Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸ್ಥಳೀಯರೆ ಕೊಡಗು ಉಸ್ತುವಾರಿ ಸಚಿವರಾಗಲಿ*
ಇತ್ತೀಚಿನ ಸುದ್ದಿಗಳು

*ಸ್ಥಳೀಯರೆ ಕೊಡಗು ಉಸ್ತುವಾರಿ ಸಚಿವರಾಗಲಿ*

May 16, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮೇ 16 : ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಜಿಲ್ಲೆಯ ಶಾಸಕರಿಗೆ ಅವಕಾಶ ಒದಗಿಸುವುದರೊಂದಿಗೆ, ಸ್ಥಳೀಯರನ್ನೆ ಜಿಲ್ಲಾ ಉಸ್ತುವಾರಿಯನ್ನಾಗಿ ನಿಯುಕ್ತಿಗೊಳಿಸಬೇಕೆಂದು ಮಾಜಿ ಎಂಎಲ್‍ಸಿ ಶಾಂತೆಯಂಡ ವೀಣಾ ಅಚ್ಚಯ್ಯ ಮನವಿ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಮಡಿಕೇರಿ ಕ್ಷೇತ್ರದಿಂದ ಡಾ.ಮಂಥರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದಿಂದ ಅಜ್ಜಿಕುಟ್ಟೀರ ಪೊನ್ನಣ್ಣ ಅವರು ಆಯ್ಕೆಯಾಗಿದ್ದು, ಇವರಿಬ್ಬರು ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಕಾಳಜಿಯನ್ನು ಹೊಂದಿದ್ದು, ಇವರಿಗೆ ಸಚಿವ ಸ್ಥಾನವನ್ನು ನೀಡಬೇಕು. ಈ ಬಗ್ಗೆ ಜಿಲ್ಲಾ ಕಾಂಗ್ರೆಸ್ ಪ್ರಮುಖರು ಸಭೆ ನಡೆಸಿ ಕಾಂಗ್ರೆಸ್ ವರಿಷ್ಠರ ಬಳಿಗೆ ನಿಯೋಗ ತೆರಳಿ ಆಗ್ರಹಿಸಲಾಗುವುದೆಂದು ಸ್ಪಷ್ಟಪಡಿಸಿದರು.
ಕೊಡಗಿಗೆ ಆದ್ಯತೆ ನೀಡಿ- ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತವನ್ನು ಪಡೆದುಕೊಂಡಿದ್ದು, ನೂತನ ಸರ್ಕಾರದಲ್ಲಿ ಮುಖ್ಯ ಮಂತ್ರಿಗಳಾಗಿ ಯಾರೇ ಅಧಿಕಾರಕ್ಕೆ ಬರಲಿ, ಅವರು ಕೊಡಗಿನ ಪ್ರಗತಿಗೆ ಹೆಚ್ಚಿನ ಆದ್ಯತೆಯನ್ನು ನೀಡುವಂತಾಗಬೇಕು. ಜಿಲ್ಲೆಯ ಸರ್ವಾಂಗಿಣ ಪ್ರಗತಿಗೆ ಒತ್ತು ನೀಡುವಂತೆ ಸರ್ಕಾರವನ್ನು ಆಗ್ರಹಿಸಲು ಎಲ್ಲಾ ಸಂಘ ಸಂಸ್ಥೆಗಳು, ಪಕ್ಷದ ಮುಖಂಡರೊಂದಿಗೆ ಸೇರಿ ಹೋರಾಟವನ್ನು ರೂಪಿಸಿ, ಒಗ್ಗಟ್ಟಿನ ಪ್ರದರ್ಶನವನ್ನು ಮಾಡುವುದಾಗಿ ವೀಣಾ ಅಚ್ಚಯ್ಯ ಸ್ಪಷ್ಟಪಡಿಸಿದರು.
