ ತಮ್ಮ ಜೀವನದ ಘಟನೆಗಳನ್ನು ಬರೆಯುವ ಮೂಲಕ ಬರವಣಿಗೆಯನ್ನು ಜೀವಂತವಾಗಿರಿಸಿಕೊಳ್ಳಬಹುದು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಮೊಬೈಲ್ ಹಾಗೂ ಕಂಪ್ಯೂಟರ್‌ಗಳಿಂದಾಗಿ ಶಾಲಾ ದಿನಗಳ ನಂತರ ಬರವಣಿಗೆ ಮರೆಯಾಗುತ್ತದೆ. ಇದು ಅಕ್ಷರ ಲೋಕದ ದುರಂತವಾಗಿ ಪರಿಣಮಿಸುತ್ತದೆ. ವಿಶೇಷವಾಗಿ ಶಾಲಾ ಶಿಕ್ಷಕರು ಮಕ್ಕಳಲ್ಲಿ ಸಾಹಿತ್ಯವನ್ನು ಓದುವ ಮತ್ತು ಬರೆಯುವ ಅಭ್ಯಾಸವನ್ನು ರೂಡಿಸಿಕೊಳ್ಳುವಂತೆ ಪ್ರಯತ್ನಿಸಬೇಕು ಎಂದು ತಮ್ಮ ಕಿವಿಮಾತುಗಳನ್ನು ಹೇಳುತ್ತಾರೆ. ಉಪಾಧ್ಯಾಯಿನಿಯಾಗಿರುವ ಪತ್ನಿ ಎಂ.ಜಿ.ಸವಿತಾ, ಪದವಿಧರೆ ಮಗಳು ವಿಭಾ ರಾಜೇಶ್ವರಿ, ಕಾನೂನು ಪದವಿ ವ್ಯಾಸಂಗ ಮಾಡುತ್ತಿರುವ ಮಗ ರಾಜೇಶ್ ಸುಬ್ರಮಣಿಯವರೊಂದಿಗೆ ಮಡಿಕೇರಿಯಲ್ಲಿ ಪ್ರಸ್ತುತ ವಾಸವಾಗಿದ್ದಾರೆ. ಇವರ ಮುಂದಿನ ಬದುಕು ಬರೆಹಗಳು ಇನ್ನಷ್ಟು ಪ್ರಜ್ವಲಿಸಲಿ ಎಂದು ಹಾರೈಸೋಣ.

( ವರದಿ : ಪಿ.ಎಸ್. ವೈಲೇಶ್,  ಕೊಡಗು )  

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.29 NEWS DESK : ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟನ್ನು ಹಾಕಿಕೊಟ್ಟು, ವ್ಯಾಕರಣದ ಶಿಸ್ತನ್ನು ರೂಢಿಸಿದವರು ಭಾಷಾ ವಿಜ್ಞಾನಿ ಡಾ.…

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026

*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*

ಆಗಷ್ಟ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.