ಮಡಿಕೇರಿ ಮೇ 25 : ಗ್ರಾಹಕರ ವ್ಯಾಜ್ಯಗಳನ್ನು ತ್ವರಿತವಾಗಿ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಜುಲೈ, 8 ರಂದು ಲೋಕ್ ಅದಾಲತ್ ನಡೆಯಲಿದೆ. ಆ ದಿನದಂದು ಸಂಬಂಧಪಟ್ಟವರು ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ಗುರುತಿಸಿಕೊಂಡು ಇತ್ಯರ್ಥಪಡಿಸಿಕೊಳ್ಳುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ಆಡಳಿತಾಧಿಕಾರಿ ಹಾಗೂ ಸಹಾಯಕ ರಿಜಿಸ್ಟ್ರಾರ್ ಶಾರದ ತಿಳಿಸಿದ್ದಾರೆ.