ಜಿಲ್ಲೆಯ ಜನತೆಯ ಆಶೋತ್ತರ ಪರಿಗಣಿಸಿ- ಜಿಲ್ಲೆಯ ಎರಡು ಕ್ಷೇತ್ರಗಳಿಂದ ಆಯ್ಕೆಯಾಗಿರುವ ಕಾಂಗ್ರೆಸ್ ಅಭ್ಯರ್ಥಿಗಳು ಮುಂಬರುವ ದಿನಗಳಲ್ಲಿ, ಜಿಲ್ಲೆಯ ಜನತೆ ತಮ್ಮ ಮೇಲಿ ಇರಿಸಿರುವ ನಂಬಿಕೆಗೆ ತಕ್ಕಂತೆ ಅವರ ಆಶೋತ್ತರಗಳ ಈಡೇರಿಕೆಗೆ ಹೆಚ್ಚಿನ ಮುತುವರ್ಜಿ ವಹಿಸುವುದು ಅವಶ್ಯ. ಸರ್ಕಾರ ರಚನಾ ಪ್ರಕ್ರಿಯೆಗಳು ಮುಕ್ತಾಯಗೊಂಡು ಜಿಲ್ಲೆಗೆ ಆಗಮಿಸುವ ನೂತನ ಶಾಸಕರುಗಳೊಂದಿಗೆ, ಜಿಲ್ಲಾ ಕಾಂಗ್ರೆಸ್ ಪ್ರಮುಖರು ಸಭೆ ನಡೆಸಿ, ಕೊಡಗಿನ ಸಮಗ್ರ ಅಭಿವೃದ್ಧಿಗೆ ಯಾವೆಲ್ಲ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆನ್ನುವ ಬಗ್ಗೆ ರೂಪುರೇಷೆಗಳನ್ನು ಹಮ್ಮಿಕೊಳ್ಳಲಾಗುವುದೆಂದು ತಿಳಿಸಿದರು.
ಪ್ರಣಾಳಿಕೆ ಈಡೇರಿಕೆ ಒತ್ತು ನೀಡಿ- ಜಿಲ್ಲೆಯ ಎರಡು ಕ್ಷೇತ್ರಗಳ ಚುನಾವಣೆ ಹಿನ್ನೆಲೆಯಲ್ಲಿ ಇಬ್ಬರು ಅಭ್ಯರ್ಥಿಗಳು ತಮ್ಮ ಕ್ಷೇತ್ರಕ್ಕೆ ಸೀಮಿತವಾದ ಪ್ರಣಾಳಿಕೆಗಳನ್ನು ಬಿಡುಗಡೆ ಮಾಡಿದ್ದಾರೆ. ಇದೀಗ ಆ ಪ್ರಣಾಳಿಕೆಯಲ್ಲಿ ಸೂಚಿಸಿರುವ ಭರವಸೆಗಳ ಈಡೇರಿಕೆಗೆ ಅಗತ್ಯ ಪ್ರಯತ್ನಗಳನ್ನು ನಡೆಸಬೇಕು. ಅಂತಹ ಪ್ರಯತ್ನಗಳನ್ನು ನಡೆಸುವ ಪೂರ್ಣ ವಿಶ್ವಾಸ ತಮಗಿರುವುದಾಗಿ ಸ್ಪಷ್ಟಪಡಿಸಿದರು.
ಚುನಾಯಿತ ಜನಪ್ರತಿನಿಧಿಗಳು ಎಲ್ಲರ ಸಲಹೆ ಸೂಚನೆಗಳನ್ನು ಪಡೆದುಕೊಂಡು ಮುನ್ನಡಿ ಇಡುವುದು ಅತ್ಯವಶ್ಯ. ಆ ಮೂಲಕ ಕೊಡಗಿನ ಜ್ವಲಂತ ಹತ್ತು ಹಲ ಸಮಸ್ಯೆಗಳಿಗೆ ಪರಿಹಾರವನ್ನು ಹಂತ ಹಂತವಾಗಿ ಕಂಡು ಕೊಳ್ಳುವ ಅಗತ್ಯವಿದೆ. ಚುನಾವಣೆಯ ಹಂತದಲ್ಲಿ ಪರ ವಿರೋಧದ ಹೇಳಿಕೆಗಳು ಬರುವುದು ಸಾಮಾನ್ಯವಾಗಿದ್ದು, ಗೆದ್ದು ಕ್ಷೇತ್ರದ ಜನಪ್ರತಿನಿಧಿ ಎನಿಸಿಕೊಂಡ ಬಳಿಕ ಇಬ್ಬರು ನೂತನ ಜನಪ್ರತಿನಿಧಿಗಳು ಪಕ್ಷಭೇದ ಮರೆತು ಕಾರ್ಯನಿರ್ವಹಿಸುವ ಆಶಯವನ್ನು ವೀಣಾ ಅಚ್ಚಯ್ಯ ವ್ಯಕ್ತಪಡಿಸಿದರು.
