ಮಡಿಕೇರಿ ಮೇ 22 : 66/11ಕೆವಿ ಮಡಿಕೇರಿ, ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್3 ಗದ್ದಿಗೆ ಮತ್ತು ಎಫ್ 11 ಗಾಳಿಬೀಡು ಫೀಡರ್ನಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಮೇ, 23 ರಂದು ಬೆಳಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಸಂಪಿಗೆಕಟ್ಟೆ, ಅಜಾದ್ನಗರ, ತ್ಯಾಗರಾಜ ಕಾಲೋನಿ, ಎ.ವಿ.ಶಾಲೆ, ರಾಣಿಪೇಟೆ ಮಹದೇವಪೇಟೆ ಭಗವತಿನಗರ ಕಾನ್ವೆಂಟ್ ಜಂಕ್ಷನ್, ಹೆಬೆಟ್ಟಗೇರಿ, ಕೂಟುಹೊಳೆ, ಗಾಳಿಬೀಡು, ಕಾಲೂರು, ಮೊಣ್ಣಂಗೇರಿ, ವಣಚಲು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.









