ಮಡಿಕೇರಿ ಮೇ 26 : ಯುನೈಟೆಡ್ ಕೊಡವ ಆರ್ಗನೈಸೇಷನ್ (ಯುಕೊ) ಸಂಘಟನೆಯ ನಿಯೋಗ ನೂತನ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಅವರನ್ನು ಭೇಟಿಯಾಗಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮನವಿ ಸಲ್ಲಿಸಿದರು.
ವಿರಾಜಪೇಟೆಯ ಪೊನ್ನಣ್ಣ ಅವರ ನಿವಾಸದಲ್ಲಿ ಯುಕೋ ಸಂಘಟನೆಯ ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ಅವರ ನೇತೃತ್ವದ ನಿಯೋಗ ಭೇಟಿ ಮಾಡಿ ಸನ್ಮಾನಿಸಿ ಗೌರವಿಸಿತು.
ಈಗಾಗಲೆ ಸರ್ಕಾರಿ ಆದೇಶದ ಮೂಲಕ ಘೋಷಣೆಯಾಗಿರುವ ‘ಕರ್ನಾಟಕ ರಾಜ್ಯ ಕೊಡವ ಅಭಿವೃದ್ಧಿ ನಿಗಮ’ವನ್ನು ಸ್ಥಾಪಿಸಿ ನೂರು ಕೋಟಿ ರೂಪಾಯಿಗಳ ಅನುದಾನವನ್ನು ನೀಡಬೇಕೆಂದು ನಿಯೋಗ ಮನವಿ ಮಾಡಿತು.
ಹಿಂದುಳಿದ ವರ್ಗಗಳ ಮೀಸಲಾತಿಯ ರಾಜ್ಯ ಪಟ್ಟಿಯಲ್ಲಿ ಕೊಡವರನ್ನು ಪ್ರವರ್ಗ 3ಎ ಯಲ್ಲಿ ಹಾಗೂ ಪ್ರವರ್ಗ 3ಎ ಯ ಕೇಂದ್ರ ಪಟ್ಟಿಯಲ್ಲಿ ಸೇರಿಸಲು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ನಿಯೋಗದ ಸದಸ್ಯರು ಕೋರಿದರು.
ಕೊಡವರ ಪಾರಂಪರಿಕ ತಾಣಗಳಾದ ಮಂದ್ ಮಾನಿ, ಕ್ಯಾಕೊಳ, ಚೂಟ್ಂಗಳದoತಹ ಸಾಂಸ್ಕೃತಿಕ ಕೇಂದ್ರಗಳ ಕಂದಾಯ ದಾಖಲಾತಿಗಳನ್ನು ಸರಿ ಪಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ವಿನಂತಿಕೊoಡರು.
ಬೇಡಿಕೆಗಳ ಮನವಿಯನ್ನು ಸ್ವೀಕರಿಸಿ ಮಾತನಾಡಿದ ಪೊನ್ನಣ್ಣ, ಸಂಪುಟ ರಚನೆಯ ನಂತರ ಸರ್ಕಾರದೊಂದಿಗೆ ವ್ಯವಹರಿಸುವುದಾಗಿ ಭರವಸೆ ನೀಡಿದರು.
ನಿಯೋಗದಲ್ಲಿ ಚೆಪ್ಪುಡಿರ ಸುಜು ಕರುಂಬಯ್ಯ, ಅಪ್ಪಾರಂಡ ವೇಣು ಪೊನ್ನಪ್ಪ, ನೆಲ್ಲಮಕ್ಕಡ ಮಾದಯ್ಯ, ಕಳ್ಳಿಚಂಡ ರಾಬಿನ್ ಸುಬ್ಬಯ್ಯ, ನಂದೇಟಿರ ರವಿ ಸುಬ್ಬಯ್ಯ, ಅಜ್ಜಿನಿಕಂಡ ಸೂರಜ್ ತಿಮ್ಮಯ್ಯ, ಮಚ್ಚಾಮಾಡ ರಮೇಶ್, ತೀತಿಮಾಡ ಬೋಸು ಅಯ್ಯಪ್ಪ, ಪುದಿಯೊಕ್ಕಡ ದಿನೇಶ್, ಬೊಳಿಯಂಗಡ ಬೋಪಣ್ಣ, ಪಳಂಗoಡ ಸುಬ್ಬಣ್ಣ, ಚೆಪ್ಪುಡಿರ ಪ್ರತಿಮಾ ಕರುಂಬಯ್ಯ, ಪಾಂಡoಡ ಸ್ವಾತಿ, ಬೊಳ್ಳಚೆಟ್ಟಿರ ಮೈನ, ಕಳ್ಳಿಚಂಡ ದೀನ ಉತ್ತಪ್ಪ, ತನ್ವಿ ಉತ್ತಪ್ಪ ಹಾಜರಿದ್ದರು.