ನೂತನ ಜನಪ್ರತಿನಿಧಿಗಳು ಜಿಲ್ಲೆಯಲ್ಲಿ ಕುಂಠಿತಗೊಂಡಿರುವ ಅಭಿವೃದ್ಧಿ ಕಾರ್ಯಗಳಿಗೆ ಮತ್ತೆ ಚುರುಕು ನೀಡುವ ಕೆಲಸವನ್ನು ಮಾಡುವುದರೊಂದಿಗೆ, ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕಾಗುತ್ತದೆ. ವಿವಿಧ ಇಲಾಖೆಗಳಲ್ಲಿ ಅಗತ್ಯ ಕೆಲಸ ಕಾರ್ಯಗಳಿಗೆ ಶ್ರೀಸಾಮಾನ್ಯ ಸಂಕಷ್ಟವನ್ನು ಎದುರಿಸುತ್ತಿದ್ದು, ಕೆಲಸಕ್ಕಾಗಿನ ಜನರ ಅಲೆದಾಟ ತಪ್ಪಿಸಲು, ಮಧ್ಯವರ್ತಿಗಳ ಹಾವಳಿಯನ್ನು ನಿಯಂತ್ರಿಸುವ ನಿಟ್ಟಿನ ಕಾರ್ಯ ನಡೆಯಬೇಕು, ಅಪೂರ್ಣಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸುವ ಕಾರ್ಯವನ್ನು ನೂತನ ಜನಪ್ರತಿನಿಧಿಗಳು ಮಾಡುವಂತಾಗಲೆಂದು ಹಾರೈಸಿದರು.
ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶಿವು ಮಾದಪ್ಪ ಮಾತನಾಡಿ, ಸರ್ಕಾರಿ ಇಲಾಖೆಗಳಲ್ಲಿನ ಮಧ್ಯವರ್ತಿಗಳ ಹಾವಳಿ, ಲಂಚ ರುಷುವತ್ತುಗಳಿಗೆ ಕಾಂಗ್ರೆಸ್ ಅವಕಾಶ ನೀಡುವುದಿಲ್ಲ. ಜಿಲ್ಲೆಯ ಅಭಿವೃದ್ಧಿಯ ಕಾಳಜಿ ಇಲ್ಲದ ಅಧಿಕಾರಿಗಳಿಗೆ ಕಾರ್ಯನಿರ್ವಹಿಸಲು ಅವಕಾಶವಿಲ್ಲವೆಂದು ದೃಢವಾಗಿ ನುಡಿದು, ನೂತನ ಜನಪ್ರತಿನಿಧಿಗಳು ಕೊಡಗಿನ ಆನೆ ಮಾನವ ಸಂಘರ್ಷಕ್ಕೆ ಪರಿಹಾರ ಕಂಡುಕೊಳ್ಳುವ, ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ ಮೊದಲಾದ ಜನಪರವಾದ ಕಾರ್ಯಗಳನ್ನು ಯಶಸ್ವಿಯಾಗಿ ನಿಭಾಯಿಸುವ ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಕಾಂಗ್ರೆಸ್ ಮುಖಂಡರಾದ ಬೊಳ್ಳಜಿರ ಅಯ್ಯಪ್ಪ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಕೊಡಗಿನ ಶಾಸಕರಿಗೆ ಸಚಿವ ಸ್ಥಾನ ನೀಡಿ*
Next Article *ಪಾಲಿಬೆಟ್ಟದಲ್ಲಿ ಕಾಡಾನೆ ದಾಳಿ : ಕಾರ್ಮಿಕ ಗಂಭೀರ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.