ವಿರಾಜಪೇಟೆ ಮೇ 11 : ನಗರದ ಹೊರವಲಯದ ಕೊಮ್ಮೆತ್ತೊಡು ಗ್ರಾಮದ ಮುಖ್ಯ ರಸ್ತೆಯಲ್ಲಿ ಕಾರು ಮತ್ತು ಗೂಡ್ಸ್ ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ವಿರಾಜಪೇಟೆ-ಸಿದ್ದಾಪುರ ಮುಖ್ಯ ರಸ್ತೆಯ ಕೊಮ್ಮೆತೋಡು ಬಳಿಯ ಸಂತ ಮರಿಯ ಚರ್ಚ್ ಮುಂಭಾಗದ ತಿರುವಿನಲ್ಲಿ ವಿರಾಜಪೇಟೆಯಿಂದ ಸಿದ್ದಾಪುರಕ್ಕೆ ತೆರಳುತಿದ್ದ ಗೂಡ್ಸ್ ವಾಹನ ಮತ್ತು ಸಿದ್ದಾಪುರದಿಂದ ವಿರಾಜಪೇಟೆ ನಗರಕ್ಕೆ ಆಗಮಿಸುತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ವಾಹನಗಳ ಮುಂಭಾಗ ಜಖಂಗೊಂಡಿದೆ.
ಅಪಘಾತದ ಸಂದರ್ಭ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಗೆ ಒಳಗಾಗಿದ್ದು, ಇವರನ್ನು ಅಮ್ಮತ್ತಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.













